Homeಮುಖಪುಟಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಉಲ್ಲೇಖಿತ ಆರು ವಿಷಯಗಳ ಕುರಿತು ಮಾತುಕತೆ ಪುನರಾರಂಭಿಸುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

- Advertisement -
- Advertisement -

ರೈತ ವಿರೋಧಿ ಕರಾಳ ಕಾನೂನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಯ ಒಕ್ಕೂಟವಾದ ‘ಸಂಯುಕ್ತ ಕಿಸಾನ್ ಮೋರ್ಚಾ’ ಪ್ರಧಾನಿ ಮೋದಿಗೆ ಭಾನುವಾರ ಪತ್ರ ಬರೆದಿದ್ದು, ಅದರಲ್ಲಿ ಒಟ್ಟು ಆರು ವಿಷಯಗಳನ್ನು ಪ್ರಸ್ತಾಪಿಸಿದೆ. ಪತ್ರದಲ್ಲಿ ಉಲ್ಲೇಖಿತ ಆರು ವಿಷಯಗಳ ಕುರಿತು ತಕ್ಷಣವೆ ರೈತರೊಂದಿಗೆ ಮಾತುಕತೆಯನ್ನು ಪುನರಾರಂಭಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದು, ಅಲ್ಲಿಯವರೆಗೂ ಚಳವಳಿಯು ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

ಒಕ್ಕೂಟವು ತನ್ನ ಪತ್ರದಲ್ಲಿ, “11 ಸುತ್ತಿನ ಮಾತುಕತೆಗಳು ನಡೆದರೂ, ಸರ್ಕಾರ ದ್ವಿಪಕ್ಷೀಯ ಪರಿಹಾರಕ್ಕಿಂತ ಏಕಪಕ್ಷೀಯವಾಗಿ ಘೋಷಣೆಯನ್ನು ಮಾಡುತ್ತಲೇ ಬಂದಿದೆ ಎಂಬುವುದನ್ನು ನಾವು ಗಮನಿಸಿದ್ದೇವೆ. ಅದೇನೇ ಇದ್ದರೂ, ನೀವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಕ್ಕಾಗಿ ನಮಗೆ ಸಂತೋಷವಾಗಿದೆ. ನಾವು ಈ ಘೋಷಣೆಯನ್ನು ಸ್ವಾಗತಿಸುತ್ತೇವೆ ಮತ್ತು ನಿಮ್ಮ ಸರ್ಕಾರವು ಈ ಭರವಸೆಯನ್ನು ಶೀಘ್ರವಾಗಿ ಮತ್ತು ಪೂರ್ಣವಾಗಿ ಪೂರೈಸುತ್ತದೆ ಎಂದು ಭಾವಿಸುತ್ತೇವೆ” ಎಂದು ಹೇಳಿದೆ.

ಜೊತೆಗೆ, ಮೂರು ಕಾನೂನುಗಳನ್ನು ರದ್ದುಗೊಳಿಸುವುದು ಮಾತ್ರವೆ ಈ ಹೋರಾಟದ ಏಕೈಕ ಬೇಡಿಕೆಯಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಹೇಳಿರುವ ಪತ್ರವು, ಈ ಹಿಂದಿನಿಂದಲೂ ಕೇಳುತ್ತಿದ್ದ ಮೂರು ಬೇಡಿಕೆಯನ್ನು ಪ್ರಧಾನಿಗೆ ನೆನಪಿಸಿದೆ. ಅವುಗಳು ಕೆಳಗಿನಂತಿವೆ,

ಒಂದನೇ ಬೇಡಿಕೆಯಾಗಿ, “ಸಮಗ್ರ ಉತ್ಪಾದನಾ ವೆಚ್ಚದ (C2+50%) ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರಿಗೆ ಕಾನೂನುಬದ್ಧ ಅರ್ಹತೆಯಾಗಿ ಮಾಡಬೇಕು. ಇದರಿಂದಾಗಿ ದೇಶದ ಪ್ರತಿಯೊಬ್ಬ ರೈತನಿಗೆ ಸರ್ಕಾರವು ಘೋಷಿಸಿದ ಕನಿಷ್ಠ MSP ಯನ್ನು ಅವರ ಸಂಪೂರ್ಣ ಬೆಳೆಗೆ ಖಾತರಿಪಡಿಸಬಹುದು” ಎಂದು ಪತ್ರದಲ್ಲಿ ಒಕ್ಕೂಟವು ಹೇಳಿದೆ. ಜೊತೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು 2011 ರಲ್ಲಿ ಆಗಿನ ಪ್ರಧಾನಿಗೆ ಈ ಶಿಫಾರಸನ್ನು ಮಾಡಿತ್ತು ಮತ್ತು ಮೋದಿ ಸರ್ಕಾರವು ಈ ಬಗ್ಗೆ ಸಂಸತ್ತಿನಲ್ಲಿ ಘೋಷಿಸಿತ್ತು ಎಂದು ಪತ್ರದಲ್ಲಿ ರೈತ ಒಕ್ಕೂಟವು ನೆನಪಿದೆ.

ಎರಡನೇ ಬೇಡಿಕೆಯಾಗಿದೆ, “ಸರ್ಕಾರವು ಪ್ರಸ್ತಾಪಿಸಿರುವ ‘ವಿದ್ಯುತ್ ತಿದ್ದುಪಡಿ ಮಸೂದೆ, 2020/2021’ ಕರಡನ್ನು ಹಿಂತೆಗೆದುಕೊಳ್ಳಿ” ಎಂದು ಒತ್ತಾಯಿಸಿದೆ. ಈ ಹಿಂದೆನ ಮಾತುಕತೆಯಲ್ಲಿ, ಸರ್ಕಾರವು ಅದನ್ನು ಹಿಂತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು, ಆದರೆ ನಂತರ ಭರವಸೆಯನ್ನು ಉಲ್ಲಂಘನೆ ಮಾಡಲಾದ್ದು, ಅದನ್ನು ಸಂಸತ್ತಿನ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಪತ್ರವು ಉಲ್ಲೇಖಿಸಿದೆ.

ಮೂರನೇ ಬೇಡಿಕೆಯಾಗಿ, “ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿನ ‘ಕಮಿಷನ್ ಫಾರ್ ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ ಆಕ್ಟ್-2021’ ನಲ್ಲಿರುವ ರೈತರ ಮೇಲಿನ ದಂಡದ ನಿಬಂಧನೆಗಳನ್ನು ತೆಗೆದುಹಾಕಬೇಕು” ಎಂದು ಹೇಳಿದೆ. ಈ ಕಾಯ್ದೆಯಲ್ಲಿನ ಕೆಲವು ರೈತ ವಿರೋಧಿ ನಿಬಂಧನೆಗಳನ್ನು ಸರ್ಕಾರವು ತೆಗೆದುಹಾಕಲಾಗಿದೆ ಎಂದು ಹೇಳಿರುವ ರೈತ ಒಕ್ಕೂಟ, ಆದರೂ ಕಾಯ್ದೆಯ ಸೆಕ್ಷನ್‌‌ 15 ರ ಮೂಲಕ ದಂಡದ ನಿಬಂಧನೆಗಳನ್ನು ರೈತರನ್ನು ಮರಳಿ ತರಲಾಗಿದೆ ಎಂದು ಆರೋಪಿಸಿದೆ.

ಪ್ರಧಾನಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಈ ಪ್ರಮುಖ ಬೇಡಿಕೆಗಳ ಬಗ್ಗೆ ಸ್ಪಷ್ಟವಾದ ಘೋಷಣೆ ಇಲ್ಲದ ಕಾರಣ ರೈತರು ನಿರಾಶೆಗೊಂಡಿದ್ದಾರೆ ಎಂದು ರೈತ ಒಕ್ಕೂಟ ಹೇಳಿದೆ. ಈ ಐತಿಹಾಸಿಕ ಆಂದೋಲನದ ಮೂಲಕ ಮೂರು ಕಾನೂನುಗಳನ್ನು ರದ್ದಾಗುವುದರೊಂದಿಗೆ, ತಮ್ಮ ಕಠಿಣ ಪರಿಶ್ರಮಕ್ಕೆ ಫಲವಾಗಿ ಕನಿಷ್ಠ ಬೆಂಬಲದ ಕಾನೂನನ್ನು ಸಹ ಪಡೆಯುತ್ತಾರೆ ಎಂದು ರೈತರು ಆಶಿಸಿದ್ದರು ಎಂದು ರೈತ ಒಕ್ಕೂಟವು ಹೇಳಿದೆ.

ಇಷ್ಟೇ ಅಲ್ಲದೆ, ಕಳೆದ ಒಂದು ವರ್ಷದ ಐತಿಹಾಸಿಕ ಆಂದೋಲನದ ಸಂದರ್ಭದಲ್ಲಿ ಇತರ ಕೆಲವು ಸಮಸ್ಯೆಗಳೂ ಉದ್ಭವಿಸಿದ್ದು, ಅವುಗಳನ್ನು ತಕ್ಷಣವೇ ಪರಿಹರಿಸಬೇಕಾಗಿದೆ ಎಂದು ರೈತ ಒಕ್ಕೂಟ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದೆ.

ಮೊದಲನೇಯದಾಗಿ, “ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ರೈತರ ಮೇಲೆ ನೂರಾರು ಪ್ರಕರಣಗಳಾಗಿವೆ, ಕೂಡಲೇ ಈ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಪತ್ರವು ಒತ್ತಾಯಿಸಿದೆ.

ಎರಡನೆಯದಾಗಿ, “ಲಖಿಂಪುರ ಖೇರಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಅವರು ಇನ್ನೂ ಮುಕ್ತವಾಗಿ ತಿರುಗಾಡುತ್ತಿದ್ದು, ಕೇಂದ್ರದ ಸಂಪುಟದಲ್ಲಿ ಸಚಿವರಾಗಿ ಉಳಿದಿದ್ದಾರೆ. ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಿ ಬಂಧಿಸಬೇಕು” ಎಂದು ಪ್ರಧಾನಿಗೆ ಒತ್ತಾಯಿಸಲಾಗಿದೆ.

ಮೂರನೆಯದಾಗಿ, “ಈ ಆಂದೋಲನದ ಸಮಯದಲ್ಲಿ, ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನು ತಮ್ಮ ಪರಮ ತ್ಯಾಗವಾಗಿ ಅರ್ಪಿಸಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು. ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು” ಎಂದು ಪತ್ರವು ಪ್ರಧಾನಿಗೆ ಕೇಳಿದೆ.

ಪತ್ರದಲ್ಲಿ, “ನಾವು ಬೀದಿಗಳಲ್ಲಿ ಕುಳಿತುಕೊಳ್ಳಲು ಇಷ್ಟಪಡುವುದಿಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ. ಈ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಿದ ನಂತರ, ನಾವು ನಮ್ಮ ಮನೆಗಳು, ಕುಟುಂಬಗಳು ಮತ್ತು ಕೃಷಿಗೆ ಮರಳಬೇಕೆಂದು ನಾವು ಬಯಸುತ್ತೇವೆ. ನಿಮಗೂ ಅದೇ ಬೇಕಾದರೆ, ಮೇಲಿನ ಆರು ವಿಷಯಗಳ ಕುರಿತು ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ತಕ್ಷಣ ಮಾತುಕತೆಯನ್ನು ಪುನರಾರಂಭಿಸಬೇಕು. ಅಲ್ಲಿಯವರೆಗೂ ಸಂಯುಕ್ತ ಕಿಸಾನ್ ಮೋರ್ಚಾ ಈ ಚಳವಳಿಯನ್ನು ಮುಂದುವರೆಸಲಿದೆ” ಎಂದು ಪತ್ರವು ಉಲ್ಲೇಖೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...