Homeಮುಖಪುಟತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ನರಭಕ್ಷಕ ಚಿರತೆಗಳ ಹಾವಳಿ ಮಿತಿ ಮೀರಿದೆ. ರಕ್ತದ ರುಚಿಯನ್ನು ಕಂಡಿರುವ ಚಿರತೆಗಳು ಮನುಷ್ಯರ ಮೇಲೆ ಎರಗುತ್ತಲೇ ಇವೆ. ಚಿರತೆಗಳು ಕುಣಿಗಲ್, ತುಮಕೂರು ಮತ್ತು ಗುಬ್ಬಿ ತಾಲೂಕಿನಲ್ಲಿ ಮನುಷ್ಯರ ರಕ್ತಹೀರಿ ಕೊಂದಿದೆ. ಚಿರತೆ ದಾಳಿಗೆ ಇದುವರೆಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ. ಅರಣ್ಯ ಇಲಾಖೆಯವರು ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿದ್ದಾರೆಯೇ ಹೊರತು ನರಭಕ್ಷ ಚಿರತೆ ಹಿಡಿಯುವ, ಅದನ್ನು ಗುರುತಿಸುವ ಗೋಜಿಗೆ ಹೋಗುತ್ತಿಲ್ಲ. ಚಿರತೆ ಮಾತ್ರ ಮರೆಸಿಮರೆಸಿ ದಾಳಿ ಮಾಡುತ್ತಲೇ ಇದೆ. ಅರಣ್ಯ ಸಿಬ್ಬಂದಿ ಹುಡುಕಿದಂತೆ ಮಾಡಿ ಮೌನವಾಗುತ್ತಿದ್ದಾರೆ. ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೂ ಕೇಳುವವರೇ ಇಲ್ಲ.

ಬಹುತೇಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಚಿರತೆಗಳ ಹಾವಳಿ ಇದೆ. ನಿತ್ಯವೂ ಒಂದಿಲ್ಲೊಂದು ತಾಲೂಕಿನಲ್ಲಿ ಕುರಿ, ಮೇಕೆ, ನಾಯಿಗಳನ್ನು ಚಿರತೆಗಳು ಹೊತ್ತೊಯ್ಯುತ್ತಲೇ ಇವೆ. ತಮ್ಮ ಸಾಕು ಪ್ರಾಣಿಗಳನ್ನು ಕಳೆದುಕೊಳ್ಳುವ ರೈತರು ಹಾಗೂ ಗ್ರಾಮಸ್ಥರು ಚಿರತೆಗಳ ನಿಯಂತ್ರಣಕ್ಕೆ ಹಲವು ಬಾರಿ ಮನವಿಗಳನ್ನು ನೀಡಿದರೂ ಪ್ರಯೋಜನ ಮಾತ್ರ ಶೂನ್ಯ. ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನ, ಮೊಂಡು ಬೀಳುವಿಕೆಗೆ ಬೇಸತ್ತಿದ್ದಾರೆ. ಎಷ್ಟು ಮನವಿ ಮಾಡಿದರೂ ಕಿವಿಗೇ ಹಾಕಿಕೊಳ್ಳುವುದಿಲ್ಲ. ಯಾರ ಮಾತು ಯಾರೂ ಕೇಳುತ್ತಿಲ್ಲ. ಸುಖಾಸುಮ್ಮನೆ ವೇತನ ಪಡೆಯುತ್ತಿದ್ದಾರೆ. ಜನರ ಸಂಕಟ, ನೋವು ಕೇಳದ ಅಧಿಕಾರಿಗಳು ಇದ್ದೂ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.

ಫೆ.29ರಂದು ಸಂಜೆ 6 ಗಂಟೆಗೆ ತುಮಕೂರು ತಾಲೂಕು ಕಣಕುಪ್ಪೆ ಗ್ರಾಮದಲ್ಲಿ ಚಂದನಾ ಎಂಬ ಮೂರು ವರ್ಷದ ಮಗು ಮತ್ತು ಆಕೆಯ ತಾತ ಮತ್ತು ಗಂಗಚಿಕ್ಕಣ್ಣ ಆಟವಾಡಿಕೊಂಡು ಕುಳಿತಿದ್ದರು. ಕತ್ತಲು ಇನ್ನೂ ಆವರಿಸಿರಲಿಲ್ಲ. ಸೂರ್ಯ ಇನ್ನೂ ಮುಳುಗಿರಲಿಲ್ಲ.. ನೋಡನೋಡುತ್ತಿದ್ದಂತೆಯೇ ಬಾಲಕಿಯ ಮೇಲೆ ಚಿರತೆ ಎರಗಿತು. ಕಣಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಚಿಕ್ಕಣ್ಣ ಕೂಗಿಕೊಂಡರು. ಆದರೂ ಬಿಡದ ಚಿರತೆ ಅರ್ಧಕಿಲೋಮೀಟರ್ ದೂರದ ಪೊದೆಗೆ ಎಳೆದೊಯ್ದು ಬಾಲಕಿ ಕುತ್ತಿಗೆ ಸೀಳಿ ರಕ್ತ ಹೀರಿದೆ. ಮುಖ ಮತ್ತು  ತೊಡೆಯ ಮಾಂಸ ಖಂಡ ತಿಂದು ಹೋಗಿದೆ. ಜನರು ಕೂಗುತ್ತ ಅಲ್ಲಿಗೆ ಹೋಗದಿದ್ದರೆ ಬಾಲಕಿಯನ್ನು ಸಂಪೂರ್ಣವಾಗಿ ಮುಗಿಸಿಬಿಡುತ್ತಿತ್ತು ಎನ್ನುತ್ತಾರೆ ಘಟನೆ ಕಂಡವರು.

ದುರಂತವೆಂದರೆ ತುಮಕೂರು ತಾಲೂಕು ಹೆಬ್ಬೂರು ಹೋಬಳಿಯಲ್ಲೇ ಚಿರತೆ ಮೂರು ಬಲಿ ಪಡೆದುಕೊಂಡಿದೆ. ಪ್ರತಿ ದಾಳಿ ನಡೆದಾಗಲೂ ಜನರು ಹೆಬ್ಬೂರಿನಲ್ಲಿ ಪ್ರತಿಭಟನೆ ನಡೆಸಿ ಚಿರತೆಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ರಸ್ತೆ ತಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಹಿಡಿಸುವ ಭರವಸೆ ನೀಡಿಯೂ ಬಂದಿದ್ದರು. ಮತ್ತೆ ಚಿರತೆ ದಾಳಿ ನಡೆಸಿದ್ದು ಜನರನ್ನು ಮತ್ತಷ್ಟು ಕೆರಳುವಂತೆ
ಮಾಡಿದೆ. ಚಿರತೆ, ಕರಡಿ, ಆನೆಗಳು ಬಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ, ಹೆಜ್ಜೆ ಗುರುತು ಫೋಟೋ ತೆಗೆದ ಕಳಿಸಿ, ಚಿರತೆಯ ಪೋಟೋ ಕಳಿಸಿ ಎಂದು ಹೇಳುತ್ತಾರೆ. ತಮ್ಮ ಕರ್ತವ್ಯ ಮರೆಯುತ್ತಾರೆ. ನಾವು ಫೋಟೋಗಳ ತೆಗೆಯಲು ಕ್ಯಾಮೆರಾಗಳನ್ನು ಎಲ್ಲಿಗೆ ಹುಡುಕಿಕೊಂಡು ಹೋಗಬೇಕು ಎನ್ನುತ್ತಾರೆ ಚಿಕ್ಕವೆಂಕಟಪ್ಪ.


ಇದನ್ನೂ ಓದಿ: ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…


ಅರಣ್ಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ರೈತರು ಸಮಸ್ಯೆ ಹೇಳಿಕೊಂಡರೂ ಕೇಳುವುದಿಲ್ಲ. ಚಿರತೆ ದಾಳಿ ಮಾಡಿದಾಗ ಕೇವಲ ಬೋನಿಟ್ಟು ಹೋಗುತ್ತಾರೆ. ಅದು ಬಿದ್ದ ಮೇಲೆ ಅರಣ್ಯಕ್ಕೆ ಬಿಟ್ಟು ಬರುತ್ತಾರೆ. ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮಾನವ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಂಡಲ್ಲಿ ಗುಂಡಿಕ್ಕು ಆದೇಶ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೆಬ್ಬರೂ ವ್ಯಾಪ್ತಿಯಲ್ಲೇ ಹೆಚ್ಚು ಇಂತಹ ದಾಳಿಗಳು ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಚಿರತೆಗಳು ಯಾವಾಗ ಮೇಲೆರಗುತ್ತವೋ ಎಂಬ ಭೀತಿಯಲ್ಲಿ ಜನ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದು ಒಂದು ಕಡೆಯಾದರೆ ಕರಡಿಗಳು ಮತ್ತು ಆನೆಗಳ ದಾಳಿಯ ಭೀತಿ ಕೂಡ ಜನರಲ್ಲಿದೆ. ವನ್ಯಜೀವಿಗಳ ಹಾವಳಿ ಹೆಚ್ಚಿದಂತೆಲ್ಲ ಬೆಳೆ ಹಾನಿ, ಜೀವಹಾನಿ ಆಗುತ್ತಲೇ ಇದ್ದು ಅರಣ್ಯ ಇಲಾಖೆ ಯಾವುದೇ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಇದುವರೆಗೂ ಆಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...