Homeಮುಖಪುಟಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಉಲ್ಲೇಖಿತ ಆರು ವಿಷಯಗಳ ಕುರಿತು ಮಾತುಕತೆ ಪುನರಾರಂಭಿಸುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

- Advertisement -
- Advertisement -

ರೈತ ವಿರೋಧಿ ಕರಾಳ ಕಾನೂನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಯ ಒಕ್ಕೂಟವಾದ ‘ಸಂಯುಕ್ತ ಕಿಸಾನ್ ಮೋರ್ಚಾ’ ಪ್ರಧಾನಿ ಮೋದಿಗೆ ಭಾನುವಾರ ಪತ್ರ ಬರೆದಿದ್ದು, ಅದರಲ್ಲಿ ಒಟ್ಟು ಆರು ವಿಷಯಗಳನ್ನು ಪ್ರಸ್ತಾಪಿಸಿದೆ. ಪತ್ರದಲ್ಲಿ ಉಲ್ಲೇಖಿತ ಆರು ವಿಷಯಗಳ ಕುರಿತು ತಕ್ಷಣವೆ ರೈತರೊಂದಿಗೆ ಮಾತುಕತೆಯನ್ನು ಪುನರಾರಂಭಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದು, ಅಲ್ಲಿಯವರೆಗೂ ಚಳವಳಿಯು ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

ಒಕ್ಕೂಟವು ತನ್ನ ಪತ್ರದಲ್ಲಿ, “11 ಸುತ್ತಿನ ಮಾತುಕತೆಗಳು ನಡೆದರೂ, ಸರ್ಕಾರ ದ್ವಿಪಕ್ಷೀಯ ಪರಿಹಾರಕ್ಕಿಂತ ಏಕಪಕ್ಷೀಯವಾಗಿ ಘೋಷಣೆಯನ್ನು ಮಾಡುತ್ತಲೇ ಬಂದಿದೆ ಎಂಬುವುದನ್ನು ನಾವು ಗಮನಿಸಿದ್ದೇವೆ. ಅದೇನೇ ಇದ್ದರೂ, ನೀವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಕ್ಕಾಗಿ ನಮಗೆ ಸಂತೋಷವಾಗಿದೆ. ನಾವು ಈ ಘೋಷಣೆಯನ್ನು ಸ್ವಾಗತಿಸುತ್ತೇವೆ ಮತ್ತು ನಿಮ್ಮ ಸರ್ಕಾರವು ಈ ಭರವಸೆಯನ್ನು ಶೀಘ್ರವಾಗಿ ಮತ್ತು ಪೂರ್ಣವಾಗಿ ಪೂರೈಸುತ್ತದೆ ಎಂದು ಭಾವಿಸುತ್ತೇವೆ” ಎಂದು ಹೇಳಿದೆ.

ಜೊತೆಗೆ, ಮೂರು ಕಾನೂನುಗಳನ್ನು ರದ್ದುಗೊಳಿಸುವುದು ಮಾತ್ರವೆ ಈ ಹೋರಾಟದ ಏಕೈಕ ಬೇಡಿಕೆಯಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಹೇಳಿರುವ ಪತ್ರವು, ಈ ಹಿಂದಿನಿಂದಲೂ ಕೇಳುತ್ತಿದ್ದ ಮೂರು ಬೇಡಿಕೆಯನ್ನು ಪ್ರಧಾನಿಗೆ ನೆನಪಿಸಿದೆ. ಅವುಗಳು ಕೆಳಗಿನಂತಿವೆ,

ಒಂದನೇ ಬೇಡಿಕೆಯಾಗಿ, “ಸಮಗ್ರ ಉತ್ಪಾದನಾ ವೆಚ್ಚದ (C2+50%) ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರಿಗೆ ಕಾನೂನುಬದ್ಧ ಅರ್ಹತೆಯಾಗಿ ಮಾಡಬೇಕು. ಇದರಿಂದಾಗಿ ದೇಶದ ಪ್ರತಿಯೊಬ್ಬ ರೈತನಿಗೆ ಸರ್ಕಾರವು ಘೋಷಿಸಿದ ಕನಿಷ್ಠ MSP ಯನ್ನು ಅವರ ಸಂಪೂರ್ಣ ಬೆಳೆಗೆ ಖಾತರಿಪಡಿಸಬಹುದು” ಎಂದು ಪತ್ರದಲ್ಲಿ ಒಕ್ಕೂಟವು ಹೇಳಿದೆ. ಜೊತೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು 2011 ರಲ್ಲಿ ಆಗಿನ ಪ್ರಧಾನಿಗೆ ಈ ಶಿಫಾರಸನ್ನು ಮಾಡಿತ್ತು ಮತ್ತು ಮೋದಿ ಸರ್ಕಾರವು ಈ ಬಗ್ಗೆ ಸಂಸತ್ತಿನಲ್ಲಿ ಘೋಷಿಸಿತ್ತು ಎಂದು ಪತ್ರದಲ್ಲಿ ರೈತ ಒಕ್ಕೂಟವು ನೆನಪಿದೆ.

ಎರಡನೇ ಬೇಡಿಕೆಯಾಗಿದೆ, “ಸರ್ಕಾರವು ಪ್ರಸ್ತಾಪಿಸಿರುವ ‘ವಿದ್ಯುತ್ ತಿದ್ದುಪಡಿ ಮಸೂದೆ, 2020/2021’ ಕರಡನ್ನು ಹಿಂತೆಗೆದುಕೊಳ್ಳಿ” ಎಂದು ಒತ್ತಾಯಿಸಿದೆ. ಈ ಹಿಂದೆನ ಮಾತುಕತೆಯಲ್ಲಿ, ಸರ್ಕಾರವು ಅದನ್ನು ಹಿಂತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು, ಆದರೆ ನಂತರ ಭರವಸೆಯನ್ನು ಉಲ್ಲಂಘನೆ ಮಾಡಲಾದ್ದು, ಅದನ್ನು ಸಂಸತ್ತಿನ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಪತ್ರವು ಉಲ್ಲೇಖಿಸಿದೆ.

ಮೂರನೇ ಬೇಡಿಕೆಯಾಗಿ, “ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿನ ‘ಕಮಿಷನ್ ಫಾರ್ ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ ಆಕ್ಟ್-2021’ ನಲ್ಲಿರುವ ರೈತರ ಮೇಲಿನ ದಂಡದ ನಿಬಂಧನೆಗಳನ್ನು ತೆಗೆದುಹಾಕಬೇಕು” ಎಂದು ಹೇಳಿದೆ. ಈ ಕಾಯ್ದೆಯಲ್ಲಿನ ಕೆಲವು ರೈತ ವಿರೋಧಿ ನಿಬಂಧನೆಗಳನ್ನು ಸರ್ಕಾರವು ತೆಗೆದುಹಾಕಲಾಗಿದೆ ಎಂದು ಹೇಳಿರುವ ರೈತ ಒಕ್ಕೂಟ, ಆದರೂ ಕಾಯ್ದೆಯ ಸೆಕ್ಷನ್‌‌ 15 ರ ಮೂಲಕ ದಂಡದ ನಿಬಂಧನೆಗಳನ್ನು ರೈತರನ್ನು ಮರಳಿ ತರಲಾಗಿದೆ ಎಂದು ಆರೋಪಿಸಿದೆ.

ಪ್ರಧಾನಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಈ ಪ್ರಮುಖ ಬೇಡಿಕೆಗಳ ಬಗ್ಗೆ ಸ್ಪಷ್ಟವಾದ ಘೋಷಣೆ ಇಲ್ಲದ ಕಾರಣ ರೈತರು ನಿರಾಶೆಗೊಂಡಿದ್ದಾರೆ ಎಂದು ರೈತ ಒಕ್ಕೂಟ ಹೇಳಿದೆ. ಈ ಐತಿಹಾಸಿಕ ಆಂದೋಲನದ ಮೂಲಕ ಮೂರು ಕಾನೂನುಗಳನ್ನು ರದ್ದಾಗುವುದರೊಂದಿಗೆ, ತಮ್ಮ ಕಠಿಣ ಪರಿಶ್ರಮಕ್ಕೆ ಫಲವಾಗಿ ಕನಿಷ್ಠ ಬೆಂಬಲದ ಕಾನೂನನ್ನು ಸಹ ಪಡೆಯುತ್ತಾರೆ ಎಂದು ರೈತರು ಆಶಿಸಿದ್ದರು ಎಂದು ರೈತ ಒಕ್ಕೂಟವು ಹೇಳಿದೆ.

ಇಷ್ಟೇ ಅಲ್ಲದೆ, ಕಳೆದ ಒಂದು ವರ್ಷದ ಐತಿಹಾಸಿಕ ಆಂದೋಲನದ ಸಂದರ್ಭದಲ್ಲಿ ಇತರ ಕೆಲವು ಸಮಸ್ಯೆಗಳೂ ಉದ್ಭವಿಸಿದ್ದು, ಅವುಗಳನ್ನು ತಕ್ಷಣವೇ ಪರಿಹರಿಸಬೇಕಾಗಿದೆ ಎಂದು ರೈತ ಒಕ್ಕೂಟ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದೆ.

ಮೊದಲನೇಯದಾಗಿ, “ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ರೈತರ ಮೇಲೆ ನೂರಾರು ಪ್ರಕರಣಗಳಾಗಿವೆ, ಕೂಡಲೇ ಈ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಪತ್ರವು ಒತ್ತಾಯಿಸಿದೆ.

ಎರಡನೆಯದಾಗಿ, “ಲಖಿಂಪುರ ಖೇರಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಅವರು ಇನ್ನೂ ಮುಕ್ತವಾಗಿ ತಿರುಗಾಡುತ್ತಿದ್ದು, ಕೇಂದ್ರದ ಸಂಪುಟದಲ್ಲಿ ಸಚಿವರಾಗಿ ಉಳಿದಿದ್ದಾರೆ. ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಿ ಬಂಧಿಸಬೇಕು” ಎಂದು ಪ್ರಧಾನಿಗೆ ಒತ್ತಾಯಿಸಲಾಗಿದೆ.

ಮೂರನೆಯದಾಗಿ, “ಈ ಆಂದೋಲನದ ಸಮಯದಲ್ಲಿ, ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನು ತಮ್ಮ ಪರಮ ತ್ಯಾಗವಾಗಿ ಅರ್ಪಿಸಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು. ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು” ಎಂದು ಪತ್ರವು ಪ್ರಧಾನಿಗೆ ಕೇಳಿದೆ.

ಪತ್ರದಲ್ಲಿ, “ನಾವು ಬೀದಿಗಳಲ್ಲಿ ಕುಳಿತುಕೊಳ್ಳಲು ಇಷ್ಟಪಡುವುದಿಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ. ಈ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಿದ ನಂತರ, ನಾವು ನಮ್ಮ ಮನೆಗಳು, ಕುಟುಂಬಗಳು ಮತ್ತು ಕೃಷಿಗೆ ಮರಳಬೇಕೆಂದು ನಾವು ಬಯಸುತ್ತೇವೆ. ನಿಮಗೂ ಅದೇ ಬೇಕಾದರೆ, ಮೇಲಿನ ಆರು ವಿಷಯಗಳ ಕುರಿತು ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ತಕ್ಷಣ ಮಾತುಕತೆಯನ್ನು ಪುನರಾರಂಭಿಸಬೇಕು. ಅಲ್ಲಿಯವರೆಗೂ ಸಂಯುಕ್ತ ಕಿಸಾನ್ ಮೋರ್ಚಾ ಈ ಚಳವಳಿಯನ್ನು ಮುಂದುವರೆಸಲಿದೆ” ಎಂದು ಪತ್ರವು ಉಲ್ಲೇಖೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....