Homeಮುಖಪುಟರೈತರ ಹತ್ಯೆ ಹೊಣೆಗಾರರಿಗೆ ಕೃಷಿ ಸಚಿವಾಲಯದ ಹೊಣೆ: ರೈತ ಸಂಘಟನೆಗಳಿಂದ ಪ್ರತಿಭಟನೆ

ರೈತರ ಹತ್ಯೆ ಹೊಣೆಗಾರರಿಗೆ ಕೃಷಿ ಸಚಿವಾಲಯದ ಹೊಣೆ: ರೈತ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವನ್ನು ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಹಂಚಿಕೆ ಮಾಡಿರುವ ಎನ್‌ಡಿಎ ಸರಕಾರದ ನಿರ್ಧಾರದ ವಿರುದ್ಧ ಸಂಯುಕ್ತ ಕಿಸಾನ್‌ ಮೋರ್ಚಾ(ಎಸ್‌ಕೆಎಂ) ಬುಧವಾರ ಪ್ರತಿಭಟಿಸಿದ್ದು, ಜೂನ್‌ 2017ರಲ್ಲಿ ಮಧ್ಯಪ್ರದೇಶದ ಮಂದಸೌರ್‌ನಲ್ಲಿ ನಡೆದ 6 ರೈತರ ಹತ್ಯೆಗೆ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೇ ಹೊಣೆಗಾರರು ಎಂದು ಹೇಳಿಕೊಂಡಿದೆ.

ಸ್ವಾಮಿನಾಥನ್ ಆಯೋಗದ ವರದಿ ಅನುಷ್ಠಾನ, ಸಾಲ ಮನ್ನಾ ಹಾಗೂ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ವಿರುದ್ಧ ಬೃಹತ್ ಹೋರಾಟದಲ್ಲಿ ಪಾಲ್ಗೊಂಡು ರೈತರನ್ನು ಹತ್ಯೆ ಮಾಡಲಾಗಿದೆ ಎಂದು ಎಸ್‌ಕೆಎಂ ಆರೋಪಿಸಿದೆ. ಎಸ್‌ಕೆಎಂ ತನ್ನ ಸಾಮಾನ್ಯ ಸಭೆಯನ್ನು ಜುಲೈ 10ರಂದು ದೆಹಲಿಯಲ್ಲಿ ನಡೆಸುವುದಾಗಿ ತೀರ್ಮಾನಿಸಿದ್ದು, ಸಭೆಯಲ್ಲಿ ಭಾರತದ ವಿವಿಧ ರಾಜ್ಯಗಳ ರೈತ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ.

2014 ಮತ್ತು 2019ರಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಸರಕಾರ ನಡೆಸಿದಾಗ ದುರಹಂಕಾರ ಮತ್ತು ಸಂವೇದನಾಶೀಲತೆಯನ್ನು ಪ್ರದರ್ಶಿಸಿದೆ. ಇದು ದೇಶಾದ್ಯಂತ ರೈತರು ಮತ್ತು ಗ್ರಾಮೀಣ ಜನರಲ್ಲಿ ಕೋಪವನ್ನು ಹುಟ್ಟುಹಾಕಿದೆ ಎಂದು ಎಸ್‌ಕೆಎಂ ಹೇಳಿದೆ.

ಜೂನ್ 2017ರಲ್ಲಿ ಮಧ್ಯಪ್ರದೇಶದ ಮಂದಸೌರ್‌ನಲ್ಲಿ ರೈತರ ಗುಂಪಿನ ಮೇಲೆ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಗುಂಡು ಹಾರಿಸಿದ ನಂತರ ಆರು ರೈತರು ಸಾವನ್ನಪ್ಪಿದ್ದರು.

ರದ್ದಾದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್‌ಕೆಎಂ, ಮೊದಲ ಕ್ಯಾಬಿನೆಟ್ ಸಭೆಯಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು ಮತ್ತು ರೈತರ ಆತ್ಮಹತ್ಯೆಯನ್ನು ಪರಿಹರಿಸಲು ಎನ್‌ಡಿಎ ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಿಲ್ಲ ಎಂದು ಹೇಳಿದ್ದು, ಎಂಎಸ್‌ಪಿ ವಿಚಾರದಲ್ಲಿನ ಬಹುಕಾಲದ ಬೇಡಿಕೆಗಳನ್ನು ಪುನರುಚ್ಚರಿಸಿದೆ.

ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿಯಲ್ಲಿ 20,000 ಕೋಟಿ ರೂಪಾಯಿ ಬಾಕಿ ಬಿಡುಗಡೆ ಹೆಸರಿನಲ್ಲಿ ಮಾಡುತ್ತಿರುವ ಪ್ರಚಾರವು ರೈತರ ಕುಟುಂಬಕ್ಕೆ ತಿಂಗಳಿಗೆ ಸರಾಸರಿ 500 ರೂಪಾಯಿಗಳ ಅಸಮರ್ಪಕ ಮೊತ್ತವನ್ನು ನೀಡುವ ಅಸ್ತಿತ್ವದಲ್ಲಿರುವ ಯೋಜನೆಯಾಗಿದ್ದು ಅದು ರೈತರನ್ನು ತೃಪ್ತಿಪಡಿಸುವುದಿಲ್ಲ ಎಂದು ಎಸ್‌ಕೆಎಂ ಹೇಳಿಕೊಂಡಿದೆ.

ಕೃಷಿಯ ಕಾರ್ಪೊರೇಟ್ ನೀತಿಗಳಲ್ಲಿ ಬದಲಾವಣೆಯ ಭ್ರಮೆ ರೈತರಲ್ಲಿ ಇಲ್ಲ. ರೈತರು ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಮತ್ತು ಸಣ್ಣ ಉತ್ಪಾದಕರೊಂದಿಗೆ ಕೈಜೋಡಿಸಿ ಭಾರತದಾದ್ಯಂತ ವಿಸ್ತರಿಸುವ ಮೂಲಕ ಮತ್ತೊಂದು ರೋಮಾಂಚಕ ಮತ್ತು ಬೃಹತ್ ಹೋರಾಟಗಳಿಗೆ ಸಿದ್ಧರಾಗಬೇಕು. ಕಾರ್ಪೊರೇಟ್ ಚಾಲಿತ ನೀತಿಗಳನ್ನು ಬದಲಿಸಲು NDA ಸರ್ಕಾರದ ಮೇಲೆ ಒತ್ತಡ ಹೇರಬೇಕಿದೆ. ಈ ಮುಂದಿನ ನಡೆಯನ್ನು ಜುಲೈ 10ರ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಎಸ್‌ಕೆಎಂ ಹೇಳಿದೆ.

ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರನ್ನು ಸಿಐಎಸ್‌ಎಫ್ ಸಿಬ್ಬಂದಿ ಕಪಾಳಮೋಕ್ಷ ಮಾಡಿದ ಘಟನೆ ಕುರಿತು ಪ್ರತಿಕ್ರಿಯಿಸಿದ ಎಸ್‌ಕೆಎಂ, ಮಹಿಳಾ ಭದ್ರತಾ ಸಿಬ್ಬಂದಿ ಕಂಗನಾ ರಣಾವತ್ ಸಂಸದರಿಗೆ ಕಪಾಳಮೋಕ್ಷ ಮಾಡಿರುವುದನ್ನು ಸಮರ್ಥಿಸದೆ, ಐತಿಹಾಸಿಕ ರೈತರ ಹೋರಾಟದ ವಿರುದ್ಧ ಆಕೆಯ ದುರಹಂಕಾರದ ಮತ್ತು ದುರುದ್ದೇಶಪೂರಿತ ಮಾತುಗಳನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಎಸ್‌ಕೆಎಂ ನಿಯೋಗವು ಜೂನ್ 13ರಂದು ಲಖಿಂಪುರ ಖೇರಿ ಹುತಾತ್ಮರ ಕುಟುಂಬಗಳನ್ನು ಭೇಟಿ ಮಾಡಲಿದೆ ಮತ್ತು ಘಟನೆಯ ನಂತರ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಪ್ರಕರಣದಲ್ಲಿ ತಪ್ಪಾಗಿ ಸಿಲುಕಿರುವ ರೈತರಿಗೆ ಕಾನೂನು ನೆರವು ಮುಂದುವರೆಸುವುದನ್ನು ಖಚಿತಪಡಿಸುತ್ತದೆ ಎಂದು ಹೇಳಿಕೊಂಡಿದೆ.

ಇದನ್ನು ಓದಿ: ಇಟಲಿ: ಉದ್ಘಾಟನೆಗೊಂಡ ಕೆಲವೇ ನಿಮಿಷಗಳಲ್ಲಿ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಖಾಲಿಸ್ತಾನಿ ಬೆಂಬಲಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...