Homeಎಕಾನಮಿಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌... : ಡಾ.ಬಿ.ಸಿ ಬಸವರಾಜ್

ಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌… : ಡಾ.ಬಿ.ಸಿ ಬಸವರಾಜ್

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

- Advertisement -
- Advertisement -

2019 – 20 ರಲ್ಲಿ ಭಾರತದ ಜಿಡಿಪಿ ಕೇವಲ 5% ಬೆಳವಣಿಗೆ ಕಾಣುತ್ತಿದ್ದು ಇಡೀ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ. ಈಗಾಗಲೇ ತಿಳಿದಿರುವಂತೆ ಇದಕ್ಕೆ ಮುಖ್ಯ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದು ಅಥವಾ ಜನರ ಒಟ್ಟಾರೆ ಕೊಳ್ಳುವ ಶಕ್ತಿ ಕಡಿಮೆಯಾಗಿರುವುದು.

ಅಂದರೆ, ಜನರಲ್ಲಿ ಹಣ ಖರ್ಚು ಮಾಡುವ ಸಾಮರ್ಥ್ಯ ಕುಂದಿರುವುದು. ಇದನ್ನೇ ಇನ್ನೊಂದು ರೀತಿ ಹೇಳುವುದಾದರೆ, ಜನರ ಸಂಪಾದನೆ ಮಾಡುವ ಅವಕಾಶ ಕಡಿಮೆಯಾಗಿರುವುದು.

ಇದಕ್ಕೆ ಕಳೆದ ನಲವತೈದು ವರ್ಷಗಳಲ್ಲಿಯೇ ಅತಿಹೆಚ್ಚು ನಿರುದ್ಯೋಗ ಉಂಟಾಗಿರುವುದೂ ಪ್ರಮುಖ ಕಾರಣವಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಉದ್ಯೋಗ ಸೃಷ್ಟಿಸುವುದಕ್ಕೆ ಮತ್ತು ಅದರ ಮೂಲಕ ಜನರ ಕೊಳ್ಳುವ ಶಕ್ತಿ ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ಕೊಡಬೇಕಿತ್ತು. ಆದರೆ, ಈ ಬಾರಿಯ ಬಜೆಟ್ ಇದರಲ್ಲಿ ದಯನೀಯವಾಗಿ ಸೋತಿರುವುದು ಕಾಣಿಸುತ್ತಿದೆ.

ಇದಕ್ಕೆ ಸರಳ ಉದಾಹರಣೆ ಎಂದರೆ ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ನರೇಗಾ) ಕೇವಲ 61,500 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಹೋದವರ್ಷ ಅಂದರೆ 2019-20 ರಲ್ಲಿ ಈ ಯೋಜನೆಗೆ ಖರ್ಚಾಗಿದ್ದ ಹಣ 71,000 ಕೋಟಿ ರೂಪಾಯಿಗಳು.

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

ಸರ್ಕಾದ ಅಂಕಿಅಂಶಗಳ ಪ್ರಕಾರವೇ 2011-12 ರಲ್ಲಿ ಗ್ರಾಮೀಣ ಭಾಗದ ಪ್ರತಿ ವ್ಯಕ್ತಿಯ ತಿಂಗಳ ಖರ್ಚು ಸರಾಸರಿ ₹1216.88 ರಷ್ಟಿದ್ದರೆ ಅದು 2017-18 ರಲ್ಲಿ ₹1109.74 ರಷ್ಟಕ್ಕೆ ಇಳಿದಿದೆ. ಈ ಒಟ್ಟಾರೆ ಕುಸಿತದ ಪ್ರಮಾಣ ಶೇ 8.8 ರಷ್ಟಿದೆ. ಭಾರತದ ಗ್ರಾಮೀಣ ಆರ್ಥಿಕ ಕುಸಿತದ ಚಿತ್ರಣವನ್ನು ಈ ಅಂಕಿಅಂಶ ಸ್ಪಷ್ಟವಾಗಿ ತೋರಿಸುತ್ತವೆ.

ಇಂತಹ ಪರಿಸ್ಥಿತಿಯಲ್ಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ತಕ್ಷಣ ಉದ್ಯೋಗ ಸೃಷ್ಟಿ ಮಾಡುವ ಮತ್ತು ಗ್ರಾಮೀಣ ಭಾಗದ ಜನರ ಕೊಳ್ಳುವ ಸಾಮರ್ಥ್ಯವನ್ನು ತಕ್ಷಣವೇ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದ್ದು ಅದನ್ನು ಹಾಗೆಯೇ ಬಳಸಿಕೊಳ್ಳಬೇಕಿತ್ತು.

ಅಂದರೆ, ಈ ಬಾರಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ಟಿನಲ್ಲಿ ಕನಿಷ್ಟ ಒಂದು ಲಕ್ಷ ಕೋಟಿಯಷ್ಟು ಅನುದಾನ ಕೊಡಬೇಕಿತ್ತು. ಇದರಿಂದಾಗಿ ಇವತ್ತಿಗೂ ಭಾರತದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಹಳ್ಳಿಗಳಲ್ಲಿ ತಾತ್ಕಾಲಿಕವಾದ ಉದ್ಯೋಗವಾದರೂ ಸೃಷ್ಟಿಯಾಗಿ ಅದರಿಂದ ಆರ್ಥಿಕ ಚೇತರಿಕೆಯೂ ಆಗುತ್ತಿತ್ತು.

ಆದರೆ, ಈ ಯೋಜನೆಗೆ ಕಳೆದ ಬಾರಿ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ ಕೊಡುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ ತನಗೆ ಬದ್ಧತೆಯಿಲ್ಲ ಎಂಬುದನ್ನು ತೋರಿಸಿದಂತಾಗಿದೆ.

ಹಾಗೆಯೇ, ಆರ್ಥಿಕ ಕುಸಿತದಿಂದ ದೇಶವನ್ನು ಮೇಲೆತ್ತುವ ಕ್ರಮಗಳ ಬಗ್ಗೆಯೂ ತನಗಿರುವ ಅಜ್ಞಾನವನ್ನು ತೋರಿಸಿದೆ.

ಆರ್ಥಿಕ ತಜ್ಞ ಕೇನ್ಸ್‌ನ ಪ್ರಖ್ಯಾತ ಹೇಳಿಕೆಯೊಂದಿದೆ.

“ಆರ್ಥಿಕ ಕುಸಿತದ ಕಾಲದಲ್ಲಿ ಸರ್ಕಾರ ಅತಿ ಹೆಚ್ಚು ಖರ್ಚು ಮಾಡಬೇಕು. ಜನರ ಕೈಯಲ್ಲಿ ಗುಂಡಿ ತೆಗೆಸಿ, ನಂತರ ಅದೇ ಗುಂಡಿಯನ್ನು ಅವರ ಕೈಲೇ ಪುನಃ ಮುಚ್ಚಿಸಿ ಅವರಿಗೆ ಆ ಕೆಲಸ ಮಾಡಿದ್ದಕ್ಕೆ ಸರ್ಕಾರ ಹಣ ಕೊಟ್ಟು ಜನರ ಕೈಯಲ್ಲಿ ಹಣ ಓಡಾಡುವಂತೆ ಮಾಡಬೇಕು.”

ಆರ್ಥಿಕ ತಜ್ಞ ಕೇನ್ಸ್‌

ಆದರೆ, ಈಗಿನ ಬಜೆಟ್‌ನಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿ ಸರ್ಕಾರ ನಡೆದುಕೊಂಡಿರುವಂತೆ ಕಾಣುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಹೋದಬಾರಿಗಿಂತ ಕೇವಲ 4,800 ಕೋಟಿಗಳಷ್ಟು ಮಾತ್ರ ಹೆಚ್ಚುವರಿ ಹಣ ನೀಡಲಾಗಿದೆ (ಹೋದಬಾರಿ 94,800 ಕೋಟಿ ಮತ್ತು ಈ ಬಾರಿ 99,300 ಕೋಟಿ). ಶಿಕ್ಷಣಕ್ಕೆ ಹೆಚ್ಚು ಹಣ ನೀಡಿ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಕ್ಷಮತೆಯುಳ್ಳ ಯುವಜನರು ತಯಾರಾಗಿ ಉದ್ಯೋಗಗಳನ್ನು ಪಡೆಯಲು ಅರ್ಹರಾಗುತ್ತಾರೆ. ಆದರೆ, ಈ ಬಜೆಟ್ ಶಿಕ್ಷಣಕ್ಕೆ ಅಗತ್ಯವಿರುವಷ್ಟು ಒತ್ತು ನೀಡಿಲ್ಲದಿರುವುದು ಮೇಲ್ನೋಟಕ್ಕೇ ಕಾಣಿಸುತ್ತಿದೆ.

ಹಾಗೆಯೇ, skill development ಗೆ ಈ ಬಜೆಟ್ ಮೀಸಲಿಟ್ಟಿರುವ ಹಣ ಕೇವಲ 3,000 ಕೋಟಿ.

ಇವತ್ತು ಕೋಟ್ಯಂತರ ನಿರುದ್ಯೋಗಿಗಳಿರುವಾಗ ಉದ್ಯೋಗ ಪಡೆಯಲು ಅಗತ್ಯ ತರಬೇತಿಯ ತುರ್ತಿತ್ತು. ಆದರೆ ಅದಕ್ಕೆ ಅತಿಕಡಿಮೆ ಹಣ ನಿಗದಿಪಡಿಸುವ ಮೂಲಕ ಸರ್ಕಾರ ಉದ್ಯೋಗ ಸೃಷ್ಟಿಯ ಬಗ್ಗೆ ತನಗಿರುವ ತಾತ್ಸಾರ ತೋರಿದಂತಾಗಿದೆ.

ಜೊತೆಗೆ, ಹೆಚ್ಚಿನ ಉದ್ಯೋಗ ಸೃಷ್ಟಿಸಬಲ್ಲ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ನಿರ್ಮಾಣ ಮತ್ತು ತಯಾರಿಕಾ ಕ್ಷೇತ್ರಗಳಿಗೆ ಈ ಕುಸಿತದ ಸಂದರ್ಭದಲ್ಲಿ ಮಾಮೂಲಿಗಿಂತ ಹೆಚ್ಚಿನ ಅನುದಾನ ನೀಡಬೇಕಿತ್ತು. ಇದು ಕೂಡ ಬಜೆಟ್ಟಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್ ಅತೀ ಅವಶ್ಯವಿದ್ದ ಉದ್ಯೋಗ ಸೃಷ್ಟಿಗಾಗಲೀ ತನ್ಮೂಲಕ ಆರ್ಥಿಕ ಚೇತರಿಕೆಗಾಗಲೀ ಒತ್ತು ಕೊಟ್ಟಿಲ್ಲ ಎನ್ನುವುದು ಮೇಲ್ನೋಟಕ್ಕೇ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...