Homeಅಂತರಾಷ್ಟ್ರೀಯಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

ಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

- Advertisement -
- Advertisement -

ಇಸ್ರೇಲ್ ವಿಧಿಸಿದ ದಿಗ್ಭಂಧನದಿಂದ ಆಹಾರ, ನೀರು ಗಾಝಾದಲ್ಲಿ ಮತ್ತೆ 6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಾಗ್ರಿಗಳು ಗಾಝಾ ತಲುಪದಂತೆ ಮಾರ್ಚ್ 2ರಿಂದ ಇಸ್ರೇಲ್ ದಿಗ್ಬಂಧನ ವಿಧಿಸಿದೆ. ಹಾಗಾಗಿ, ಯಾವುದೇ ನೆರವು ಟ್ರಕ್‌ಗಳು ಯುದ್ಧ ಪೀಡಿತ ಭೂಮಿಗೆ ಹೋಗುತ್ತಿಲ್ಲ. ಇದರಿಂದ ಗಾಝಾದ ಜನರ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಿದೆ.

ಈ 21ನೇ ಶತಮಾನದಲ್ಲಿ, ಮನುಷ್ಯರು ಚಂದ್ರನ ಮೇಲೆ ಹೋಗಿ ಬಂದಿರುವ ಕಾಲದಲ್ಲಿ, ನಮ್ಮ ಜೊತೆಯೇ ಈ ಭೂಮಿ ಮೇಲೆ ಬದುಕುತ್ತಿರುವ ಒಂದು ಪ್ರದೇಶದ ಜನರು ಆಹಾರ ಸಿಗದೆ ಸಾಯುತ್ತಿರುವುದು ಅಥವಾ ಆಹಾರ ಸಿಗದಂತೆ ಮಾಡಿ ಸಾಯಿಸುತ್ತಿರುವುದು ಸತ್ತು ಹೋಗಿರುವ ಮಾನವೀಯತೆಗೆ ಒಂದು ನಿದರ್ಶನವಾಗಿದೆ.

ಆಹಾರ ಸಿಗದೆ ಸಾಯುತ್ತಿರುವವರ ಕಥೆ ಒಂದೆಡೆಯಾದರೆ, ಸಿಗುತ್ತಿರುವ ಅಲ್ಪ ಸ್ವಲ್ಪ ಆಹಾರವನ್ನು ಪಡೆಯಲು ಹೋದವರು ವಾಪಸ್ ಬರುತ್ತಾರೆ ಎಂಬ ಧೈರ್ಯ ಗಾಝಾದ ಜನತೆಗೆ ಇಲ್ಲ. ಏಕೆಂದರೆ, ಆಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತವನ್ನು ಗುರಿಯಾಗಿಸಿ ಇಸ್ರೇಲ್ ಗುಂಡಿಕ್ಕುತ್ತಿದೆ. ಹಾಗಾಗಿ, ಆಹಾರ ಬದಲು ಅನೇಕರ ಹೆಣಗಳು ವಾಪಸ್ ತಾತ್ಕಾಲಿಕ ಟೆಂಟ್‌ಗಳಾದ ಮನೆಗಳಿಗೆ ಬಂದಿವೆ.

ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಜಿಹೆಚ್‌ಎಫ್ ಗುಂಪು ಕಳೆದ ಮೇ ತಿಂಗಳಿನಿಂದ ಗಾಝಾದಲ್ಲಿ ಆಹಾರ ವಿತರಣೆ ನಡೆಸುತ್ತಿದೆ. ಇವರನ್ನು ಬಿಟ್ಟು ಬೇರೆಯವರಿಗೆ ಅವಕಾಶ ಇಲ್ಲ ಎಂಬ ವರದಿಗಳಿವೆ. ಈ ಜಿಹೆಚ್‌ಎಫ್‌ನ ನಾಲ್ಕು ಆಹಾರ ವಿತರಣಾ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತ 1,400 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಪಡೆ ಗುಂಡಿಕ್ಕಿ ಕೊಂದಿದೆ. ಹಾಗಾಗಿ, ಆಹಾರ ವಿತರಣೆಯ ನೆಪದಲ್ಲಿ ಜನರನ್ನು ಕೊಲ್ಲಲೆಂದೇ ಅಮೆರಿಕ-ಇಸ್ರೇಲ್ ಜಿಹೆಚ್‌ಎಫ್ ಆಹಾರ ವಿತರಣಾ ಕೇಂದ್ರಗಳನ್ನು ತೆರೆದಂತೆ ತೋರುತ್ತಿದೆ.

ಮಾನವೀಯ ನೆರವು ವಿತರಣೆಯ ಮೇಲಿನ ಇಸ್ರೇಲ್ ನಿರ್ಬಂಧಗಳು ಇತ್ತೀಚಿನ ದಿನಗಳಲ್ಲಿ ಭಾಗಶಃ ತೆಗೆದುಹಾಕಲಾಗಿದ್ದರೂ, ಪ್ಯಾಲೆಸ್ತೀನಿಯರು ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಕುಟುಂಬಗಳನ್ನು ಪೋಷಿಸಲು ಸಾಕಷ್ಟು ಆಹಾರವನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಮತ್ತು ಇತರ ಮಾನವೀಯ ಸಂಸ್ಥೆಗಳ ಅಧಿಕಾರಿಗಳು ಹೇಳುತ್ತಾರೆ.

ಆಹಾರ ಸಿಗದಂತೆ ಮಾಡಿರುವ ಇಸ್ರೇಲ್‌ನ ಅಮಾನವೀಯ ನಡೆಗೆ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸ್ವತಃ ಇಸ್ರೇಲ್ ವಿಮಾನದ ಮೂಲಕ ಗಾಝಾದ ಜನತೆಗೆ ಆಹಾರ ವಿತರಣೆ ಮಾಡಿದೆ ಎಂದು ವರದಿಯಾಗಿದೆ. ಆದರೆ, ಮಾನವೀಯ ಗುಂಪುಗಳು ವಿಮಾನದಿಂದ ಅಗತ್ಯ ವಸ್ತುಗಳನ್ನು ಎಸೆಯುವುದನ್ನು ವಿರೋಧಿಸಿದೆ. ಎಲ್ಲಾ ಗಡಿಗಳನ್ನು ತೆರೆದು ಗಾಝಾಗೆ ಅಗತ್ಯ ಸಾಮಾಗ್ರಿಗಳು ತಲುಪುವಂತೆ ಮಾಡಬೇಕು ಎಂದು ಆಗ್ರಹಿಸಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳು ಇಸ್ರೇಲ್ ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಗಾಝಾದಾದ್ಯಂತ ಇಸ್ರೇಲಿ ಪಡೆಗಳು ಕನಿಷ್ಠ 22 ಜನರನ್ನು ಹತ್ಯೆಗೈದಿವೆ. ಇದರಲ್ಲಿ 16 ಮಂದಿ ನೆರವು ಪಡೆಯಲು ನಿಂತವರು ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಅಲ್ ಜಝೀರಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾ ಮೇಲೆ ನಡೆಸಿದ ದಾಳಿಯಿಂದ ಇದುವರೆಗೆ ಕನಿಷ್ಠ 60,430 ಜನರು ಸಾವನ್ನಪ್ಪಿದ್ದಾರೆ ಮತ್ತು 148,722 ಜನರು ಗಾಯಗೊಂಡಿದ್ದಾರೆ. ಇದುವರೆಗೆ 93 ಮಕ್ಕಳು ಸೇರಿದಂತೆ 175 ಜನರು ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾಗಿದ್ದಾರೆ.

ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದೆ ಎಂದು ತನಗೆ ತಿಳಿದುಬಂದಿದೆ: ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...