Homeಮುಖಪುಟತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ನರಭಕ್ಷಕ ಚಿರತೆಗಳ ಹಾವಳಿ ಮಿತಿ ಮೀರಿದೆ. ರಕ್ತದ ರುಚಿಯನ್ನು ಕಂಡಿರುವ ಚಿರತೆಗಳು ಮನುಷ್ಯರ ಮೇಲೆ ಎರಗುತ್ತಲೇ ಇವೆ. ಚಿರತೆಗಳು ಕುಣಿಗಲ್, ತುಮಕೂರು ಮತ್ತು ಗುಬ್ಬಿ ತಾಲೂಕಿನಲ್ಲಿ ಮನುಷ್ಯರ ರಕ್ತಹೀರಿ ಕೊಂದಿದೆ. ಚಿರತೆ ದಾಳಿಗೆ ಇದುವರೆಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ. ಅರಣ್ಯ ಇಲಾಖೆಯವರು ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿದ್ದಾರೆಯೇ ಹೊರತು ನರಭಕ್ಷ ಚಿರತೆ ಹಿಡಿಯುವ, ಅದನ್ನು ಗುರುತಿಸುವ ಗೋಜಿಗೆ ಹೋಗುತ್ತಿಲ್ಲ. ಚಿರತೆ ಮಾತ್ರ ಮರೆಸಿಮರೆಸಿ ದಾಳಿ ಮಾಡುತ್ತಲೇ ಇದೆ. ಅರಣ್ಯ ಸಿಬ್ಬಂದಿ ಹುಡುಕಿದಂತೆ ಮಾಡಿ ಮೌನವಾಗುತ್ತಿದ್ದಾರೆ. ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೂ ಕೇಳುವವರೇ ಇಲ್ಲ.

ಬಹುತೇಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಚಿರತೆಗಳ ಹಾವಳಿ ಇದೆ. ನಿತ್ಯವೂ ಒಂದಿಲ್ಲೊಂದು ತಾಲೂಕಿನಲ್ಲಿ ಕುರಿ, ಮೇಕೆ, ನಾಯಿಗಳನ್ನು ಚಿರತೆಗಳು ಹೊತ್ತೊಯ್ಯುತ್ತಲೇ ಇವೆ. ತಮ್ಮ ಸಾಕು ಪ್ರಾಣಿಗಳನ್ನು ಕಳೆದುಕೊಳ್ಳುವ ರೈತರು ಹಾಗೂ ಗ್ರಾಮಸ್ಥರು ಚಿರತೆಗಳ ನಿಯಂತ್ರಣಕ್ಕೆ ಹಲವು ಬಾರಿ ಮನವಿಗಳನ್ನು ನೀಡಿದರೂ ಪ್ರಯೋಜನ ಮಾತ್ರ ಶೂನ್ಯ. ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನ, ಮೊಂಡು ಬೀಳುವಿಕೆಗೆ ಬೇಸತ್ತಿದ್ದಾರೆ. ಎಷ್ಟು ಮನವಿ ಮಾಡಿದರೂ ಕಿವಿಗೇ ಹಾಕಿಕೊಳ್ಳುವುದಿಲ್ಲ. ಯಾರ ಮಾತು ಯಾರೂ ಕೇಳುತ್ತಿಲ್ಲ. ಸುಖಾಸುಮ್ಮನೆ ವೇತನ ಪಡೆಯುತ್ತಿದ್ದಾರೆ. ಜನರ ಸಂಕಟ, ನೋವು ಕೇಳದ ಅಧಿಕಾರಿಗಳು ಇದ್ದೂ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.

ಫೆ.29ರಂದು ಸಂಜೆ 6 ಗಂಟೆಗೆ ತುಮಕೂರು ತಾಲೂಕು ಕಣಕುಪ್ಪೆ ಗ್ರಾಮದಲ್ಲಿ ಚಂದನಾ ಎಂಬ ಮೂರು ವರ್ಷದ ಮಗು ಮತ್ತು ಆಕೆಯ ತಾತ ಮತ್ತು ಗಂಗಚಿಕ್ಕಣ್ಣ ಆಟವಾಡಿಕೊಂಡು ಕುಳಿತಿದ್ದರು. ಕತ್ತಲು ಇನ್ನೂ ಆವರಿಸಿರಲಿಲ್ಲ. ಸೂರ್ಯ ಇನ್ನೂ ಮುಳುಗಿರಲಿಲ್ಲ.. ನೋಡನೋಡುತ್ತಿದ್ದಂತೆಯೇ ಬಾಲಕಿಯ ಮೇಲೆ ಚಿರತೆ ಎರಗಿತು. ಕಣಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಚಿಕ್ಕಣ್ಣ ಕೂಗಿಕೊಂಡರು. ಆದರೂ ಬಿಡದ ಚಿರತೆ ಅರ್ಧಕಿಲೋಮೀಟರ್ ದೂರದ ಪೊದೆಗೆ ಎಳೆದೊಯ್ದು ಬಾಲಕಿ ಕುತ್ತಿಗೆ ಸೀಳಿ ರಕ್ತ ಹೀರಿದೆ. ಮುಖ ಮತ್ತು  ತೊಡೆಯ ಮಾಂಸ ಖಂಡ ತಿಂದು ಹೋಗಿದೆ. ಜನರು ಕೂಗುತ್ತ ಅಲ್ಲಿಗೆ ಹೋಗದಿದ್ದರೆ ಬಾಲಕಿಯನ್ನು ಸಂಪೂರ್ಣವಾಗಿ ಮುಗಿಸಿಬಿಡುತ್ತಿತ್ತು ಎನ್ನುತ್ತಾರೆ ಘಟನೆ ಕಂಡವರು.

ದುರಂತವೆಂದರೆ ತುಮಕೂರು ತಾಲೂಕು ಹೆಬ್ಬೂರು ಹೋಬಳಿಯಲ್ಲೇ ಚಿರತೆ ಮೂರು ಬಲಿ ಪಡೆದುಕೊಂಡಿದೆ. ಪ್ರತಿ ದಾಳಿ ನಡೆದಾಗಲೂ ಜನರು ಹೆಬ್ಬೂರಿನಲ್ಲಿ ಪ್ರತಿಭಟನೆ ನಡೆಸಿ ಚಿರತೆಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ರಸ್ತೆ ತಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಹಿಡಿಸುವ ಭರವಸೆ ನೀಡಿಯೂ ಬಂದಿದ್ದರು. ಮತ್ತೆ ಚಿರತೆ ದಾಳಿ ನಡೆಸಿದ್ದು ಜನರನ್ನು ಮತ್ತಷ್ಟು ಕೆರಳುವಂತೆ
ಮಾಡಿದೆ. ಚಿರತೆ, ಕರಡಿ, ಆನೆಗಳು ಬಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ, ಹೆಜ್ಜೆ ಗುರುತು ಫೋಟೋ ತೆಗೆದ ಕಳಿಸಿ, ಚಿರತೆಯ ಪೋಟೋ ಕಳಿಸಿ ಎಂದು ಹೇಳುತ್ತಾರೆ. ತಮ್ಮ ಕರ್ತವ್ಯ ಮರೆಯುತ್ತಾರೆ. ನಾವು ಫೋಟೋಗಳ ತೆಗೆಯಲು ಕ್ಯಾಮೆರಾಗಳನ್ನು ಎಲ್ಲಿಗೆ ಹುಡುಕಿಕೊಂಡು ಹೋಗಬೇಕು ಎನ್ನುತ್ತಾರೆ ಚಿಕ್ಕವೆಂಕಟಪ್ಪ.


ಇದನ್ನೂ ಓದಿ: ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…


ಅರಣ್ಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ರೈತರು ಸಮಸ್ಯೆ ಹೇಳಿಕೊಂಡರೂ ಕೇಳುವುದಿಲ್ಲ. ಚಿರತೆ ದಾಳಿ ಮಾಡಿದಾಗ ಕೇವಲ ಬೋನಿಟ್ಟು ಹೋಗುತ್ತಾರೆ. ಅದು ಬಿದ್ದ ಮೇಲೆ ಅರಣ್ಯಕ್ಕೆ ಬಿಟ್ಟು ಬರುತ್ತಾರೆ. ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮಾನವ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಂಡಲ್ಲಿ ಗುಂಡಿಕ್ಕು ಆದೇಶ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೆಬ್ಬರೂ ವ್ಯಾಪ್ತಿಯಲ್ಲೇ ಹೆಚ್ಚು ಇಂತಹ ದಾಳಿಗಳು ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಚಿರತೆಗಳು ಯಾವಾಗ ಮೇಲೆರಗುತ್ತವೋ ಎಂಬ ಭೀತಿಯಲ್ಲಿ ಜನ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದು ಒಂದು ಕಡೆಯಾದರೆ ಕರಡಿಗಳು ಮತ್ತು ಆನೆಗಳ ದಾಳಿಯ ಭೀತಿ ಕೂಡ ಜನರಲ್ಲಿದೆ. ವನ್ಯಜೀವಿಗಳ ಹಾವಳಿ ಹೆಚ್ಚಿದಂತೆಲ್ಲ ಬೆಳೆ ಹಾನಿ, ಜೀವಹಾನಿ ಆಗುತ್ತಲೇ ಇದ್ದು ಅರಣ್ಯ ಇಲಾಖೆ ಯಾವುದೇ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಇದುವರೆಗೂ ಆಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....