Homeಎಕಾನಮಿಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌... : ಡಾ.ಬಿ.ಸಿ ಬಸವರಾಜ್

ಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌… : ಡಾ.ಬಿ.ಸಿ ಬಸವರಾಜ್

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

- Advertisement -
- Advertisement -

2019 – 20 ರಲ್ಲಿ ಭಾರತದ ಜಿಡಿಪಿ ಕೇವಲ 5% ಬೆಳವಣಿಗೆ ಕಾಣುತ್ತಿದ್ದು ಇಡೀ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ. ಈಗಾಗಲೇ ತಿಳಿದಿರುವಂತೆ ಇದಕ್ಕೆ ಮುಖ್ಯ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದು ಅಥವಾ ಜನರ ಒಟ್ಟಾರೆ ಕೊಳ್ಳುವ ಶಕ್ತಿ ಕಡಿಮೆಯಾಗಿರುವುದು.

ಅಂದರೆ, ಜನರಲ್ಲಿ ಹಣ ಖರ್ಚು ಮಾಡುವ ಸಾಮರ್ಥ್ಯ ಕುಂದಿರುವುದು. ಇದನ್ನೇ ಇನ್ನೊಂದು ರೀತಿ ಹೇಳುವುದಾದರೆ, ಜನರ ಸಂಪಾದನೆ ಮಾಡುವ ಅವಕಾಶ ಕಡಿಮೆಯಾಗಿರುವುದು.

ಇದಕ್ಕೆ ಕಳೆದ ನಲವತೈದು ವರ್ಷಗಳಲ್ಲಿಯೇ ಅತಿಹೆಚ್ಚು ನಿರುದ್ಯೋಗ ಉಂಟಾಗಿರುವುದೂ ಪ್ರಮುಖ ಕಾರಣವಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಉದ್ಯೋಗ ಸೃಷ್ಟಿಸುವುದಕ್ಕೆ ಮತ್ತು ಅದರ ಮೂಲಕ ಜನರ ಕೊಳ್ಳುವ ಶಕ್ತಿ ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ಕೊಡಬೇಕಿತ್ತು. ಆದರೆ, ಈ ಬಾರಿಯ ಬಜೆಟ್ ಇದರಲ್ಲಿ ದಯನೀಯವಾಗಿ ಸೋತಿರುವುದು ಕಾಣಿಸುತ್ತಿದೆ.

ಇದಕ್ಕೆ ಸರಳ ಉದಾಹರಣೆ ಎಂದರೆ ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ನರೇಗಾ) ಕೇವಲ 61,500 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಹೋದವರ್ಷ ಅಂದರೆ 2019-20 ರಲ್ಲಿ ಈ ಯೋಜನೆಗೆ ಖರ್ಚಾಗಿದ್ದ ಹಣ 71,000 ಕೋಟಿ ರೂಪಾಯಿಗಳು.

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

ಸರ್ಕಾದ ಅಂಕಿಅಂಶಗಳ ಪ್ರಕಾರವೇ 2011-12 ರಲ್ಲಿ ಗ್ರಾಮೀಣ ಭಾಗದ ಪ್ರತಿ ವ್ಯಕ್ತಿಯ ತಿಂಗಳ ಖರ್ಚು ಸರಾಸರಿ ₹1216.88 ರಷ್ಟಿದ್ದರೆ ಅದು 2017-18 ರಲ್ಲಿ ₹1109.74 ರಷ್ಟಕ್ಕೆ ಇಳಿದಿದೆ. ಈ ಒಟ್ಟಾರೆ ಕುಸಿತದ ಪ್ರಮಾಣ ಶೇ 8.8 ರಷ್ಟಿದೆ. ಭಾರತದ ಗ್ರಾಮೀಣ ಆರ್ಥಿಕ ಕುಸಿತದ ಚಿತ್ರಣವನ್ನು ಈ ಅಂಕಿಅಂಶ ಸ್ಪಷ್ಟವಾಗಿ ತೋರಿಸುತ್ತವೆ.

ಇಂತಹ ಪರಿಸ್ಥಿತಿಯಲ್ಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ತಕ್ಷಣ ಉದ್ಯೋಗ ಸೃಷ್ಟಿ ಮಾಡುವ ಮತ್ತು ಗ್ರಾಮೀಣ ಭಾಗದ ಜನರ ಕೊಳ್ಳುವ ಸಾಮರ್ಥ್ಯವನ್ನು ತಕ್ಷಣವೇ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದ್ದು ಅದನ್ನು ಹಾಗೆಯೇ ಬಳಸಿಕೊಳ್ಳಬೇಕಿತ್ತು.

ಅಂದರೆ, ಈ ಬಾರಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ಟಿನಲ್ಲಿ ಕನಿಷ್ಟ ಒಂದು ಲಕ್ಷ ಕೋಟಿಯಷ್ಟು ಅನುದಾನ ಕೊಡಬೇಕಿತ್ತು. ಇದರಿಂದಾಗಿ ಇವತ್ತಿಗೂ ಭಾರತದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಹಳ್ಳಿಗಳಲ್ಲಿ ತಾತ್ಕಾಲಿಕವಾದ ಉದ್ಯೋಗವಾದರೂ ಸೃಷ್ಟಿಯಾಗಿ ಅದರಿಂದ ಆರ್ಥಿಕ ಚೇತರಿಕೆಯೂ ಆಗುತ್ತಿತ್ತು.

ಆದರೆ, ಈ ಯೋಜನೆಗೆ ಕಳೆದ ಬಾರಿ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ ಕೊಡುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ ತನಗೆ ಬದ್ಧತೆಯಿಲ್ಲ ಎಂಬುದನ್ನು ತೋರಿಸಿದಂತಾಗಿದೆ.

ಹಾಗೆಯೇ, ಆರ್ಥಿಕ ಕುಸಿತದಿಂದ ದೇಶವನ್ನು ಮೇಲೆತ್ತುವ ಕ್ರಮಗಳ ಬಗ್ಗೆಯೂ ತನಗಿರುವ ಅಜ್ಞಾನವನ್ನು ತೋರಿಸಿದೆ.

ಆರ್ಥಿಕ ತಜ್ಞ ಕೇನ್ಸ್‌ನ ಪ್ರಖ್ಯಾತ ಹೇಳಿಕೆಯೊಂದಿದೆ.

“ಆರ್ಥಿಕ ಕುಸಿತದ ಕಾಲದಲ್ಲಿ ಸರ್ಕಾರ ಅತಿ ಹೆಚ್ಚು ಖರ್ಚು ಮಾಡಬೇಕು. ಜನರ ಕೈಯಲ್ಲಿ ಗುಂಡಿ ತೆಗೆಸಿ, ನಂತರ ಅದೇ ಗುಂಡಿಯನ್ನು ಅವರ ಕೈಲೇ ಪುನಃ ಮುಚ್ಚಿಸಿ ಅವರಿಗೆ ಆ ಕೆಲಸ ಮಾಡಿದ್ದಕ್ಕೆ ಸರ್ಕಾರ ಹಣ ಕೊಟ್ಟು ಜನರ ಕೈಯಲ್ಲಿ ಹಣ ಓಡಾಡುವಂತೆ ಮಾಡಬೇಕು.”

ಆರ್ಥಿಕ ತಜ್ಞ ಕೇನ್ಸ್‌

ಆದರೆ, ಈಗಿನ ಬಜೆಟ್‌ನಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿ ಸರ್ಕಾರ ನಡೆದುಕೊಂಡಿರುವಂತೆ ಕಾಣುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಹೋದಬಾರಿಗಿಂತ ಕೇವಲ 4,800 ಕೋಟಿಗಳಷ್ಟು ಮಾತ್ರ ಹೆಚ್ಚುವರಿ ಹಣ ನೀಡಲಾಗಿದೆ (ಹೋದಬಾರಿ 94,800 ಕೋಟಿ ಮತ್ತು ಈ ಬಾರಿ 99,300 ಕೋಟಿ). ಶಿಕ್ಷಣಕ್ಕೆ ಹೆಚ್ಚು ಹಣ ನೀಡಿ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಕ್ಷಮತೆಯುಳ್ಳ ಯುವಜನರು ತಯಾರಾಗಿ ಉದ್ಯೋಗಗಳನ್ನು ಪಡೆಯಲು ಅರ್ಹರಾಗುತ್ತಾರೆ. ಆದರೆ, ಈ ಬಜೆಟ್ ಶಿಕ್ಷಣಕ್ಕೆ ಅಗತ್ಯವಿರುವಷ್ಟು ಒತ್ತು ನೀಡಿಲ್ಲದಿರುವುದು ಮೇಲ್ನೋಟಕ್ಕೇ ಕಾಣಿಸುತ್ತಿದೆ.

ಹಾಗೆಯೇ, skill development ಗೆ ಈ ಬಜೆಟ್ ಮೀಸಲಿಟ್ಟಿರುವ ಹಣ ಕೇವಲ 3,000 ಕೋಟಿ.

ಇವತ್ತು ಕೋಟ್ಯಂತರ ನಿರುದ್ಯೋಗಿಗಳಿರುವಾಗ ಉದ್ಯೋಗ ಪಡೆಯಲು ಅಗತ್ಯ ತರಬೇತಿಯ ತುರ್ತಿತ್ತು. ಆದರೆ ಅದಕ್ಕೆ ಅತಿಕಡಿಮೆ ಹಣ ನಿಗದಿಪಡಿಸುವ ಮೂಲಕ ಸರ್ಕಾರ ಉದ್ಯೋಗ ಸೃಷ್ಟಿಯ ಬಗ್ಗೆ ತನಗಿರುವ ತಾತ್ಸಾರ ತೋರಿದಂತಾಗಿದೆ.

ಜೊತೆಗೆ, ಹೆಚ್ಚಿನ ಉದ್ಯೋಗ ಸೃಷ್ಟಿಸಬಲ್ಲ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ನಿರ್ಮಾಣ ಮತ್ತು ತಯಾರಿಕಾ ಕ್ಷೇತ್ರಗಳಿಗೆ ಈ ಕುಸಿತದ ಸಂದರ್ಭದಲ್ಲಿ ಮಾಮೂಲಿಗಿಂತ ಹೆಚ್ಚಿನ ಅನುದಾನ ನೀಡಬೇಕಿತ್ತು. ಇದು ಕೂಡ ಬಜೆಟ್ಟಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್ ಅತೀ ಅವಶ್ಯವಿದ್ದ ಉದ್ಯೋಗ ಸೃಷ್ಟಿಗಾಗಲೀ ತನ್ಮೂಲಕ ಆರ್ಥಿಕ ಚೇತರಿಕೆಗಾಗಲೀ ಒತ್ತು ಕೊಟ್ಟಿಲ್ಲ ಎನ್ನುವುದು ಮೇಲ್ನೋಟಕ್ಕೇ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...