Homeಮುಖಪುಟಮಹಾರಾಷ್ಟ್ರ| ಕಿಕ್ಕಿರಿದ ರೈಲಿನಿಂದ ಬಿದ್ದು 6 ಪ್ರಯಾಣಿಕರು ಸಾವು, ಹಲವರಿಗೆ ಗಾಯ

ಮಹಾರಾಷ್ಟ್ರ| ಕಿಕ್ಕಿರಿದ ರೈಲಿನಿಂದ ಬಿದ್ದು 6 ಪ್ರಯಾಣಿಕರು ಸಾವು, ಹಲವರಿಗೆ ಗಾಯ

- Advertisement -
- Advertisement -

ಮಹಾರಾಷ್ಟ್ರದ ಥಾಣೆ ಬಳಿಯ ದಿವಾದಲ್ಲಿ ಕಿಕ್ಕಿರಿದ ಲೋಕಲ್ ರೈಲಿನಿಂದ ಬಿದ್ದು ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ.

ದಿವಾ ಮತ್ತು ಕೋಪರ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದ್ದು, ಕಿಕ್ಕಿರಿದ ರೈಲು ಕಸರಾ ಕಡೆಗೆ ಹೋಗುತ್ತಿತ್ತು ಎಂದು ವರದಿಯಾಗಿದೆ.

ಪೀಕ್ ಅವರ್‌ನಲ್ಲಿ ಭಾರೀ ಜನದಟ್ಟಣೆ ಇದ್ದುದರಿಂದ, ಅನೇಕ ಜನರು ರೈಲಿನ ಬಾಗಿಲುಗಳ ಬಳಿ ನಿಂತಿದ್ದರು. ರೈಲು ಚಲಿಸುತ್ತಿರುವಾಗ 10ಕ್ಕಿಂತ ಹೆಚ್ಚು ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ ಎಂದು ವರದಿಗಳು ಹೇಳಿವೆ.

ಪ್ರಯಾಣಿಕರಲ್ಲಿ ಆರು ಮಂದಿ ಸಾವನ್ನಪ್ಪಿದರೆ, ಉಳಿದವರು ಗಾಯಗೊಂಡು ಹತ್ತಿರದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮೃತರೆಲ್ಲರು 30 ರಿಂದ 35 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ.

ಇದು ರೈಲು ಡಿಕ್ಕಿಯಲ್ಲ. ಎರಡು ರೈಲುಗಳು ವಿರುದ್ಧ ದಿಕ್ಕಿನಲ್ಲಿ ಸಂಚರಿಸುವಾಗ ಮೆಟ್ಟಿಲ ಬಳಿ ನಿಂತಿದ್ದ ಪ್ರಯಾಣಿಕರಿಗೆ ಪರಸ್ಪರ ತಾಗಿದೆ. ಪ್ರಯಾಣಿಕರೊಬ್ಬರು ಹೇಳಿದಂತೆ ಇದು ಘಟನೆಗೆ ಒಂದು ಶಂಕಿತ ಕಾರಣವಾಗಿದೆ. ಎರಡು ರೈಲುಗಳ ನಡುವಿನ ಅಂತರವು 1.5-2 ಮೀಟರ್. ಆದರೆ ತಿರುವುಗಳಲ್ಲಿ ಸ್ವಲ್ಪ ವಾಲುವಿಕೆ ಸಂಭವಿಸುತ್ತದೆ. ಇದು ಘಟನೆಗೆ ಮತ್ತೊಂದು ಕಾರಣವಾಗಿರಬಹುದು” ಎಂದು ಸೆಂಟ್ರಲ್ ರೈಲ್ವೆಯ ಸಿಪಿಆರ್‌ಒ ಸ್ವಪ್ನಿಲ್ ಧನರಾಜ್ ನಿಲಾ ಹೇಳಿದ್ದಾರೆ.

ಪ್ರಯಾಣಿಕರು ಕೈ ತಪ್ಪಿ ಕೆಳಗೆ ಬಿದ್ದಿದ್ದಾರೆಯೇ, ಬ್ಯಾಗ್‌ಗಳು ತಾಗಿ ಬಿದ್ದಿದ್ದಾರೆಯೇ ಅಥವಾ ಯಾರಾದರೂ ಅವರನ್ನು ತಳ್ಳಿದ್ದಾರೆಯೇ ಎಂಬುದನ್ನು ಕಂಡುಹಿಡಿಯುವ ಮೂಲಕ ಘಟನೆಗೆ ಕಾರಣವಾದ ಸಂದರ್ಭಗಳನ್ನು ತನಿಖೆ ಮಾಡಬೇಕು ಎಂದು ಶಿವಸೇನಾ ಸಂಸದ ನರೇಶ್ ಮಾಸ್ಕೆ ಒತ್ತಾಯಿಸಿದ್ದಾರೆ.

ಇದು ಅತ್ಯಂತ ದುರದೃಷ್ಟಕರ ಘಟನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ ರೈಲ್ವೆ ತನಿಖೆ ಆರಂಭಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಅದರ ರೈಲ್ವೆ ಇಲಾಖೆಯು ರೈಲು ಪ್ರಯಾಣಿಕರಿಗೆ ಮೂಲಭೂತ ಸೇವೆಗಳನ್ನು ನೀಡುವಲ್ಲಿ ವಿಫಲವಾಗಿದೆ ಎಂದು ಎನ್‌ಸಿಪಿ ಎಸ್‌ಪಿ ನಾಯಕಿ ವಿದ್ಯಾ ಚವಾಣ್ ಹೇಳಿದ್ದಾರೆ.

ರೈಲ್ವೆ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ರೈಲುಗಳ ಬಾಗಿಲುಗಳು ಸ್ವಯಂಚಾಲಿತವಾಗಿ ಮುಚ್ಚಲ್ಪಡುವಂತೆ ನೋಡಿಕೊಳ್ಳಬೇಕು ಇದರಿಂದ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬಹುದು ಎಂದಿದ್ದಾರೆ.

ಬಂಧಿತ 7 ಮಾವೋವಾದಿಗಳನ್ನು ದಿನಕ್ಕೊಬ್ಬರಂತೆ ಹತ್ಯೆ: ಮಾನವ ಹಕ್ಕುಗಳ ಸಂಘಟನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...