Homeಅಂತರಾಷ್ಟ್ರೀಯಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

ಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

- Advertisement -
- Advertisement -

ಇಸ್ರೇಲ್ ವಿಧಿಸಿದ ದಿಗ್ಭಂಧನದಿಂದ ಆಹಾರ, ನೀರು ಗಾಝಾದಲ್ಲಿ ಮತ್ತೆ 6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಾಗ್ರಿಗಳು ಗಾಝಾ ತಲುಪದಂತೆ ಮಾರ್ಚ್ 2ರಿಂದ ಇಸ್ರೇಲ್ ದಿಗ್ಬಂಧನ ವಿಧಿಸಿದೆ. ಹಾಗಾಗಿ, ಯಾವುದೇ ನೆರವು ಟ್ರಕ್‌ಗಳು ಯುದ್ಧ ಪೀಡಿತ ಭೂಮಿಗೆ ಹೋಗುತ್ತಿಲ್ಲ. ಇದರಿಂದ ಗಾಝಾದ ಜನರ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಿದೆ.

ಈ 21ನೇ ಶತಮಾನದಲ್ಲಿ, ಮನುಷ್ಯರು ಚಂದ್ರನ ಮೇಲೆ ಹೋಗಿ ಬಂದಿರುವ ಕಾಲದಲ್ಲಿ, ನಮ್ಮ ಜೊತೆಯೇ ಈ ಭೂಮಿ ಮೇಲೆ ಬದುಕುತ್ತಿರುವ ಒಂದು ಪ್ರದೇಶದ ಜನರು ಆಹಾರ ಸಿಗದೆ ಸಾಯುತ್ತಿರುವುದು ಅಥವಾ ಆಹಾರ ಸಿಗದಂತೆ ಮಾಡಿ ಸಾಯಿಸುತ್ತಿರುವುದು ಸತ್ತು ಹೋಗಿರುವ ಮಾನವೀಯತೆಗೆ ಒಂದು ನಿದರ್ಶನವಾಗಿದೆ.

ಆಹಾರ ಸಿಗದೆ ಸಾಯುತ್ತಿರುವವರ ಕಥೆ ಒಂದೆಡೆಯಾದರೆ, ಸಿಗುತ್ತಿರುವ ಅಲ್ಪ ಸ್ವಲ್ಪ ಆಹಾರವನ್ನು ಪಡೆಯಲು ಹೋದವರು ವಾಪಸ್ ಬರುತ್ತಾರೆ ಎಂಬ ಧೈರ್ಯ ಗಾಝಾದ ಜನತೆಗೆ ಇಲ್ಲ. ಏಕೆಂದರೆ, ಆಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತವನ್ನು ಗುರಿಯಾಗಿಸಿ ಇಸ್ರೇಲ್ ಗುಂಡಿಕ್ಕುತ್ತಿದೆ. ಹಾಗಾಗಿ, ಆಹಾರ ಬದಲು ಅನೇಕರ ಹೆಣಗಳು ವಾಪಸ್ ತಾತ್ಕಾಲಿಕ ಟೆಂಟ್‌ಗಳಾದ ಮನೆಗಳಿಗೆ ಬಂದಿವೆ.

ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಜಿಹೆಚ್‌ಎಫ್ ಗುಂಪು ಕಳೆದ ಮೇ ತಿಂಗಳಿನಿಂದ ಗಾಝಾದಲ್ಲಿ ಆಹಾರ ವಿತರಣೆ ನಡೆಸುತ್ತಿದೆ. ಇವರನ್ನು ಬಿಟ್ಟು ಬೇರೆಯವರಿಗೆ ಅವಕಾಶ ಇಲ್ಲ ಎಂಬ ವರದಿಗಳಿವೆ. ಈ ಜಿಹೆಚ್‌ಎಫ್‌ನ ನಾಲ್ಕು ಆಹಾರ ವಿತರಣಾ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತ 1,400 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಪಡೆ ಗುಂಡಿಕ್ಕಿ ಕೊಂದಿದೆ. ಹಾಗಾಗಿ, ಆಹಾರ ವಿತರಣೆಯ ನೆಪದಲ್ಲಿ ಜನರನ್ನು ಕೊಲ್ಲಲೆಂದೇ ಅಮೆರಿಕ-ಇಸ್ರೇಲ್ ಜಿಹೆಚ್‌ಎಫ್ ಆಹಾರ ವಿತರಣಾ ಕೇಂದ್ರಗಳನ್ನು ತೆರೆದಂತೆ ತೋರುತ್ತಿದೆ.

ಮಾನವೀಯ ನೆರವು ವಿತರಣೆಯ ಮೇಲಿನ ಇಸ್ರೇಲ್ ನಿರ್ಬಂಧಗಳು ಇತ್ತೀಚಿನ ದಿನಗಳಲ್ಲಿ ಭಾಗಶಃ ತೆಗೆದುಹಾಕಲಾಗಿದ್ದರೂ, ಪ್ಯಾಲೆಸ್ತೀನಿಯರು ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಕುಟುಂಬಗಳನ್ನು ಪೋಷಿಸಲು ಸಾಕಷ್ಟು ಆಹಾರವನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಮತ್ತು ಇತರ ಮಾನವೀಯ ಸಂಸ್ಥೆಗಳ ಅಧಿಕಾರಿಗಳು ಹೇಳುತ್ತಾರೆ.

ಆಹಾರ ಸಿಗದಂತೆ ಮಾಡಿರುವ ಇಸ್ರೇಲ್‌ನ ಅಮಾನವೀಯ ನಡೆಗೆ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸ್ವತಃ ಇಸ್ರೇಲ್ ವಿಮಾನದ ಮೂಲಕ ಗಾಝಾದ ಜನತೆಗೆ ಆಹಾರ ವಿತರಣೆ ಮಾಡಿದೆ ಎಂದು ವರದಿಯಾಗಿದೆ. ಆದರೆ, ಮಾನವೀಯ ಗುಂಪುಗಳು ವಿಮಾನದಿಂದ ಅಗತ್ಯ ವಸ್ತುಗಳನ್ನು ಎಸೆಯುವುದನ್ನು ವಿರೋಧಿಸಿದೆ. ಎಲ್ಲಾ ಗಡಿಗಳನ್ನು ತೆರೆದು ಗಾಝಾಗೆ ಅಗತ್ಯ ಸಾಮಾಗ್ರಿಗಳು ತಲುಪುವಂತೆ ಮಾಡಬೇಕು ಎಂದು ಆಗ್ರಹಿಸಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳು ಇಸ್ರೇಲ್ ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಗಾಝಾದಾದ್ಯಂತ ಇಸ್ರೇಲಿ ಪಡೆಗಳು ಕನಿಷ್ಠ 22 ಜನರನ್ನು ಹತ್ಯೆಗೈದಿವೆ. ಇದರಲ್ಲಿ 16 ಮಂದಿ ನೆರವು ಪಡೆಯಲು ನಿಂತವರು ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಅಲ್ ಜಝೀರಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾ ಮೇಲೆ ನಡೆಸಿದ ದಾಳಿಯಿಂದ ಇದುವರೆಗೆ ಕನಿಷ್ಠ 60,430 ಜನರು ಸಾವನ್ನಪ್ಪಿದ್ದಾರೆ ಮತ್ತು 148,722 ಜನರು ಗಾಯಗೊಂಡಿದ್ದಾರೆ. ಇದುವರೆಗೆ 93 ಮಕ್ಕಳು ಸೇರಿದಂತೆ 175 ಜನರು ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾಗಿದ್ದಾರೆ.

ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದೆ ಎಂದು ತನಗೆ ತಿಳಿದುಬಂದಿದೆ: ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...