Homeಎಕಾನಮಿಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌... : ಡಾ.ಬಿ.ಸಿ ಬಸವರಾಜ್

ಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌… : ಡಾ.ಬಿ.ಸಿ ಬಸವರಾಜ್

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

- Advertisement -
- Advertisement -

2019 – 20 ರಲ್ಲಿ ಭಾರತದ ಜಿಡಿಪಿ ಕೇವಲ 5% ಬೆಳವಣಿಗೆ ಕಾಣುತ್ತಿದ್ದು ಇಡೀ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ. ಈಗಾಗಲೇ ತಿಳಿದಿರುವಂತೆ ಇದಕ್ಕೆ ಮುಖ್ಯ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದು ಅಥವಾ ಜನರ ಒಟ್ಟಾರೆ ಕೊಳ್ಳುವ ಶಕ್ತಿ ಕಡಿಮೆಯಾಗಿರುವುದು.

ಅಂದರೆ, ಜನರಲ್ಲಿ ಹಣ ಖರ್ಚು ಮಾಡುವ ಸಾಮರ್ಥ್ಯ ಕುಂದಿರುವುದು. ಇದನ್ನೇ ಇನ್ನೊಂದು ರೀತಿ ಹೇಳುವುದಾದರೆ, ಜನರ ಸಂಪಾದನೆ ಮಾಡುವ ಅವಕಾಶ ಕಡಿಮೆಯಾಗಿರುವುದು.

ಇದಕ್ಕೆ ಕಳೆದ ನಲವತೈದು ವರ್ಷಗಳಲ್ಲಿಯೇ ಅತಿಹೆಚ್ಚು ನಿರುದ್ಯೋಗ ಉಂಟಾಗಿರುವುದೂ ಪ್ರಮುಖ ಕಾರಣವಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಉದ್ಯೋಗ ಸೃಷ್ಟಿಸುವುದಕ್ಕೆ ಮತ್ತು ಅದರ ಮೂಲಕ ಜನರ ಕೊಳ್ಳುವ ಶಕ್ತಿ ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ಕೊಡಬೇಕಿತ್ತು. ಆದರೆ, ಈ ಬಾರಿಯ ಬಜೆಟ್ ಇದರಲ್ಲಿ ದಯನೀಯವಾಗಿ ಸೋತಿರುವುದು ಕಾಣಿಸುತ್ತಿದೆ.

ಇದಕ್ಕೆ ಸರಳ ಉದಾಹರಣೆ ಎಂದರೆ ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ನರೇಗಾ) ಕೇವಲ 61,500 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಹೋದವರ್ಷ ಅಂದರೆ 2019-20 ರಲ್ಲಿ ಈ ಯೋಜನೆಗೆ ಖರ್ಚಾಗಿದ್ದ ಹಣ 71,000 ಕೋಟಿ ರೂಪಾಯಿಗಳು.

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

ಸರ್ಕಾದ ಅಂಕಿಅಂಶಗಳ ಪ್ರಕಾರವೇ 2011-12 ರಲ್ಲಿ ಗ್ರಾಮೀಣ ಭಾಗದ ಪ್ರತಿ ವ್ಯಕ್ತಿಯ ತಿಂಗಳ ಖರ್ಚು ಸರಾಸರಿ ₹1216.88 ರಷ್ಟಿದ್ದರೆ ಅದು 2017-18 ರಲ್ಲಿ ₹1109.74 ರಷ್ಟಕ್ಕೆ ಇಳಿದಿದೆ. ಈ ಒಟ್ಟಾರೆ ಕುಸಿತದ ಪ್ರಮಾಣ ಶೇ 8.8 ರಷ್ಟಿದೆ. ಭಾರತದ ಗ್ರಾಮೀಣ ಆರ್ಥಿಕ ಕುಸಿತದ ಚಿತ್ರಣವನ್ನು ಈ ಅಂಕಿಅಂಶ ಸ್ಪಷ್ಟವಾಗಿ ತೋರಿಸುತ್ತವೆ.

ಇಂತಹ ಪರಿಸ್ಥಿತಿಯಲ್ಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ತಕ್ಷಣ ಉದ್ಯೋಗ ಸೃಷ್ಟಿ ಮಾಡುವ ಮತ್ತು ಗ್ರಾಮೀಣ ಭಾಗದ ಜನರ ಕೊಳ್ಳುವ ಸಾಮರ್ಥ್ಯವನ್ನು ತಕ್ಷಣವೇ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದ್ದು ಅದನ್ನು ಹಾಗೆಯೇ ಬಳಸಿಕೊಳ್ಳಬೇಕಿತ್ತು.

ಅಂದರೆ, ಈ ಬಾರಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ಟಿನಲ್ಲಿ ಕನಿಷ್ಟ ಒಂದು ಲಕ್ಷ ಕೋಟಿಯಷ್ಟು ಅನುದಾನ ಕೊಡಬೇಕಿತ್ತು. ಇದರಿಂದಾಗಿ ಇವತ್ತಿಗೂ ಭಾರತದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಹಳ್ಳಿಗಳಲ್ಲಿ ತಾತ್ಕಾಲಿಕವಾದ ಉದ್ಯೋಗವಾದರೂ ಸೃಷ್ಟಿಯಾಗಿ ಅದರಿಂದ ಆರ್ಥಿಕ ಚೇತರಿಕೆಯೂ ಆಗುತ್ತಿತ್ತು.

ಆದರೆ, ಈ ಯೋಜನೆಗೆ ಕಳೆದ ಬಾರಿ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ ಕೊಡುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ ತನಗೆ ಬದ್ಧತೆಯಿಲ್ಲ ಎಂಬುದನ್ನು ತೋರಿಸಿದಂತಾಗಿದೆ.

ಹಾಗೆಯೇ, ಆರ್ಥಿಕ ಕುಸಿತದಿಂದ ದೇಶವನ್ನು ಮೇಲೆತ್ತುವ ಕ್ರಮಗಳ ಬಗ್ಗೆಯೂ ತನಗಿರುವ ಅಜ್ಞಾನವನ್ನು ತೋರಿಸಿದೆ.

ಆರ್ಥಿಕ ತಜ್ಞ ಕೇನ್ಸ್‌ನ ಪ್ರಖ್ಯಾತ ಹೇಳಿಕೆಯೊಂದಿದೆ.

“ಆರ್ಥಿಕ ಕುಸಿತದ ಕಾಲದಲ್ಲಿ ಸರ್ಕಾರ ಅತಿ ಹೆಚ್ಚು ಖರ್ಚು ಮಾಡಬೇಕು. ಜನರ ಕೈಯಲ್ಲಿ ಗುಂಡಿ ತೆಗೆಸಿ, ನಂತರ ಅದೇ ಗುಂಡಿಯನ್ನು ಅವರ ಕೈಲೇ ಪುನಃ ಮುಚ್ಚಿಸಿ ಅವರಿಗೆ ಆ ಕೆಲಸ ಮಾಡಿದ್ದಕ್ಕೆ ಸರ್ಕಾರ ಹಣ ಕೊಟ್ಟು ಜನರ ಕೈಯಲ್ಲಿ ಹಣ ಓಡಾಡುವಂತೆ ಮಾಡಬೇಕು.”

ಆರ್ಥಿಕ ತಜ್ಞ ಕೇನ್ಸ್‌

ಆದರೆ, ಈಗಿನ ಬಜೆಟ್‌ನಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿ ಸರ್ಕಾರ ನಡೆದುಕೊಂಡಿರುವಂತೆ ಕಾಣುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಹೋದಬಾರಿಗಿಂತ ಕೇವಲ 4,800 ಕೋಟಿಗಳಷ್ಟು ಮಾತ್ರ ಹೆಚ್ಚುವರಿ ಹಣ ನೀಡಲಾಗಿದೆ (ಹೋದಬಾರಿ 94,800 ಕೋಟಿ ಮತ್ತು ಈ ಬಾರಿ 99,300 ಕೋಟಿ). ಶಿಕ್ಷಣಕ್ಕೆ ಹೆಚ್ಚು ಹಣ ನೀಡಿ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಕ್ಷಮತೆಯುಳ್ಳ ಯುವಜನರು ತಯಾರಾಗಿ ಉದ್ಯೋಗಗಳನ್ನು ಪಡೆಯಲು ಅರ್ಹರಾಗುತ್ತಾರೆ. ಆದರೆ, ಈ ಬಜೆಟ್ ಶಿಕ್ಷಣಕ್ಕೆ ಅಗತ್ಯವಿರುವಷ್ಟು ಒತ್ತು ನೀಡಿಲ್ಲದಿರುವುದು ಮೇಲ್ನೋಟಕ್ಕೇ ಕಾಣಿಸುತ್ತಿದೆ.

ಹಾಗೆಯೇ, skill development ಗೆ ಈ ಬಜೆಟ್ ಮೀಸಲಿಟ್ಟಿರುವ ಹಣ ಕೇವಲ 3,000 ಕೋಟಿ.

ಇವತ್ತು ಕೋಟ್ಯಂತರ ನಿರುದ್ಯೋಗಿಗಳಿರುವಾಗ ಉದ್ಯೋಗ ಪಡೆಯಲು ಅಗತ್ಯ ತರಬೇತಿಯ ತುರ್ತಿತ್ತು. ಆದರೆ ಅದಕ್ಕೆ ಅತಿಕಡಿಮೆ ಹಣ ನಿಗದಿಪಡಿಸುವ ಮೂಲಕ ಸರ್ಕಾರ ಉದ್ಯೋಗ ಸೃಷ್ಟಿಯ ಬಗ್ಗೆ ತನಗಿರುವ ತಾತ್ಸಾರ ತೋರಿದಂತಾಗಿದೆ.

ಜೊತೆಗೆ, ಹೆಚ್ಚಿನ ಉದ್ಯೋಗ ಸೃಷ್ಟಿಸಬಲ್ಲ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ನಿರ್ಮಾಣ ಮತ್ತು ತಯಾರಿಕಾ ಕ್ಷೇತ್ರಗಳಿಗೆ ಈ ಕುಸಿತದ ಸಂದರ್ಭದಲ್ಲಿ ಮಾಮೂಲಿಗಿಂತ ಹೆಚ್ಚಿನ ಅನುದಾನ ನೀಡಬೇಕಿತ್ತು. ಇದು ಕೂಡ ಬಜೆಟ್ಟಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್ ಅತೀ ಅವಶ್ಯವಿದ್ದ ಉದ್ಯೋಗ ಸೃಷ್ಟಿಗಾಗಲೀ ತನ್ಮೂಲಕ ಆರ್ಥಿಕ ಚೇತರಿಕೆಗಾಗಲೀ ಒತ್ತು ಕೊಟ್ಟಿಲ್ಲ ಎನ್ನುವುದು ಮೇಲ್ನೋಟಕ್ಕೇ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...