Homeಕರ್ನಾಟಕಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

ಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

- Advertisement -
- Advertisement -

ಸಿಎಎ ಪರ ರ್‍ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವರುಣ್ ಭೂಪಾಲಂ ಮೇಲೆ ಕೊಲೆಯತ್ನ ಮತ್ತು  ಹಿಂದೂಪರ ಕಾರ್ಯಕರ್ತರನ್ನು ಹತ್ಯೆಗೈಯ್ಯುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಆರು ಜನರನ್ನು ಬಂಧಿಸಲಾಗಿದ್ದು ಅವರು ಎಸ್‌ಡಿಪಿಐ ಕಾರ್ಯಕರ್ತರು ಎಂದು ಕಮಿಷನರ್‌ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸಿಎಎ ಪರ ರ್‍ಯಾಲಿಯಲ್ಲಿಯೇ ಎಸ್‌ಡಿಪಿಐ ಕಾರ್ಯಕರ್ತರು ಹಿಂದೂ ನಾಯಕರನ್ನು ಮುಖ್ಯವಾಗಿ ಸಂಸದ ತೇಜಸ್ವಿ ಸೂರ್ಯ, ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆಯವರನ್ನು ಕೊಲ್ಲಲು ಯೋಜಿಸಿದ್ದರು. ಆದರೆ ರ್‍ಯಾಲಿಯಲ್ಲಿ ಭಾರೀ ಪೊಲೀಸ್ ಉಪಸ್ಥಿತಿಯಿಂದ ಅದು ಸಾಧ್ಯವಾಗಲಿಲ್ಲ. ಆದರೆ ಅದೇ ಕೋಪದಲ್ಲಿ ರ್‍ಯಾಲಿ ಮುಗಿಸಿ ಮನೆಗೆ ಹೊರಟಿದ್ದ ವರುಣ್ ಭೂಪಾಲಂ ಮೇಲೆ ಹಲ್ಲೆ ನಡೆಸಿದರು ಎಂದು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬಂಧಿತರನ್ನು ಮೊಹಮ್ಮದ್ ಇರ್ಫಾನ್(33), ಸನಾವುಲ್ಲಾ ಶೆರಿಫ್ (28), ಸೈಯದ್ ಸಿದ್ದೀಕ್, ಸಯ್ಯದ್ ಅಕ್ಬರ್ (30), ಅಕ್ಬರ್ ಬಾಷಾ(27), ಸಾದಿಕ್ ಉಲ್ ಅಮೀನ್ (39) ಎಂದು ಗುರುತಿಸಲಾಗಿದೆ.

ಈ ಆರು ಜನರು ಸಹ ಡಿಸೆಂಬರ್ 22 ರಂದು ಟೌನ್‌ಹಾಲ್‌ ಮುಂದೆ ನಡೆದ ಸಿಎಎ ಪರ ಪ್ರತಿಭಟನೆಗೆ ತೆರಳಿದ್ದರು. ಕೇಸರಿ ಬಟ್ಟೆಗಳನ್ನು ಧರಿಸಿದ್ದ ಇವರು ಕಲ್ಲು ಎಸೆದ ಅವ್ಯವಸ್ಥೆ ಸೃಷ್ಟಿಸಿ ಗಲಭೆ ಎದ್ದಾಗ ಹಿಂದೂ ಮುಖಂಡರನ್ನು ಕೊಲ್ಲುವುದಾಗಿ ಸಂಚು ರೂಪಿಸಿದ್ದರು. ಆಧರೆ ಭಾರೀ ಭದ್ರತೆಯ ಕಾರಣಕ್ಕಾಗಿ ಕಲ್ಲು ಎಸೆಯಲು ಸಾಧ್ಯವಾಗಿಲ್ಲ. ಹಾಗಾಗಿ ಸಂಚು ವಿಫಲಗೊಂಡಿದೆ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ.

ಅವರ ಯೋಜನೆ ವಿಫಲವಾದ ಕಾರಣ, ರ್‍ಯಾಲಿಯಲ್ಲಿ ಭಾಗವಹಿಸಿದ ಯಾವುದೇ ಹಿಂದೂ ಕಾರ್ಯಕರ್ತರನ್ನು ಕೊಲ್ಲಲು ಗ್ಯಾಂಗ್ ಬಯಸಿದೆ. ಆಗ ಬೌನ್ಸ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವರುಣ್ ಭೂಪಾಲಂ ಅವರನ್ನು ಹಿಂಬಾಲಿಸಿದರು. ಅವರು ಕಲಾಸಿಪಾಳ್ಯದ ಬಳಿ ಆತನ ಮೇಲೆ ಹಲ್ಲೆ ನಡೆದು ಬಿಡದಿ ಕಡೆಗೆ ಓಡಿಹೋದರು. ನಂತರ ಅವರಲ್ಲಿ ಇಬ್ಬರು ಆ ವ್ಯಕ್ತಿ ನಿಜವಾಗಿಯೂ ಸತ್ತಿದ್ದಾನೆಯೇ ಎಂದು ನೋಡಲು ಹಿಂದಿರುಗಿ ಬಂದಿದ್ದರು. ಆದರೆ ಆ ಹೊತ್ತಿಗೆ ವರುಣ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಮತ್ತು ನಂತರ ಆತ ಬದುಕುಳಿದ ಎಂದು ರಾವ್ ಹೇಳಿದರು.

ನಾವು ಟೌನ್ ಹಾಲ್‌ ದಾರಿಯಲ್ಲಿ 700 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು ಅಪರಾಧಿಗಳನ್ನು ಪತ್ತೆ ಹಚ್ಚಲು ದೃಶ್ಯಾವಳಿಗಳನ್ನು ವಿಶ್ಲೇಷಿಸಿದ್ದೇವೆ” ಎಂದು ರಾವ್ ಹೇಳಿದರು.

“ಎಲ್ಲಾ ಆರೋಪಿಗಳು ಎಸ್‌ಡಿಪಿಐ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ಅವರಿಗೆ ಪ್ರತಿ ತಿಂಗಳು ರೂ. 10,000 ಬರುತ್ತಿತ್ತು. ಅವರಿಗೆ ಯಾರು ಹಣಕಾಸು ಒದಗಿಸಿದ್ದಾರೆ ಎಂಬ ಬಗ್ಗೆ ನಾವು ಈಗ ತನಿಖೆ ನಡೆಸುತ್ತೇವೆ. ಈ ಪ್ರಕರಣವನ್ನು ಕೇಂದ್ರ ಅಪರಾಧ ಶಾಖೆಯ ಆಂಟಿ ಟೆರರ್ ಸ್ಕ್ವಾಡ್ ತನಿಖೆ ನಡೆಸಲಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...