Homeಎಕಾನಮಿಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌... : ಡಾ.ಬಿ.ಸಿ ಬಸವರಾಜ್

ಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌… : ಡಾ.ಬಿ.ಸಿ ಬಸವರಾಜ್

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

- Advertisement -
- Advertisement -

2019 – 20 ರಲ್ಲಿ ಭಾರತದ ಜಿಡಿಪಿ ಕೇವಲ 5% ಬೆಳವಣಿಗೆ ಕಾಣುತ್ತಿದ್ದು ಇಡೀ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ. ಈಗಾಗಲೇ ತಿಳಿದಿರುವಂತೆ ಇದಕ್ಕೆ ಮುಖ್ಯ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದು ಅಥವಾ ಜನರ ಒಟ್ಟಾರೆ ಕೊಳ್ಳುವ ಶಕ್ತಿ ಕಡಿಮೆಯಾಗಿರುವುದು.

ಅಂದರೆ, ಜನರಲ್ಲಿ ಹಣ ಖರ್ಚು ಮಾಡುವ ಸಾಮರ್ಥ್ಯ ಕುಂದಿರುವುದು. ಇದನ್ನೇ ಇನ್ನೊಂದು ರೀತಿ ಹೇಳುವುದಾದರೆ, ಜನರ ಸಂಪಾದನೆ ಮಾಡುವ ಅವಕಾಶ ಕಡಿಮೆಯಾಗಿರುವುದು.

ಇದಕ್ಕೆ ಕಳೆದ ನಲವತೈದು ವರ್ಷಗಳಲ್ಲಿಯೇ ಅತಿಹೆಚ್ಚು ನಿರುದ್ಯೋಗ ಉಂಟಾಗಿರುವುದೂ ಪ್ರಮುಖ ಕಾರಣವಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಉದ್ಯೋಗ ಸೃಷ್ಟಿಸುವುದಕ್ಕೆ ಮತ್ತು ಅದರ ಮೂಲಕ ಜನರ ಕೊಳ್ಳುವ ಶಕ್ತಿ ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ಕೊಡಬೇಕಿತ್ತು. ಆದರೆ, ಈ ಬಾರಿಯ ಬಜೆಟ್ ಇದರಲ್ಲಿ ದಯನೀಯವಾಗಿ ಸೋತಿರುವುದು ಕಾಣಿಸುತ್ತಿದೆ.

ಇದಕ್ಕೆ ಸರಳ ಉದಾಹರಣೆ ಎಂದರೆ ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ನರೇಗಾ) ಕೇವಲ 61,500 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಹೋದವರ್ಷ ಅಂದರೆ 2019-20 ರಲ್ಲಿ ಈ ಯೋಜನೆಗೆ ಖರ್ಚಾಗಿದ್ದ ಹಣ 71,000 ಕೋಟಿ ರೂಪಾಯಿಗಳು.

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

ಸರ್ಕಾದ ಅಂಕಿಅಂಶಗಳ ಪ್ರಕಾರವೇ 2011-12 ರಲ್ಲಿ ಗ್ರಾಮೀಣ ಭಾಗದ ಪ್ರತಿ ವ್ಯಕ್ತಿಯ ತಿಂಗಳ ಖರ್ಚು ಸರಾಸರಿ ₹1216.88 ರಷ್ಟಿದ್ದರೆ ಅದು 2017-18 ರಲ್ಲಿ ₹1109.74 ರಷ್ಟಕ್ಕೆ ಇಳಿದಿದೆ. ಈ ಒಟ್ಟಾರೆ ಕುಸಿತದ ಪ್ರಮಾಣ ಶೇ 8.8 ರಷ್ಟಿದೆ. ಭಾರತದ ಗ್ರಾಮೀಣ ಆರ್ಥಿಕ ಕುಸಿತದ ಚಿತ್ರಣವನ್ನು ಈ ಅಂಕಿಅಂಶ ಸ್ಪಷ್ಟವಾಗಿ ತೋರಿಸುತ್ತವೆ.

ಇಂತಹ ಪರಿಸ್ಥಿತಿಯಲ್ಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ತಕ್ಷಣ ಉದ್ಯೋಗ ಸೃಷ್ಟಿ ಮಾಡುವ ಮತ್ತು ಗ್ರಾಮೀಣ ಭಾಗದ ಜನರ ಕೊಳ್ಳುವ ಸಾಮರ್ಥ್ಯವನ್ನು ತಕ್ಷಣವೇ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದ್ದು ಅದನ್ನು ಹಾಗೆಯೇ ಬಳಸಿಕೊಳ್ಳಬೇಕಿತ್ತು.

ಅಂದರೆ, ಈ ಬಾರಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ಟಿನಲ್ಲಿ ಕನಿಷ್ಟ ಒಂದು ಲಕ್ಷ ಕೋಟಿಯಷ್ಟು ಅನುದಾನ ಕೊಡಬೇಕಿತ್ತು. ಇದರಿಂದಾಗಿ ಇವತ್ತಿಗೂ ಭಾರತದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಹಳ್ಳಿಗಳಲ್ಲಿ ತಾತ್ಕಾಲಿಕವಾದ ಉದ್ಯೋಗವಾದರೂ ಸೃಷ್ಟಿಯಾಗಿ ಅದರಿಂದ ಆರ್ಥಿಕ ಚೇತರಿಕೆಯೂ ಆಗುತ್ತಿತ್ತು.

ಆದರೆ, ಈ ಯೋಜನೆಗೆ ಕಳೆದ ಬಾರಿ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ ಕೊಡುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ ತನಗೆ ಬದ್ಧತೆಯಿಲ್ಲ ಎಂಬುದನ್ನು ತೋರಿಸಿದಂತಾಗಿದೆ.

ಹಾಗೆಯೇ, ಆರ್ಥಿಕ ಕುಸಿತದಿಂದ ದೇಶವನ್ನು ಮೇಲೆತ್ತುವ ಕ್ರಮಗಳ ಬಗ್ಗೆಯೂ ತನಗಿರುವ ಅಜ್ಞಾನವನ್ನು ತೋರಿಸಿದೆ.

ಆರ್ಥಿಕ ತಜ್ಞ ಕೇನ್ಸ್‌ನ ಪ್ರಖ್ಯಾತ ಹೇಳಿಕೆಯೊಂದಿದೆ.

“ಆರ್ಥಿಕ ಕುಸಿತದ ಕಾಲದಲ್ಲಿ ಸರ್ಕಾರ ಅತಿ ಹೆಚ್ಚು ಖರ್ಚು ಮಾಡಬೇಕು. ಜನರ ಕೈಯಲ್ಲಿ ಗುಂಡಿ ತೆಗೆಸಿ, ನಂತರ ಅದೇ ಗುಂಡಿಯನ್ನು ಅವರ ಕೈಲೇ ಪುನಃ ಮುಚ್ಚಿಸಿ ಅವರಿಗೆ ಆ ಕೆಲಸ ಮಾಡಿದ್ದಕ್ಕೆ ಸರ್ಕಾರ ಹಣ ಕೊಟ್ಟು ಜನರ ಕೈಯಲ್ಲಿ ಹಣ ಓಡಾಡುವಂತೆ ಮಾಡಬೇಕು.”

ಆರ್ಥಿಕ ತಜ್ಞ ಕೇನ್ಸ್‌

ಆದರೆ, ಈಗಿನ ಬಜೆಟ್‌ನಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿ ಸರ್ಕಾರ ನಡೆದುಕೊಂಡಿರುವಂತೆ ಕಾಣುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಹೋದಬಾರಿಗಿಂತ ಕೇವಲ 4,800 ಕೋಟಿಗಳಷ್ಟು ಮಾತ್ರ ಹೆಚ್ಚುವರಿ ಹಣ ನೀಡಲಾಗಿದೆ (ಹೋದಬಾರಿ 94,800 ಕೋಟಿ ಮತ್ತು ಈ ಬಾರಿ 99,300 ಕೋಟಿ). ಶಿಕ್ಷಣಕ್ಕೆ ಹೆಚ್ಚು ಹಣ ನೀಡಿ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಕ್ಷಮತೆಯುಳ್ಳ ಯುವಜನರು ತಯಾರಾಗಿ ಉದ್ಯೋಗಗಳನ್ನು ಪಡೆಯಲು ಅರ್ಹರಾಗುತ್ತಾರೆ. ಆದರೆ, ಈ ಬಜೆಟ್ ಶಿಕ್ಷಣಕ್ಕೆ ಅಗತ್ಯವಿರುವಷ್ಟು ಒತ್ತು ನೀಡಿಲ್ಲದಿರುವುದು ಮೇಲ್ನೋಟಕ್ಕೇ ಕಾಣಿಸುತ್ತಿದೆ.

ಹಾಗೆಯೇ, skill development ಗೆ ಈ ಬಜೆಟ್ ಮೀಸಲಿಟ್ಟಿರುವ ಹಣ ಕೇವಲ 3,000 ಕೋಟಿ.

ಇವತ್ತು ಕೋಟ್ಯಂತರ ನಿರುದ್ಯೋಗಿಗಳಿರುವಾಗ ಉದ್ಯೋಗ ಪಡೆಯಲು ಅಗತ್ಯ ತರಬೇತಿಯ ತುರ್ತಿತ್ತು. ಆದರೆ ಅದಕ್ಕೆ ಅತಿಕಡಿಮೆ ಹಣ ನಿಗದಿಪಡಿಸುವ ಮೂಲಕ ಸರ್ಕಾರ ಉದ್ಯೋಗ ಸೃಷ್ಟಿಯ ಬಗ್ಗೆ ತನಗಿರುವ ತಾತ್ಸಾರ ತೋರಿದಂತಾಗಿದೆ.

ಜೊತೆಗೆ, ಹೆಚ್ಚಿನ ಉದ್ಯೋಗ ಸೃಷ್ಟಿಸಬಲ್ಲ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ನಿರ್ಮಾಣ ಮತ್ತು ತಯಾರಿಕಾ ಕ್ಷೇತ್ರಗಳಿಗೆ ಈ ಕುಸಿತದ ಸಂದರ್ಭದಲ್ಲಿ ಮಾಮೂಲಿಗಿಂತ ಹೆಚ್ಚಿನ ಅನುದಾನ ನೀಡಬೇಕಿತ್ತು. ಇದು ಕೂಡ ಬಜೆಟ್ಟಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್ ಅತೀ ಅವಶ್ಯವಿದ್ದ ಉದ್ಯೋಗ ಸೃಷ್ಟಿಗಾಗಲೀ ತನ್ಮೂಲಕ ಆರ್ಥಿಕ ಚೇತರಿಕೆಗಾಗಲೀ ಒತ್ತು ಕೊಟ್ಟಿಲ್ಲ ಎನ್ನುವುದು ಮೇಲ್ನೋಟಕ್ಕೇ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...