Homeಮುಖಪುಟಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಉಲ್ಲೇಖಿತ ಆರು ವಿಷಯಗಳ ಕುರಿತು ಮಾತುಕತೆ ಪುನರಾರಂಭಿಸುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

- Advertisement -
- Advertisement -

ರೈತ ವಿರೋಧಿ ಕರಾಳ ಕಾನೂನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಯ ಒಕ್ಕೂಟವಾದ ‘ಸಂಯುಕ್ತ ಕಿಸಾನ್ ಮೋರ್ಚಾ’ ಪ್ರಧಾನಿ ಮೋದಿಗೆ ಭಾನುವಾರ ಪತ್ರ ಬರೆದಿದ್ದು, ಅದರಲ್ಲಿ ಒಟ್ಟು ಆರು ವಿಷಯಗಳನ್ನು ಪ್ರಸ್ತಾಪಿಸಿದೆ. ಪತ್ರದಲ್ಲಿ ಉಲ್ಲೇಖಿತ ಆರು ವಿಷಯಗಳ ಕುರಿತು ತಕ್ಷಣವೆ ರೈತರೊಂದಿಗೆ ಮಾತುಕತೆಯನ್ನು ಪುನರಾರಂಭಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದು, ಅಲ್ಲಿಯವರೆಗೂ ಚಳವಳಿಯು ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

ಒಕ್ಕೂಟವು ತನ್ನ ಪತ್ರದಲ್ಲಿ, “11 ಸುತ್ತಿನ ಮಾತುಕತೆಗಳು ನಡೆದರೂ, ಸರ್ಕಾರ ದ್ವಿಪಕ್ಷೀಯ ಪರಿಹಾರಕ್ಕಿಂತ ಏಕಪಕ್ಷೀಯವಾಗಿ ಘೋಷಣೆಯನ್ನು ಮಾಡುತ್ತಲೇ ಬಂದಿದೆ ಎಂಬುವುದನ್ನು ನಾವು ಗಮನಿಸಿದ್ದೇವೆ. ಅದೇನೇ ಇದ್ದರೂ, ನೀವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಕ್ಕಾಗಿ ನಮಗೆ ಸಂತೋಷವಾಗಿದೆ. ನಾವು ಈ ಘೋಷಣೆಯನ್ನು ಸ್ವಾಗತಿಸುತ್ತೇವೆ ಮತ್ತು ನಿಮ್ಮ ಸರ್ಕಾರವು ಈ ಭರವಸೆಯನ್ನು ಶೀಘ್ರವಾಗಿ ಮತ್ತು ಪೂರ್ಣವಾಗಿ ಪೂರೈಸುತ್ತದೆ ಎಂದು ಭಾವಿಸುತ್ತೇವೆ” ಎಂದು ಹೇಳಿದೆ.

ಜೊತೆಗೆ, ಮೂರು ಕಾನೂನುಗಳನ್ನು ರದ್ದುಗೊಳಿಸುವುದು ಮಾತ್ರವೆ ಈ ಹೋರಾಟದ ಏಕೈಕ ಬೇಡಿಕೆಯಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಹೇಳಿರುವ ಪತ್ರವು, ಈ ಹಿಂದಿನಿಂದಲೂ ಕೇಳುತ್ತಿದ್ದ ಮೂರು ಬೇಡಿಕೆಯನ್ನು ಪ್ರಧಾನಿಗೆ ನೆನಪಿಸಿದೆ. ಅವುಗಳು ಕೆಳಗಿನಂತಿವೆ,

ಒಂದನೇ ಬೇಡಿಕೆಯಾಗಿ, “ಸಮಗ್ರ ಉತ್ಪಾದನಾ ವೆಚ್ಚದ (C2+50%) ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರಿಗೆ ಕಾನೂನುಬದ್ಧ ಅರ್ಹತೆಯಾಗಿ ಮಾಡಬೇಕು. ಇದರಿಂದಾಗಿ ದೇಶದ ಪ್ರತಿಯೊಬ್ಬ ರೈತನಿಗೆ ಸರ್ಕಾರವು ಘೋಷಿಸಿದ ಕನಿಷ್ಠ MSP ಯನ್ನು ಅವರ ಸಂಪೂರ್ಣ ಬೆಳೆಗೆ ಖಾತರಿಪಡಿಸಬಹುದು” ಎಂದು ಪತ್ರದಲ್ಲಿ ಒಕ್ಕೂಟವು ಹೇಳಿದೆ. ಜೊತೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು 2011 ರಲ್ಲಿ ಆಗಿನ ಪ್ರಧಾನಿಗೆ ಈ ಶಿಫಾರಸನ್ನು ಮಾಡಿತ್ತು ಮತ್ತು ಮೋದಿ ಸರ್ಕಾರವು ಈ ಬಗ್ಗೆ ಸಂಸತ್ತಿನಲ್ಲಿ ಘೋಷಿಸಿತ್ತು ಎಂದು ಪತ್ರದಲ್ಲಿ ರೈತ ಒಕ್ಕೂಟವು ನೆನಪಿದೆ.

ಎರಡನೇ ಬೇಡಿಕೆಯಾಗಿದೆ, “ಸರ್ಕಾರವು ಪ್ರಸ್ತಾಪಿಸಿರುವ ‘ವಿದ್ಯುತ್ ತಿದ್ದುಪಡಿ ಮಸೂದೆ, 2020/2021’ ಕರಡನ್ನು ಹಿಂತೆಗೆದುಕೊಳ್ಳಿ” ಎಂದು ಒತ್ತಾಯಿಸಿದೆ. ಈ ಹಿಂದೆನ ಮಾತುಕತೆಯಲ್ಲಿ, ಸರ್ಕಾರವು ಅದನ್ನು ಹಿಂತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು, ಆದರೆ ನಂತರ ಭರವಸೆಯನ್ನು ಉಲ್ಲಂಘನೆ ಮಾಡಲಾದ್ದು, ಅದನ್ನು ಸಂಸತ್ತಿನ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಪತ್ರವು ಉಲ್ಲೇಖಿಸಿದೆ.

ಮೂರನೇ ಬೇಡಿಕೆಯಾಗಿ, “ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿನ ‘ಕಮಿಷನ್ ಫಾರ್ ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ ಆಕ್ಟ್-2021’ ನಲ್ಲಿರುವ ರೈತರ ಮೇಲಿನ ದಂಡದ ನಿಬಂಧನೆಗಳನ್ನು ತೆಗೆದುಹಾಕಬೇಕು” ಎಂದು ಹೇಳಿದೆ. ಈ ಕಾಯ್ದೆಯಲ್ಲಿನ ಕೆಲವು ರೈತ ವಿರೋಧಿ ನಿಬಂಧನೆಗಳನ್ನು ಸರ್ಕಾರವು ತೆಗೆದುಹಾಕಲಾಗಿದೆ ಎಂದು ಹೇಳಿರುವ ರೈತ ಒಕ್ಕೂಟ, ಆದರೂ ಕಾಯ್ದೆಯ ಸೆಕ್ಷನ್‌‌ 15 ರ ಮೂಲಕ ದಂಡದ ನಿಬಂಧನೆಗಳನ್ನು ರೈತರನ್ನು ಮರಳಿ ತರಲಾಗಿದೆ ಎಂದು ಆರೋಪಿಸಿದೆ.

ಪ್ರಧಾನಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಈ ಪ್ರಮುಖ ಬೇಡಿಕೆಗಳ ಬಗ್ಗೆ ಸ್ಪಷ್ಟವಾದ ಘೋಷಣೆ ಇಲ್ಲದ ಕಾರಣ ರೈತರು ನಿರಾಶೆಗೊಂಡಿದ್ದಾರೆ ಎಂದು ರೈತ ಒಕ್ಕೂಟ ಹೇಳಿದೆ. ಈ ಐತಿಹಾಸಿಕ ಆಂದೋಲನದ ಮೂಲಕ ಮೂರು ಕಾನೂನುಗಳನ್ನು ರದ್ದಾಗುವುದರೊಂದಿಗೆ, ತಮ್ಮ ಕಠಿಣ ಪರಿಶ್ರಮಕ್ಕೆ ಫಲವಾಗಿ ಕನಿಷ್ಠ ಬೆಂಬಲದ ಕಾನೂನನ್ನು ಸಹ ಪಡೆಯುತ್ತಾರೆ ಎಂದು ರೈತರು ಆಶಿಸಿದ್ದರು ಎಂದು ರೈತ ಒಕ್ಕೂಟವು ಹೇಳಿದೆ.

ಇಷ್ಟೇ ಅಲ್ಲದೆ, ಕಳೆದ ಒಂದು ವರ್ಷದ ಐತಿಹಾಸಿಕ ಆಂದೋಲನದ ಸಂದರ್ಭದಲ್ಲಿ ಇತರ ಕೆಲವು ಸಮಸ್ಯೆಗಳೂ ಉದ್ಭವಿಸಿದ್ದು, ಅವುಗಳನ್ನು ತಕ್ಷಣವೇ ಪರಿಹರಿಸಬೇಕಾಗಿದೆ ಎಂದು ರೈತ ಒಕ್ಕೂಟ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದೆ.

ಮೊದಲನೇಯದಾಗಿ, “ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ರೈತರ ಮೇಲೆ ನೂರಾರು ಪ್ರಕರಣಗಳಾಗಿವೆ, ಕೂಡಲೇ ಈ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಪತ್ರವು ಒತ್ತಾಯಿಸಿದೆ.

ಎರಡನೆಯದಾಗಿ, “ಲಖಿಂಪುರ ಖೇರಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಅವರು ಇನ್ನೂ ಮುಕ್ತವಾಗಿ ತಿರುಗಾಡುತ್ತಿದ್ದು, ಕೇಂದ್ರದ ಸಂಪುಟದಲ್ಲಿ ಸಚಿವರಾಗಿ ಉಳಿದಿದ್ದಾರೆ. ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಿ ಬಂಧಿಸಬೇಕು” ಎಂದು ಪ್ರಧಾನಿಗೆ ಒತ್ತಾಯಿಸಲಾಗಿದೆ.

ಮೂರನೆಯದಾಗಿ, “ಈ ಆಂದೋಲನದ ಸಮಯದಲ್ಲಿ, ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನು ತಮ್ಮ ಪರಮ ತ್ಯಾಗವಾಗಿ ಅರ್ಪಿಸಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು. ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು” ಎಂದು ಪತ್ರವು ಪ್ರಧಾನಿಗೆ ಕೇಳಿದೆ.

ಪತ್ರದಲ್ಲಿ, “ನಾವು ಬೀದಿಗಳಲ್ಲಿ ಕುಳಿತುಕೊಳ್ಳಲು ಇಷ್ಟಪಡುವುದಿಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ. ಈ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಿದ ನಂತರ, ನಾವು ನಮ್ಮ ಮನೆಗಳು, ಕುಟುಂಬಗಳು ಮತ್ತು ಕೃಷಿಗೆ ಮರಳಬೇಕೆಂದು ನಾವು ಬಯಸುತ್ತೇವೆ. ನಿಮಗೂ ಅದೇ ಬೇಕಾದರೆ, ಮೇಲಿನ ಆರು ವಿಷಯಗಳ ಕುರಿತು ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ತಕ್ಷಣ ಮಾತುಕತೆಯನ್ನು ಪುನರಾರಂಭಿಸಬೇಕು. ಅಲ್ಲಿಯವರೆಗೂ ಸಂಯುಕ್ತ ಕಿಸಾನ್ ಮೋರ್ಚಾ ಈ ಚಳವಳಿಯನ್ನು ಮುಂದುವರೆಸಲಿದೆ” ಎಂದು ಪತ್ರವು ಉಲ್ಲೇಖೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...