Homeಮುಖಪುಟಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಉಲ್ಲೇಖಿತ ಆರು ವಿಷಯಗಳ ಕುರಿತು ಮಾತುಕತೆ ಪುನರಾರಂಭಿಸುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

- Advertisement -
- Advertisement -

ರೈತ ವಿರೋಧಿ ಕರಾಳ ಕಾನೂನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಯ ಒಕ್ಕೂಟವಾದ ‘ಸಂಯುಕ್ತ ಕಿಸಾನ್ ಮೋರ್ಚಾ’ ಪ್ರಧಾನಿ ಮೋದಿಗೆ ಭಾನುವಾರ ಪತ್ರ ಬರೆದಿದ್ದು, ಅದರಲ್ಲಿ ಒಟ್ಟು ಆರು ವಿಷಯಗಳನ್ನು ಪ್ರಸ್ತಾಪಿಸಿದೆ. ಪತ್ರದಲ್ಲಿ ಉಲ್ಲೇಖಿತ ಆರು ವಿಷಯಗಳ ಕುರಿತು ತಕ್ಷಣವೆ ರೈತರೊಂದಿಗೆ ಮಾತುಕತೆಯನ್ನು ಪುನರಾರಂಭಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದು, ಅಲ್ಲಿಯವರೆಗೂ ಚಳವಳಿಯು ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

ಒಕ್ಕೂಟವು ತನ್ನ ಪತ್ರದಲ್ಲಿ, “11 ಸುತ್ತಿನ ಮಾತುಕತೆಗಳು ನಡೆದರೂ, ಸರ್ಕಾರ ದ್ವಿಪಕ್ಷೀಯ ಪರಿಹಾರಕ್ಕಿಂತ ಏಕಪಕ್ಷೀಯವಾಗಿ ಘೋಷಣೆಯನ್ನು ಮಾಡುತ್ತಲೇ ಬಂದಿದೆ ಎಂಬುವುದನ್ನು ನಾವು ಗಮನಿಸಿದ್ದೇವೆ. ಅದೇನೇ ಇದ್ದರೂ, ನೀವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಕ್ಕಾಗಿ ನಮಗೆ ಸಂತೋಷವಾಗಿದೆ. ನಾವು ಈ ಘೋಷಣೆಯನ್ನು ಸ್ವಾಗತಿಸುತ್ತೇವೆ ಮತ್ತು ನಿಮ್ಮ ಸರ್ಕಾರವು ಈ ಭರವಸೆಯನ್ನು ಶೀಘ್ರವಾಗಿ ಮತ್ತು ಪೂರ್ಣವಾಗಿ ಪೂರೈಸುತ್ತದೆ ಎಂದು ಭಾವಿಸುತ್ತೇವೆ” ಎಂದು ಹೇಳಿದೆ.

ಜೊತೆಗೆ, ಮೂರು ಕಾನೂನುಗಳನ್ನು ರದ್ದುಗೊಳಿಸುವುದು ಮಾತ್ರವೆ ಈ ಹೋರಾಟದ ಏಕೈಕ ಬೇಡಿಕೆಯಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಹೇಳಿರುವ ಪತ್ರವು, ಈ ಹಿಂದಿನಿಂದಲೂ ಕೇಳುತ್ತಿದ್ದ ಮೂರು ಬೇಡಿಕೆಯನ್ನು ಪ್ರಧಾನಿಗೆ ನೆನಪಿಸಿದೆ. ಅವುಗಳು ಕೆಳಗಿನಂತಿವೆ,

ಒಂದನೇ ಬೇಡಿಕೆಯಾಗಿ, “ಸಮಗ್ರ ಉತ್ಪಾದನಾ ವೆಚ್ಚದ (C2+50%) ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರಿಗೆ ಕಾನೂನುಬದ್ಧ ಅರ್ಹತೆಯಾಗಿ ಮಾಡಬೇಕು. ಇದರಿಂದಾಗಿ ದೇಶದ ಪ್ರತಿಯೊಬ್ಬ ರೈತನಿಗೆ ಸರ್ಕಾರವು ಘೋಷಿಸಿದ ಕನಿಷ್ಠ MSP ಯನ್ನು ಅವರ ಸಂಪೂರ್ಣ ಬೆಳೆಗೆ ಖಾತರಿಪಡಿಸಬಹುದು” ಎಂದು ಪತ್ರದಲ್ಲಿ ಒಕ್ಕೂಟವು ಹೇಳಿದೆ. ಜೊತೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು 2011 ರಲ್ಲಿ ಆಗಿನ ಪ್ರಧಾನಿಗೆ ಈ ಶಿಫಾರಸನ್ನು ಮಾಡಿತ್ತು ಮತ್ತು ಮೋದಿ ಸರ್ಕಾರವು ಈ ಬಗ್ಗೆ ಸಂಸತ್ತಿನಲ್ಲಿ ಘೋಷಿಸಿತ್ತು ಎಂದು ಪತ್ರದಲ್ಲಿ ರೈತ ಒಕ್ಕೂಟವು ನೆನಪಿದೆ.

ಎರಡನೇ ಬೇಡಿಕೆಯಾಗಿದೆ, “ಸರ್ಕಾರವು ಪ್ರಸ್ತಾಪಿಸಿರುವ ‘ವಿದ್ಯುತ್ ತಿದ್ದುಪಡಿ ಮಸೂದೆ, 2020/2021’ ಕರಡನ್ನು ಹಿಂತೆಗೆದುಕೊಳ್ಳಿ” ಎಂದು ಒತ್ತಾಯಿಸಿದೆ. ಈ ಹಿಂದೆನ ಮಾತುಕತೆಯಲ್ಲಿ, ಸರ್ಕಾರವು ಅದನ್ನು ಹಿಂತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು, ಆದರೆ ನಂತರ ಭರವಸೆಯನ್ನು ಉಲ್ಲಂಘನೆ ಮಾಡಲಾದ್ದು, ಅದನ್ನು ಸಂಸತ್ತಿನ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಪತ್ರವು ಉಲ್ಲೇಖಿಸಿದೆ.

ಮೂರನೇ ಬೇಡಿಕೆಯಾಗಿ, “ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿನ ‘ಕಮಿಷನ್ ಫಾರ್ ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ ಆಕ್ಟ್-2021’ ನಲ್ಲಿರುವ ರೈತರ ಮೇಲಿನ ದಂಡದ ನಿಬಂಧನೆಗಳನ್ನು ತೆಗೆದುಹಾಕಬೇಕು” ಎಂದು ಹೇಳಿದೆ. ಈ ಕಾಯ್ದೆಯಲ್ಲಿನ ಕೆಲವು ರೈತ ವಿರೋಧಿ ನಿಬಂಧನೆಗಳನ್ನು ಸರ್ಕಾರವು ತೆಗೆದುಹಾಕಲಾಗಿದೆ ಎಂದು ಹೇಳಿರುವ ರೈತ ಒಕ್ಕೂಟ, ಆದರೂ ಕಾಯ್ದೆಯ ಸೆಕ್ಷನ್‌‌ 15 ರ ಮೂಲಕ ದಂಡದ ನಿಬಂಧನೆಗಳನ್ನು ರೈತರನ್ನು ಮರಳಿ ತರಲಾಗಿದೆ ಎಂದು ಆರೋಪಿಸಿದೆ.

ಪ್ರಧಾನಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಈ ಪ್ರಮುಖ ಬೇಡಿಕೆಗಳ ಬಗ್ಗೆ ಸ್ಪಷ್ಟವಾದ ಘೋಷಣೆ ಇಲ್ಲದ ಕಾರಣ ರೈತರು ನಿರಾಶೆಗೊಂಡಿದ್ದಾರೆ ಎಂದು ರೈತ ಒಕ್ಕೂಟ ಹೇಳಿದೆ. ಈ ಐತಿಹಾಸಿಕ ಆಂದೋಲನದ ಮೂಲಕ ಮೂರು ಕಾನೂನುಗಳನ್ನು ರದ್ದಾಗುವುದರೊಂದಿಗೆ, ತಮ್ಮ ಕಠಿಣ ಪರಿಶ್ರಮಕ್ಕೆ ಫಲವಾಗಿ ಕನಿಷ್ಠ ಬೆಂಬಲದ ಕಾನೂನನ್ನು ಸಹ ಪಡೆಯುತ್ತಾರೆ ಎಂದು ರೈತರು ಆಶಿಸಿದ್ದರು ಎಂದು ರೈತ ಒಕ್ಕೂಟವು ಹೇಳಿದೆ.

ಇಷ್ಟೇ ಅಲ್ಲದೆ, ಕಳೆದ ಒಂದು ವರ್ಷದ ಐತಿಹಾಸಿಕ ಆಂದೋಲನದ ಸಂದರ್ಭದಲ್ಲಿ ಇತರ ಕೆಲವು ಸಮಸ್ಯೆಗಳೂ ಉದ್ಭವಿಸಿದ್ದು, ಅವುಗಳನ್ನು ತಕ್ಷಣವೇ ಪರಿಹರಿಸಬೇಕಾಗಿದೆ ಎಂದು ರೈತ ಒಕ್ಕೂಟ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದೆ.

ಮೊದಲನೇಯದಾಗಿ, “ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ರೈತರ ಮೇಲೆ ನೂರಾರು ಪ್ರಕರಣಗಳಾಗಿವೆ, ಕೂಡಲೇ ಈ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಪತ್ರವು ಒತ್ತಾಯಿಸಿದೆ.

ಎರಡನೆಯದಾಗಿ, “ಲಖಿಂಪುರ ಖೇರಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಅವರು ಇನ್ನೂ ಮುಕ್ತವಾಗಿ ತಿರುಗಾಡುತ್ತಿದ್ದು, ಕೇಂದ್ರದ ಸಂಪುಟದಲ್ಲಿ ಸಚಿವರಾಗಿ ಉಳಿದಿದ್ದಾರೆ. ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಿ ಬಂಧಿಸಬೇಕು” ಎಂದು ಪ್ರಧಾನಿಗೆ ಒತ್ತಾಯಿಸಲಾಗಿದೆ.

ಮೂರನೆಯದಾಗಿ, “ಈ ಆಂದೋಲನದ ಸಮಯದಲ್ಲಿ, ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನು ತಮ್ಮ ಪರಮ ತ್ಯಾಗವಾಗಿ ಅರ್ಪಿಸಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು. ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು” ಎಂದು ಪತ್ರವು ಪ್ರಧಾನಿಗೆ ಕೇಳಿದೆ.

ಪತ್ರದಲ್ಲಿ, “ನಾವು ಬೀದಿಗಳಲ್ಲಿ ಕುಳಿತುಕೊಳ್ಳಲು ಇಷ್ಟಪಡುವುದಿಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ. ಈ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಿದ ನಂತರ, ನಾವು ನಮ್ಮ ಮನೆಗಳು, ಕುಟುಂಬಗಳು ಮತ್ತು ಕೃಷಿಗೆ ಮರಳಬೇಕೆಂದು ನಾವು ಬಯಸುತ್ತೇವೆ. ನಿಮಗೂ ಅದೇ ಬೇಕಾದರೆ, ಮೇಲಿನ ಆರು ವಿಷಯಗಳ ಕುರಿತು ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ತಕ್ಷಣ ಮಾತುಕತೆಯನ್ನು ಪುನರಾರಂಭಿಸಬೇಕು. ಅಲ್ಲಿಯವರೆಗೂ ಸಂಯುಕ್ತ ಕಿಸಾನ್ ಮೋರ್ಚಾ ಈ ಚಳವಳಿಯನ್ನು ಮುಂದುವರೆಸಲಿದೆ” ಎಂದು ಪತ್ರವು ಉಲ್ಲೇಖೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...