Homeಮುಖಪುಟಬೆಳ್ಳಿ ಚುಕ್ಕಿ: ಧ್ರುವ ನಕ್ಷತ್ರವನ್ನು ಗುರುತಿಸುವುದು ಹೇಗೆ?

ಬೆಳ್ಳಿ ಚುಕ್ಕಿ: ಧ್ರುವ ನಕ್ಷತ್ರವನ್ನು ಗುರುತಿಸುವುದು ಹೇಗೆ?

- Advertisement -
- Advertisement -

ಭೂಮಂಡಲದ ಹೊರಗಿನ ಲೋಕದ ಎಷ್ಟು ವಿಸ್ಮಯಗಳನ್ನೂ ಭೇದಿಸಿದ್ದರೂ ಅದು ಇನ್ನೂ ಮುಗಿಯದ ಪಯಣ. ಅದೇ ರೀತಿಯಲ್ಲಿ ಆಕಾಶ ವೀಕ್ಷಣೆ ಕೂಡ ಎಂದಿಗೂ ಮುಗಿಯದ, ಎಂದಿಗೂ ಬೇಸರ ತರಿಸದ ಹವ್ಯಾಸ.

ಜನವರಿ 21 ರಂದು ಚಂದಿರನ ಪಕ್ಕದಲ್ಲಿ ಕಾಣುವ ಮಂಗಳ ಗ್ರಹ

ಅಮಾವಾಸ್ಯೆ ಕಳೆದು ಒಂದು ವಾರವಾಗಿದೆ. ಚಂದ್ರ ಈಗ ವೃದ್ಧಿಸುತ್ತಿರುವ ಚಂದ್ರ. ಅಂದರೆ, ದಿನೆ ದಿನೆ ಚಂದ್ರನ ಮೇಲೆ ಸೂರ್ಯನ ಬೆಳಕು ಬೀಳುವ ಪ್ರದೇಶ ಹೆಚ್ಚುತ್ತಾ ಹೋಗುತ್ತದೆ. ಈ ತಿಂಗಳ 20ಕ್ಕೆ ಅಮಾವಾಸ್ಯೆ ಕಳೆದು ಒಂದು ವಾರವಾಗುತ್ತದೆ, ಅಂದರೆ ಏಳನೇ ದಿನ. ಈ ದಿನ ಚಂದ್ರನ ಅಧದಷ್ಟು ಭಾಗ ಕಾಣುತ್ತದೆ. ಅಲ್ಲದೆ, ಸೂರ್ಯ ಪಶ್ಚಿಮದಲ್ಲಿ ಮುಳುಗುತ್ತಿದ್ದರೆ, ಚಂದ್ರ ನೆತ್ತಿಯ ಮೇಲೆ ಕಾಣುತ್ತಾನೆ. 20ರಂದು ಸೂರ್ಯಾಸ್ತದ ಸಮಯದಲ್ಲಿ ನೆತ್ತಿಯ ಮೇಲೆ ಕಾಣುತ್ತಾನಾ? ಇದನ್ನು ನೀವು ಆಕಾಶ ವೀಕ್ಷಣೆ ಮೂಲಕ ಪರೀಕ್ಷಿಸಿ.

ಇಲ್ಲಿ ಮತ್ತೊಂದು ಗಮನಿಸಬೇಕಾದ ಅಂಶ ಏನೆಂದರೆ, ಚಂದ್ರನ ಯಾವ ಭಾಗ ಸೂರ್ಯನ ಬೆಳಕಿನಿಂದ ಹೊಳೆಯುತ್ತಿದೆ ಎಂದು. ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರವೇನೆಂದರೆ, ಚಂದ್ರನಿಗೆ ತನ್ನದೇ ಆದ ಸ್ವಂತ ಬೆಳಕಿಲ್ಲ. ಚಂದ್ರ ಸೂರ್ಯನ ಬೆಳಕನ್ನು ಪ್ರತಿಫಲಿಸುತ್ತಾನೆ. ಈ ಕಾರಣದಿಂದ 20ರಂದು ಸೂರ್ಯಾಸ್ತವನ್ನು ನೋಡುತ್ತಿದ್ದರೆ, ನೆತ್ತಿಯ ಮೇಲೆ ಕಾಣುವ ಚಂದ್ರನ ಯಾವ ಭಾಗ ಸೂರ್ಯನ ಬೆಳಕಿನಿಂದ ಹೊಳೆಯುತ್ತಿದೆ ಮತ್ತು ಆ ಭಾಗ ಯಾವ ದಿಕ್ಕಿಗಿದೆ ಎಂದು ಗಮನಿಸಿ. ಇದರಿಂದ ಸೂರ್ಯ ಮುಳುಗಿದ ನಂತರ ರಾತ್ರಿ ಆಕಾಶದಲ್ಲಿ, ಚಂದ್ರನ ಸಹಾಯದಿಂದ ಸುಲಭವಾಗಿ ದಿಕ್ಕನ್ನು ಗುರುತಿಸಲು ಸಹಾಯವಾಗುತ್ತದೆ. ಅಲ್ಲದೆ, ಈ ಚಟುವಟಿಕೆಯನ್ನು ೨೦ರಂದೇ ಮಾಡಬೇಕೆಂದೇನಿಲ್ಲ. ಯಾವ ದಿನವೇ ಆಗಲಿ, ಚಂದ್ರನ ಬೆಳಕಿನ ಭಾಗ ಯಾವ ದಿಕ್ಕಿಗೆ ಮುಖ ಮಾಡಿದೆ ಎಂದು ಗಮನಿಸುತ್ತಿರಿ.

ಅಂದಹಾಗೆ, 21ರಂದು ರಾತ್ರಿ ಆಕಾಶದಲ್ಲಿ ನೀವು ಚಂದ್ರನನ್ನು ಗಮನಿಸಿದರೆ, ಚಂದ್ರನ ಆಸು ಪಾಸಿನಲ್ಲಿಯೇ ಪ್ರಕಾಶಮಾನವಾದ ಕೆಂಪು ಚುಕ್ಕೆ ಕಾಣುತ್ತದೆ. ಸೂಕ್ಷ್ಮವಾಗಿ ಗಮನಿಸಿ, ಈ ಚುಕ್ಕೆ ಮಿನುಗುವುದಿಲ್ಲಾ. ಇದೇ ಮಂಗಳ ಗ್ರಹ.

ಜನವರಿ 28ರಂದು ಹುಣ್ಣಿಮೆ. ಅಂದು ಸೂರ್ಯಾಸ್ತವನ್ನು ಗಮನಿಸಿ. ಚಂದ್ರ ಅವೊತ್ತು ನೆತ್ತಿಯಲ್ಲಿ ಕಾಣುತ್ತಾನಾ ಅಥವಾ ಬೇರೆಡೆ ಕಾಣುತ್ತಾ ಅನ್ನುವುದನ್ನು ಗಮನಿಸಿ.

ಬುಧ ಗ್ರಹವನ್ನು ಸೂರ್ಯಾಸ್ತ ನಂತರ ನೋಡಬಹುದು

ಕಳೆದ ಡಿಸೆಂಬರ್‌ನಲ್ಲಿ, ಗುರು ಮತ್ತು ಶನಿ ಗ್ರಹಗಳ ಸಮಾಗಮವನ್ನು ಆಗಸದಲ್ಲಿ ಕಂಡೆವು. ಅಂದರೆ, ಗುರು ಮತ್ತು ಶನಿ ಗ್ರಹಗಳು ಆಗಸದಲ್ಲಿ ಹಿಂದೆಂದಿಗಿಂತಲೂ ಸನಿಹ ಬಂದಿದ್ದನ್ನು ನಾವು ವೀಕ್ಷಿಸಿದೆವು. ಸದ್ಯ ಈಗ ಎರಡೂ ಗ್ರಹಗಳ ಸೂರ್ಯನ ಆಸುಪಾಸಿನಲ್ಲಿಯೇ ಇರುವುದರಿಂದ, ಸೂರ್ಯನ ತೀಕ್ಷ್ಣವಾದ ಬೆಳಕಿನ ಕಾರಣ ಈ ಗ್ರಹಗಳನ್ನು ನೋಡುವುದು ಕಷ್ಟವಾಗಿರುತ್ತದೆ. ಆದರೆ, ಸೌರಮಂಡಲದ ಮೊದಲ ಗ್ರಹವಾದ ಬುಧ ಗ್ರಹವನ್ನು ನೋಡಬಹುದು.

ಈ ತಿಂಗಳಿನಲ್ಲಿ, ಸೂರ್ಯ ಮುಳುಗಿದ ನಂತರ ದಿಗಂತದಲ್ಲಿನ ಸೂರ್ಯನ ಸ್ಥಾನದಿಂದ ಸುಮಾರು 20 ಡಿಗ್ರಿ ಎತ್ತರದಲ್ಲಿ ಒಂದು ಚುಕ್ಕಿ ಕಾಣುತ್ತದೆ. ಈ ಚುಕ್ಕಿಯೇ ಬುಧ ಗ್ರಹ. ಬೈನಾಕ್ಯುಲರ್ ಅಥವಾ ದೂರದರ್ಶಕದಲ್ಲಿ ಬುಧ ಗ್ರಹವನ್ನು ಚೆನ್ನಾಗಿ ನೋಡಬಹುದು. ಸಾಮಾನ್ಯವಾಗಿ ಸೂರ್ಯಾಸ್ತದ ನಂತರ ಅಥವಾ ಸೂರ್ಯ ಉದಯಿಸುವ ಮೊದಲು ಸುಮಾರು ಒಂದೂವರೆ ಗಂಟೆಯವರೆಗೆ ಮಾತ್ರ ಬುಧ ಗ್ರಹವನ್ನು ನಾವು ನೋಡಬಹುದಾಗಿದೆ.

ಇದಕ್ಕೆ ಕಾರಣ, ಸೌರಮಂಡಲದಲ್ಲಿ ಭೂಮಿಯ ಕಕ್ಷೆಯಿಂದ ಹೊರಗಿರುವ ಗ್ರಹಗಳನ್ನು ಹೊರಗ್ರಹಗಳು ಮತ್ತು ಒಳಗಿರುವ ಗ್ರಹಗಳನ್ನು ಒಳಗ್ರಹಗಳು ಎಂದು ಕರೆಯುತ್ತೇವೆ. ಬುಧ ಒಳಗ್ರಹಗಳ ಪಟ್ಟಿಗೆ ಸೇರುತ್ತದೆ. ಒಳಗ್ರಹಗಳು ಸಾಮಾನ್ಯವಾಗಿ ಸೂರ್ಯಾಸ್ತದ ನಂತರ ಅಥವಾ ಸೂರ್ಯ ಉದಯಿಸುವ ಮೊದಲ ನಾಲ್ಕು ಗಂಟೆಯವರೆಗೆ ಕಾಣುತ್ತದೆ. ಬುಧ ಗ್ರಹಕ್ಕೆ ಈ ಸಮಯ ಸುಮಾರು ಎರಡು ಗಂಟೆಯಾಗಿದೆ. ಹಾಗಾಗಿ, ಒಳ ಗ್ರಹಗಳಾದ ಬುಧ ಮತ್ತು ಶುಕ್ರ ಆಗಸದಲ್ಲಿ ಎತ್ತರದಲ್ಲಿ ಕಾಣಸಿಗುವುದಿಲ್ಲ. ಆಗಸದಲ್ಲಿ, ಬುಧ ಗ್ರಹ ಕ್ಷಿತಿಜದಿಂದ (Horizon) ಹೆಚ್ಚು ಎಂದರೆ 20 ಡಿಗ್ರಿ ಎತ್ತರದಲ್ಲಿ ಕಾಣಿಸಿದರೆ, ಶುಕ್ರ ಗ್ರಹ 45 ಡಿಗ್ರಿವರೆಗೆ ತಲುಪುತ್ತದೆ. ಈ ಎತ್ತರ ಬಿಟ್ಟು ಈ ಎರಡೂ ಗ್ರಹಗಳು ಎಂದಿಗೂ ನೆತ್ತಿಯಲ್ಲಿ ಕಾಣಿಸುವುದಿಲ್ಲ.

ಧ್ರುವ ನಕ್ಷತ್ರವನ್ನು ಗುರುತಿಸುವುದು ಹೇಗೆ?

ಆಗಸವನ್ನು 88 ನಕ್ಷತ್ರ ಪುಂಜಗಳಿಂದ ಗುರುತಿಸಿರುವುದನ್ನು ನಾವು ಈಗಾಗಲೇ ತಿಳಿದುಕೊಂಡಿದ್ದೇವೆ. ಇವುಗಳಲ್ಲಿ ಕೆಲವು ನಕ್ಷತ್ರ ಪುಂಜಗಳ ಆಕೃತಿಗಳು ಆಗಸದಲ್ಲಿ ಗುರುತಿಸಲು ಬಹಳ ಸುಲಭ ಮತ್ತು ಈ ನಕ್ಷತ್ರ ಪುಂಜದಲ್ಲಿನ ನಕ್ಷತ್ರಗಳು ಹೆಚ್ಚು ಪ್ರಕಾಶಮಾನ ಹೊಂದಿರುವುದರಿಂದ, ನಗರ ಪ್ರದೇಶದಿಂದಲೂ ಇವುಗಳನ್ನು ಸುಲಭವಾಗಿ ಕಾಣಬಹುದು. ಇಂತಹ ಪ್ರಕಾಶಮಾನವಾದ ನಕ್ಷತ್ರ ಪುಂಜಗಳನ್ನು ಆಗಸದಲ್ಲಿನ ಗ್ರಹ, ನಕ್ಷತ್ರ ಮತ್ತು ಧೂಮಕೇತುಗಳನ್ನು ಗುರುತಿಸಲು ಮಾರ್ಗದರ್ಶಕವಾಗಿ ಬಳಸುತ್ತೇವೆ. ಇಂತಹ ಒಂದು ನಕ್ಷತ್ರ ಪುಂಜ ಉತ್ತರ ದಿಕ್ಕಿನಲ್ಲಿ ಕಾಣುವ ಕ್ಯಾಸಿಯೋಪಿಯ (ದಿ ಕ್ವೀನ್), ಕನ್ನಡದಲ್ಲಿ ಇದನ್ನು ಕುಂತಿ ನಕ್ಷತ್ರ ಪುಂಜ ಎಂದು ಕರೆಯುತ್ತಾರೆ.

ಈ ತಿಂಗಳಿನಲ್ಲಿ, ಮೋಡವಿಲ್ಲದ ರಾತ್ರಿಯಂದು ಸುಮಾರು 7.30 ಗಂಟೆಗೆ, ಆಗಸದ ಉತ್ತರ ದಿಕ್ಕಿನಲ್ಲಿ ಗಮನಿಸಿದರೆ ಚಿತ್ರ 1 ರಲ್ಲಿ ಗುರುತಿಸಿರುವ ಒ ಆಕಾರದ ಒಂದು ನಕ್ಷತ್ರ ಪುಂಜವನ್ನು ನೋಡಬಹುದು. ಈ ಒ ಆಕಾರದ ನಕ್ಷತ್ರ ಪುಂಜವೇ ಕುಂತಿ ನಕ್ಷತ್ರ ಪುಂಜ.

ಈಗ ಚಿತ್ರ 2ನ್ನು ಗಮನಿಸಿ, ಕುಂತಿ ನಕ್ಷತ್ರ ಪುಂಜದಲ್ಲಿ ಪ್ರಕಾಶಮಾನವಾದ 5 ನಕ್ಷತ್ರಗಳನ್ನು ಗುರುತಿಸಲಾಗಿದೆ. ಇಲ್ಲಿ, 3 ಮತ್ತು 4ನೇ ನಕ್ಷತ್ರದ ಕಾಲ್ಪನಿಕ S ಕ್ಷಿತಿಜಕ್ಕೆ (Horizon) ಲಂಬ ಕೋನದಲ್ಲಿ ಒಂದು ಗೆರೆಯನ್ನು ಎಳೆದುಕೊಂಡು ಬಂದರೆ, ಅದು ಒಂದು ನಕ್ಷತ್ರಕ್ಕೆ ತಾಗುವುದು. ಈ ನಕ್ಷತ್ರವೇ ಧ್ರುವ ನಕ್ಷತ್ರ, ಅಂದರೆ Pole Star. ಈ ನಕ್ಷತ್ರದ ವಿಶೇಷತೆ ಏನೆಂದರೆ, ಬೇರೆ ಆಕಾಶಕಾಯಗಳಂತೆ ಈ ನಕ್ಷತ್ರ ಪೂರ್ವದಲ್ಲಿ ಹುಟ್ಟುವುದಿಲ್ಲ ಅಥವಾ ಪಶ್ಚಿಮದಲ್ಲಿ ಮುಳುಗುವುದೂ ಇಲ್ಲ. ಈ ನಕ್ಷತ್ರ ನಿಶ್ಚಲ ಸ್ಥಿತಿಯಲ್ಲಿ ಅದೇ ದಿಕ್ಕಿನಲ್ಲಿ ಯಾವಾಗಲೂ ಇರುತ್ತದೆ. ನಕ್ಷತ್ರ ಪುಂಜಗಳ ಸಹಾಯದಿಂದ ಧ್ರುವ ನಕ್ಷತ್ರವನ್ನು ಗುರುತಿಸಲು ನಾವು ಕಲಿತರೆ, ದಿಕ್ಕುಗಳನ್ನು ಬೇರ್‍ಯಾವುದೇ ಸಹಾಯ ಇಲ್ಲದೆ ಗುರುತಿಸಬಹುದು. ಹಿಂದೆ, ರಾತ್ರಿ ಸಮಯದಲ್ಲಿ ಕಾಡಿನಲ್ಲಿ ಸಂಚರಿಸಲು, ಸಮುದ್ರಯಾನ ಕೈಗೊಳ್ಳಲು ಧ್ರುವ ನಕ್ಷತ್ರವನ್ನು ಈ ರೀತಿ ಗುರುತಿಸಿಯೇ, ದಿಕ್ಕುಗಳನ್ನು ಕಂಡುಕೊಳ್ಳುತ್ತಿದ್ದರು.

ಧ್ರುವ ನಕ್ಷತ್ರ ಏಕೆ ಹುಟ್ಟುವುದಿಲ್ಲ ಮತ್ತು ಮುಳುಗುವುದಿಲ್ಲ ಎಂಬ ವಿಷಯವನ್ನು ಯೋಚಿಸುತ್ತಿದ್ದೀರಿ ಅಲ್ಲವೇ? ಮುಂದಿನ ಸಂಚಿಕೆಯಲ್ಲಿ ಅದರ ಬಗ್ಗೆ ಚರ್ಚಿಸೋಣ.

(ಚಿತ್ರ ಕೃಪೆ: Stellarium Software)


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...