Homeಮುಖಪುಟಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಉಲ್ಲೇಖಿತ ಆರು ವಿಷಯಗಳ ಕುರಿತು ಮಾತುಕತೆ ಪುನರಾರಂಭಿಸುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

- Advertisement -
- Advertisement -

ರೈತ ವಿರೋಧಿ ಕರಾಳ ಕಾನೂನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಯ ಒಕ್ಕೂಟವಾದ ‘ಸಂಯುಕ್ತ ಕಿಸಾನ್ ಮೋರ್ಚಾ’ ಪ್ರಧಾನಿ ಮೋದಿಗೆ ಭಾನುವಾರ ಪತ್ರ ಬರೆದಿದ್ದು, ಅದರಲ್ಲಿ ಒಟ್ಟು ಆರು ವಿಷಯಗಳನ್ನು ಪ್ರಸ್ತಾಪಿಸಿದೆ. ಪತ್ರದಲ್ಲಿ ಉಲ್ಲೇಖಿತ ಆರು ವಿಷಯಗಳ ಕುರಿತು ತಕ್ಷಣವೆ ರೈತರೊಂದಿಗೆ ಮಾತುಕತೆಯನ್ನು ಪುನರಾರಂಭಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದು, ಅಲ್ಲಿಯವರೆಗೂ ಚಳವಳಿಯು ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

ಒಕ್ಕೂಟವು ತನ್ನ ಪತ್ರದಲ್ಲಿ, “11 ಸುತ್ತಿನ ಮಾತುಕತೆಗಳು ನಡೆದರೂ, ಸರ್ಕಾರ ದ್ವಿಪಕ್ಷೀಯ ಪರಿಹಾರಕ್ಕಿಂತ ಏಕಪಕ್ಷೀಯವಾಗಿ ಘೋಷಣೆಯನ್ನು ಮಾಡುತ್ತಲೇ ಬಂದಿದೆ ಎಂಬುವುದನ್ನು ನಾವು ಗಮನಿಸಿದ್ದೇವೆ. ಅದೇನೇ ಇದ್ದರೂ, ನೀವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಕ್ಕಾಗಿ ನಮಗೆ ಸಂತೋಷವಾಗಿದೆ. ನಾವು ಈ ಘೋಷಣೆಯನ್ನು ಸ್ವಾಗತಿಸುತ್ತೇವೆ ಮತ್ತು ನಿಮ್ಮ ಸರ್ಕಾರವು ಈ ಭರವಸೆಯನ್ನು ಶೀಘ್ರವಾಗಿ ಮತ್ತು ಪೂರ್ಣವಾಗಿ ಪೂರೈಸುತ್ತದೆ ಎಂದು ಭಾವಿಸುತ್ತೇವೆ” ಎಂದು ಹೇಳಿದೆ.

ಜೊತೆಗೆ, ಮೂರು ಕಾನೂನುಗಳನ್ನು ರದ್ದುಗೊಳಿಸುವುದು ಮಾತ್ರವೆ ಈ ಹೋರಾಟದ ಏಕೈಕ ಬೇಡಿಕೆಯಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಹೇಳಿರುವ ಪತ್ರವು, ಈ ಹಿಂದಿನಿಂದಲೂ ಕೇಳುತ್ತಿದ್ದ ಮೂರು ಬೇಡಿಕೆಯನ್ನು ಪ್ರಧಾನಿಗೆ ನೆನಪಿಸಿದೆ. ಅವುಗಳು ಕೆಳಗಿನಂತಿವೆ,

ಒಂದನೇ ಬೇಡಿಕೆಯಾಗಿ, “ಸಮಗ್ರ ಉತ್ಪಾದನಾ ವೆಚ್ಚದ (C2+50%) ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರಿಗೆ ಕಾನೂನುಬದ್ಧ ಅರ್ಹತೆಯಾಗಿ ಮಾಡಬೇಕು. ಇದರಿಂದಾಗಿ ದೇಶದ ಪ್ರತಿಯೊಬ್ಬ ರೈತನಿಗೆ ಸರ್ಕಾರವು ಘೋಷಿಸಿದ ಕನಿಷ್ಠ MSP ಯನ್ನು ಅವರ ಸಂಪೂರ್ಣ ಬೆಳೆಗೆ ಖಾತರಿಪಡಿಸಬಹುದು” ಎಂದು ಪತ್ರದಲ್ಲಿ ಒಕ್ಕೂಟವು ಹೇಳಿದೆ. ಜೊತೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು 2011 ರಲ್ಲಿ ಆಗಿನ ಪ್ರಧಾನಿಗೆ ಈ ಶಿಫಾರಸನ್ನು ಮಾಡಿತ್ತು ಮತ್ತು ಮೋದಿ ಸರ್ಕಾರವು ಈ ಬಗ್ಗೆ ಸಂಸತ್ತಿನಲ್ಲಿ ಘೋಷಿಸಿತ್ತು ಎಂದು ಪತ್ರದಲ್ಲಿ ರೈತ ಒಕ್ಕೂಟವು ನೆನಪಿದೆ.

ಎರಡನೇ ಬೇಡಿಕೆಯಾಗಿದೆ, “ಸರ್ಕಾರವು ಪ್ರಸ್ತಾಪಿಸಿರುವ ‘ವಿದ್ಯುತ್ ತಿದ್ದುಪಡಿ ಮಸೂದೆ, 2020/2021’ ಕರಡನ್ನು ಹಿಂತೆಗೆದುಕೊಳ್ಳಿ” ಎಂದು ಒತ್ತಾಯಿಸಿದೆ. ಈ ಹಿಂದೆನ ಮಾತುಕತೆಯಲ್ಲಿ, ಸರ್ಕಾರವು ಅದನ್ನು ಹಿಂತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು, ಆದರೆ ನಂತರ ಭರವಸೆಯನ್ನು ಉಲ್ಲಂಘನೆ ಮಾಡಲಾದ್ದು, ಅದನ್ನು ಸಂಸತ್ತಿನ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಪತ್ರವು ಉಲ್ಲೇಖಿಸಿದೆ.

ಮೂರನೇ ಬೇಡಿಕೆಯಾಗಿ, “ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿನ ‘ಕಮಿಷನ್ ಫಾರ್ ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ ಆಕ್ಟ್-2021’ ನಲ್ಲಿರುವ ರೈತರ ಮೇಲಿನ ದಂಡದ ನಿಬಂಧನೆಗಳನ್ನು ತೆಗೆದುಹಾಕಬೇಕು” ಎಂದು ಹೇಳಿದೆ. ಈ ಕಾಯ್ದೆಯಲ್ಲಿನ ಕೆಲವು ರೈತ ವಿರೋಧಿ ನಿಬಂಧನೆಗಳನ್ನು ಸರ್ಕಾರವು ತೆಗೆದುಹಾಕಲಾಗಿದೆ ಎಂದು ಹೇಳಿರುವ ರೈತ ಒಕ್ಕೂಟ, ಆದರೂ ಕಾಯ್ದೆಯ ಸೆಕ್ಷನ್‌‌ 15 ರ ಮೂಲಕ ದಂಡದ ನಿಬಂಧನೆಗಳನ್ನು ರೈತರನ್ನು ಮರಳಿ ತರಲಾಗಿದೆ ಎಂದು ಆರೋಪಿಸಿದೆ.

ಪ್ರಧಾನಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಈ ಪ್ರಮುಖ ಬೇಡಿಕೆಗಳ ಬಗ್ಗೆ ಸ್ಪಷ್ಟವಾದ ಘೋಷಣೆ ಇಲ್ಲದ ಕಾರಣ ರೈತರು ನಿರಾಶೆಗೊಂಡಿದ್ದಾರೆ ಎಂದು ರೈತ ಒಕ್ಕೂಟ ಹೇಳಿದೆ. ಈ ಐತಿಹಾಸಿಕ ಆಂದೋಲನದ ಮೂಲಕ ಮೂರು ಕಾನೂನುಗಳನ್ನು ರದ್ದಾಗುವುದರೊಂದಿಗೆ, ತಮ್ಮ ಕಠಿಣ ಪರಿಶ್ರಮಕ್ಕೆ ಫಲವಾಗಿ ಕನಿಷ್ಠ ಬೆಂಬಲದ ಕಾನೂನನ್ನು ಸಹ ಪಡೆಯುತ್ತಾರೆ ಎಂದು ರೈತರು ಆಶಿಸಿದ್ದರು ಎಂದು ರೈತ ಒಕ್ಕೂಟವು ಹೇಳಿದೆ.

ಇಷ್ಟೇ ಅಲ್ಲದೆ, ಕಳೆದ ಒಂದು ವರ್ಷದ ಐತಿಹಾಸಿಕ ಆಂದೋಲನದ ಸಂದರ್ಭದಲ್ಲಿ ಇತರ ಕೆಲವು ಸಮಸ್ಯೆಗಳೂ ಉದ್ಭವಿಸಿದ್ದು, ಅವುಗಳನ್ನು ತಕ್ಷಣವೇ ಪರಿಹರಿಸಬೇಕಾಗಿದೆ ಎಂದು ರೈತ ಒಕ್ಕೂಟ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದೆ.

ಮೊದಲನೇಯದಾಗಿ, “ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ರೈತರ ಮೇಲೆ ನೂರಾರು ಪ್ರಕರಣಗಳಾಗಿವೆ, ಕೂಡಲೇ ಈ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಪತ್ರವು ಒತ್ತಾಯಿಸಿದೆ.

ಎರಡನೆಯದಾಗಿ, “ಲಖಿಂಪುರ ಖೇರಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಅವರು ಇನ್ನೂ ಮುಕ್ತವಾಗಿ ತಿರುಗಾಡುತ್ತಿದ್ದು, ಕೇಂದ್ರದ ಸಂಪುಟದಲ್ಲಿ ಸಚಿವರಾಗಿ ಉಳಿದಿದ್ದಾರೆ. ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಿ ಬಂಧಿಸಬೇಕು” ಎಂದು ಪ್ರಧಾನಿಗೆ ಒತ್ತಾಯಿಸಲಾಗಿದೆ.

ಮೂರನೆಯದಾಗಿ, “ಈ ಆಂದೋಲನದ ಸಮಯದಲ್ಲಿ, ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನು ತಮ್ಮ ಪರಮ ತ್ಯಾಗವಾಗಿ ಅರ್ಪಿಸಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು. ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು” ಎಂದು ಪತ್ರವು ಪ್ರಧಾನಿಗೆ ಕೇಳಿದೆ.

ಪತ್ರದಲ್ಲಿ, “ನಾವು ಬೀದಿಗಳಲ್ಲಿ ಕುಳಿತುಕೊಳ್ಳಲು ಇಷ್ಟಪಡುವುದಿಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ. ಈ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಿದ ನಂತರ, ನಾವು ನಮ್ಮ ಮನೆಗಳು, ಕುಟುಂಬಗಳು ಮತ್ತು ಕೃಷಿಗೆ ಮರಳಬೇಕೆಂದು ನಾವು ಬಯಸುತ್ತೇವೆ. ನಿಮಗೂ ಅದೇ ಬೇಕಾದರೆ, ಮೇಲಿನ ಆರು ವಿಷಯಗಳ ಕುರಿತು ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ತಕ್ಷಣ ಮಾತುಕತೆಯನ್ನು ಪುನರಾರಂಭಿಸಬೇಕು. ಅಲ್ಲಿಯವರೆಗೂ ಸಂಯುಕ್ತ ಕಿಸಾನ್ ಮೋರ್ಚಾ ಈ ಚಳವಳಿಯನ್ನು ಮುಂದುವರೆಸಲಿದೆ” ಎಂದು ಪತ್ರವು ಉಲ್ಲೇಖೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...