Homeಮುಖಪುಟತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ನರಭಕ್ಷಕ ಚಿರತೆಗಳ ಹಾವಳಿ ಮಿತಿ ಮೀರಿದೆ. ರಕ್ತದ ರುಚಿಯನ್ನು ಕಂಡಿರುವ ಚಿರತೆಗಳು ಮನುಷ್ಯರ ಮೇಲೆ ಎರಗುತ್ತಲೇ ಇವೆ. ಚಿರತೆಗಳು ಕುಣಿಗಲ್, ತುಮಕೂರು ಮತ್ತು ಗುಬ್ಬಿ ತಾಲೂಕಿನಲ್ಲಿ ಮನುಷ್ಯರ ರಕ್ತಹೀರಿ ಕೊಂದಿದೆ. ಚಿರತೆ ದಾಳಿಗೆ ಇದುವರೆಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ. ಅರಣ್ಯ ಇಲಾಖೆಯವರು ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿದ್ದಾರೆಯೇ ಹೊರತು ನರಭಕ್ಷ ಚಿರತೆ ಹಿಡಿಯುವ, ಅದನ್ನು ಗುರುತಿಸುವ ಗೋಜಿಗೆ ಹೋಗುತ್ತಿಲ್ಲ. ಚಿರತೆ ಮಾತ್ರ ಮರೆಸಿಮರೆಸಿ ದಾಳಿ ಮಾಡುತ್ತಲೇ ಇದೆ. ಅರಣ್ಯ ಸಿಬ್ಬಂದಿ ಹುಡುಕಿದಂತೆ ಮಾಡಿ ಮೌನವಾಗುತ್ತಿದ್ದಾರೆ. ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೂ ಕೇಳುವವರೇ ಇಲ್ಲ.

ಬಹುತೇಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಚಿರತೆಗಳ ಹಾವಳಿ ಇದೆ. ನಿತ್ಯವೂ ಒಂದಿಲ್ಲೊಂದು ತಾಲೂಕಿನಲ್ಲಿ ಕುರಿ, ಮೇಕೆ, ನಾಯಿಗಳನ್ನು ಚಿರತೆಗಳು ಹೊತ್ತೊಯ್ಯುತ್ತಲೇ ಇವೆ. ತಮ್ಮ ಸಾಕು ಪ್ರಾಣಿಗಳನ್ನು ಕಳೆದುಕೊಳ್ಳುವ ರೈತರು ಹಾಗೂ ಗ್ರಾಮಸ್ಥರು ಚಿರತೆಗಳ ನಿಯಂತ್ರಣಕ್ಕೆ ಹಲವು ಬಾರಿ ಮನವಿಗಳನ್ನು ನೀಡಿದರೂ ಪ್ರಯೋಜನ ಮಾತ್ರ ಶೂನ್ಯ. ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನ, ಮೊಂಡು ಬೀಳುವಿಕೆಗೆ ಬೇಸತ್ತಿದ್ದಾರೆ. ಎಷ್ಟು ಮನವಿ ಮಾಡಿದರೂ ಕಿವಿಗೇ ಹಾಕಿಕೊಳ್ಳುವುದಿಲ್ಲ. ಯಾರ ಮಾತು ಯಾರೂ ಕೇಳುತ್ತಿಲ್ಲ. ಸುಖಾಸುಮ್ಮನೆ ವೇತನ ಪಡೆಯುತ್ತಿದ್ದಾರೆ. ಜನರ ಸಂಕಟ, ನೋವು ಕೇಳದ ಅಧಿಕಾರಿಗಳು ಇದ್ದೂ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.

ಫೆ.29ರಂದು ಸಂಜೆ 6 ಗಂಟೆಗೆ ತುಮಕೂರು ತಾಲೂಕು ಕಣಕುಪ್ಪೆ ಗ್ರಾಮದಲ್ಲಿ ಚಂದನಾ ಎಂಬ ಮೂರು ವರ್ಷದ ಮಗು ಮತ್ತು ಆಕೆಯ ತಾತ ಮತ್ತು ಗಂಗಚಿಕ್ಕಣ್ಣ ಆಟವಾಡಿಕೊಂಡು ಕುಳಿತಿದ್ದರು. ಕತ್ತಲು ಇನ್ನೂ ಆವರಿಸಿರಲಿಲ್ಲ. ಸೂರ್ಯ ಇನ್ನೂ ಮುಳುಗಿರಲಿಲ್ಲ.. ನೋಡನೋಡುತ್ತಿದ್ದಂತೆಯೇ ಬಾಲಕಿಯ ಮೇಲೆ ಚಿರತೆ ಎರಗಿತು. ಕಣಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಚಿಕ್ಕಣ್ಣ ಕೂಗಿಕೊಂಡರು. ಆದರೂ ಬಿಡದ ಚಿರತೆ ಅರ್ಧಕಿಲೋಮೀಟರ್ ದೂರದ ಪೊದೆಗೆ ಎಳೆದೊಯ್ದು ಬಾಲಕಿ ಕುತ್ತಿಗೆ ಸೀಳಿ ರಕ್ತ ಹೀರಿದೆ. ಮುಖ ಮತ್ತು  ತೊಡೆಯ ಮಾಂಸ ಖಂಡ ತಿಂದು ಹೋಗಿದೆ. ಜನರು ಕೂಗುತ್ತ ಅಲ್ಲಿಗೆ ಹೋಗದಿದ್ದರೆ ಬಾಲಕಿಯನ್ನು ಸಂಪೂರ್ಣವಾಗಿ ಮುಗಿಸಿಬಿಡುತ್ತಿತ್ತು ಎನ್ನುತ್ತಾರೆ ಘಟನೆ ಕಂಡವರು.

ದುರಂತವೆಂದರೆ ತುಮಕೂರು ತಾಲೂಕು ಹೆಬ್ಬೂರು ಹೋಬಳಿಯಲ್ಲೇ ಚಿರತೆ ಮೂರು ಬಲಿ ಪಡೆದುಕೊಂಡಿದೆ. ಪ್ರತಿ ದಾಳಿ ನಡೆದಾಗಲೂ ಜನರು ಹೆಬ್ಬೂರಿನಲ್ಲಿ ಪ್ರತಿಭಟನೆ ನಡೆಸಿ ಚಿರತೆಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ರಸ್ತೆ ತಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಹಿಡಿಸುವ ಭರವಸೆ ನೀಡಿಯೂ ಬಂದಿದ್ದರು. ಮತ್ತೆ ಚಿರತೆ ದಾಳಿ ನಡೆಸಿದ್ದು ಜನರನ್ನು ಮತ್ತಷ್ಟು ಕೆರಳುವಂತೆ
ಮಾಡಿದೆ. ಚಿರತೆ, ಕರಡಿ, ಆನೆಗಳು ಬಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ, ಹೆಜ್ಜೆ ಗುರುತು ಫೋಟೋ ತೆಗೆದ ಕಳಿಸಿ, ಚಿರತೆಯ ಪೋಟೋ ಕಳಿಸಿ ಎಂದು ಹೇಳುತ್ತಾರೆ. ತಮ್ಮ ಕರ್ತವ್ಯ ಮರೆಯುತ್ತಾರೆ. ನಾವು ಫೋಟೋಗಳ ತೆಗೆಯಲು ಕ್ಯಾಮೆರಾಗಳನ್ನು ಎಲ್ಲಿಗೆ ಹುಡುಕಿಕೊಂಡು ಹೋಗಬೇಕು ಎನ್ನುತ್ತಾರೆ ಚಿಕ್ಕವೆಂಕಟಪ್ಪ.


ಇದನ್ನೂ ಓದಿ: ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…


ಅರಣ್ಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ರೈತರು ಸಮಸ್ಯೆ ಹೇಳಿಕೊಂಡರೂ ಕೇಳುವುದಿಲ್ಲ. ಚಿರತೆ ದಾಳಿ ಮಾಡಿದಾಗ ಕೇವಲ ಬೋನಿಟ್ಟು ಹೋಗುತ್ತಾರೆ. ಅದು ಬಿದ್ದ ಮೇಲೆ ಅರಣ್ಯಕ್ಕೆ ಬಿಟ್ಟು ಬರುತ್ತಾರೆ. ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮಾನವ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಂಡಲ್ಲಿ ಗುಂಡಿಕ್ಕು ಆದೇಶ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೆಬ್ಬರೂ ವ್ಯಾಪ್ತಿಯಲ್ಲೇ ಹೆಚ್ಚು ಇಂತಹ ದಾಳಿಗಳು ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಚಿರತೆಗಳು ಯಾವಾಗ ಮೇಲೆರಗುತ್ತವೋ ಎಂಬ ಭೀತಿಯಲ್ಲಿ ಜನ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದು ಒಂದು ಕಡೆಯಾದರೆ ಕರಡಿಗಳು ಮತ್ತು ಆನೆಗಳ ದಾಳಿಯ ಭೀತಿ ಕೂಡ ಜನರಲ್ಲಿದೆ. ವನ್ಯಜೀವಿಗಳ ಹಾವಳಿ ಹೆಚ್ಚಿದಂತೆಲ್ಲ ಬೆಳೆ ಹಾನಿ, ಜೀವಹಾನಿ ಆಗುತ್ತಲೇ ಇದ್ದು ಅರಣ್ಯ ಇಲಾಖೆ ಯಾವುದೇ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಇದುವರೆಗೂ ಆಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...