Homeಎಕಾನಮಿಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌... : ಡಾ.ಬಿ.ಸಿ ಬಸವರಾಜ್

ಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌… : ಡಾ.ಬಿ.ಸಿ ಬಸವರಾಜ್

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

- Advertisement -
- Advertisement -

2019 – 20 ರಲ್ಲಿ ಭಾರತದ ಜಿಡಿಪಿ ಕೇವಲ 5% ಬೆಳವಣಿಗೆ ಕಾಣುತ್ತಿದ್ದು ಇಡೀ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ. ಈಗಾಗಲೇ ತಿಳಿದಿರುವಂತೆ ಇದಕ್ಕೆ ಮುಖ್ಯ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದು ಅಥವಾ ಜನರ ಒಟ್ಟಾರೆ ಕೊಳ್ಳುವ ಶಕ್ತಿ ಕಡಿಮೆಯಾಗಿರುವುದು.

ಅಂದರೆ, ಜನರಲ್ಲಿ ಹಣ ಖರ್ಚು ಮಾಡುವ ಸಾಮರ್ಥ್ಯ ಕುಂದಿರುವುದು. ಇದನ್ನೇ ಇನ್ನೊಂದು ರೀತಿ ಹೇಳುವುದಾದರೆ, ಜನರ ಸಂಪಾದನೆ ಮಾಡುವ ಅವಕಾಶ ಕಡಿಮೆಯಾಗಿರುವುದು.

ಇದಕ್ಕೆ ಕಳೆದ ನಲವತೈದು ವರ್ಷಗಳಲ್ಲಿಯೇ ಅತಿಹೆಚ್ಚು ನಿರುದ್ಯೋಗ ಉಂಟಾಗಿರುವುದೂ ಪ್ರಮುಖ ಕಾರಣವಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಉದ್ಯೋಗ ಸೃಷ್ಟಿಸುವುದಕ್ಕೆ ಮತ್ತು ಅದರ ಮೂಲಕ ಜನರ ಕೊಳ್ಳುವ ಶಕ್ತಿ ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ಕೊಡಬೇಕಿತ್ತು. ಆದರೆ, ಈ ಬಾರಿಯ ಬಜೆಟ್ ಇದರಲ್ಲಿ ದಯನೀಯವಾಗಿ ಸೋತಿರುವುದು ಕಾಣಿಸುತ್ತಿದೆ.

ಇದಕ್ಕೆ ಸರಳ ಉದಾಹರಣೆ ಎಂದರೆ ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ನರೇಗಾ) ಕೇವಲ 61,500 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಹೋದವರ್ಷ ಅಂದರೆ 2019-20 ರಲ್ಲಿ ಈ ಯೋಜನೆಗೆ ಖರ್ಚಾಗಿದ್ದ ಹಣ 71,000 ಕೋಟಿ ರೂಪಾಯಿಗಳು.

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

ಸರ್ಕಾದ ಅಂಕಿಅಂಶಗಳ ಪ್ರಕಾರವೇ 2011-12 ರಲ್ಲಿ ಗ್ರಾಮೀಣ ಭಾಗದ ಪ್ರತಿ ವ್ಯಕ್ತಿಯ ತಿಂಗಳ ಖರ್ಚು ಸರಾಸರಿ ₹1216.88 ರಷ್ಟಿದ್ದರೆ ಅದು 2017-18 ರಲ್ಲಿ ₹1109.74 ರಷ್ಟಕ್ಕೆ ಇಳಿದಿದೆ. ಈ ಒಟ್ಟಾರೆ ಕುಸಿತದ ಪ್ರಮಾಣ ಶೇ 8.8 ರಷ್ಟಿದೆ. ಭಾರತದ ಗ್ರಾಮೀಣ ಆರ್ಥಿಕ ಕುಸಿತದ ಚಿತ್ರಣವನ್ನು ಈ ಅಂಕಿಅಂಶ ಸ್ಪಷ್ಟವಾಗಿ ತೋರಿಸುತ್ತವೆ.

ಇಂತಹ ಪರಿಸ್ಥಿತಿಯಲ್ಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ತಕ್ಷಣ ಉದ್ಯೋಗ ಸೃಷ್ಟಿ ಮಾಡುವ ಮತ್ತು ಗ್ರಾಮೀಣ ಭಾಗದ ಜನರ ಕೊಳ್ಳುವ ಸಾಮರ್ಥ್ಯವನ್ನು ತಕ್ಷಣವೇ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದ್ದು ಅದನ್ನು ಹಾಗೆಯೇ ಬಳಸಿಕೊಳ್ಳಬೇಕಿತ್ತು.

ಅಂದರೆ, ಈ ಬಾರಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ಟಿನಲ್ಲಿ ಕನಿಷ್ಟ ಒಂದು ಲಕ್ಷ ಕೋಟಿಯಷ್ಟು ಅನುದಾನ ಕೊಡಬೇಕಿತ್ತು. ಇದರಿಂದಾಗಿ ಇವತ್ತಿಗೂ ಭಾರತದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಹಳ್ಳಿಗಳಲ್ಲಿ ತಾತ್ಕಾಲಿಕವಾದ ಉದ್ಯೋಗವಾದರೂ ಸೃಷ್ಟಿಯಾಗಿ ಅದರಿಂದ ಆರ್ಥಿಕ ಚೇತರಿಕೆಯೂ ಆಗುತ್ತಿತ್ತು.

ಆದರೆ, ಈ ಯೋಜನೆಗೆ ಕಳೆದ ಬಾರಿ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ ಕೊಡುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ ತನಗೆ ಬದ್ಧತೆಯಿಲ್ಲ ಎಂಬುದನ್ನು ತೋರಿಸಿದಂತಾಗಿದೆ.

ಹಾಗೆಯೇ, ಆರ್ಥಿಕ ಕುಸಿತದಿಂದ ದೇಶವನ್ನು ಮೇಲೆತ್ತುವ ಕ್ರಮಗಳ ಬಗ್ಗೆಯೂ ತನಗಿರುವ ಅಜ್ಞಾನವನ್ನು ತೋರಿಸಿದೆ.

ಆರ್ಥಿಕ ತಜ್ಞ ಕೇನ್ಸ್‌ನ ಪ್ರಖ್ಯಾತ ಹೇಳಿಕೆಯೊಂದಿದೆ.

“ಆರ್ಥಿಕ ಕುಸಿತದ ಕಾಲದಲ್ಲಿ ಸರ್ಕಾರ ಅತಿ ಹೆಚ್ಚು ಖರ್ಚು ಮಾಡಬೇಕು. ಜನರ ಕೈಯಲ್ಲಿ ಗುಂಡಿ ತೆಗೆಸಿ, ನಂತರ ಅದೇ ಗುಂಡಿಯನ್ನು ಅವರ ಕೈಲೇ ಪುನಃ ಮುಚ್ಚಿಸಿ ಅವರಿಗೆ ಆ ಕೆಲಸ ಮಾಡಿದ್ದಕ್ಕೆ ಸರ್ಕಾರ ಹಣ ಕೊಟ್ಟು ಜನರ ಕೈಯಲ್ಲಿ ಹಣ ಓಡಾಡುವಂತೆ ಮಾಡಬೇಕು.”

ಆರ್ಥಿಕ ತಜ್ಞ ಕೇನ್ಸ್‌

ಆದರೆ, ಈಗಿನ ಬಜೆಟ್‌ನಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿ ಸರ್ಕಾರ ನಡೆದುಕೊಂಡಿರುವಂತೆ ಕಾಣುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಹೋದಬಾರಿಗಿಂತ ಕೇವಲ 4,800 ಕೋಟಿಗಳಷ್ಟು ಮಾತ್ರ ಹೆಚ್ಚುವರಿ ಹಣ ನೀಡಲಾಗಿದೆ (ಹೋದಬಾರಿ 94,800 ಕೋಟಿ ಮತ್ತು ಈ ಬಾರಿ 99,300 ಕೋಟಿ). ಶಿಕ್ಷಣಕ್ಕೆ ಹೆಚ್ಚು ಹಣ ನೀಡಿ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಕ್ಷಮತೆಯುಳ್ಳ ಯುವಜನರು ತಯಾರಾಗಿ ಉದ್ಯೋಗಗಳನ್ನು ಪಡೆಯಲು ಅರ್ಹರಾಗುತ್ತಾರೆ. ಆದರೆ, ಈ ಬಜೆಟ್ ಶಿಕ್ಷಣಕ್ಕೆ ಅಗತ್ಯವಿರುವಷ್ಟು ಒತ್ತು ನೀಡಿಲ್ಲದಿರುವುದು ಮೇಲ್ನೋಟಕ್ಕೇ ಕಾಣಿಸುತ್ತಿದೆ.

ಹಾಗೆಯೇ, skill development ಗೆ ಈ ಬಜೆಟ್ ಮೀಸಲಿಟ್ಟಿರುವ ಹಣ ಕೇವಲ 3,000 ಕೋಟಿ.

ಇವತ್ತು ಕೋಟ್ಯಂತರ ನಿರುದ್ಯೋಗಿಗಳಿರುವಾಗ ಉದ್ಯೋಗ ಪಡೆಯಲು ಅಗತ್ಯ ತರಬೇತಿಯ ತುರ್ತಿತ್ತು. ಆದರೆ ಅದಕ್ಕೆ ಅತಿಕಡಿಮೆ ಹಣ ನಿಗದಿಪಡಿಸುವ ಮೂಲಕ ಸರ್ಕಾರ ಉದ್ಯೋಗ ಸೃಷ್ಟಿಯ ಬಗ್ಗೆ ತನಗಿರುವ ತಾತ್ಸಾರ ತೋರಿದಂತಾಗಿದೆ.

ಜೊತೆಗೆ, ಹೆಚ್ಚಿನ ಉದ್ಯೋಗ ಸೃಷ್ಟಿಸಬಲ್ಲ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ನಿರ್ಮಾಣ ಮತ್ತು ತಯಾರಿಕಾ ಕ್ಷೇತ್ರಗಳಿಗೆ ಈ ಕುಸಿತದ ಸಂದರ್ಭದಲ್ಲಿ ಮಾಮೂಲಿಗಿಂತ ಹೆಚ್ಚಿನ ಅನುದಾನ ನೀಡಬೇಕಿತ್ತು. ಇದು ಕೂಡ ಬಜೆಟ್ಟಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್ ಅತೀ ಅವಶ್ಯವಿದ್ದ ಉದ್ಯೋಗ ಸೃಷ್ಟಿಗಾಗಲೀ ತನ್ಮೂಲಕ ಆರ್ಥಿಕ ಚೇತರಿಕೆಗಾಗಲೀ ಒತ್ತು ಕೊಟ್ಟಿಲ್ಲ ಎನ್ನುವುದು ಮೇಲ್ನೋಟಕ್ಕೇ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...