Homeಕರ್ನಾಟಕಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

ಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

- Advertisement -
- Advertisement -

ಸಿಎಎ ಪರ ರ್‍ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವರುಣ್ ಭೂಪಾಲಂ ಮೇಲೆ ಕೊಲೆಯತ್ನ ಮತ್ತು  ಹಿಂದೂಪರ ಕಾರ್ಯಕರ್ತರನ್ನು ಹತ್ಯೆಗೈಯ್ಯುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಆರು ಜನರನ್ನು ಬಂಧಿಸಲಾಗಿದ್ದು ಅವರು ಎಸ್‌ಡಿಪಿಐ ಕಾರ್ಯಕರ್ತರು ಎಂದು ಕಮಿಷನರ್‌ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸಿಎಎ ಪರ ರ್‍ಯಾಲಿಯಲ್ಲಿಯೇ ಎಸ್‌ಡಿಪಿಐ ಕಾರ್ಯಕರ್ತರು ಹಿಂದೂ ನಾಯಕರನ್ನು ಮುಖ್ಯವಾಗಿ ಸಂಸದ ತೇಜಸ್ವಿ ಸೂರ್ಯ, ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆಯವರನ್ನು ಕೊಲ್ಲಲು ಯೋಜಿಸಿದ್ದರು. ಆದರೆ ರ್‍ಯಾಲಿಯಲ್ಲಿ ಭಾರೀ ಪೊಲೀಸ್ ಉಪಸ್ಥಿತಿಯಿಂದ ಅದು ಸಾಧ್ಯವಾಗಲಿಲ್ಲ. ಆದರೆ ಅದೇ ಕೋಪದಲ್ಲಿ ರ್‍ಯಾಲಿ ಮುಗಿಸಿ ಮನೆಗೆ ಹೊರಟಿದ್ದ ವರುಣ್ ಭೂಪಾಲಂ ಮೇಲೆ ಹಲ್ಲೆ ನಡೆಸಿದರು ಎಂದು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬಂಧಿತರನ್ನು ಮೊಹಮ್ಮದ್ ಇರ್ಫಾನ್(33), ಸನಾವುಲ್ಲಾ ಶೆರಿಫ್ (28), ಸೈಯದ್ ಸಿದ್ದೀಕ್, ಸಯ್ಯದ್ ಅಕ್ಬರ್ (30), ಅಕ್ಬರ್ ಬಾಷಾ(27), ಸಾದಿಕ್ ಉಲ್ ಅಮೀನ್ (39) ಎಂದು ಗುರುತಿಸಲಾಗಿದೆ.

ಈ ಆರು ಜನರು ಸಹ ಡಿಸೆಂಬರ್ 22 ರಂದು ಟೌನ್‌ಹಾಲ್‌ ಮುಂದೆ ನಡೆದ ಸಿಎಎ ಪರ ಪ್ರತಿಭಟನೆಗೆ ತೆರಳಿದ್ದರು. ಕೇಸರಿ ಬಟ್ಟೆಗಳನ್ನು ಧರಿಸಿದ್ದ ಇವರು ಕಲ್ಲು ಎಸೆದ ಅವ್ಯವಸ್ಥೆ ಸೃಷ್ಟಿಸಿ ಗಲಭೆ ಎದ್ದಾಗ ಹಿಂದೂ ಮುಖಂಡರನ್ನು ಕೊಲ್ಲುವುದಾಗಿ ಸಂಚು ರೂಪಿಸಿದ್ದರು. ಆಧರೆ ಭಾರೀ ಭದ್ರತೆಯ ಕಾರಣಕ್ಕಾಗಿ ಕಲ್ಲು ಎಸೆಯಲು ಸಾಧ್ಯವಾಗಿಲ್ಲ. ಹಾಗಾಗಿ ಸಂಚು ವಿಫಲಗೊಂಡಿದೆ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ.

ಅವರ ಯೋಜನೆ ವಿಫಲವಾದ ಕಾರಣ, ರ್‍ಯಾಲಿಯಲ್ಲಿ ಭಾಗವಹಿಸಿದ ಯಾವುದೇ ಹಿಂದೂ ಕಾರ್ಯಕರ್ತರನ್ನು ಕೊಲ್ಲಲು ಗ್ಯಾಂಗ್ ಬಯಸಿದೆ. ಆಗ ಬೌನ್ಸ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವರುಣ್ ಭೂಪಾಲಂ ಅವರನ್ನು ಹಿಂಬಾಲಿಸಿದರು. ಅವರು ಕಲಾಸಿಪಾಳ್ಯದ ಬಳಿ ಆತನ ಮೇಲೆ ಹಲ್ಲೆ ನಡೆದು ಬಿಡದಿ ಕಡೆಗೆ ಓಡಿಹೋದರು. ನಂತರ ಅವರಲ್ಲಿ ಇಬ್ಬರು ಆ ವ್ಯಕ್ತಿ ನಿಜವಾಗಿಯೂ ಸತ್ತಿದ್ದಾನೆಯೇ ಎಂದು ನೋಡಲು ಹಿಂದಿರುಗಿ ಬಂದಿದ್ದರು. ಆದರೆ ಆ ಹೊತ್ತಿಗೆ ವರುಣ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಮತ್ತು ನಂತರ ಆತ ಬದುಕುಳಿದ ಎಂದು ರಾವ್ ಹೇಳಿದರು.

ನಾವು ಟೌನ್ ಹಾಲ್‌ ದಾರಿಯಲ್ಲಿ 700 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು ಅಪರಾಧಿಗಳನ್ನು ಪತ್ತೆ ಹಚ್ಚಲು ದೃಶ್ಯಾವಳಿಗಳನ್ನು ವಿಶ್ಲೇಷಿಸಿದ್ದೇವೆ” ಎಂದು ರಾವ್ ಹೇಳಿದರು.

“ಎಲ್ಲಾ ಆರೋಪಿಗಳು ಎಸ್‌ಡಿಪಿಐ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ಅವರಿಗೆ ಪ್ರತಿ ತಿಂಗಳು ರೂ. 10,000 ಬರುತ್ತಿತ್ತು. ಅವರಿಗೆ ಯಾರು ಹಣಕಾಸು ಒದಗಿಸಿದ್ದಾರೆ ಎಂಬ ಬಗ್ಗೆ ನಾವು ಈಗ ತನಿಖೆ ನಡೆಸುತ್ತೇವೆ. ಈ ಪ್ರಕರಣವನ್ನು ಕೇಂದ್ರ ಅಪರಾಧ ಶಾಖೆಯ ಆಂಟಿ ಟೆರರ್ ಸ್ಕ್ವಾಡ್ ತನಿಖೆ ನಡೆಸಲಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...