Homeಮುಖಪುಟಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಉಲ್ಲೇಖಿತ ಆರು ವಿಷಯಗಳ ಕುರಿತು ಮಾತುಕತೆ ಪುನರಾರಂಭಿಸುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

- Advertisement -
- Advertisement -

ರೈತ ವಿರೋಧಿ ಕರಾಳ ಕಾನೂನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಯ ಒಕ್ಕೂಟವಾದ ‘ಸಂಯುಕ್ತ ಕಿಸಾನ್ ಮೋರ್ಚಾ’ ಪ್ರಧಾನಿ ಮೋದಿಗೆ ಭಾನುವಾರ ಪತ್ರ ಬರೆದಿದ್ದು, ಅದರಲ್ಲಿ ಒಟ್ಟು ಆರು ವಿಷಯಗಳನ್ನು ಪ್ರಸ್ತಾಪಿಸಿದೆ. ಪತ್ರದಲ್ಲಿ ಉಲ್ಲೇಖಿತ ಆರು ವಿಷಯಗಳ ಕುರಿತು ತಕ್ಷಣವೆ ರೈತರೊಂದಿಗೆ ಮಾತುಕತೆಯನ್ನು ಪುನರಾರಂಭಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದು, ಅಲ್ಲಿಯವರೆಗೂ ಚಳವಳಿಯು ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

ಒಕ್ಕೂಟವು ತನ್ನ ಪತ್ರದಲ್ಲಿ, “11 ಸುತ್ತಿನ ಮಾತುಕತೆಗಳು ನಡೆದರೂ, ಸರ್ಕಾರ ದ್ವಿಪಕ್ಷೀಯ ಪರಿಹಾರಕ್ಕಿಂತ ಏಕಪಕ್ಷೀಯವಾಗಿ ಘೋಷಣೆಯನ್ನು ಮಾಡುತ್ತಲೇ ಬಂದಿದೆ ಎಂಬುವುದನ್ನು ನಾವು ಗಮನಿಸಿದ್ದೇವೆ. ಅದೇನೇ ಇದ್ದರೂ, ನೀವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಕ್ಕಾಗಿ ನಮಗೆ ಸಂತೋಷವಾಗಿದೆ. ನಾವು ಈ ಘೋಷಣೆಯನ್ನು ಸ್ವಾಗತಿಸುತ್ತೇವೆ ಮತ್ತು ನಿಮ್ಮ ಸರ್ಕಾರವು ಈ ಭರವಸೆಯನ್ನು ಶೀಘ್ರವಾಗಿ ಮತ್ತು ಪೂರ್ಣವಾಗಿ ಪೂರೈಸುತ್ತದೆ ಎಂದು ಭಾವಿಸುತ್ತೇವೆ” ಎಂದು ಹೇಳಿದೆ.

ಜೊತೆಗೆ, ಮೂರು ಕಾನೂನುಗಳನ್ನು ರದ್ದುಗೊಳಿಸುವುದು ಮಾತ್ರವೆ ಈ ಹೋರಾಟದ ಏಕೈಕ ಬೇಡಿಕೆಯಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಹೇಳಿರುವ ಪತ್ರವು, ಈ ಹಿಂದಿನಿಂದಲೂ ಕೇಳುತ್ತಿದ್ದ ಮೂರು ಬೇಡಿಕೆಯನ್ನು ಪ್ರಧಾನಿಗೆ ನೆನಪಿಸಿದೆ. ಅವುಗಳು ಕೆಳಗಿನಂತಿವೆ,

ಒಂದನೇ ಬೇಡಿಕೆಯಾಗಿ, “ಸಮಗ್ರ ಉತ್ಪಾದನಾ ವೆಚ್ಚದ (C2+50%) ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರಿಗೆ ಕಾನೂನುಬದ್ಧ ಅರ್ಹತೆಯಾಗಿ ಮಾಡಬೇಕು. ಇದರಿಂದಾಗಿ ದೇಶದ ಪ್ರತಿಯೊಬ್ಬ ರೈತನಿಗೆ ಸರ್ಕಾರವು ಘೋಷಿಸಿದ ಕನಿಷ್ಠ MSP ಯನ್ನು ಅವರ ಸಂಪೂರ್ಣ ಬೆಳೆಗೆ ಖಾತರಿಪಡಿಸಬಹುದು” ಎಂದು ಪತ್ರದಲ್ಲಿ ಒಕ್ಕೂಟವು ಹೇಳಿದೆ. ಜೊತೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು 2011 ರಲ್ಲಿ ಆಗಿನ ಪ್ರಧಾನಿಗೆ ಈ ಶಿಫಾರಸನ್ನು ಮಾಡಿತ್ತು ಮತ್ತು ಮೋದಿ ಸರ್ಕಾರವು ಈ ಬಗ್ಗೆ ಸಂಸತ್ತಿನಲ್ಲಿ ಘೋಷಿಸಿತ್ತು ಎಂದು ಪತ್ರದಲ್ಲಿ ರೈತ ಒಕ್ಕೂಟವು ನೆನಪಿದೆ.

ಎರಡನೇ ಬೇಡಿಕೆಯಾಗಿದೆ, “ಸರ್ಕಾರವು ಪ್ರಸ್ತಾಪಿಸಿರುವ ‘ವಿದ್ಯುತ್ ತಿದ್ದುಪಡಿ ಮಸೂದೆ, 2020/2021’ ಕರಡನ್ನು ಹಿಂತೆಗೆದುಕೊಳ್ಳಿ” ಎಂದು ಒತ್ತಾಯಿಸಿದೆ. ಈ ಹಿಂದೆನ ಮಾತುಕತೆಯಲ್ಲಿ, ಸರ್ಕಾರವು ಅದನ್ನು ಹಿಂತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು, ಆದರೆ ನಂತರ ಭರವಸೆಯನ್ನು ಉಲ್ಲಂಘನೆ ಮಾಡಲಾದ್ದು, ಅದನ್ನು ಸಂಸತ್ತಿನ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಪತ್ರವು ಉಲ್ಲೇಖಿಸಿದೆ.

ಮೂರನೇ ಬೇಡಿಕೆಯಾಗಿ, “ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿನ ‘ಕಮಿಷನ್ ಫಾರ್ ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ ಆಕ್ಟ್-2021’ ನಲ್ಲಿರುವ ರೈತರ ಮೇಲಿನ ದಂಡದ ನಿಬಂಧನೆಗಳನ್ನು ತೆಗೆದುಹಾಕಬೇಕು” ಎಂದು ಹೇಳಿದೆ. ಈ ಕಾಯ್ದೆಯಲ್ಲಿನ ಕೆಲವು ರೈತ ವಿರೋಧಿ ನಿಬಂಧನೆಗಳನ್ನು ಸರ್ಕಾರವು ತೆಗೆದುಹಾಕಲಾಗಿದೆ ಎಂದು ಹೇಳಿರುವ ರೈತ ಒಕ್ಕೂಟ, ಆದರೂ ಕಾಯ್ದೆಯ ಸೆಕ್ಷನ್‌‌ 15 ರ ಮೂಲಕ ದಂಡದ ನಿಬಂಧನೆಗಳನ್ನು ರೈತರನ್ನು ಮರಳಿ ತರಲಾಗಿದೆ ಎಂದು ಆರೋಪಿಸಿದೆ.

ಪ್ರಧಾನಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಈ ಪ್ರಮುಖ ಬೇಡಿಕೆಗಳ ಬಗ್ಗೆ ಸ್ಪಷ್ಟವಾದ ಘೋಷಣೆ ಇಲ್ಲದ ಕಾರಣ ರೈತರು ನಿರಾಶೆಗೊಂಡಿದ್ದಾರೆ ಎಂದು ರೈತ ಒಕ್ಕೂಟ ಹೇಳಿದೆ. ಈ ಐತಿಹಾಸಿಕ ಆಂದೋಲನದ ಮೂಲಕ ಮೂರು ಕಾನೂನುಗಳನ್ನು ರದ್ದಾಗುವುದರೊಂದಿಗೆ, ತಮ್ಮ ಕಠಿಣ ಪರಿಶ್ರಮಕ್ಕೆ ಫಲವಾಗಿ ಕನಿಷ್ಠ ಬೆಂಬಲದ ಕಾನೂನನ್ನು ಸಹ ಪಡೆಯುತ್ತಾರೆ ಎಂದು ರೈತರು ಆಶಿಸಿದ್ದರು ಎಂದು ರೈತ ಒಕ್ಕೂಟವು ಹೇಳಿದೆ.

ಇಷ್ಟೇ ಅಲ್ಲದೆ, ಕಳೆದ ಒಂದು ವರ್ಷದ ಐತಿಹಾಸಿಕ ಆಂದೋಲನದ ಸಂದರ್ಭದಲ್ಲಿ ಇತರ ಕೆಲವು ಸಮಸ್ಯೆಗಳೂ ಉದ್ಭವಿಸಿದ್ದು, ಅವುಗಳನ್ನು ತಕ್ಷಣವೇ ಪರಿಹರಿಸಬೇಕಾಗಿದೆ ಎಂದು ರೈತ ಒಕ್ಕೂಟ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದೆ.

ಮೊದಲನೇಯದಾಗಿ, “ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ರೈತರ ಮೇಲೆ ನೂರಾರು ಪ್ರಕರಣಗಳಾಗಿವೆ, ಕೂಡಲೇ ಈ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಪತ್ರವು ಒತ್ತಾಯಿಸಿದೆ.

ಎರಡನೆಯದಾಗಿ, “ಲಖಿಂಪುರ ಖೇರಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಅವರು ಇನ್ನೂ ಮುಕ್ತವಾಗಿ ತಿರುಗಾಡುತ್ತಿದ್ದು, ಕೇಂದ್ರದ ಸಂಪುಟದಲ್ಲಿ ಸಚಿವರಾಗಿ ಉಳಿದಿದ್ದಾರೆ. ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಿ ಬಂಧಿಸಬೇಕು” ಎಂದು ಪ್ರಧಾನಿಗೆ ಒತ್ತಾಯಿಸಲಾಗಿದೆ.

ಮೂರನೆಯದಾಗಿ, “ಈ ಆಂದೋಲನದ ಸಮಯದಲ್ಲಿ, ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನು ತಮ್ಮ ಪರಮ ತ್ಯಾಗವಾಗಿ ಅರ್ಪಿಸಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು. ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು” ಎಂದು ಪತ್ರವು ಪ್ರಧಾನಿಗೆ ಕೇಳಿದೆ.

ಪತ್ರದಲ್ಲಿ, “ನಾವು ಬೀದಿಗಳಲ್ಲಿ ಕುಳಿತುಕೊಳ್ಳಲು ಇಷ್ಟಪಡುವುದಿಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ. ಈ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಿದ ನಂತರ, ನಾವು ನಮ್ಮ ಮನೆಗಳು, ಕುಟುಂಬಗಳು ಮತ್ತು ಕೃಷಿಗೆ ಮರಳಬೇಕೆಂದು ನಾವು ಬಯಸುತ್ತೇವೆ. ನಿಮಗೂ ಅದೇ ಬೇಕಾದರೆ, ಮೇಲಿನ ಆರು ವಿಷಯಗಳ ಕುರಿತು ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ತಕ್ಷಣ ಮಾತುಕತೆಯನ್ನು ಪುನರಾರಂಭಿಸಬೇಕು. ಅಲ್ಲಿಯವರೆಗೂ ಸಂಯುಕ್ತ ಕಿಸಾನ್ ಮೋರ್ಚಾ ಈ ಚಳವಳಿಯನ್ನು ಮುಂದುವರೆಸಲಿದೆ” ಎಂದು ಪತ್ರವು ಉಲ್ಲೇಖೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...