Homeಮುಖಪುಟತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ನರಭಕ್ಷಕ ಚಿರತೆಗಳ ಹಾವಳಿ ಮಿತಿ ಮೀರಿದೆ. ರಕ್ತದ ರುಚಿಯನ್ನು ಕಂಡಿರುವ ಚಿರತೆಗಳು ಮನುಷ್ಯರ ಮೇಲೆ ಎರಗುತ್ತಲೇ ಇವೆ. ಚಿರತೆಗಳು ಕುಣಿಗಲ್, ತುಮಕೂರು ಮತ್ತು ಗುಬ್ಬಿ ತಾಲೂಕಿನಲ್ಲಿ ಮನುಷ್ಯರ ರಕ್ತಹೀರಿ ಕೊಂದಿದೆ. ಚಿರತೆ ದಾಳಿಗೆ ಇದುವರೆಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ. ಅರಣ್ಯ ಇಲಾಖೆಯವರು ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿದ್ದಾರೆಯೇ ಹೊರತು ನರಭಕ್ಷ ಚಿರತೆ ಹಿಡಿಯುವ, ಅದನ್ನು ಗುರುತಿಸುವ ಗೋಜಿಗೆ ಹೋಗುತ್ತಿಲ್ಲ. ಚಿರತೆ ಮಾತ್ರ ಮರೆಸಿಮರೆಸಿ ದಾಳಿ ಮಾಡುತ್ತಲೇ ಇದೆ. ಅರಣ್ಯ ಸಿಬ್ಬಂದಿ ಹುಡುಕಿದಂತೆ ಮಾಡಿ ಮೌನವಾಗುತ್ತಿದ್ದಾರೆ. ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೂ ಕೇಳುವವರೇ ಇಲ್ಲ.

ಬಹುತೇಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಚಿರತೆಗಳ ಹಾವಳಿ ಇದೆ. ನಿತ್ಯವೂ ಒಂದಿಲ್ಲೊಂದು ತಾಲೂಕಿನಲ್ಲಿ ಕುರಿ, ಮೇಕೆ, ನಾಯಿಗಳನ್ನು ಚಿರತೆಗಳು ಹೊತ್ತೊಯ್ಯುತ್ತಲೇ ಇವೆ. ತಮ್ಮ ಸಾಕು ಪ್ರಾಣಿಗಳನ್ನು ಕಳೆದುಕೊಳ್ಳುವ ರೈತರು ಹಾಗೂ ಗ್ರಾಮಸ್ಥರು ಚಿರತೆಗಳ ನಿಯಂತ್ರಣಕ್ಕೆ ಹಲವು ಬಾರಿ ಮನವಿಗಳನ್ನು ನೀಡಿದರೂ ಪ್ರಯೋಜನ ಮಾತ್ರ ಶೂನ್ಯ. ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನ, ಮೊಂಡು ಬೀಳುವಿಕೆಗೆ ಬೇಸತ್ತಿದ್ದಾರೆ. ಎಷ್ಟು ಮನವಿ ಮಾಡಿದರೂ ಕಿವಿಗೇ ಹಾಕಿಕೊಳ್ಳುವುದಿಲ್ಲ. ಯಾರ ಮಾತು ಯಾರೂ ಕೇಳುತ್ತಿಲ್ಲ. ಸುಖಾಸುಮ್ಮನೆ ವೇತನ ಪಡೆಯುತ್ತಿದ್ದಾರೆ. ಜನರ ಸಂಕಟ, ನೋವು ಕೇಳದ ಅಧಿಕಾರಿಗಳು ಇದ್ದೂ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.

ಫೆ.29ರಂದು ಸಂಜೆ 6 ಗಂಟೆಗೆ ತುಮಕೂರು ತಾಲೂಕು ಕಣಕುಪ್ಪೆ ಗ್ರಾಮದಲ್ಲಿ ಚಂದನಾ ಎಂಬ ಮೂರು ವರ್ಷದ ಮಗು ಮತ್ತು ಆಕೆಯ ತಾತ ಮತ್ತು ಗಂಗಚಿಕ್ಕಣ್ಣ ಆಟವಾಡಿಕೊಂಡು ಕುಳಿತಿದ್ದರು. ಕತ್ತಲು ಇನ್ನೂ ಆವರಿಸಿರಲಿಲ್ಲ. ಸೂರ್ಯ ಇನ್ನೂ ಮುಳುಗಿರಲಿಲ್ಲ.. ನೋಡನೋಡುತ್ತಿದ್ದಂತೆಯೇ ಬಾಲಕಿಯ ಮೇಲೆ ಚಿರತೆ ಎರಗಿತು. ಕಣಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಚಿಕ್ಕಣ್ಣ ಕೂಗಿಕೊಂಡರು. ಆದರೂ ಬಿಡದ ಚಿರತೆ ಅರ್ಧಕಿಲೋಮೀಟರ್ ದೂರದ ಪೊದೆಗೆ ಎಳೆದೊಯ್ದು ಬಾಲಕಿ ಕುತ್ತಿಗೆ ಸೀಳಿ ರಕ್ತ ಹೀರಿದೆ. ಮುಖ ಮತ್ತು  ತೊಡೆಯ ಮಾಂಸ ಖಂಡ ತಿಂದು ಹೋಗಿದೆ. ಜನರು ಕೂಗುತ್ತ ಅಲ್ಲಿಗೆ ಹೋಗದಿದ್ದರೆ ಬಾಲಕಿಯನ್ನು ಸಂಪೂರ್ಣವಾಗಿ ಮುಗಿಸಿಬಿಡುತ್ತಿತ್ತು ಎನ್ನುತ್ತಾರೆ ಘಟನೆ ಕಂಡವರು.

ದುರಂತವೆಂದರೆ ತುಮಕೂರು ತಾಲೂಕು ಹೆಬ್ಬೂರು ಹೋಬಳಿಯಲ್ಲೇ ಚಿರತೆ ಮೂರು ಬಲಿ ಪಡೆದುಕೊಂಡಿದೆ. ಪ್ರತಿ ದಾಳಿ ನಡೆದಾಗಲೂ ಜನರು ಹೆಬ್ಬೂರಿನಲ್ಲಿ ಪ್ರತಿಭಟನೆ ನಡೆಸಿ ಚಿರತೆಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ರಸ್ತೆ ತಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಹಿಡಿಸುವ ಭರವಸೆ ನೀಡಿಯೂ ಬಂದಿದ್ದರು. ಮತ್ತೆ ಚಿರತೆ ದಾಳಿ ನಡೆಸಿದ್ದು ಜನರನ್ನು ಮತ್ತಷ್ಟು ಕೆರಳುವಂತೆ
ಮಾಡಿದೆ. ಚಿರತೆ, ಕರಡಿ, ಆನೆಗಳು ಬಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ, ಹೆಜ್ಜೆ ಗುರುತು ಫೋಟೋ ತೆಗೆದ ಕಳಿಸಿ, ಚಿರತೆಯ ಪೋಟೋ ಕಳಿಸಿ ಎಂದು ಹೇಳುತ್ತಾರೆ. ತಮ್ಮ ಕರ್ತವ್ಯ ಮರೆಯುತ್ತಾರೆ. ನಾವು ಫೋಟೋಗಳ ತೆಗೆಯಲು ಕ್ಯಾಮೆರಾಗಳನ್ನು ಎಲ್ಲಿಗೆ ಹುಡುಕಿಕೊಂಡು ಹೋಗಬೇಕು ಎನ್ನುತ್ತಾರೆ ಚಿಕ್ಕವೆಂಕಟಪ್ಪ.


ಇದನ್ನೂ ಓದಿ: ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…


ಅರಣ್ಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ರೈತರು ಸಮಸ್ಯೆ ಹೇಳಿಕೊಂಡರೂ ಕೇಳುವುದಿಲ್ಲ. ಚಿರತೆ ದಾಳಿ ಮಾಡಿದಾಗ ಕೇವಲ ಬೋನಿಟ್ಟು ಹೋಗುತ್ತಾರೆ. ಅದು ಬಿದ್ದ ಮೇಲೆ ಅರಣ್ಯಕ್ಕೆ ಬಿಟ್ಟು ಬರುತ್ತಾರೆ. ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮಾನವ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಂಡಲ್ಲಿ ಗುಂಡಿಕ್ಕು ಆದೇಶ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೆಬ್ಬರೂ ವ್ಯಾಪ್ತಿಯಲ್ಲೇ ಹೆಚ್ಚು ಇಂತಹ ದಾಳಿಗಳು ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಚಿರತೆಗಳು ಯಾವಾಗ ಮೇಲೆರಗುತ್ತವೋ ಎಂಬ ಭೀತಿಯಲ್ಲಿ ಜನ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದು ಒಂದು ಕಡೆಯಾದರೆ ಕರಡಿಗಳು ಮತ್ತು ಆನೆಗಳ ದಾಳಿಯ ಭೀತಿ ಕೂಡ ಜನರಲ್ಲಿದೆ. ವನ್ಯಜೀವಿಗಳ ಹಾವಳಿ ಹೆಚ್ಚಿದಂತೆಲ್ಲ ಬೆಳೆ ಹಾನಿ, ಜೀವಹಾನಿ ಆಗುತ್ತಲೇ ಇದ್ದು ಅರಣ್ಯ ಇಲಾಖೆ ಯಾವುದೇ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಇದುವರೆಗೂ ಆಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...