Homeಮುಖಪುಟತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ನರಭಕ್ಷಕ ಚಿರತೆಗಳ ಹಾವಳಿ ಮಿತಿ ಮೀರಿದೆ. ರಕ್ತದ ರುಚಿಯನ್ನು ಕಂಡಿರುವ ಚಿರತೆಗಳು ಮನುಷ್ಯರ ಮೇಲೆ ಎರಗುತ್ತಲೇ ಇವೆ. ಚಿರತೆಗಳು ಕುಣಿಗಲ್, ತುಮಕೂರು ಮತ್ತು ಗುಬ್ಬಿ ತಾಲೂಕಿನಲ್ಲಿ ಮನುಷ್ಯರ ರಕ್ತಹೀರಿ ಕೊಂದಿದೆ. ಚಿರತೆ ದಾಳಿಗೆ ಇದುವರೆಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ. ಅರಣ್ಯ ಇಲಾಖೆಯವರು ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿದ್ದಾರೆಯೇ ಹೊರತು ನರಭಕ್ಷ ಚಿರತೆ ಹಿಡಿಯುವ, ಅದನ್ನು ಗುರುತಿಸುವ ಗೋಜಿಗೆ ಹೋಗುತ್ತಿಲ್ಲ. ಚಿರತೆ ಮಾತ್ರ ಮರೆಸಿಮರೆಸಿ ದಾಳಿ ಮಾಡುತ್ತಲೇ ಇದೆ. ಅರಣ್ಯ ಸಿಬ್ಬಂದಿ ಹುಡುಕಿದಂತೆ ಮಾಡಿ ಮೌನವಾಗುತ್ತಿದ್ದಾರೆ. ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೂ ಕೇಳುವವರೇ ಇಲ್ಲ.

ಬಹುತೇಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಚಿರತೆಗಳ ಹಾವಳಿ ಇದೆ. ನಿತ್ಯವೂ ಒಂದಿಲ್ಲೊಂದು ತಾಲೂಕಿನಲ್ಲಿ ಕುರಿ, ಮೇಕೆ, ನಾಯಿಗಳನ್ನು ಚಿರತೆಗಳು ಹೊತ್ತೊಯ್ಯುತ್ತಲೇ ಇವೆ. ತಮ್ಮ ಸಾಕು ಪ್ರಾಣಿಗಳನ್ನು ಕಳೆದುಕೊಳ್ಳುವ ರೈತರು ಹಾಗೂ ಗ್ರಾಮಸ್ಥರು ಚಿರತೆಗಳ ನಿಯಂತ್ರಣಕ್ಕೆ ಹಲವು ಬಾರಿ ಮನವಿಗಳನ್ನು ನೀಡಿದರೂ ಪ್ರಯೋಜನ ಮಾತ್ರ ಶೂನ್ಯ. ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನ, ಮೊಂಡು ಬೀಳುವಿಕೆಗೆ ಬೇಸತ್ತಿದ್ದಾರೆ. ಎಷ್ಟು ಮನವಿ ಮಾಡಿದರೂ ಕಿವಿಗೇ ಹಾಕಿಕೊಳ್ಳುವುದಿಲ್ಲ. ಯಾರ ಮಾತು ಯಾರೂ ಕೇಳುತ್ತಿಲ್ಲ. ಸುಖಾಸುಮ್ಮನೆ ವೇತನ ಪಡೆಯುತ್ತಿದ್ದಾರೆ. ಜನರ ಸಂಕಟ, ನೋವು ಕೇಳದ ಅಧಿಕಾರಿಗಳು ಇದ್ದೂ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.

ಫೆ.29ರಂದು ಸಂಜೆ 6 ಗಂಟೆಗೆ ತುಮಕೂರು ತಾಲೂಕು ಕಣಕುಪ್ಪೆ ಗ್ರಾಮದಲ್ಲಿ ಚಂದನಾ ಎಂಬ ಮೂರು ವರ್ಷದ ಮಗು ಮತ್ತು ಆಕೆಯ ತಾತ ಮತ್ತು ಗಂಗಚಿಕ್ಕಣ್ಣ ಆಟವಾಡಿಕೊಂಡು ಕುಳಿತಿದ್ದರು. ಕತ್ತಲು ಇನ್ನೂ ಆವರಿಸಿರಲಿಲ್ಲ. ಸೂರ್ಯ ಇನ್ನೂ ಮುಳುಗಿರಲಿಲ್ಲ.. ನೋಡನೋಡುತ್ತಿದ್ದಂತೆಯೇ ಬಾಲಕಿಯ ಮೇಲೆ ಚಿರತೆ ಎರಗಿತು. ಕಣಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಚಿಕ್ಕಣ್ಣ ಕೂಗಿಕೊಂಡರು. ಆದರೂ ಬಿಡದ ಚಿರತೆ ಅರ್ಧಕಿಲೋಮೀಟರ್ ದೂರದ ಪೊದೆಗೆ ಎಳೆದೊಯ್ದು ಬಾಲಕಿ ಕುತ್ತಿಗೆ ಸೀಳಿ ರಕ್ತ ಹೀರಿದೆ. ಮುಖ ಮತ್ತು  ತೊಡೆಯ ಮಾಂಸ ಖಂಡ ತಿಂದು ಹೋಗಿದೆ. ಜನರು ಕೂಗುತ್ತ ಅಲ್ಲಿಗೆ ಹೋಗದಿದ್ದರೆ ಬಾಲಕಿಯನ್ನು ಸಂಪೂರ್ಣವಾಗಿ ಮುಗಿಸಿಬಿಡುತ್ತಿತ್ತು ಎನ್ನುತ್ತಾರೆ ಘಟನೆ ಕಂಡವರು.

ದುರಂತವೆಂದರೆ ತುಮಕೂರು ತಾಲೂಕು ಹೆಬ್ಬೂರು ಹೋಬಳಿಯಲ್ಲೇ ಚಿರತೆ ಮೂರು ಬಲಿ ಪಡೆದುಕೊಂಡಿದೆ. ಪ್ರತಿ ದಾಳಿ ನಡೆದಾಗಲೂ ಜನರು ಹೆಬ್ಬೂರಿನಲ್ಲಿ ಪ್ರತಿಭಟನೆ ನಡೆಸಿ ಚಿರತೆಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ರಸ್ತೆ ತಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಹಿಡಿಸುವ ಭರವಸೆ ನೀಡಿಯೂ ಬಂದಿದ್ದರು. ಮತ್ತೆ ಚಿರತೆ ದಾಳಿ ನಡೆಸಿದ್ದು ಜನರನ್ನು ಮತ್ತಷ್ಟು ಕೆರಳುವಂತೆ
ಮಾಡಿದೆ. ಚಿರತೆ, ಕರಡಿ, ಆನೆಗಳು ಬಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ, ಹೆಜ್ಜೆ ಗುರುತು ಫೋಟೋ ತೆಗೆದ ಕಳಿಸಿ, ಚಿರತೆಯ ಪೋಟೋ ಕಳಿಸಿ ಎಂದು ಹೇಳುತ್ತಾರೆ. ತಮ್ಮ ಕರ್ತವ್ಯ ಮರೆಯುತ್ತಾರೆ. ನಾವು ಫೋಟೋಗಳ ತೆಗೆಯಲು ಕ್ಯಾಮೆರಾಗಳನ್ನು ಎಲ್ಲಿಗೆ ಹುಡುಕಿಕೊಂಡು ಹೋಗಬೇಕು ಎನ್ನುತ್ತಾರೆ ಚಿಕ್ಕವೆಂಕಟಪ್ಪ.


ಇದನ್ನೂ ಓದಿ: ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…


ಅರಣ್ಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ರೈತರು ಸಮಸ್ಯೆ ಹೇಳಿಕೊಂಡರೂ ಕೇಳುವುದಿಲ್ಲ. ಚಿರತೆ ದಾಳಿ ಮಾಡಿದಾಗ ಕೇವಲ ಬೋನಿಟ್ಟು ಹೋಗುತ್ತಾರೆ. ಅದು ಬಿದ್ದ ಮೇಲೆ ಅರಣ್ಯಕ್ಕೆ ಬಿಟ್ಟು ಬರುತ್ತಾರೆ. ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮಾನವ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಂಡಲ್ಲಿ ಗುಂಡಿಕ್ಕು ಆದೇಶ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೆಬ್ಬರೂ ವ್ಯಾಪ್ತಿಯಲ್ಲೇ ಹೆಚ್ಚು ಇಂತಹ ದಾಳಿಗಳು ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಚಿರತೆಗಳು ಯಾವಾಗ ಮೇಲೆರಗುತ್ತವೋ ಎಂಬ ಭೀತಿಯಲ್ಲಿ ಜನ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದು ಒಂದು ಕಡೆಯಾದರೆ ಕರಡಿಗಳು ಮತ್ತು ಆನೆಗಳ ದಾಳಿಯ ಭೀತಿ ಕೂಡ ಜನರಲ್ಲಿದೆ. ವನ್ಯಜೀವಿಗಳ ಹಾವಳಿ ಹೆಚ್ಚಿದಂತೆಲ್ಲ ಬೆಳೆ ಹಾನಿ, ಜೀವಹಾನಿ ಆಗುತ್ತಲೇ ಇದ್ದು ಅರಣ್ಯ ಇಲಾಖೆ ಯಾವುದೇ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಇದುವರೆಗೂ ಆಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...