Homeಕರ್ನಾಟಕಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆ!

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆ!

- Advertisement -
- Advertisement -

ಚಿತ್ರದುರ್ಗದ ಚಳ್ಳಕೆರೆ ಗೇಟ್‍ ಸಮೀಪದ ಪಾಳು ಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ರಾತ್ರಿ ವೇಳೆಗೆ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವಗಳಿವೆ ಎಂಬ ಮಾಹಿತಿ ಆಧರಿಸಿ ಸ್ಥಳಕ್ಕೆ ಪೊಲೀಸರು ಮತ್ತು ವಿಧಿ ವಿಜ್ಞಾನ ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಈ ವೇಳೆ ಮನೆಯಲ್ಲಿ ಐದು ಅಸ್ತಿಪಂಜರಗಳು ಮತ್ತು ತಲೆಬುರುಡೆಗಳು ಪತ್ತೆಯಾಗಿದೆ. ನಾಲ್ಕು ಅಥವಾ ಐದು ಜನ ಮೃತಪಟ್ಟಿರುವ ಬಗ್ಗೆ ಪೊಲೀಶರು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದು ಐಜಿಪಿ‌ ತ್ಯಾಗರಾಜನ್, ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ, ಎಎಸ್ಪಿ  ಕುಮಾರಸ್ವಾಮಿ, ಡಿವೈಎಸ್‍ಪಿ ಅನಿಲ್ ಕುಮಾರ್, ಸಿಪಿಐ ನಯಿಂ ಸೇರಿದಂತೆ ಪೊಲೀಸರು ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ.

ಜಗನ್ನಾಥ ರೆಡ್ಡಿ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಮೃತಪಟ್ಟಿರುವ ದೇಹಗಳು ಯಾರದು ಎನ್ನುವ ಖಚಿತ ಮಾಹಿತಿ ಇಲ್ಲ. ಕಳೆದ ಕೆಲ ವರ್ಷಗಳಿಂದ ಜಗನ್ನಾಥ ರೆಡ್ಡಿ  ಕುಟುಂಬ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎನ್ನಲಾಗಿದೆ.

ನಾಲ್ಕು ವರ್ಷಗಳಿಂದ ಮನೆಯ ಬಾಗಿಲು ತೆರೆದಿಲ್ಲ!

ನಿವೃತ್ತ ಎಂಜಿನಿಯರ್ ಜಗನ್ನಾಥ ರೆಡ್ಡಿ (70), ಪತ್ನಿ ಪ್ರೇಮಾವತಿ (60), ಮಗಳು ತ್ರಿವೇಣಿ (42), ಮಗ ಪುತ್ರರಾದ ಕೃಷ್ಣಾ ರೆಡ್ಡಿ (40) ಹಾಗೂ ನರೇಂದ್ರ ರೆಡ್ಡಿ (38) ಅವರು ಈ ಮನೆಯಲ್ಲಿ ವಾಸವಿದ್ದರು. ಆದರೆ ಕಳೆದ ನಾಲ್ಕು ವರ್ಷಗಳಿಂದ ಈ ಮನೆಯ ಬಾಗಿಲು ತೆರೆದಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ದೊಡ್ಡಸಿದ್ದವ್ವನಹಳ್ಳಿ ಮೂಲದ ಜಗನ್ನಾಥ ರೆಡ್ಡಿ ಅವರಿಗೆ ಮೂವರು ಗಂಡು ಮಕ್ಕಳು, ಓರ್ವ ಪುತ್ರಿ ಇದ್ದರು. ಅವರಲ್ಲಿ ಯಾರಿಗೂ ಮದುವೆ ಆಗಿರಲಿಲ್ಲ. ಹಿರಿಯ ಮಗ ಮಂಜುನಾಥ ರೆಡ್ಡಿ ಎಂಬುವವರು ಮೊದಲೇ ಮೃತಪಟ್ಟಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಅಕ್ಕಪಕ್ಕದ ಮನೆಯವರು 3 ವರ್ಷಗಳ ಮೊದಲು ಮನೆಯಿಂದ ವಾಸನೆ ಬರುತ್ತಿತ್ತು. ಆಗ ಇಲಿ ಸತ್ತಿರಬಹುದು ಎಂದು ಭಾವಿಸಲಾಗಿತ್ತು. ಕೆಲ ದಿನ ವಾಸನೆ ಬಂದು ನಿಂತಿತ್ತು. ಆ ನಂತರ ಯಾರೂ ಆ ಮನೆಯ ಕಡೆಗೆ ಗಮನ ಹರಿಸಿರಲಿಲ್ಲ ಎಂದು ಹೇಳಿದ್ದಾರೆ.

ಮನೆಯ ಮಾಲೀಕರಾದ ಜಗನ್ನಾಥ ರೆಡ್ಡಿ ಅವರ ಸಂಬಂಧಿಕ ಪವನ್ ಕುಮಾರ್ ಅವರು ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ. ಇಲ್ಲಿ ಪತ್ತೆಯಾಗಿರುವ ಅಸ್ಥಿ ಪಂಜರಗಳು ಜಗನ್ನಾಥ ರೆಡ್ಡಿ ಮತ್ತು ಕಟುಂಬದ್ದ ಅನುಮಾನವೂ ಇದೆ. 3 ವರ್ಷಗಳ ಹಿಂದೆ ಮೃತಪಟ್ಟರುವ ಶಂಕೆ ಕಾಣಿಸುತ್ತಿದೆ. ಈ ಸಾವಿನ ಬಗ್ಗೆ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಘಟನೆ ನಡೆದ ಮನೆಯ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿದೆ. ಮನೆಯ ಸುತ್ತಮುತ್ತ ಬ್ಯಾರಿಕೇಡ್ ಹಾಕಿ, ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ.

 

ಈ ಬಗ್ಗೆ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಅವರು, ‘ಒಂದು ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿರುವ ಬಗ್ಗೆ ವರದಿ ಬಂದಿದೆ, ಅವರು ಎಷ್ಟು ದಿನದಿಂದ ಇದ್ದಾರೆ, ಅವರು ಯಾರು, ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಪೊಲೀಸರು ಈಗಾಗಲೇ ತನಿಖೆ ಪ್ರಾರಂಭಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮಾದರಿಗಳನ್ನು ಕಳುಹಿಸಲಾಗಿದೆ. ಅಲ್ಲದೆ ಮನೆ ಯಾರಿಗೆ ಸೇರಿದ್ದು, ಯಾರು ವಾಸವಿದ್ದರು ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...