Homeಮುಖಪುಟಆಕಾಶ ಏರ್, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ, 3 ದಿನಗಳಲ್ಲಿ 12ನೇ ಘಟನೆ

ಆಕಾಶ ಏರ್, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ, 3 ದಿನಗಳಲ್ಲಿ 12ನೇ ಘಟನೆ

- Advertisement -
- Advertisement -

ದೇಶದಾದ್ಯಂತ ಕಳೆದ ಮೂರು ದಿನಗಳಲ್ಲಿ ಸತತವಾಗಿ 12ನೇ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ ಕರೆಗಳು ಬಂದಿವೆ ಮಾಧ್ಯಮಗಳು ವರದಿ ಮಾಡಿವೆ. ಬುಧವಾರದಂದು ಆಕಾಶ ಏರ್ ಮತ್ತು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆಗಳನ್ನು ಮಾಡಲಾಗಿದ್ದು, ತೀವ್ರ ಆತಂಕ ಸೃಷ್ಟಿಯಾಗಿತ್ತು. ಆದರೆ ತನಿಖೆಯ ವೇಳೆ ಇದು ಸುಳ್ಳು ಕರೆಗಳು ಎಂದು ತಿಳಿದುಬಂದಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದಕ್ಕೂ ಮುನ್ನ ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್‌ಗೆ ಮಾರ್ಗ ಬದಲಿಸಲಾಗಿತ್ತು. ಸುಮಾರು 200 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ವಿಮಾನ ಮಂಗಳವಾರ ರಾತ್ರಿ ಮುಂಬೈನಿಂದ ಹೊರಟಿತ್ತು. ಬುಧವಾರ ಈ ಬೆದರಿಕೆ ಸುಳ್ಳು ಎಂದು ದೃಢಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂದು ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿದ್ದರಿಂದ ದೆಹಲಿಗೆ ವಾಪಸ್‌ ಕಳುಹಿಸಲಾಯಿತು. 184 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಫ್ಲೈಟ್ QP1335, ದೆಹಲಿಯಿಂದ ಟೇಕ್ ಆಫ್ ಆಗಿದ್ದು, ಮಧ್ಯಾಹ್ನ 1:15 ಕ್ಕೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ನಂತರ ವಿಮಾನವನ್ನು ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಅದಾಗ್ಯೂ ಈ ಬೆದರಿಕೆ ಕರೆ ಕೂಡಾ ಸುಳ್ಳು ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

“ಅಕಾಸ ಏರ್ ಫ್ಲೈಟ್ QP 1335, ಅಕ್ಟೋಬರ್ 16, 2024 ರಂದು ದೆಹಲಿಯಿಂದ ಬೆಂಗಳೂರಿಗೆ ಹಾರುತ್ತಿದ್ದಾಗ ಬೆದರಿಕೆ ಕರೆ ಸ್ವೀಕರಿಸಲಾಗಿತ್ತು. ಅದರಲ್ಲಿ 174 ಪ್ರಯಾಣಿಕರು, ಮೂರು ಶಿಶುಗಳು ಮತ್ತು ಏಳು ಸಿಬ್ಬಂದಿ ಇದ್ದರು. ಈ ವೇಳೆ ಆಕಾಶ ಏರ್ ತುರ್ತು ಪ್ರತಿಕ್ರಿಯೆ ತಂಡಗಳು ಎಲ್ಲಾ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದೆ. ಕಾರ್ಯಾಚರಣಾ ತಂಡಗಳಿಗೆ ಒದಗಿಸಲಾಗಿದೆ ಮತ್ತು ಸಂಬಂಧಿತ ಮಧ್ಯಸ್ಥಗಾರರಿಗೆ ಮಾಹಿತಿಯನ್ನು ಪಾರದರ್ಶಕವಾಗಿ ಪ್ರಸಾರ ಮಾಡಲಾಗಿದೆ” ಎಂದು ಆಕಾಶ ಏರ್ ವಕ್ತಾರರು ತಿಳಿಸಿದ್ದಾರೆ.

“ಕ್ಯಾಪ್ಟನ್ ಅಗತ್ಯವಿರುವ ಎಲ್ಲಾ ತುರ್ತು ವಿಧಾನಗಳನ್ನು ಅನುಸರಿಸಿದರು, ವಿಮಾನವನ್ನು ದೆಹಲಿಗೆ ಹಿಂತಿರುಗಿಸಿದರು ಮತ್ತು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 1:48 ಕ್ಕೆ ಸುರಕ್ಷಿತವಾಗಿ ಇಳಿದರು” ಎಂದು ಅದು ಹೇಳಿದೆ.

“ನಿಗದಿತ ಸುರಕ್ಷತೆ ಮತ್ತು ಭದ್ರತಾ ಕಾರ್ಯವಿಧಾನಗಳ ಪ್ರಕಾರ, ವಿಮಾನವನ್ನು ಲ್ಯಾಂಡಿಂಗ್ ನಂತರ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಅಗತ್ಯ ಸುರಕ್ಷತೆ ಮತ್ತು ಭದ್ರತೆಯನ್ನು ಕೈಗೊಂಡ ಸ್ಥಳೀಯ ಅಧಿಕಾರಿಗಳ ಸಮನ್ವಯದಲ್ಲಿ ಎಲ್ಲಾ ಪ್ರಯಾಣಿಕರನ್ನು ಮಧ್ಯಾಹ್ನ 1:57 ಕ್ಕೆ ಇಳಿಸಲಾಯಿತು” ಎಂದು ಕಂಪನಿ ಹೇಳಿದೆ.

ಕಳೆದ 48 ಗಂಟೆಗಳಲ್ಲಿ 10 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ

ಮಂಗಳವಾರ, ದೆಹಲಿ-ಶಿಕಾಗೋ ಏರ್ ಇಂಡಿಯಾ ವಿಮಾನ, ಜೈಪುರ-ಬೆಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್, ದಮಾಮ್-ಲಕ್ನೋ ಇಂಡಿಗೋ ವಿಮಾನ, ದರ್ಭಾಂಗ-ಮುಂಬೈ ಸ್ಪೈಸ್‌ಜೆಟ್ ವಿಮಾನ, ಸಿಲಿಗುರಿ-ಬೆಂಗಳೂರು ಆಕಾಶ ಏರ್ ವಿಮಾನ, ಅಲಯನ್ಸ್ ಏರ್ ಅಮೃತಸರ-ಡೆಹ್ರಾಡೂನ್-ದೆಹಲಿ ವಿಮಾನ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮಧುರೈನಿಂದ ಸಿಂಗಾಪುರಕ್ಕೆ ಹೊರಟಿದ್ದ ಏಳು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿತ್ತು.

ಸೋಮವಾರ ಎರಡು ಇಂಡಿಗೋ ವಿಮಾನಗಳು ಮತ್ತು ಏರ್ ಇಂಡಿಯಾ ವಿಮಾನಕ್ಕೆ ಇದೇ ರೀತಿಯ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಅವುಗಳಲ್ಲಿ ಒಂದು ಮುಂಬೈ-ನ್ಯೂಯಾರ್ಕ್ ಏರ್ ಇಂಡಿಯಾ ವಿಮಾನ, ಇನ್ನೊಂದು ಮಸ್ಕತ್‌ಗೆ ಹೋಗುವ ಇಂಡಿಗೋ ವಿಮಾನ ಮತ್ತು ಮತ್ತೊಂದು ಇಂಡಿಗೋ ವಿಮಾನ ಜಿದ್ದಾಕ್ಕೆ ಹೋಗುತ್ತಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....