Homeಮುಖಪುಟಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಉಲ್ಲೇಖಿತ ಆರು ವಿಷಯಗಳ ಕುರಿತು ಮಾತುಕತೆ ಪುನರಾರಂಭಿಸುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

- Advertisement -
- Advertisement -

ರೈತ ವಿರೋಧಿ ಕರಾಳ ಕಾನೂನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಯ ಒಕ್ಕೂಟವಾದ ‘ಸಂಯುಕ್ತ ಕಿಸಾನ್ ಮೋರ್ಚಾ’ ಪ್ರಧಾನಿ ಮೋದಿಗೆ ಭಾನುವಾರ ಪತ್ರ ಬರೆದಿದ್ದು, ಅದರಲ್ಲಿ ಒಟ್ಟು ಆರು ವಿಷಯಗಳನ್ನು ಪ್ರಸ್ತಾಪಿಸಿದೆ. ಪತ್ರದಲ್ಲಿ ಉಲ್ಲೇಖಿತ ಆರು ವಿಷಯಗಳ ಕುರಿತು ತಕ್ಷಣವೆ ರೈತರೊಂದಿಗೆ ಮಾತುಕತೆಯನ್ನು ಪುನರಾರಂಭಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದು, ಅಲ್ಲಿಯವರೆಗೂ ಚಳವಳಿಯು ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

ಒಕ್ಕೂಟವು ತನ್ನ ಪತ್ರದಲ್ಲಿ, “11 ಸುತ್ತಿನ ಮಾತುಕತೆಗಳು ನಡೆದರೂ, ಸರ್ಕಾರ ದ್ವಿಪಕ್ಷೀಯ ಪರಿಹಾರಕ್ಕಿಂತ ಏಕಪಕ್ಷೀಯವಾಗಿ ಘೋಷಣೆಯನ್ನು ಮಾಡುತ್ತಲೇ ಬಂದಿದೆ ಎಂಬುವುದನ್ನು ನಾವು ಗಮನಿಸಿದ್ದೇವೆ. ಅದೇನೇ ಇದ್ದರೂ, ನೀವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಕ್ಕಾಗಿ ನಮಗೆ ಸಂತೋಷವಾಗಿದೆ. ನಾವು ಈ ಘೋಷಣೆಯನ್ನು ಸ್ವಾಗತಿಸುತ್ತೇವೆ ಮತ್ತು ನಿಮ್ಮ ಸರ್ಕಾರವು ಈ ಭರವಸೆಯನ್ನು ಶೀಘ್ರವಾಗಿ ಮತ್ತು ಪೂರ್ಣವಾಗಿ ಪೂರೈಸುತ್ತದೆ ಎಂದು ಭಾವಿಸುತ್ತೇವೆ” ಎಂದು ಹೇಳಿದೆ.

ಜೊತೆಗೆ, ಮೂರು ಕಾನೂನುಗಳನ್ನು ರದ್ದುಗೊಳಿಸುವುದು ಮಾತ್ರವೆ ಈ ಹೋರಾಟದ ಏಕೈಕ ಬೇಡಿಕೆಯಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಹೇಳಿರುವ ಪತ್ರವು, ಈ ಹಿಂದಿನಿಂದಲೂ ಕೇಳುತ್ತಿದ್ದ ಮೂರು ಬೇಡಿಕೆಯನ್ನು ಪ್ರಧಾನಿಗೆ ನೆನಪಿಸಿದೆ. ಅವುಗಳು ಕೆಳಗಿನಂತಿವೆ,

ಒಂದನೇ ಬೇಡಿಕೆಯಾಗಿ, “ಸಮಗ್ರ ಉತ್ಪಾದನಾ ವೆಚ್ಚದ (C2+50%) ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರಿಗೆ ಕಾನೂನುಬದ್ಧ ಅರ್ಹತೆಯಾಗಿ ಮಾಡಬೇಕು. ಇದರಿಂದಾಗಿ ದೇಶದ ಪ್ರತಿಯೊಬ್ಬ ರೈತನಿಗೆ ಸರ್ಕಾರವು ಘೋಷಿಸಿದ ಕನಿಷ್ಠ MSP ಯನ್ನು ಅವರ ಸಂಪೂರ್ಣ ಬೆಳೆಗೆ ಖಾತರಿಪಡಿಸಬಹುದು” ಎಂದು ಪತ್ರದಲ್ಲಿ ಒಕ್ಕೂಟವು ಹೇಳಿದೆ. ಜೊತೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು 2011 ರಲ್ಲಿ ಆಗಿನ ಪ್ರಧಾನಿಗೆ ಈ ಶಿಫಾರಸನ್ನು ಮಾಡಿತ್ತು ಮತ್ತು ಮೋದಿ ಸರ್ಕಾರವು ಈ ಬಗ್ಗೆ ಸಂಸತ್ತಿನಲ್ಲಿ ಘೋಷಿಸಿತ್ತು ಎಂದು ಪತ್ರದಲ್ಲಿ ರೈತ ಒಕ್ಕೂಟವು ನೆನಪಿದೆ.

ಎರಡನೇ ಬೇಡಿಕೆಯಾಗಿದೆ, “ಸರ್ಕಾರವು ಪ್ರಸ್ತಾಪಿಸಿರುವ ‘ವಿದ್ಯುತ್ ತಿದ್ದುಪಡಿ ಮಸೂದೆ, 2020/2021’ ಕರಡನ್ನು ಹಿಂತೆಗೆದುಕೊಳ್ಳಿ” ಎಂದು ಒತ್ತಾಯಿಸಿದೆ. ಈ ಹಿಂದೆನ ಮಾತುಕತೆಯಲ್ಲಿ, ಸರ್ಕಾರವು ಅದನ್ನು ಹಿಂತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು, ಆದರೆ ನಂತರ ಭರವಸೆಯನ್ನು ಉಲ್ಲಂಘನೆ ಮಾಡಲಾದ್ದು, ಅದನ್ನು ಸಂಸತ್ತಿನ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಪತ್ರವು ಉಲ್ಲೇಖಿಸಿದೆ.

ಮೂರನೇ ಬೇಡಿಕೆಯಾಗಿ, “ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿನ ‘ಕಮಿಷನ್ ಫಾರ್ ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ ಆಕ್ಟ್-2021’ ನಲ್ಲಿರುವ ರೈತರ ಮೇಲಿನ ದಂಡದ ನಿಬಂಧನೆಗಳನ್ನು ತೆಗೆದುಹಾಕಬೇಕು” ಎಂದು ಹೇಳಿದೆ. ಈ ಕಾಯ್ದೆಯಲ್ಲಿನ ಕೆಲವು ರೈತ ವಿರೋಧಿ ನಿಬಂಧನೆಗಳನ್ನು ಸರ್ಕಾರವು ತೆಗೆದುಹಾಕಲಾಗಿದೆ ಎಂದು ಹೇಳಿರುವ ರೈತ ಒಕ್ಕೂಟ, ಆದರೂ ಕಾಯ್ದೆಯ ಸೆಕ್ಷನ್‌‌ 15 ರ ಮೂಲಕ ದಂಡದ ನಿಬಂಧನೆಗಳನ್ನು ರೈತರನ್ನು ಮರಳಿ ತರಲಾಗಿದೆ ಎಂದು ಆರೋಪಿಸಿದೆ.

ಪ್ರಧಾನಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಈ ಪ್ರಮುಖ ಬೇಡಿಕೆಗಳ ಬಗ್ಗೆ ಸ್ಪಷ್ಟವಾದ ಘೋಷಣೆ ಇಲ್ಲದ ಕಾರಣ ರೈತರು ನಿರಾಶೆಗೊಂಡಿದ್ದಾರೆ ಎಂದು ರೈತ ಒಕ್ಕೂಟ ಹೇಳಿದೆ. ಈ ಐತಿಹಾಸಿಕ ಆಂದೋಲನದ ಮೂಲಕ ಮೂರು ಕಾನೂನುಗಳನ್ನು ರದ್ದಾಗುವುದರೊಂದಿಗೆ, ತಮ್ಮ ಕಠಿಣ ಪರಿಶ್ರಮಕ್ಕೆ ಫಲವಾಗಿ ಕನಿಷ್ಠ ಬೆಂಬಲದ ಕಾನೂನನ್ನು ಸಹ ಪಡೆಯುತ್ತಾರೆ ಎಂದು ರೈತರು ಆಶಿಸಿದ್ದರು ಎಂದು ರೈತ ಒಕ್ಕೂಟವು ಹೇಳಿದೆ.

ಇಷ್ಟೇ ಅಲ್ಲದೆ, ಕಳೆದ ಒಂದು ವರ್ಷದ ಐತಿಹಾಸಿಕ ಆಂದೋಲನದ ಸಂದರ್ಭದಲ್ಲಿ ಇತರ ಕೆಲವು ಸಮಸ್ಯೆಗಳೂ ಉದ್ಭವಿಸಿದ್ದು, ಅವುಗಳನ್ನು ತಕ್ಷಣವೇ ಪರಿಹರಿಸಬೇಕಾಗಿದೆ ಎಂದು ರೈತ ಒಕ್ಕೂಟ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದೆ.

ಮೊದಲನೇಯದಾಗಿ, “ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ರೈತರ ಮೇಲೆ ನೂರಾರು ಪ್ರಕರಣಗಳಾಗಿವೆ, ಕೂಡಲೇ ಈ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಪತ್ರವು ಒತ್ತಾಯಿಸಿದೆ.

ಎರಡನೆಯದಾಗಿ, “ಲಖಿಂಪುರ ಖೇರಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಅವರು ಇನ್ನೂ ಮುಕ್ತವಾಗಿ ತಿರುಗಾಡುತ್ತಿದ್ದು, ಕೇಂದ್ರದ ಸಂಪುಟದಲ್ಲಿ ಸಚಿವರಾಗಿ ಉಳಿದಿದ್ದಾರೆ. ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಿ ಬಂಧಿಸಬೇಕು” ಎಂದು ಪ್ರಧಾನಿಗೆ ಒತ್ತಾಯಿಸಲಾಗಿದೆ.

ಮೂರನೆಯದಾಗಿ, “ಈ ಆಂದೋಲನದ ಸಮಯದಲ್ಲಿ, ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನು ತಮ್ಮ ಪರಮ ತ್ಯಾಗವಾಗಿ ಅರ್ಪಿಸಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು. ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು” ಎಂದು ಪತ್ರವು ಪ್ರಧಾನಿಗೆ ಕೇಳಿದೆ.

ಪತ್ರದಲ್ಲಿ, “ನಾವು ಬೀದಿಗಳಲ್ಲಿ ಕುಳಿತುಕೊಳ್ಳಲು ಇಷ್ಟಪಡುವುದಿಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ. ಈ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಿದ ನಂತರ, ನಾವು ನಮ್ಮ ಮನೆಗಳು, ಕುಟುಂಬಗಳು ಮತ್ತು ಕೃಷಿಗೆ ಮರಳಬೇಕೆಂದು ನಾವು ಬಯಸುತ್ತೇವೆ. ನಿಮಗೂ ಅದೇ ಬೇಕಾದರೆ, ಮೇಲಿನ ಆರು ವಿಷಯಗಳ ಕುರಿತು ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ತಕ್ಷಣ ಮಾತುಕತೆಯನ್ನು ಪುನರಾರಂಭಿಸಬೇಕು. ಅಲ್ಲಿಯವರೆಗೂ ಸಂಯುಕ್ತ ಕಿಸಾನ್ ಮೋರ್ಚಾ ಈ ಚಳವಳಿಯನ್ನು ಮುಂದುವರೆಸಲಿದೆ” ಎಂದು ಪತ್ರವು ಉಲ್ಲೇಖೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...