Homeಎಕಾನಮಿಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌... : ಡಾ.ಬಿ.ಸಿ ಬಸವರಾಜ್

ಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌… : ಡಾ.ಬಿ.ಸಿ ಬಸವರಾಜ್

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

- Advertisement -
- Advertisement -

2019 – 20 ರಲ್ಲಿ ಭಾರತದ ಜಿಡಿಪಿ ಕೇವಲ 5% ಬೆಳವಣಿಗೆ ಕಾಣುತ್ತಿದ್ದು ಇಡೀ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ. ಈಗಾಗಲೇ ತಿಳಿದಿರುವಂತೆ ಇದಕ್ಕೆ ಮುಖ್ಯ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದು ಅಥವಾ ಜನರ ಒಟ್ಟಾರೆ ಕೊಳ್ಳುವ ಶಕ್ತಿ ಕಡಿಮೆಯಾಗಿರುವುದು.

ಅಂದರೆ, ಜನರಲ್ಲಿ ಹಣ ಖರ್ಚು ಮಾಡುವ ಸಾಮರ್ಥ್ಯ ಕುಂದಿರುವುದು. ಇದನ್ನೇ ಇನ್ನೊಂದು ರೀತಿ ಹೇಳುವುದಾದರೆ, ಜನರ ಸಂಪಾದನೆ ಮಾಡುವ ಅವಕಾಶ ಕಡಿಮೆಯಾಗಿರುವುದು.

ಇದಕ್ಕೆ ಕಳೆದ ನಲವತೈದು ವರ್ಷಗಳಲ್ಲಿಯೇ ಅತಿಹೆಚ್ಚು ನಿರುದ್ಯೋಗ ಉಂಟಾಗಿರುವುದೂ ಪ್ರಮುಖ ಕಾರಣವಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಉದ್ಯೋಗ ಸೃಷ್ಟಿಸುವುದಕ್ಕೆ ಮತ್ತು ಅದರ ಮೂಲಕ ಜನರ ಕೊಳ್ಳುವ ಶಕ್ತಿ ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ಕೊಡಬೇಕಿತ್ತು. ಆದರೆ, ಈ ಬಾರಿಯ ಬಜೆಟ್ ಇದರಲ್ಲಿ ದಯನೀಯವಾಗಿ ಸೋತಿರುವುದು ಕಾಣಿಸುತ್ತಿದೆ.

ಇದಕ್ಕೆ ಸರಳ ಉದಾಹರಣೆ ಎಂದರೆ ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ನರೇಗಾ) ಕೇವಲ 61,500 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಹೋದವರ್ಷ ಅಂದರೆ 2019-20 ರಲ್ಲಿ ಈ ಯೋಜನೆಗೆ ಖರ್ಚಾಗಿದ್ದ ಹಣ 71,000 ಕೋಟಿ ರೂಪಾಯಿಗಳು.

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

ಸರ್ಕಾದ ಅಂಕಿಅಂಶಗಳ ಪ್ರಕಾರವೇ 2011-12 ರಲ್ಲಿ ಗ್ರಾಮೀಣ ಭಾಗದ ಪ್ರತಿ ವ್ಯಕ್ತಿಯ ತಿಂಗಳ ಖರ್ಚು ಸರಾಸರಿ ₹1216.88 ರಷ್ಟಿದ್ದರೆ ಅದು 2017-18 ರಲ್ಲಿ ₹1109.74 ರಷ್ಟಕ್ಕೆ ಇಳಿದಿದೆ. ಈ ಒಟ್ಟಾರೆ ಕುಸಿತದ ಪ್ರಮಾಣ ಶೇ 8.8 ರಷ್ಟಿದೆ. ಭಾರತದ ಗ್ರಾಮೀಣ ಆರ್ಥಿಕ ಕುಸಿತದ ಚಿತ್ರಣವನ್ನು ಈ ಅಂಕಿಅಂಶ ಸ್ಪಷ್ಟವಾಗಿ ತೋರಿಸುತ್ತವೆ.

ಇಂತಹ ಪರಿಸ್ಥಿತಿಯಲ್ಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ತಕ್ಷಣ ಉದ್ಯೋಗ ಸೃಷ್ಟಿ ಮಾಡುವ ಮತ್ತು ಗ್ರಾಮೀಣ ಭಾಗದ ಜನರ ಕೊಳ್ಳುವ ಸಾಮರ್ಥ್ಯವನ್ನು ತಕ್ಷಣವೇ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದ್ದು ಅದನ್ನು ಹಾಗೆಯೇ ಬಳಸಿಕೊಳ್ಳಬೇಕಿತ್ತು.

ಅಂದರೆ, ಈ ಬಾರಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ಟಿನಲ್ಲಿ ಕನಿಷ್ಟ ಒಂದು ಲಕ್ಷ ಕೋಟಿಯಷ್ಟು ಅನುದಾನ ಕೊಡಬೇಕಿತ್ತು. ಇದರಿಂದಾಗಿ ಇವತ್ತಿಗೂ ಭಾರತದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಹಳ್ಳಿಗಳಲ್ಲಿ ತಾತ್ಕಾಲಿಕವಾದ ಉದ್ಯೋಗವಾದರೂ ಸೃಷ್ಟಿಯಾಗಿ ಅದರಿಂದ ಆರ್ಥಿಕ ಚೇತರಿಕೆಯೂ ಆಗುತ್ತಿತ್ತು.

ಆದರೆ, ಈ ಯೋಜನೆಗೆ ಕಳೆದ ಬಾರಿ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ ಕೊಡುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ ತನಗೆ ಬದ್ಧತೆಯಿಲ್ಲ ಎಂಬುದನ್ನು ತೋರಿಸಿದಂತಾಗಿದೆ.

ಹಾಗೆಯೇ, ಆರ್ಥಿಕ ಕುಸಿತದಿಂದ ದೇಶವನ್ನು ಮೇಲೆತ್ತುವ ಕ್ರಮಗಳ ಬಗ್ಗೆಯೂ ತನಗಿರುವ ಅಜ್ಞಾನವನ್ನು ತೋರಿಸಿದೆ.

ಆರ್ಥಿಕ ತಜ್ಞ ಕೇನ್ಸ್‌ನ ಪ್ರಖ್ಯಾತ ಹೇಳಿಕೆಯೊಂದಿದೆ.

“ಆರ್ಥಿಕ ಕುಸಿತದ ಕಾಲದಲ್ಲಿ ಸರ್ಕಾರ ಅತಿ ಹೆಚ್ಚು ಖರ್ಚು ಮಾಡಬೇಕು. ಜನರ ಕೈಯಲ್ಲಿ ಗುಂಡಿ ತೆಗೆಸಿ, ನಂತರ ಅದೇ ಗುಂಡಿಯನ್ನು ಅವರ ಕೈಲೇ ಪುನಃ ಮುಚ್ಚಿಸಿ ಅವರಿಗೆ ಆ ಕೆಲಸ ಮಾಡಿದ್ದಕ್ಕೆ ಸರ್ಕಾರ ಹಣ ಕೊಟ್ಟು ಜನರ ಕೈಯಲ್ಲಿ ಹಣ ಓಡಾಡುವಂತೆ ಮಾಡಬೇಕು.”

ಆರ್ಥಿಕ ತಜ್ಞ ಕೇನ್ಸ್‌

ಆದರೆ, ಈಗಿನ ಬಜೆಟ್‌ನಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿ ಸರ್ಕಾರ ನಡೆದುಕೊಂಡಿರುವಂತೆ ಕಾಣುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಹೋದಬಾರಿಗಿಂತ ಕೇವಲ 4,800 ಕೋಟಿಗಳಷ್ಟು ಮಾತ್ರ ಹೆಚ್ಚುವರಿ ಹಣ ನೀಡಲಾಗಿದೆ (ಹೋದಬಾರಿ 94,800 ಕೋಟಿ ಮತ್ತು ಈ ಬಾರಿ 99,300 ಕೋಟಿ). ಶಿಕ್ಷಣಕ್ಕೆ ಹೆಚ್ಚು ಹಣ ನೀಡಿ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಕ್ಷಮತೆಯುಳ್ಳ ಯುವಜನರು ತಯಾರಾಗಿ ಉದ್ಯೋಗಗಳನ್ನು ಪಡೆಯಲು ಅರ್ಹರಾಗುತ್ತಾರೆ. ಆದರೆ, ಈ ಬಜೆಟ್ ಶಿಕ್ಷಣಕ್ಕೆ ಅಗತ್ಯವಿರುವಷ್ಟು ಒತ್ತು ನೀಡಿಲ್ಲದಿರುವುದು ಮೇಲ್ನೋಟಕ್ಕೇ ಕಾಣಿಸುತ್ತಿದೆ.

ಹಾಗೆಯೇ, skill development ಗೆ ಈ ಬಜೆಟ್ ಮೀಸಲಿಟ್ಟಿರುವ ಹಣ ಕೇವಲ 3,000 ಕೋಟಿ.

ಇವತ್ತು ಕೋಟ್ಯಂತರ ನಿರುದ್ಯೋಗಿಗಳಿರುವಾಗ ಉದ್ಯೋಗ ಪಡೆಯಲು ಅಗತ್ಯ ತರಬೇತಿಯ ತುರ್ತಿತ್ತು. ಆದರೆ ಅದಕ್ಕೆ ಅತಿಕಡಿಮೆ ಹಣ ನಿಗದಿಪಡಿಸುವ ಮೂಲಕ ಸರ್ಕಾರ ಉದ್ಯೋಗ ಸೃಷ್ಟಿಯ ಬಗ್ಗೆ ತನಗಿರುವ ತಾತ್ಸಾರ ತೋರಿದಂತಾಗಿದೆ.

ಜೊತೆಗೆ, ಹೆಚ್ಚಿನ ಉದ್ಯೋಗ ಸೃಷ್ಟಿಸಬಲ್ಲ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ನಿರ್ಮಾಣ ಮತ್ತು ತಯಾರಿಕಾ ಕ್ಷೇತ್ರಗಳಿಗೆ ಈ ಕುಸಿತದ ಸಂದರ್ಭದಲ್ಲಿ ಮಾಮೂಲಿಗಿಂತ ಹೆಚ್ಚಿನ ಅನುದಾನ ನೀಡಬೇಕಿತ್ತು. ಇದು ಕೂಡ ಬಜೆಟ್ಟಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್ ಅತೀ ಅವಶ್ಯವಿದ್ದ ಉದ್ಯೋಗ ಸೃಷ್ಟಿಗಾಗಲೀ ತನ್ಮೂಲಕ ಆರ್ಥಿಕ ಚೇತರಿಕೆಗಾಗಲೀ ಒತ್ತು ಕೊಟ್ಟಿಲ್ಲ ಎನ್ನುವುದು ಮೇಲ್ನೋಟಕ್ಕೇ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...