Homeಕರ್ನಾಟಕಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

ಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

- Advertisement -
- Advertisement -

ಸಿಎಎ ಪರ ರ್‍ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವರುಣ್ ಭೂಪಾಲಂ ಮೇಲೆ ಕೊಲೆಯತ್ನ ಮತ್ತು  ಹಿಂದೂಪರ ಕಾರ್ಯಕರ್ತರನ್ನು ಹತ್ಯೆಗೈಯ್ಯುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಆರು ಜನರನ್ನು ಬಂಧಿಸಲಾಗಿದ್ದು ಅವರು ಎಸ್‌ಡಿಪಿಐ ಕಾರ್ಯಕರ್ತರು ಎಂದು ಕಮಿಷನರ್‌ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸಿಎಎ ಪರ ರ್‍ಯಾಲಿಯಲ್ಲಿಯೇ ಎಸ್‌ಡಿಪಿಐ ಕಾರ್ಯಕರ್ತರು ಹಿಂದೂ ನಾಯಕರನ್ನು ಮುಖ್ಯವಾಗಿ ಸಂಸದ ತೇಜಸ್ವಿ ಸೂರ್ಯ, ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆಯವರನ್ನು ಕೊಲ್ಲಲು ಯೋಜಿಸಿದ್ದರು. ಆದರೆ ರ್‍ಯಾಲಿಯಲ್ಲಿ ಭಾರೀ ಪೊಲೀಸ್ ಉಪಸ್ಥಿತಿಯಿಂದ ಅದು ಸಾಧ್ಯವಾಗಲಿಲ್ಲ. ಆದರೆ ಅದೇ ಕೋಪದಲ್ಲಿ ರ್‍ಯಾಲಿ ಮುಗಿಸಿ ಮನೆಗೆ ಹೊರಟಿದ್ದ ವರುಣ್ ಭೂಪಾಲಂ ಮೇಲೆ ಹಲ್ಲೆ ನಡೆಸಿದರು ಎಂದು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬಂಧಿತರನ್ನು ಮೊಹಮ್ಮದ್ ಇರ್ಫಾನ್(33), ಸನಾವುಲ್ಲಾ ಶೆರಿಫ್ (28), ಸೈಯದ್ ಸಿದ್ದೀಕ್, ಸಯ್ಯದ್ ಅಕ್ಬರ್ (30), ಅಕ್ಬರ್ ಬಾಷಾ(27), ಸಾದಿಕ್ ಉಲ್ ಅಮೀನ್ (39) ಎಂದು ಗುರುತಿಸಲಾಗಿದೆ.

ಈ ಆರು ಜನರು ಸಹ ಡಿಸೆಂಬರ್ 22 ರಂದು ಟೌನ್‌ಹಾಲ್‌ ಮುಂದೆ ನಡೆದ ಸಿಎಎ ಪರ ಪ್ರತಿಭಟನೆಗೆ ತೆರಳಿದ್ದರು. ಕೇಸರಿ ಬಟ್ಟೆಗಳನ್ನು ಧರಿಸಿದ್ದ ಇವರು ಕಲ್ಲು ಎಸೆದ ಅವ್ಯವಸ್ಥೆ ಸೃಷ್ಟಿಸಿ ಗಲಭೆ ಎದ್ದಾಗ ಹಿಂದೂ ಮುಖಂಡರನ್ನು ಕೊಲ್ಲುವುದಾಗಿ ಸಂಚು ರೂಪಿಸಿದ್ದರು. ಆಧರೆ ಭಾರೀ ಭದ್ರತೆಯ ಕಾರಣಕ್ಕಾಗಿ ಕಲ್ಲು ಎಸೆಯಲು ಸಾಧ್ಯವಾಗಿಲ್ಲ. ಹಾಗಾಗಿ ಸಂಚು ವಿಫಲಗೊಂಡಿದೆ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ.

ಅವರ ಯೋಜನೆ ವಿಫಲವಾದ ಕಾರಣ, ರ್‍ಯಾಲಿಯಲ್ಲಿ ಭಾಗವಹಿಸಿದ ಯಾವುದೇ ಹಿಂದೂ ಕಾರ್ಯಕರ್ತರನ್ನು ಕೊಲ್ಲಲು ಗ್ಯಾಂಗ್ ಬಯಸಿದೆ. ಆಗ ಬೌನ್ಸ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವರುಣ್ ಭೂಪಾಲಂ ಅವರನ್ನು ಹಿಂಬಾಲಿಸಿದರು. ಅವರು ಕಲಾಸಿಪಾಳ್ಯದ ಬಳಿ ಆತನ ಮೇಲೆ ಹಲ್ಲೆ ನಡೆದು ಬಿಡದಿ ಕಡೆಗೆ ಓಡಿಹೋದರು. ನಂತರ ಅವರಲ್ಲಿ ಇಬ್ಬರು ಆ ವ್ಯಕ್ತಿ ನಿಜವಾಗಿಯೂ ಸತ್ತಿದ್ದಾನೆಯೇ ಎಂದು ನೋಡಲು ಹಿಂದಿರುಗಿ ಬಂದಿದ್ದರು. ಆದರೆ ಆ ಹೊತ್ತಿಗೆ ವರುಣ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಮತ್ತು ನಂತರ ಆತ ಬದುಕುಳಿದ ಎಂದು ರಾವ್ ಹೇಳಿದರು.

ನಾವು ಟೌನ್ ಹಾಲ್‌ ದಾರಿಯಲ್ಲಿ 700 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು ಅಪರಾಧಿಗಳನ್ನು ಪತ್ತೆ ಹಚ್ಚಲು ದೃಶ್ಯಾವಳಿಗಳನ್ನು ವಿಶ್ಲೇಷಿಸಿದ್ದೇವೆ” ಎಂದು ರಾವ್ ಹೇಳಿದರು.

“ಎಲ್ಲಾ ಆರೋಪಿಗಳು ಎಸ್‌ಡಿಪಿಐ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ಅವರಿಗೆ ಪ್ರತಿ ತಿಂಗಳು ರೂ. 10,000 ಬರುತ್ತಿತ್ತು. ಅವರಿಗೆ ಯಾರು ಹಣಕಾಸು ಒದಗಿಸಿದ್ದಾರೆ ಎಂಬ ಬಗ್ಗೆ ನಾವು ಈಗ ತನಿಖೆ ನಡೆಸುತ್ತೇವೆ. ಈ ಪ್ರಕರಣವನ್ನು ಕೇಂದ್ರ ಅಪರಾಧ ಶಾಖೆಯ ಆಂಟಿ ಟೆರರ್ ಸ್ಕ್ವಾಡ್ ತನಿಖೆ ನಡೆಸಲಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...