Homeಮುಖಪುಟಆಕಾಶ ಏರ್, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ, 3 ದಿನಗಳಲ್ಲಿ 12ನೇ ಘಟನೆ

ಆಕಾಶ ಏರ್, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ, 3 ದಿನಗಳಲ್ಲಿ 12ನೇ ಘಟನೆ

- Advertisement -
- Advertisement -

ದೇಶದಾದ್ಯಂತ ಕಳೆದ ಮೂರು ದಿನಗಳಲ್ಲಿ ಸತತವಾಗಿ 12ನೇ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ ಕರೆಗಳು ಬಂದಿವೆ ಮಾಧ್ಯಮಗಳು ವರದಿ ಮಾಡಿವೆ. ಬುಧವಾರದಂದು ಆಕಾಶ ಏರ್ ಮತ್ತು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆಗಳನ್ನು ಮಾಡಲಾಗಿದ್ದು, ತೀವ್ರ ಆತಂಕ ಸೃಷ್ಟಿಯಾಗಿತ್ತು. ಆದರೆ ತನಿಖೆಯ ವೇಳೆ ಇದು ಸುಳ್ಳು ಕರೆಗಳು ಎಂದು ತಿಳಿದುಬಂದಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದಕ್ಕೂ ಮುನ್ನ ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್‌ಗೆ ಮಾರ್ಗ ಬದಲಿಸಲಾಗಿತ್ತು. ಸುಮಾರು 200 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ವಿಮಾನ ಮಂಗಳವಾರ ರಾತ್ರಿ ಮುಂಬೈನಿಂದ ಹೊರಟಿತ್ತು. ಬುಧವಾರ ಈ ಬೆದರಿಕೆ ಸುಳ್ಳು ಎಂದು ದೃಢಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂದು ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿದ್ದರಿಂದ ದೆಹಲಿಗೆ ವಾಪಸ್‌ ಕಳುಹಿಸಲಾಯಿತು. 184 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಫ್ಲೈಟ್ QP1335, ದೆಹಲಿಯಿಂದ ಟೇಕ್ ಆಫ್ ಆಗಿದ್ದು, ಮಧ್ಯಾಹ್ನ 1:15 ಕ್ಕೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ನಂತರ ವಿಮಾನವನ್ನು ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಅದಾಗ್ಯೂ ಈ ಬೆದರಿಕೆ ಕರೆ ಕೂಡಾ ಸುಳ್ಳು ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

“ಅಕಾಸ ಏರ್ ಫ್ಲೈಟ್ QP 1335, ಅಕ್ಟೋಬರ್ 16, 2024 ರಂದು ದೆಹಲಿಯಿಂದ ಬೆಂಗಳೂರಿಗೆ ಹಾರುತ್ತಿದ್ದಾಗ ಬೆದರಿಕೆ ಕರೆ ಸ್ವೀಕರಿಸಲಾಗಿತ್ತು. ಅದರಲ್ಲಿ 174 ಪ್ರಯಾಣಿಕರು, ಮೂರು ಶಿಶುಗಳು ಮತ್ತು ಏಳು ಸಿಬ್ಬಂದಿ ಇದ್ದರು. ಈ ವೇಳೆ ಆಕಾಶ ಏರ್ ತುರ್ತು ಪ್ರತಿಕ್ರಿಯೆ ತಂಡಗಳು ಎಲ್ಲಾ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದೆ. ಕಾರ್ಯಾಚರಣಾ ತಂಡಗಳಿಗೆ ಒದಗಿಸಲಾಗಿದೆ ಮತ್ತು ಸಂಬಂಧಿತ ಮಧ್ಯಸ್ಥಗಾರರಿಗೆ ಮಾಹಿತಿಯನ್ನು ಪಾರದರ್ಶಕವಾಗಿ ಪ್ರಸಾರ ಮಾಡಲಾಗಿದೆ” ಎಂದು ಆಕಾಶ ಏರ್ ವಕ್ತಾರರು ತಿಳಿಸಿದ್ದಾರೆ.

“ಕ್ಯಾಪ್ಟನ್ ಅಗತ್ಯವಿರುವ ಎಲ್ಲಾ ತುರ್ತು ವಿಧಾನಗಳನ್ನು ಅನುಸರಿಸಿದರು, ವಿಮಾನವನ್ನು ದೆಹಲಿಗೆ ಹಿಂತಿರುಗಿಸಿದರು ಮತ್ತು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 1:48 ಕ್ಕೆ ಸುರಕ್ಷಿತವಾಗಿ ಇಳಿದರು” ಎಂದು ಅದು ಹೇಳಿದೆ.

“ನಿಗದಿತ ಸುರಕ್ಷತೆ ಮತ್ತು ಭದ್ರತಾ ಕಾರ್ಯವಿಧಾನಗಳ ಪ್ರಕಾರ, ವಿಮಾನವನ್ನು ಲ್ಯಾಂಡಿಂಗ್ ನಂತರ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಅಗತ್ಯ ಸುರಕ್ಷತೆ ಮತ್ತು ಭದ್ರತೆಯನ್ನು ಕೈಗೊಂಡ ಸ್ಥಳೀಯ ಅಧಿಕಾರಿಗಳ ಸಮನ್ವಯದಲ್ಲಿ ಎಲ್ಲಾ ಪ್ರಯಾಣಿಕರನ್ನು ಮಧ್ಯಾಹ್ನ 1:57 ಕ್ಕೆ ಇಳಿಸಲಾಯಿತು” ಎಂದು ಕಂಪನಿ ಹೇಳಿದೆ.

ಕಳೆದ 48 ಗಂಟೆಗಳಲ್ಲಿ 10 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ

ಮಂಗಳವಾರ, ದೆಹಲಿ-ಶಿಕಾಗೋ ಏರ್ ಇಂಡಿಯಾ ವಿಮಾನ, ಜೈಪುರ-ಬೆಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್, ದಮಾಮ್-ಲಕ್ನೋ ಇಂಡಿಗೋ ವಿಮಾನ, ದರ್ಭಾಂಗ-ಮುಂಬೈ ಸ್ಪೈಸ್‌ಜೆಟ್ ವಿಮಾನ, ಸಿಲಿಗುರಿ-ಬೆಂಗಳೂರು ಆಕಾಶ ಏರ್ ವಿಮಾನ, ಅಲಯನ್ಸ್ ಏರ್ ಅಮೃತಸರ-ಡೆಹ್ರಾಡೂನ್-ದೆಹಲಿ ವಿಮಾನ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮಧುರೈನಿಂದ ಸಿಂಗಾಪುರಕ್ಕೆ ಹೊರಟಿದ್ದ ಏಳು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿತ್ತು.

ಸೋಮವಾರ ಎರಡು ಇಂಡಿಗೋ ವಿಮಾನಗಳು ಮತ್ತು ಏರ್ ಇಂಡಿಯಾ ವಿಮಾನಕ್ಕೆ ಇದೇ ರೀತಿಯ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಅವುಗಳಲ್ಲಿ ಒಂದು ಮುಂಬೈ-ನ್ಯೂಯಾರ್ಕ್ ಏರ್ ಇಂಡಿಯಾ ವಿಮಾನ, ಇನ್ನೊಂದು ಮಸ್ಕತ್‌ಗೆ ಹೋಗುವ ಇಂಡಿಗೋ ವಿಮಾನ ಮತ್ತು ಮತ್ತೊಂದು ಇಂಡಿಗೋ ವಿಮಾನ ಜಿದ್ದಾಕ್ಕೆ ಹೋಗುತ್ತಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...