Homeಎಕಾನಮಿಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌... : ಡಾ.ಬಿ.ಸಿ ಬಸವರಾಜ್

ಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌… : ಡಾ.ಬಿ.ಸಿ ಬಸವರಾಜ್

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

- Advertisement -
- Advertisement -

2019 – 20 ರಲ್ಲಿ ಭಾರತದ ಜಿಡಿಪಿ ಕೇವಲ 5% ಬೆಳವಣಿಗೆ ಕಾಣುತ್ತಿದ್ದು ಇಡೀ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ. ಈಗಾಗಲೇ ತಿಳಿದಿರುವಂತೆ ಇದಕ್ಕೆ ಮುಖ್ಯ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದು ಅಥವಾ ಜನರ ಒಟ್ಟಾರೆ ಕೊಳ್ಳುವ ಶಕ್ತಿ ಕಡಿಮೆಯಾಗಿರುವುದು.

ಅಂದರೆ, ಜನರಲ್ಲಿ ಹಣ ಖರ್ಚು ಮಾಡುವ ಸಾಮರ್ಥ್ಯ ಕುಂದಿರುವುದು. ಇದನ್ನೇ ಇನ್ನೊಂದು ರೀತಿ ಹೇಳುವುದಾದರೆ, ಜನರ ಸಂಪಾದನೆ ಮಾಡುವ ಅವಕಾಶ ಕಡಿಮೆಯಾಗಿರುವುದು.

ಇದಕ್ಕೆ ಕಳೆದ ನಲವತೈದು ವರ್ಷಗಳಲ್ಲಿಯೇ ಅತಿಹೆಚ್ಚು ನಿರುದ್ಯೋಗ ಉಂಟಾಗಿರುವುದೂ ಪ್ರಮುಖ ಕಾರಣವಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಉದ್ಯೋಗ ಸೃಷ್ಟಿಸುವುದಕ್ಕೆ ಮತ್ತು ಅದರ ಮೂಲಕ ಜನರ ಕೊಳ್ಳುವ ಶಕ್ತಿ ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ಕೊಡಬೇಕಿತ್ತು. ಆದರೆ, ಈ ಬಾರಿಯ ಬಜೆಟ್ ಇದರಲ್ಲಿ ದಯನೀಯವಾಗಿ ಸೋತಿರುವುದು ಕಾಣಿಸುತ್ತಿದೆ.

ಇದಕ್ಕೆ ಸರಳ ಉದಾಹರಣೆ ಎಂದರೆ ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ನರೇಗಾ) ಕೇವಲ 61,500 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಹೋದವರ್ಷ ಅಂದರೆ 2019-20 ರಲ್ಲಿ ಈ ಯೋಜನೆಗೆ ಖರ್ಚಾಗಿದ್ದ ಹಣ 71,000 ಕೋಟಿ ರೂಪಾಯಿಗಳು.

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

ಸರ್ಕಾದ ಅಂಕಿಅಂಶಗಳ ಪ್ರಕಾರವೇ 2011-12 ರಲ್ಲಿ ಗ್ರಾಮೀಣ ಭಾಗದ ಪ್ರತಿ ವ್ಯಕ್ತಿಯ ತಿಂಗಳ ಖರ್ಚು ಸರಾಸರಿ ₹1216.88 ರಷ್ಟಿದ್ದರೆ ಅದು 2017-18 ರಲ್ಲಿ ₹1109.74 ರಷ್ಟಕ್ಕೆ ಇಳಿದಿದೆ. ಈ ಒಟ್ಟಾರೆ ಕುಸಿತದ ಪ್ರಮಾಣ ಶೇ 8.8 ರಷ್ಟಿದೆ. ಭಾರತದ ಗ್ರಾಮೀಣ ಆರ್ಥಿಕ ಕುಸಿತದ ಚಿತ್ರಣವನ್ನು ಈ ಅಂಕಿಅಂಶ ಸ್ಪಷ್ಟವಾಗಿ ತೋರಿಸುತ್ತವೆ.

ಇಂತಹ ಪರಿಸ್ಥಿತಿಯಲ್ಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ತಕ್ಷಣ ಉದ್ಯೋಗ ಸೃಷ್ಟಿ ಮಾಡುವ ಮತ್ತು ಗ್ರಾಮೀಣ ಭಾಗದ ಜನರ ಕೊಳ್ಳುವ ಸಾಮರ್ಥ್ಯವನ್ನು ತಕ್ಷಣವೇ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದ್ದು ಅದನ್ನು ಹಾಗೆಯೇ ಬಳಸಿಕೊಳ್ಳಬೇಕಿತ್ತು.

ಅಂದರೆ, ಈ ಬಾರಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ಟಿನಲ್ಲಿ ಕನಿಷ್ಟ ಒಂದು ಲಕ್ಷ ಕೋಟಿಯಷ್ಟು ಅನುದಾನ ಕೊಡಬೇಕಿತ್ತು. ಇದರಿಂದಾಗಿ ಇವತ್ತಿಗೂ ಭಾರತದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಹಳ್ಳಿಗಳಲ್ಲಿ ತಾತ್ಕಾಲಿಕವಾದ ಉದ್ಯೋಗವಾದರೂ ಸೃಷ್ಟಿಯಾಗಿ ಅದರಿಂದ ಆರ್ಥಿಕ ಚೇತರಿಕೆಯೂ ಆಗುತ್ತಿತ್ತು.

ಆದರೆ, ಈ ಯೋಜನೆಗೆ ಕಳೆದ ಬಾರಿ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ ಕೊಡುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ ತನಗೆ ಬದ್ಧತೆಯಿಲ್ಲ ಎಂಬುದನ್ನು ತೋರಿಸಿದಂತಾಗಿದೆ.

ಹಾಗೆಯೇ, ಆರ್ಥಿಕ ಕುಸಿತದಿಂದ ದೇಶವನ್ನು ಮೇಲೆತ್ತುವ ಕ್ರಮಗಳ ಬಗ್ಗೆಯೂ ತನಗಿರುವ ಅಜ್ಞಾನವನ್ನು ತೋರಿಸಿದೆ.

ಆರ್ಥಿಕ ತಜ್ಞ ಕೇನ್ಸ್‌ನ ಪ್ರಖ್ಯಾತ ಹೇಳಿಕೆಯೊಂದಿದೆ.

“ಆರ್ಥಿಕ ಕುಸಿತದ ಕಾಲದಲ್ಲಿ ಸರ್ಕಾರ ಅತಿ ಹೆಚ್ಚು ಖರ್ಚು ಮಾಡಬೇಕು. ಜನರ ಕೈಯಲ್ಲಿ ಗುಂಡಿ ತೆಗೆಸಿ, ನಂತರ ಅದೇ ಗುಂಡಿಯನ್ನು ಅವರ ಕೈಲೇ ಪುನಃ ಮುಚ್ಚಿಸಿ ಅವರಿಗೆ ಆ ಕೆಲಸ ಮಾಡಿದ್ದಕ್ಕೆ ಸರ್ಕಾರ ಹಣ ಕೊಟ್ಟು ಜನರ ಕೈಯಲ್ಲಿ ಹಣ ಓಡಾಡುವಂತೆ ಮಾಡಬೇಕು.”

ಆರ್ಥಿಕ ತಜ್ಞ ಕೇನ್ಸ್‌

ಆದರೆ, ಈಗಿನ ಬಜೆಟ್‌ನಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿ ಸರ್ಕಾರ ನಡೆದುಕೊಂಡಿರುವಂತೆ ಕಾಣುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಹೋದಬಾರಿಗಿಂತ ಕೇವಲ 4,800 ಕೋಟಿಗಳಷ್ಟು ಮಾತ್ರ ಹೆಚ್ಚುವರಿ ಹಣ ನೀಡಲಾಗಿದೆ (ಹೋದಬಾರಿ 94,800 ಕೋಟಿ ಮತ್ತು ಈ ಬಾರಿ 99,300 ಕೋಟಿ). ಶಿಕ್ಷಣಕ್ಕೆ ಹೆಚ್ಚು ಹಣ ನೀಡಿ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಕ್ಷಮತೆಯುಳ್ಳ ಯುವಜನರು ತಯಾರಾಗಿ ಉದ್ಯೋಗಗಳನ್ನು ಪಡೆಯಲು ಅರ್ಹರಾಗುತ್ತಾರೆ. ಆದರೆ, ಈ ಬಜೆಟ್ ಶಿಕ್ಷಣಕ್ಕೆ ಅಗತ್ಯವಿರುವಷ್ಟು ಒತ್ತು ನೀಡಿಲ್ಲದಿರುವುದು ಮೇಲ್ನೋಟಕ್ಕೇ ಕಾಣಿಸುತ್ತಿದೆ.

ಹಾಗೆಯೇ, skill development ಗೆ ಈ ಬಜೆಟ್ ಮೀಸಲಿಟ್ಟಿರುವ ಹಣ ಕೇವಲ 3,000 ಕೋಟಿ.

ಇವತ್ತು ಕೋಟ್ಯಂತರ ನಿರುದ್ಯೋಗಿಗಳಿರುವಾಗ ಉದ್ಯೋಗ ಪಡೆಯಲು ಅಗತ್ಯ ತರಬೇತಿಯ ತುರ್ತಿತ್ತು. ಆದರೆ ಅದಕ್ಕೆ ಅತಿಕಡಿಮೆ ಹಣ ನಿಗದಿಪಡಿಸುವ ಮೂಲಕ ಸರ್ಕಾರ ಉದ್ಯೋಗ ಸೃಷ್ಟಿಯ ಬಗ್ಗೆ ತನಗಿರುವ ತಾತ್ಸಾರ ತೋರಿದಂತಾಗಿದೆ.

ಜೊತೆಗೆ, ಹೆಚ್ಚಿನ ಉದ್ಯೋಗ ಸೃಷ್ಟಿಸಬಲ್ಲ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ನಿರ್ಮಾಣ ಮತ್ತು ತಯಾರಿಕಾ ಕ್ಷೇತ್ರಗಳಿಗೆ ಈ ಕುಸಿತದ ಸಂದರ್ಭದಲ್ಲಿ ಮಾಮೂಲಿಗಿಂತ ಹೆಚ್ಚಿನ ಅನುದಾನ ನೀಡಬೇಕಿತ್ತು. ಇದು ಕೂಡ ಬಜೆಟ್ಟಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್ ಅತೀ ಅವಶ್ಯವಿದ್ದ ಉದ್ಯೋಗ ಸೃಷ್ಟಿಗಾಗಲೀ ತನ್ಮೂಲಕ ಆರ್ಥಿಕ ಚೇತರಿಕೆಗಾಗಲೀ ಒತ್ತು ಕೊಟ್ಟಿಲ್ಲ ಎನ್ನುವುದು ಮೇಲ್ನೋಟಕ್ಕೇ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...