Homeಅಂತರಾಷ್ಟ್ರೀಯಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

ಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

- Advertisement -
- Advertisement -

ಇಸ್ರೇಲ್ ವಿಧಿಸಿದ ದಿಗ್ಭಂಧನದಿಂದ ಆಹಾರ, ನೀರು ಗಾಝಾದಲ್ಲಿ ಮತ್ತೆ 6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಾಗ್ರಿಗಳು ಗಾಝಾ ತಲುಪದಂತೆ ಮಾರ್ಚ್ 2ರಿಂದ ಇಸ್ರೇಲ್ ದಿಗ್ಬಂಧನ ವಿಧಿಸಿದೆ. ಹಾಗಾಗಿ, ಯಾವುದೇ ನೆರವು ಟ್ರಕ್‌ಗಳು ಯುದ್ಧ ಪೀಡಿತ ಭೂಮಿಗೆ ಹೋಗುತ್ತಿಲ್ಲ. ಇದರಿಂದ ಗಾಝಾದ ಜನರ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಿದೆ.

ಈ 21ನೇ ಶತಮಾನದಲ್ಲಿ, ಮನುಷ್ಯರು ಚಂದ್ರನ ಮೇಲೆ ಹೋಗಿ ಬಂದಿರುವ ಕಾಲದಲ್ಲಿ, ನಮ್ಮ ಜೊತೆಯೇ ಈ ಭೂಮಿ ಮೇಲೆ ಬದುಕುತ್ತಿರುವ ಒಂದು ಪ್ರದೇಶದ ಜನರು ಆಹಾರ ಸಿಗದೆ ಸಾಯುತ್ತಿರುವುದು ಅಥವಾ ಆಹಾರ ಸಿಗದಂತೆ ಮಾಡಿ ಸಾಯಿಸುತ್ತಿರುವುದು ಸತ್ತು ಹೋಗಿರುವ ಮಾನವೀಯತೆಗೆ ಒಂದು ನಿದರ್ಶನವಾಗಿದೆ.

ಆಹಾರ ಸಿಗದೆ ಸಾಯುತ್ತಿರುವವರ ಕಥೆ ಒಂದೆಡೆಯಾದರೆ, ಸಿಗುತ್ತಿರುವ ಅಲ್ಪ ಸ್ವಲ್ಪ ಆಹಾರವನ್ನು ಪಡೆಯಲು ಹೋದವರು ವಾಪಸ್ ಬರುತ್ತಾರೆ ಎಂಬ ಧೈರ್ಯ ಗಾಝಾದ ಜನತೆಗೆ ಇಲ್ಲ. ಏಕೆಂದರೆ, ಆಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತವನ್ನು ಗುರಿಯಾಗಿಸಿ ಇಸ್ರೇಲ್ ಗುಂಡಿಕ್ಕುತ್ತಿದೆ. ಹಾಗಾಗಿ, ಆಹಾರ ಬದಲು ಅನೇಕರ ಹೆಣಗಳು ವಾಪಸ್ ತಾತ್ಕಾಲಿಕ ಟೆಂಟ್‌ಗಳಾದ ಮನೆಗಳಿಗೆ ಬಂದಿವೆ.

ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಜಿಹೆಚ್‌ಎಫ್ ಗುಂಪು ಕಳೆದ ಮೇ ತಿಂಗಳಿನಿಂದ ಗಾಝಾದಲ್ಲಿ ಆಹಾರ ವಿತರಣೆ ನಡೆಸುತ್ತಿದೆ. ಇವರನ್ನು ಬಿಟ್ಟು ಬೇರೆಯವರಿಗೆ ಅವಕಾಶ ಇಲ್ಲ ಎಂಬ ವರದಿಗಳಿವೆ. ಈ ಜಿಹೆಚ್‌ಎಫ್‌ನ ನಾಲ್ಕು ಆಹಾರ ವಿತರಣಾ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತ 1,400 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಪಡೆ ಗುಂಡಿಕ್ಕಿ ಕೊಂದಿದೆ. ಹಾಗಾಗಿ, ಆಹಾರ ವಿತರಣೆಯ ನೆಪದಲ್ಲಿ ಜನರನ್ನು ಕೊಲ್ಲಲೆಂದೇ ಅಮೆರಿಕ-ಇಸ್ರೇಲ್ ಜಿಹೆಚ್‌ಎಫ್ ಆಹಾರ ವಿತರಣಾ ಕೇಂದ್ರಗಳನ್ನು ತೆರೆದಂತೆ ತೋರುತ್ತಿದೆ.

ಮಾನವೀಯ ನೆರವು ವಿತರಣೆಯ ಮೇಲಿನ ಇಸ್ರೇಲ್ ನಿರ್ಬಂಧಗಳು ಇತ್ತೀಚಿನ ದಿನಗಳಲ್ಲಿ ಭಾಗಶಃ ತೆಗೆದುಹಾಕಲಾಗಿದ್ದರೂ, ಪ್ಯಾಲೆಸ್ತೀನಿಯರು ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಕುಟುಂಬಗಳನ್ನು ಪೋಷಿಸಲು ಸಾಕಷ್ಟು ಆಹಾರವನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಮತ್ತು ಇತರ ಮಾನವೀಯ ಸಂಸ್ಥೆಗಳ ಅಧಿಕಾರಿಗಳು ಹೇಳುತ್ತಾರೆ.

ಆಹಾರ ಸಿಗದಂತೆ ಮಾಡಿರುವ ಇಸ್ರೇಲ್‌ನ ಅಮಾನವೀಯ ನಡೆಗೆ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸ್ವತಃ ಇಸ್ರೇಲ್ ವಿಮಾನದ ಮೂಲಕ ಗಾಝಾದ ಜನತೆಗೆ ಆಹಾರ ವಿತರಣೆ ಮಾಡಿದೆ ಎಂದು ವರದಿಯಾಗಿದೆ. ಆದರೆ, ಮಾನವೀಯ ಗುಂಪುಗಳು ವಿಮಾನದಿಂದ ಅಗತ್ಯ ವಸ್ತುಗಳನ್ನು ಎಸೆಯುವುದನ್ನು ವಿರೋಧಿಸಿದೆ. ಎಲ್ಲಾ ಗಡಿಗಳನ್ನು ತೆರೆದು ಗಾಝಾಗೆ ಅಗತ್ಯ ಸಾಮಾಗ್ರಿಗಳು ತಲುಪುವಂತೆ ಮಾಡಬೇಕು ಎಂದು ಆಗ್ರಹಿಸಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳು ಇಸ್ರೇಲ್ ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಗಾಝಾದಾದ್ಯಂತ ಇಸ್ರೇಲಿ ಪಡೆಗಳು ಕನಿಷ್ಠ 22 ಜನರನ್ನು ಹತ್ಯೆಗೈದಿವೆ. ಇದರಲ್ಲಿ 16 ಮಂದಿ ನೆರವು ಪಡೆಯಲು ನಿಂತವರು ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಅಲ್ ಜಝೀರಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾ ಮೇಲೆ ನಡೆಸಿದ ದಾಳಿಯಿಂದ ಇದುವರೆಗೆ ಕನಿಷ್ಠ 60,430 ಜನರು ಸಾವನ್ನಪ್ಪಿದ್ದಾರೆ ಮತ್ತು 148,722 ಜನರು ಗಾಯಗೊಂಡಿದ್ದಾರೆ. ಇದುವರೆಗೆ 93 ಮಕ್ಕಳು ಸೇರಿದಂತೆ 175 ಜನರು ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾಗಿದ್ದಾರೆ.

ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದೆ ಎಂದು ತನಗೆ ತಿಳಿದುಬಂದಿದೆ: ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...