Homeಮುಖಪುಟತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ನರಭಕ್ಷಕ ಚಿರತೆಗಳ ಹಾವಳಿ ಮಿತಿ ಮೀರಿದೆ. ರಕ್ತದ ರುಚಿಯನ್ನು ಕಂಡಿರುವ ಚಿರತೆಗಳು ಮನುಷ್ಯರ ಮೇಲೆ ಎರಗುತ್ತಲೇ ಇವೆ. ಚಿರತೆಗಳು ಕುಣಿಗಲ್, ತುಮಕೂರು ಮತ್ತು ಗುಬ್ಬಿ ತಾಲೂಕಿನಲ್ಲಿ ಮನುಷ್ಯರ ರಕ್ತಹೀರಿ ಕೊಂದಿದೆ. ಚಿರತೆ ದಾಳಿಗೆ ಇದುವರೆಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ. ಅರಣ್ಯ ಇಲಾಖೆಯವರು ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿದ್ದಾರೆಯೇ ಹೊರತು ನರಭಕ್ಷ ಚಿರತೆ ಹಿಡಿಯುವ, ಅದನ್ನು ಗುರುತಿಸುವ ಗೋಜಿಗೆ ಹೋಗುತ್ತಿಲ್ಲ. ಚಿರತೆ ಮಾತ್ರ ಮರೆಸಿಮರೆಸಿ ದಾಳಿ ಮಾಡುತ್ತಲೇ ಇದೆ. ಅರಣ್ಯ ಸಿಬ್ಬಂದಿ ಹುಡುಕಿದಂತೆ ಮಾಡಿ ಮೌನವಾಗುತ್ತಿದ್ದಾರೆ. ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೂ ಕೇಳುವವರೇ ಇಲ್ಲ.

ಬಹುತೇಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಚಿರತೆಗಳ ಹಾವಳಿ ಇದೆ. ನಿತ್ಯವೂ ಒಂದಿಲ್ಲೊಂದು ತಾಲೂಕಿನಲ್ಲಿ ಕುರಿ, ಮೇಕೆ, ನಾಯಿಗಳನ್ನು ಚಿರತೆಗಳು ಹೊತ್ತೊಯ್ಯುತ್ತಲೇ ಇವೆ. ತಮ್ಮ ಸಾಕು ಪ್ರಾಣಿಗಳನ್ನು ಕಳೆದುಕೊಳ್ಳುವ ರೈತರು ಹಾಗೂ ಗ್ರಾಮಸ್ಥರು ಚಿರತೆಗಳ ನಿಯಂತ್ರಣಕ್ಕೆ ಹಲವು ಬಾರಿ ಮನವಿಗಳನ್ನು ನೀಡಿದರೂ ಪ್ರಯೋಜನ ಮಾತ್ರ ಶೂನ್ಯ. ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನ, ಮೊಂಡು ಬೀಳುವಿಕೆಗೆ ಬೇಸತ್ತಿದ್ದಾರೆ. ಎಷ್ಟು ಮನವಿ ಮಾಡಿದರೂ ಕಿವಿಗೇ ಹಾಕಿಕೊಳ್ಳುವುದಿಲ್ಲ. ಯಾರ ಮಾತು ಯಾರೂ ಕೇಳುತ್ತಿಲ್ಲ. ಸುಖಾಸುಮ್ಮನೆ ವೇತನ ಪಡೆಯುತ್ತಿದ್ದಾರೆ. ಜನರ ಸಂಕಟ, ನೋವು ಕೇಳದ ಅಧಿಕಾರಿಗಳು ಇದ್ದೂ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.

ಫೆ.29ರಂದು ಸಂಜೆ 6 ಗಂಟೆಗೆ ತುಮಕೂರು ತಾಲೂಕು ಕಣಕುಪ್ಪೆ ಗ್ರಾಮದಲ್ಲಿ ಚಂದನಾ ಎಂಬ ಮೂರು ವರ್ಷದ ಮಗು ಮತ್ತು ಆಕೆಯ ತಾತ ಮತ್ತು ಗಂಗಚಿಕ್ಕಣ್ಣ ಆಟವಾಡಿಕೊಂಡು ಕುಳಿತಿದ್ದರು. ಕತ್ತಲು ಇನ್ನೂ ಆವರಿಸಿರಲಿಲ್ಲ. ಸೂರ್ಯ ಇನ್ನೂ ಮುಳುಗಿರಲಿಲ್ಲ.. ನೋಡನೋಡುತ್ತಿದ್ದಂತೆಯೇ ಬಾಲಕಿಯ ಮೇಲೆ ಚಿರತೆ ಎರಗಿತು. ಕಣಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಚಿಕ್ಕಣ್ಣ ಕೂಗಿಕೊಂಡರು. ಆದರೂ ಬಿಡದ ಚಿರತೆ ಅರ್ಧಕಿಲೋಮೀಟರ್ ದೂರದ ಪೊದೆಗೆ ಎಳೆದೊಯ್ದು ಬಾಲಕಿ ಕುತ್ತಿಗೆ ಸೀಳಿ ರಕ್ತ ಹೀರಿದೆ. ಮುಖ ಮತ್ತು  ತೊಡೆಯ ಮಾಂಸ ಖಂಡ ತಿಂದು ಹೋಗಿದೆ. ಜನರು ಕೂಗುತ್ತ ಅಲ್ಲಿಗೆ ಹೋಗದಿದ್ದರೆ ಬಾಲಕಿಯನ್ನು ಸಂಪೂರ್ಣವಾಗಿ ಮುಗಿಸಿಬಿಡುತ್ತಿತ್ತು ಎನ್ನುತ್ತಾರೆ ಘಟನೆ ಕಂಡವರು.

ದುರಂತವೆಂದರೆ ತುಮಕೂರು ತಾಲೂಕು ಹೆಬ್ಬೂರು ಹೋಬಳಿಯಲ್ಲೇ ಚಿರತೆ ಮೂರು ಬಲಿ ಪಡೆದುಕೊಂಡಿದೆ. ಪ್ರತಿ ದಾಳಿ ನಡೆದಾಗಲೂ ಜನರು ಹೆಬ್ಬೂರಿನಲ್ಲಿ ಪ್ರತಿಭಟನೆ ನಡೆಸಿ ಚಿರತೆಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ರಸ್ತೆ ತಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಹಿಡಿಸುವ ಭರವಸೆ ನೀಡಿಯೂ ಬಂದಿದ್ದರು. ಮತ್ತೆ ಚಿರತೆ ದಾಳಿ ನಡೆಸಿದ್ದು ಜನರನ್ನು ಮತ್ತಷ್ಟು ಕೆರಳುವಂತೆ
ಮಾಡಿದೆ. ಚಿರತೆ, ಕರಡಿ, ಆನೆಗಳು ಬಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ, ಹೆಜ್ಜೆ ಗುರುತು ಫೋಟೋ ತೆಗೆದ ಕಳಿಸಿ, ಚಿರತೆಯ ಪೋಟೋ ಕಳಿಸಿ ಎಂದು ಹೇಳುತ್ತಾರೆ. ತಮ್ಮ ಕರ್ತವ್ಯ ಮರೆಯುತ್ತಾರೆ. ನಾವು ಫೋಟೋಗಳ ತೆಗೆಯಲು ಕ್ಯಾಮೆರಾಗಳನ್ನು ಎಲ್ಲಿಗೆ ಹುಡುಕಿಕೊಂಡು ಹೋಗಬೇಕು ಎನ್ನುತ್ತಾರೆ ಚಿಕ್ಕವೆಂಕಟಪ್ಪ.


ಇದನ್ನೂ ಓದಿ: ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…


ಅರಣ್ಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ರೈತರು ಸಮಸ್ಯೆ ಹೇಳಿಕೊಂಡರೂ ಕೇಳುವುದಿಲ್ಲ. ಚಿರತೆ ದಾಳಿ ಮಾಡಿದಾಗ ಕೇವಲ ಬೋನಿಟ್ಟು ಹೋಗುತ್ತಾರೆ. ಅದು ಬಿದ್ದ ಮೇಲೆ ಅರಣ್ಯಕ್ಕೆ ಬಿಟ್ಟು ಬರುತ್ತಾರೆ. ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮಾನವ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಂಡಲ್ಲಿ ಗುಂಡಿಕ್ಕು ಆದೇಶ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೆಬ್ಬರೂ ವ್ಯಾಪ್ತಿಯಲ್ಲೇ ಹೆಚ್ಚು ಇಂತಹ ದಾಳಿಗಳು ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಚಿರತೆಗಳು ಯಾವಾಗ ಮೇಲೆರಗುತ್ತವೋ ಎಂಬ ಭೀತಿಯಲ್ಲಿ ಜನ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದು ಒಂದು ಕಡೆಯಾದರೆ ಕರಡಿಗಳು ಮತ್ತು ಆನೆಗಳ ದಾಳಿಯ ಭೀತಿ ಕೂಡ ಜನರಲ್ಲಿದೆ. ವನ್ಯಜೀವಿಗಳ ಹಾವಳಿ ಹೆಚ್ಚಿದಂತೆಲ್ಲ ಬೆಳೆ ಹಾನಿ, ಜೀವಹಾನಿ ಆಗುತ್ತಲೇ ಇದ್ದು ಅರಣ್ಯ ಇಲಾಖೆ ಯಾವುದೇ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಇದುವರೆಗೂ ಆಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...