Homeಕರ್ನಾಟಕಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

ಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

- Advertisement -
- Advertisement -

ಸಿಎಎ ಪರ ರ್‍ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವರುಣ್ ಭೂಪಾಲಂ ಮೇಲೆ ಕೊಲೆಯತ್ನ ಮತ್ತು  ಹಿಂದೂಪರ ಕಾರ್ಯಕರ್ತರನ್ನು ಹತ್ಯೆಗೈಯ್ಯುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಆರು ಜನರನ್ನು ಬಂಧಿಸಲಾಗಿದ್ದು ಅವರು ಎಸ್‌ಡಿಪಿಐ ಕಾರ್ಯಕರ್ತರು ಎಂದು ಕಮಿಷನರ್‌ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸಿಎಎ ಪರ ರ್‍ಯಾಲಿಯಲ್ಲಿಯೇ ಎಸ್‌ಡಿಪಿಐ ಕಾರ್ಯಕರ್ತರು ಹಿಂದೂ ನಾಯಕರನ್ನು ಮುಖ್ಯವಾಗಿ ಸಂಸದ ತೇಜಸ್ವಿ ಸೂರ್ಯ, ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆಯವರನ್ನು ಕೊಲ್ಲಲು ಯೋಜಿಸಿದ್ದರು. ಆದರೆ ರ್‍ಯಾಲಿಯಲ್ಲಿ ಭಾರೀ ಪೊಲೀಸ್ ಉಪಸ್ಥಿತಿಯಿಂದ ಅದು ಸಾಧ್ಯವಾಗಲಿಲ್ಲ. ಆದರೆ ಅದೇ ಕೋಪದಲ್ಲಿ ರ್‍ಯಾಲಿ ಮುಗಿಸಿ ಮನೆಗೆ ಹೊರಟಿದ್ದ ವರುಣ್ ಭೂಪಾಲಂ ಮೇಲೆ ಹಲ್ಲೆ ನಡೆಸಿದರು ಎಂದು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬಂಧಿತರನ್ನು ಮೊಹಮ್ಮದ್ ಇರ್ಫಾನ್(33), ಸನಾವುಲ್ಲಾ ಶೆರಿಫ್ (28), ಸೈಯದ್ ಸಿದ್ದೀಕ್, ಸಯ್ಯದ್ ಅಕ್ಬರ್ (30), ಅಕ್ಬರ್ ಬಾಷಾ(27), ಸಾದಿಕ್ ಉಲ್ ಅಮೀನ್ (39) ಎಂದು ಗುರುತಿಸಲಾಗಿದೆ.

ಈ ಆರು ಜನರು ಸಹ ಡಿಸೆಂಬರ್ 22 ರಂದು ಟೌನ್‌ಹಾಲ್‌ ಮುಂದೆ ನಡೆದ ಸಿಎಎ ಪರ ಪ್ರತಿಭಟನೆಗೆ ತೆರಳಿದ್ದರು. ಕೇಸರಿ ಬಟ್ಟೆಗಳನ್ನು ಧರಿಸಿದ್ದ ಇವರು ಕಲ್ಲು ಎಸೆದ ಅವ್ಯವಸ್ಥೆ ಸೃಷ್ಟಿಸಿ ಗಲಭೆ ಎದ್ದಾಗ ಹಿಂದೂ ಮುಖಂಡರನ್ನು ಕೊಲ್ಲುವುದಾಗಿ ಸಂಚು ರೂಪಿಸಿದ್ದರು. ಆಧರೆ ಭಾರೀ ಭದ್ರತೆಯ ಕಾರಣಕ್ಕಾಗಿ ಕಲ್ಲು ಎಸೆಯಲು ಸಾಧ್ಯವಾಗಿಲ್ಲ. ಹಾಗಾಗಿ ಸಂಚು ವಿಫಲಗೊಂಡಿದೆ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ.

ಅವರ ಯೋಜನೆ ವಿಫಲವಾದ ಕಾರಣ, ರ್‍ಯಾಲಿಯಲ್ಲಿ ಭಾಗವಹಿಸಿದ ಯಾವುದೇ ಹಿಂದೂ ಕಾರ್ಯಕರ್ತರನ್ನು ಕೊಲ್ಲಲು ಗ್ಯಾಂಗ್ ಬಯಸಿದೆ. ಆಗ ಬೌನ್ಸ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವರುಣ್ ಭೂಪಾಲಂ ಅವರನ್ನು ಹಿಂಬಾಲಿಸಿದರು. ಅವರು ಕಲಾಸಿಪಾಳ್ಯದ ಬಳಿ ಆತನ ಮೇಲೆ ಹಲ್ಲೆ ನಡೆದು ಬಿಡದಿ ಕಡೆಗೆ ಓಡಿಹೋದರು. ನಂತರ ಅವರಲ್ಲಿ ಇಬ್ಬರು ಆ ವ್ಯಕ್ತಿ ನಿಜವಾಗಿಯೂ ಸತ್ತಿದ್ದಾನೆಯೇ ಎಂದು ನೋಡಲು ಹಿಂದಿರುಗಿ ಬಂದಿದ್ದರು. ಆದರೆ ಆ ಹೊತ್ತಿಗೆ ವರುಣ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಮತ್ತು ನಂತರ ಆತ ಬದುಕುಳಿದ ಎಂದು ರಾವ್ ಹೇಳಿದರು.

ನಾವು ಟೌನ್ ಹಾಲ್‌ ದಾರಿಯಲ್ಲಿ 700 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು ಅಪರಾಧಿಗಳನ್ನು ಪತ್ತೆ ಹಚ್ಚಲು ದೃಶ್ಯಾವಳಿಗಳನ್ನು ವಿಶ್ಲೇಷಿಸಿದ್ದೇವೆ” ಎಂದು ರಾವ್ ಹೇಳಿದರು.

“ಎಲ್ಲಾ ಆರೋಪಿಗಳು ಎಸ್‌ಡಿಪಿಐ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ಅವರಿಗೆ ಪ್ರತಿ ತಿಂಗಳು ರೂ. 10,000 ಬರುತ್ತಿತ್ತು. ಅವರಿಗೆ ಯಾರು ಹಣಕಾಸು ಒದಗಿಸಿದ್ದಾರೆ ಎಂಬ ಬಗ್ಗೆ ನಾವು ಈಗ ತನಿಖೆ ನಡೆಸುತ್ತೇವೆ. ಈ ಪ್ರಕರಣವನ್ನು ಕೇಂದ್ರ ಅಪರಾಧ ಶಾಖೆಯ ಆಂಟಿ ಟೆರರ್ ಸ್ಕ್ವಾಡ್ ತನಿಖೆ ನಡೆಸಲಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...