Homeಮುಖಪುಟ28 ವರ್ಷಗಳಿಂದಾದ ಪ್ರಯೋಗಗಳ ಫಲ- ಒಂದು ವರ್ಷದ ರೈತ ಚಳವಳಿ

28 ವರ್ಷಗಳಿಂದಾದ ಪ್ರಯೋಗಗಳ ಫಲ- ಒಂದು ವರ್ಷದ ರೈತ ಚಳವಳಿ

ಕರ್ನಾಟಕ ಜನಶಕ್ತಿ ಸಂಘಟನೆಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಭಾನುವಾರ ನಡೆದ `ಐತಿಹಾಸಿಕ ರೈತಾಂದೋಲನ- ಮಂಥನ ಸಮಾವೇಶ’ದಲ್ಲಿ ಪಂಜಾಬ್‌ನ ನಾಯಕರಾದ ಹರ್ನೇಕ್ ಸಿಂಗ್ ಅವರು ಆಡಿರುವ ಮಾತುಗಳು ಒಂದು ಚಳವಳಿಯನ್ನು ಹೇಗೆ ಕಟ್ಟಬೇಕೆಂಬುದಕ್ಕೆ ಮಾರ್ಗದರ್ಶನವೂ ಹೌದು...

- Advertisement -
- Advertisement -

ಕರ್ನಾಟಕ ಜನಶಕ್ತಿ ಸಂಘಟನೆಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ `ಐತಿಹಾಸಿಕ ರೈತಾಂದೋಲನ ಕಲಿಸುವ ಪಾಠ- ತೋರುವ ಹಾದಿ: ಮಂಥನ ಸಮಾವೇಶದಲ್ಲಿ ಬಿಕೆಯು ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ನಾಯಕರಾದ ಪಂಜಾಬ್‌ನ ಹರ್ನೇಕ್ ಸಿಂಗ್ ರವರು ಮಾಡಿದ ಭಾಷಣದ ಯಥಾವತ್ ರೂಪ ಇಲ್ಲಿದೆ.

ದೆಹಲಿಯಿಂದ ಪದೇ ಪದೇ ಕರ್ನಾಟಕಕ್ಕೆ ಬರುತ್ತಿದ್ದೇನೆ. ಕರ್ನಾಟಕಕ್ಕೆ ಮೂರನೇ ಬಾರಿ ಬಂದಿದ್ದೇನೆ. ಅದಕ್ಕೆ ವಿಶೇಷ ಕಾರಣವಿದೆ. ಅದೆಂದರೆ ದಕ್ಷಿಣ ಭಾರತದ ರೈತರ ಒಗ್ಗೂಡುವಿಕೆ ಕರ್ನಾಟಕದಿಂದಲೇ ಸಾಧ್ಯ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಅರಿತಿದೆ.

ಪಂಜಾಬಿಯಲ್ಲಿ ಒಂದು ಮಾತಿದೆ. ಇವತ್ತಿನ ಸಮಯದಲ್ಲಿ ಮೂರ್ಖರು ಮಾತ್ರ ನೆಮ್ಮದಿಯಾಗಿ ಮಲಗಲು ಸಾಧ್ಯ. ಬುದ್ಧಿ ಬಂದ ಮೇಲೆ ನಾವು ನಿಶ್ಚಿತರಾಗಿ ಇರಲು ಸಾಧ್ಯವಿಲ್ಲ. ನೆಮ್ಮದಿಯಲ್ಲಿ ಮಲಗಿದವರು ಮೂರ್ಖರ ಪಟ್ಟಿಯಲ್ಲಿ ಬರುತ್ತಾರೆ.

ಎಲ್ಲರ ಮನಸ್ಸಿನಲ್ಲಿ ರೈತರ ಚಳವಳಿ ಇಷ್ಟು ದೀರ್ಘವಾಗಿ ನಡೆದದ್ದು ಹೇಗೆ ಎಂಬ ಪ್ರಶ್ನೆ ಇದೆ. ಕೇಂದ್ರದ ಬಿಜೆಪಿ ಸರ್ಕಾರ ವಿರುದ್ಧ ಪಂಜಾಬ್, ಹರಿಯಾಣದ ರೈತರನ್ನು ಇಷ್ಟು ದೀರ್ಘವಾಗಿ ಹೇಗೆ ಹೋರಾಟ ಹೂಡಿದರು? ಇದು ಒಂದು ವರ್ಷದ ಕೆಲಸವಲ್ಲ. 28 ವರ್ಷಗಳ ಹೋರಾಟದ ಫಲವಿದು. ನಮ್ಮ ಹಿರಿಯರು ಮುಂದಿನ ದಿನಗಳ ಅಪಾಯಗಳನ್ನು ತಿಳಿಸಿ ಹೇಳುತ್ತಿದ್ದರು. 28 ವರ್ಷಗಳ ಸಿದ್ಧತೆಯ ಫಲವಾಗಿ ಈ ಹೋರಾಟ ನಿರಂತರವಾಗಿ ನಡೆಯುತ್ತಿದೆ.

ಇದನ್ನೂ ಓದಿರಿ: ರೈತರನ್ನು ಕಾರ್ಪೊರೇಟ್ ಕಾಲಡಿಗೆ ದೂಕುತ್ತಿರುವ ಕೇಂದ್ರ ಸರ್ಕಾರ: ಬಿ.ಸಿ ಬಸವರಾಜ್

ಒಂದು ಸಮಯ ಪಂಜಾಬ್‌ನಲ್ಲಿ ಒಂದೇ ವಿಷಯದ ಕುರಿತು ಬೇರೆ ಜಾಗದಲ್ಲಿ, ವಿಭಿನ್ನ ವಿಚಾರಧಾರೆಯ ಜನರು ಹೋರಾಟ ನಡೆಸುತ್ತಿದ್ದರು. ಹೀಗಿರುವ ಒಂದು ಆರಂಭ ಮಾಡಿದೆವು. ಸಾಮಾನ್ಯ ಹಕ್ಕೊತ್ತಾಯಕ್ಕಾಗಿ, ಬೇರೆ ಬೇರೆ ಧಾರೆಗಳು ಒಗ್ಗೂಡಿ ಕೆಲಸ ಮಾಡುವ ಪ್ರಯತ್ನ ಮಾಡಿದೆವು. ಒಟ್ಟಿಗೆ ಸೇರಿ ಹೋರಾಟ ಮಾಡೋಣ. ಆಮೇಲೆ ನಮ್ಮ ನಮ್ಮ ಜಾಗಗಳಿಗೆ ಹೋಗೋಣ ಎಂದು ನಿರ್ಧರಿಸಿದೆವು.

1997ನೇ ಇಸವಿಯಲ್ಲಿ ಪಂಜಾಬ್‌ನ ಬರ್ನಾಲದಲ್ಲಿ ಒಂದು ಘಟನೆ ನಡೆಯಿತು. ದಲಿತ ವ್ಯಕ್ತಿಯೊಬ್ಬನಿಗೆ ಪೊಲೀಸ್ ಹೊಡೆದು ಸಾಯಿಸಿದ. ಈ ಘಟನೆ ಯಾರಿಗೆ ತಪ್ಪು ಅನಿಸುತ್ತದೆಯೋ ಅವರೆಲ್ಲ ಒಂದು ವೇದಿಕೆ ಬನ್ನಿ ಹೋರಾಡೋಣ ಎಂದು ಕರೆ ಕೊಟ್ಟೆವು. ಅತ್ಯಾಚಾರ ಪ್ರಕರಣವೊಂದು ಘಟಿಸಿತು. ನ್ಯಾಯದ ಪರ ಇರುವವರು ಒಂದು ಕಡೆ ಬರಬೇಕು. ಇಲ್ಲ ಎನ್ನುವವರು ಹೊರಗಿರಿ ಎಂದು ಕರೆ ನೀಡಿದೆವು. ಎಲ್ಲರೂ ಒಂದು ವೇದಿಕೆಗೆ ಬರುವ ಪ್ರಯೋಗವಾಯಿತು. ಪೊಲೀಸ್ ಮತ್ತು ಅತ್ಯಾಚಾರಿಗೆ ಶಿಕ್ಷೆಯಾಯಿತು. ಆ ಮೂಲಕ ಒಂದು ಕಡೆ ಸೇರಿದರೆ ಗೆಲುವು ಪಡೆಯಬಹುದು ಎಂದು ತೋರಿಸಿಕೊಟ್ಟೆವು.

ಪಂಜಾಬ್‌ನಲ್ಲಿ ಒಮ್ಮೆ ವಿದ್ಯುತ್ ಸಮಸ್ಯೆ ಕುರಿತು ಪ್ರತಿಭಟನೆ ನಡೆಯಿತು. ರೈತರು ಟ್ರಾಕ್ಟರ್ ಮೂಲಕ ಬಂದು ಪಟಿಯಾಲದಲ್ಲಿ ಹೋರಾಟ ಮುಂದುವರಿಸಿದರು. ಮನೆಮಠ ಕಟ್ಟಿಕೊಂಡು ಅಲ್ಲಿಗೆ ರೈತರು ಬಂದಿದ್ದರು. ವಾಪಸ್ ಹೋಗುತ್ತಾರೆ ಎಂದು ಭಾವಿಸಿದ್ದವರಿಗೆ ಭ್ರಮನಿರಸನವಾಯಿತು. ಸರ್ಕಾರಕ್ಕೆ ತಲೆನೋವು ಉಂಟಾಗಿತ್ತು. ಈ ಪ್ರಯೋಗ ಫಸಲು ನಾಶ, ಸಾಲದ ಸಮಸ್ಯೆಯಲ್ಲೂ ಪ್ರಯೋಗವಾಯಿತು. ಒಮ್ಮೆ ಹೋರಾಟ ನಡೆಯುತ್ತಿದ್ದಾಗ ಚಂಡಿಘಡ ಗುರುದ್ವಾರದಲ್ಲಿ ಊಟ ಸಿಕ್ಕರೂ ಅಲ್ಲಿ ಪಡೆಯಬೇಡಿ ಎಂದು ರೈತರಿಗೆ ಹೇಳಿದೆವು. ಮನೆಯಿಂದ ಊಟ ಕಟ್ಟಿಕೊಂಡು ಬಂದರು. ಸೈನಿಕರು ಊಟ ಇಲ್ಲದೆ, ಸ್ನಾನ ಇಲ್ಲದೆ ಇರುತ್ತಾರೆ. ಅವರಂತೆ ನಾವು ಹೋರಾಟ ಮಾಡಬೇಕು ಎಂದು ತಿಳಿಸಿದೆವವು. ಅದರ ಫಲವನ್ನು ಇಂದು ದೆಹಲಿಯಲ್ಲಿ ಹೋರಾಟದಲ್ಲಿ ಕಾಣುತ್ತಿದ್ದೇವೆ.

ಜಂಟಿ ವಿಚಾರಧಾರೆಯುಳ್ಳವರು ಒಂದು ವೇದಿಕೆಗೆ ಬರಬೇಕೆಂಬ ಪ್ರಯೋಗವನ್ನು ಬೇರೆ ವಿಚಾರಗಳಿಗೆ ನಾವು ಪ್ರಯೋಗಿಸಲು ಮುಂದಾದೆವು. ಅದು ಈಗ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರೂಪದಲ್ಲಿ ಬಂದಿದೆ. ಎಸ್‌ಕೆಎಂ ಹೋರಾಟ ಬಿಜೆಪಿಯ ಕಪಾಳಕ್ಕೆ ಭಾರಿಸಿದೆ. “ರೈತ ಆಂದೋಲನದಲ್ಲಿ ವಿರುದ್ಧ ಚಿಂತನೆಯವರು ಇದ್ದಾರೆ, ಅವರೆಲ್ಲ ಒಂದು ಕಡೆ ಹೆಚ್ಚು ಕಾಲ ಇರಲು ಸಾಧ್ಯವಿಲ್ಲ, ಎಸ್‌ಕೆಎಂ ಮುರಿದಾಗ ಹೊರಟು ಹೋಗುತ್ತಾರೆ ಎಂದು ಭಾವಿಸಿದ್ದೆವು” ಎಂದು ನಮ್ಮನ್ನು ಭೇಟಿಯಾಗಲು ಬರುವ ಬಿಜೆಪಿಯ ಮಾಜಿ ನಾಯಕರು ಹೇಳುತ್ತಾರೆ.

ಜನರು ಹತ್ತು ಅಥವಾ ಇಪ್ಪತ್ತು ದಿನಗಳಲ್ಲಿ ವಾಪಸ್ ಹೋಗುತ್ತಾರೆ ಎಂದು ಬಿಜೆಪಿಯವರು ಭಾವಿಸಿದ್ದರು. ಅದರೆ ಅದಕ್ಕೆ ವಿರುದ್ಧವಾಗಿ ಒಂದೇ ಒಂದು ದಿನ ಊರಿಗೆ ಹೋಗದವರೂ ಇದ್ದಾರೆ. ಬಂಧುಗಳ ಸಾವು, ಮದುವೆಗಳಿಗೆ ಹೋಗದವರು ಇದ್ದಾರೆ.

ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ದೆಹಲಿಗೆ ಹೊರಡುವ ಮುಂಚೆ ರೈಲು ತಡೆ ಆರಂಭಿಸಿದೆವು. ಎರಡು ತಿಂಗಳ ನಂತರ ದೆಹಲಿಗೆ ಹೊರಟೆವು. ಕಿಂಟ್ವಾಲ್‌ಗಟ್ಟಲೆ ತೂಕದ ಬಂಡೆಗಳನ್ನು ಕ್ರೇನ್‌ಗಳಲ್ಲಿ ತಂದು ಹರಿಯಾಣ ಸರ್ಕಾರ ರಸ್ತೆಯಲ್ಲಿ ಇರಿಸಿತು. ಆ ಬಂಡೆ ಕಲ್ಲುಗಳನ್ನು ರೈತರು ತಮ್ಮ ತೋಳ್ಬಲದಲ್ಲೇ ಬದಿಗೆ ಸರಿಸಿ ಮುನ್ನೆದರು. ಇದು ಉತ್ಪ್ರೆಕ್ಷೆಯ ಮಾತಲ್ಲ.

ಕೊರೊನಾ ದೆಹಲಿಯಲ್ಲಿ ಎದುರಾಯಿತು. ಕೊರೊನಾ ಬಂದರೆ ಸಾಯುವುದಿಲ್ಲ ಎಂಬುದನ್ನು ರೈತರಿಗೆ ಮನವರಿಕೆ ಮಾಡಿದೆವು. ಸುಮಾರು 25 ಸಾವಿರ ಜನರ ಸಮಾವೇಶ ನಡೆಸಿ, ಸಮಾವೇಶದಲ್ಲಿ ಪಾಲ್ಗೊಂಡಿದ್ದ ಎಲ್ಲರ ಆರೋಗ್ಯದ ಮೇಲೆ ಗಮನ ನಿಗಾವಹಿಸಿದೆವು. 25 ಸಾವಿರ ಜನರಲ್ಲಿ ಯಾರೂ ಸಾಯಲಿಲ್ಲ. ಕೋವಿಡ್‌ನಿಂದ ಮಾರಾಣಾಂತಿರಕ ತೊಂದರೆಯಾಗಲಿಲ್ಲ. ದೆಹಲಿಯಲ್ಲಿ ಹೋರಾಟಗಾರರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹೋಗಲಿಲ್ಲ. ತಪ್ಪು ಮಾಡಿದವರು ಮಾತ್ರ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹೋಗುತ್ತಾರೆ. ನಾವು ಮಾಸ್ಕ್ ಹಾಕಿಕೊಂಡು ಹೋರಾಟ ಮಾಡಲಿಲ್ಲ.

ನಾವು ಒಂದು ವರ್ಷದಿಂದ ದೆಹಲಿಯಲ್ಲಿ ಕೂತಿದ್ದೇವೆ. ಒಂದು ವಿಚಾರ ಮನವರಿಕೆ ಮಾಡಿಕೊಟ್ಟಿದ್ದೇವೆ. ನಮ್ಮ ಹಕ್ಕೊತ್ತಾಯ ತಿಳಿಸಿದ್ದೇವೆ. ನಾವು ಯಾರ ಬಳಿಯು ಬೇಡಿಕೊಳ್ಳಬೇಕಾಗಿಲ್ಲ. ಅದು ನಮ್ಮ ಹಕ್ಕು. ಹೋರಾಟ ಮಾಡಿ ಅದನ್ನು ಪಡೆದುಕೊಳ್ಳುವುದನ್ನು ರೈತರಿಗೆ ತಿಳಿಸಿಕೊಟ್ಟಿದ್ದೇವೆ.

ನಮ್ಮ ಹಕ್ಕೊತ್ತಾಯ ಏನೆಂದರೆ ಎಂಎಸ್‌ಪಿ- ಕನಿಷ್ಠ ಬೆಂಬಲ ಬೆಲೆ. ಅದಾನಿಯ ಒಂದು ದಿನದ ಆದಾಯ 900 ಕೋಟಿ. ಅದು ಯಾರ ಆದಾಯ? ಅದು ನಮ್ಮ ಪಾಲಿನ ಆದಾಯ. ಸರ್ಕಾರ ಸರಿ ಇಲ್ಲದ ಕಾರಣ ನಮ್ಮ ಹಣ ಅದಾನಿ ಅಕೌಂಟ್‌ಗೆ ಹೋಗಿದೆ. ಈ ವ್ಯವಸ್ಥೆಯನ್ನು ಅರ್ಥ ಮಾಡಿಕೊಡಬೇಕಾಗಿದೆ. ನಮ್ಮ ಹಿರಿಯ ನಾಯಕರೊಬ್ಬರು ದೀಪಾವಳಿಯ ಮುಂಚೆ ಊರಿಗೆ ಹೋದರು. ಆದರೆ ಅವರು ಮಾರನೇ ದಿನವೇ ವಾಪಸ್ ಬಂದರು. ಇಷ್ಟು ದಿನ ಹೋರಾಟ ಮಾಡುತ್ತಿರುವಾಗ ಹಬ್ಬ ಬೇಡ ಎಂದು ಅವರು ಯೋಚಿಸಿ ಹೋರಾಟದ ನೆಲಕ್ಕೆ ವಾಪಸ್ ಬಂದರು.

ಪಂಜಾಬ್‌ನಲ್ಲಿ ಎಲ್ಲ ಹಬ್ಬಗಳು ಒಂದಲ್ಲ ಒಂದು ಫಲಸಿನ ಜೊತೆ ಬರುತ್ತವೆ. ಫಸಲು ಬಂದಾಗ ಹಬ್ಬದ ಸಂತೋಷ ಇರುತ್ತಿತ್ತು. ಬದಲಾದ ಸಂದರ್ಭದಲ್ಲಿ ಫಸಲು ಬಂದಾಗ ಕಷ್ಟ ಕಾಲ ಬಂದ ಅನುಭವವಾಗಿದೆ. ಫಸಲು ಬಂದಿದೆ ಎಂದರೆ ಸಾಲಗಾರರು ಬಂದಿದ್ದಾರೆ ಎನಿಸುತ್ತಿದೆ. ಈಗ ಫಸಲು ಬಂದಿದೆ ಎಂದರೆ ಕಷ್ಟಕಾಲ ಬಂದಿದೆ ಎನಿಸುತ್ತಿದೆ. ನಾವು ಖರೀದಿಸುವಾಗಲೂ, ನಮ್ಮ ಉತ್ಪನ್ನವನ್ನು ಮಾರುವಾಗಲೂ ಬೇರೆಯವರಿಂದ ಬೆಲೆ ಕೇಳುವಂತಾಗಿದೆ. ನಮ್ಮ ಬೆಳೆಗೆ ನಾವೇ ಬೆಲೆ ನಿಗದಿ ಮಾಡುವ ಕಾಲ ಬರಬೇಕು.

ನೀವು ಎಚ್ಚೆತ್ತವರಾಗಿದ್ದೀರಿ. ಮೂರ್ಖರು ಮಲಗಿದ್ದಾರೆ. ನಿರಂತರವಾದ ಹೋರಾಟದಿಂದ ಯೋಗಿ ಆದಿತ್ಯನಾಥ, ನರೇಂದ್ರಮೋದಿಯಂತಹ ಜನರನ್ನು ತೊಲಗಿಸಬೇಕು. ರೈತರು ಬದುಕುತ್ತಿಲ್ಲ, ದಿನದೂಡುತ್ತಿದ್ದಾರೆ. ಬಾಳ್ವೆ ಮಾಡುತ್ತಿಲ್ಲ. ಹುಟ್ಟಿದ್ದೇನೆ, ಸಾಯಬಾರದು ಎಂದು ಭಾವಿಸಿ ದಿನದೂಡುತ್ತಿದ್ದಾರೆ ಹೊರತು ಬಾಳ್ವೆ ಮಾಡುತ್ತಿಲ್ಲ.

ಈ ಆಂದೋದನದಿಂದಾಗಿ ಬದಲಾವಣೆಗಳಾಗಿವೆ. ಉಪಮುಖ್ಯಮಂತ್ರಿಯನ್ನು ತೋಳು ಹಿಡಿದು ತಡೆದು ನಿಲ್ಲಿಸಿ ರೈತರು ಪ್ರಶ್ನೆ ಮಾಡಿದ್ದಾರೆ. ಆತ ಉತ್ತರ ಕೊಡದೆ ಹೋಗಲು ಸಾಧ್ಯವಿಲ್ಲ. ಶಾಸಕರು ಯಾವುದಾದರೂ ಗ್ರಾಮಕ್ಕೆ ಬರಬೇಕೆಂದರೆ ರೈತ ನಾಯಕರ ಅನುಮತಿ ಪಡೆಯಬೇಕಾಗಿದೆ. ಅದು ಈ ಆಂದೋದನದಿಂದ ಸಾಧ್ಯವಾಗಿದೆ. ಎಂಎಸ್‌ಪಿ, ಸಾಲಮನ್ನಾಕ್ಕೆ ಹೋರಾಟ ನಿಲ್ಲುವುದಿಲ್ಲ. ಇಡೀ ದೇಶ ಹೇಗೆ ಮುನ್ನಡೆಯಬೇಕು ಎಂದು ತೋರಿಸಿಕೊಡುತ್ತಿದೆ.

ಸಿಂಘು ಗಡಿ ಘಟನೆಗೆ ಸಿಖ್ ಧರ್ಮದಲ್ಲಿ ಅವಕಾಶವಿಲ್ಲ. ಘಟನೆಯನ್ನು ಖಂಡಿಸುತ್ತೇವೆ. ಸಿಖ್ ಧರ್ಮ ಕರುಣೆ ಮತ್ತು ದಯೆಯ ಮೇಲೆ ನಿಂತಿದೆ. ಬಿಜೆಪಿಯ ಫ್ಯಾಸಿಸ್ಟ್ ಧೋರಣೆಯಿಂದ ಈ ಘಟನೆಗಳು ನಡೆಯುತ್ತಿವೆ. ಪ್ರತಿನಿತ್ಯವು ಇಂತಹ ಘಟನೆಗಳು ನಡೆದಿವೆ. ಅವುಗಳನ್ನು ದಾಟಿ ನಾವು ನಡೆದಿದ್ದೇವೆ.

ಕೊಲೆಯಾದ ವ್ಯಕ್ತಿ ಹೋರಾಟದಲ್ಲಿ ಇರಲಿಲ್ಲ. ಹಳ್ಳಿಯಿಂದ ಕರೆದುಕೊಂಡು ಬಂದು ಕೊಲೆ ಮಾಡಲಾಯಿತು. ಘಟನೆಯನ್ನು ರೈತರ ಮೇಲೆ ಹೊರಿಸಲಾಯಿತು. ಇದು ಹಿಂದೂ ಫ್ಯಾಸಿಸಂ ಅಡಿಯಲ್ಲಿ ನಡೆಯುತ್ತಿರುವ ಸಿಖ್ ಫ್ಯಾಸಿಸಂನ ರೂಪ. ನಾವು ಎಲ್ಲ ಧರ್ಮದ ಫ್ಯಾಸಿಸಂನ ವಿರುದ್ಧ ಇದ್ದೇವೆ. ಈ ಘಟನೆಯನ್ನು ನಾವು ವಿರೋಧಿಸುತ್ತೇವೆ. ಈ ಘಟನೆಯಿಂದ ನಾವು ಹತಾಶರಾಗಬೇಕಿಲ್ಲ. ಈ ಇವುಗಳನ್ನು ದಾಟಿ ಬಂದಿದ್ದೇವೆ.

ನೀವು ವಾಪಸ್ ಹಳ್ಳಿಗಳಿಗೆ ಹೋಗಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದ ಕುರಿತು ಮಾಹಿತಿ ಕೊಡಿ. ಇದು ಸುವರ್ಣಾವಕಾಶ. ಆದರೆ ಕೊನೆಯ ಅವಕಾಶ ಎನ್ನುವುದಿಲ್ಲ. ಈ ಹೋರಾಟದ ಕುರಿತು ತಿಳಿಸಿಕೊಡಿ. ಮುಂದಿನ ಪೀಳಿಗೆಗೆ ಅನುಕೂಲ ಮಾಡಿಕೊಡಿ.


ಇದನ್ನೂ ಓದಿ: ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇಂದೆತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...