Homeಮುಖಪುಟಬೆಳ್ಳಿ ಚುಕ್ಕಿ: ರಾತ್ರಿ ಆಕಾಶದಲ್ಲಿ ಒರಿಯಾನ್ ನಿಹಾರಿಕೆ ಮತ್ತು ಕೃತಿಕಾ ನಕ್ಷತ್ರ ಪುಂಜ

ಬೆಳ್ಳಿ ಚುಕ್ಕಿ: ರಾತ್ರಿ ಆಕಾಶದಲ್ಲಿ ಒರಿಯಾನ್ ನಿಹಾರಿಕೆ ಮತ್ತು ಕೃತಿಕಾ ನಕ್ಷತ್ರ ಪುಂಜ

- Advertisement -
- Advertisement -

ಆಕಾಶ ವೀಕ್ಷಣೆಯಲ್ಲಿ ಗ್ರಹಗಳು ಮತ್ತು ನಕ್ಷತ್ರ ಪುಂಜಗಳನ್ನು ನೋಡುವುದಷ್ಟೇ ಅಲ್ಲ, ಇತರೆ ಖಗೋಳೀಯ ಕಾಯಗಳಾದ ನಿಹಾರಿಕೆಗಳು (ನೆಬುಲ್ಲಾಗಳು), ತೆರೆದ ಕ್ಲಸ್ಟರ್‌ಗಳು (ನಕ್ಷತ್ರಗಳ ಗೊಂಚಲು) ಮತ್ತು ಗೋಳಾಕಾರ ಕ್ಲಸ್ಟರ್‌ಗಳು ಮತ್ತು ಗ್ಯಾಲಾಕ್ಸಿಗಳನ್ನು ಕೂಡ ನೋಡಬಹುದು. ಇಂತಹ ಆಕಾಶ ಕಾಯಗಳನ್ನು ಆಕಾಶ ವೀಕ್ಷಣಾಕಾರರು ಆಳವಾದ ಆಕಾಶಕಾಯಗಳು (Deep Sky Objects- DSO’s)ಎಂದು ಕರೆಯುತ್ತಾರೆ.

ಸಾಮಾನ್ಯವಾಗಿ DSO’s ನೋಡಲು ಕನಿಷ್ಠ ಅಂದರೂ ಬೈನಾಕ್ಯೂಲರ್ ಮುಂದುವರೆದು ಟೆಲಿಸ್ಕೋಪ್ ಅತ್ಯಗತ್ಯ. ಬರಿಕಣ್ಣಿನಲ್ಲೂ ನೋಡಬಹುದಾದ ಕೆಲವು ನಿಹಾರಿಕೆಗಳು, ಕ್ಲಸ್ಟರ್‌ಗಳು ಮತ್ತು ಗ್ಯಾಲಾಕ್ಸಿಗಳು ಇವೆ. ನಗರ ಪ್ರದೇಶಗಳಲ್ಲಿ ಬೆಳಕಿನ ಮಾಲಿನ್ಯ ಹೆಚ್ಚು ಇರುವುದರಿಂದ ಈ ಕಾಯಗಳನ್ನು ನೋಡಲು ಕಷ್ಟವಿದ್ದರೂ ಪ್ರಯತ್ನಿಸಬಹುದು.

ಒರಿಯಾನ್ ಮತ್ತು ಒರಿಯಾನ್ ನಿಹಾರಿಕೆ

ಚಿತ್ರ(1)

ಡಿಸೆಂಬರ್ ತಿಂಗಳನಲ್ಲಿ ನಾವು ಒರಿಯಾನ್ ಮತ್ತು ಒರಿಯಾನ್ ನಿಹಾರಿಕೆಯನ್ನು ಹೇಗೆ ಗುರುತಿಸುವುದು ಎಂಬುದನ್ನು ನೋಡಿದೆವು. ಈ ತಿಂಗಳೂ ಕೂಡ ಯಾವುದೇ ರಾತ್ರಿಯಂದು 8 ಗಂಟೆಯ ಸುಮಾರಿಗೆ ಪೂರ್ವ ದಿಕ್ಕಿಗೆ ಮುಖ ಮಾಡಿ ನಿಂತರೆ, ಅಂದಾಜು 45 ಡಿಗ್ರಿ ಎತ್ತರದಲ್ಲಿ ಈ ಒರಿಯಾನ್ ನಕ್ಷತ್ರ ಪುಂಜ ಕಾಣುತ್ತದೆ (ಚಿತ್ರ- 1ನ್ನು ಗಮನಿಸಿ). ಒರಿಯಾನ್ ಬಹಳ ಸುಲಭವಾಗಿ ಗುರುತಿಸಬಹುದಾದ ನಕ್ಷತ್ರ ಪುಂಜ. ಚಿತ್ರ(1)ರಲ್ಲಿ ಗುರುತು ಮಾಡಿರುವ ಪ್ರದೇಶವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮೂರು ನಕ್ಷತ್ರಗಳು ಗೋಚರಿಸುತ್ತವೆ. ಅದರಲ್ಲಿ ಮಧ್ಯ ಭಾಗದಲ್ಲಿರುವುದು ಒರಿಯಾನ್ ನಿಹಾರಿಕೆ. ನಕ್ಷತ್ರಗಳು ಹುಟ್ಟುವ ಪ್ರದೇಶ!

ಚಿತ್ರ (1)- ಒರಿಯಾನ್ ನಕ್ಷತ್ರ ಪುಂಜ ಮತ್ತು ಒರಿಯಾನ್ ನಿಹಾರಿಕೆ

ಚಿತ್ರ(1)

ಚಳಿಗಾಲದ ಆಕಾಶ ವೀಕ್ಷಣೆಗೆ ಒರಿಯಾನ್ ನಕ್ಷತ್ರ ಪುಂಜ ಒಂದು ದಿಕ್ಸೂಚಿ. ಈ ನಕ್ಷತ್ರ ಪುಂಜದ ಸಹಾಯದಿಂದ ಇತರೆ ನಕ್ಷತ್ರ ಪುಂಜಗಳು, ನಿಹಾರಿಕೆಗಳು ಮತ್ತು ಕ್ಲಸ್ಟರ್‌ಗಳನ್ನು (ನಕ್ಷತ್ರಗಳ ಗೊಂಚಲು) ಸುಲಭವಾಗಿ ನೋಡಬಹುದಾಗಿದೆ.

ಕೃತಿಕಾ ನಕ್ಷತ್ರಗಳ ಗೊಂಚಲು

ಚಿತ್ರ (2)ರಲ್ಲಿ ತೋರಿಸಿರುವಂತೆ, ಒರಿಯಾನ್ ನಕ್ಷತ್ರ ಪುಂಜದ ಮಧ್ಯಭಾಗದ ಮೂರು ಪ್ರಕಾಶಮಾನವಾದ ನಕ್ಷತ್ರಗಳನ್ನು ಸೇರಿಸಿದಂತೆ ಒಂದು ಕಾಲ್ಪನಿಕ ಗೆರೆಯನ್ನು ಕಲ್ಪಿಸಿಕೊಂಡು ಅದೇ ಚಿತ್ರದಲ್ಲಿ ತೋರಿಸಿರುವ ದಿಕ್ಕಿನಲ್ಲಿ ನಕ್ಷತ್ರಗಳನ್ನು ಗಮನಿಸುತ್ತಾ ಬನ್ನಿ. ಹಾಗೆ ಗಮನಿಸುವಾಗ, ಆ ಕಾಲ್ಪನಿಕ ರೇಖೆಯು ಒಂದು ನಕ್ಷತ್ರ ಗೊಂಚಲುಗಳ ಬಳಿ ಹಾದುಹೋಗುತ್ತದೆ. ಇದೇ ಕೃತಿಕಾ ನಕ್ಷತ್ರಗಳ ಗೊಂಚಲು.

ಚಿತ್ರ(2)

ಕೃತಿಕಾ ನಕ್ಷತ್ರ ಗೊಂಚಲು ಒಂದು ತೆರೆದ ನಕ್ಷತ್ರಗಳ ಗೊಂಚಲುಗಳಾಗಿದ್ದು (Open Cluster) ಅತ್ಯಂತ ಸುಂದರವಾಗಿ ಬರಿಗಣ್ಣಿಗೆ ಕಾಣುತ್ತದೆ. ಇದನ್ನು ಇಂಗ್ಲಿಷ್‌ನಲ್ಲಿ Pleiades Cluster ಎಂದು ಕರೆಯುತ್ತಾರೆ. ಕೃತಿಕಾ ನಕ್ಷತ್ರಗಳ ಗೊಂಚಲುಗಳನ್ನು ನೀವು ಸೂಕ್ಷ್ಮವಾಗಿ ಗಮನಿಸಿದರೆ, ಈ ಗೊಂಚಲಿನಲ್ಲಿ ಏಳು ನಕ್ಷತ್ರಗಳನ್ನು ಗುರುತಿಸಬಹುದು. ಪುರಾಣ ಕಥೆಗಳಿಗೆ ಹೋಲಿಸಿಕೊಂಡು ಈ ಏಳು ನಕ್ಷತ್ರಗಳನ್ನು ಸೆವೆನ್ ಸಿಸ್ಟ್‌ರ್‍ಸ್ ಎಂದು ಕರೆಯುವುದು ವಾಡಿಕೆಯಲ್ಲಿದೆ. ಬೈನಾಕ್ಯೂಲರ್‌ನಲ್ಲಿ ನೋಡಿದರೆ ಈ ನಕ್ಷತ್ರಗಳ ಗೊಂಚಲು ಇನ್ನೂ ಚಂದವಾಗಿ ಕಾಣುತ್ತದೆ.

ಚಿತ್ರ (3) ಕೃಪೆ: Hubble Site

ಈ ನಕ್ಷತ್ರಗಳ ಗೊಂಚಲುಗಳ ಚಿತ್ರವನ್ನು ಸಾಮಾನ್ಯವಾಗಿ ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಎಲ್ಲ ಪುಸ್ತಕಗಳಲ್ಲಿ ಚಿತ್ರಿಸಿರುತ್ತಾರೆ. ಹೆಚ್ಚು ಸಮಯದ ಎಕ್ಸ್‌ಪೋಶರ್ ಹೊಂದಿರುವ ಕ್ಯಾಮರಾದಿಂದ ಈ ನಕ್ಷತ್ರಗಳ ಗೊಂಚಲಿನ ಫೋಟೋ ತೆಗೆದರೆ, ಈ ಏಳು ನಕ್ಷತ್ರಗಳ ಸುತ್ತಲೂ ತಿಳಿ ನೀಲಿ ಬಣ್ಣದ ಮೋಡಗಳನ್ನು ಕಾಣಬಹುದು. ಈ ಮೋಡಗಳು ಹೈಡ್ರೋಜನ್ ಅನಿಲಗಳಿಂದ ಕೊಡಿದೆ. ಹೈಡ್ರೋಜನ್ ಅನಿಲದ ಮೋಡಗಳು ನಕ್ಷತ್ರಗಳ ಉಗಮಕ್ಕೆ ಕಾರಣ.

ಚಿತ್ರ(3), ಕೃಪೆ: Hubble Site

ಖಗೋಳೀಯ ಅಧ್ಯಯನಗಳ ಪ್ರಕಾರ ನಕ್ಷತ್ರಗಳ ಗೊಂಚಲುಗಳು ಅಥವಾ ಕ್ಲಸ್ಟರ್‌ಗಳಲ್ಲಿರುವ ನಕ್ಷತ್ರಗಳು ಸಾಮಾನ್ಯವಾಗಿ ಒಂದೇ ಮೋಡಗಳಿಂದ ಒಂದೇ ಸಮಯದಲ್ಲಿ ಹುಟ್ಟಿರುತ್ತವೆ. ಈ ಕೃತಿಕಾ ನಕ್ಷತ್ರ ಪುಂಜದ ನಕ್ಷತ್ರಗಳೂ ಸಹ ಒಂದೇ ಮೋಡದಿಂದ ಹುಟ್ಟಿದ್ದು. ಇವು ನಕ್ಷತ್ರಗಳ ಜೀವಿತಾವಧಿಯ ಯೌವ್ವನದ ಅವಧಿಗಳಲ್ಲಿವೆ ಅಂದರೆ, all these are young stars. ನಕ್ಷತ್ರಗಳ ಹುಟ್ಟು ಮತ್ತು ಸಾವಿನ ಬಗ್ಗೆ ಅಧ್ಯಯನ ನಡೆಸುವ ಖಗೋಳ ವಿಜ್ಞಾನಿಗಳಿಗೆ ಯೌವ್ವನದ ನಕ್ಷತ್ರಗಳ ಬಗ್ಗೆ ಅಧ್ಯಯನ ನಡೆಸಲು ಕೃತಿಕಾ ನಕ್ಷತ್ರ ಗೊಂಚಲು ಒಂದು ಪ್ರಯೋಗಾಲಯವೇ ಸರಿ.

ರೋಹಿಣಿ ನಕ್ಷತ್ರ, ವೃಷಭ ರಾಶಿ

ಮತ್ತೊಮ್ಮೆ ಒರಿಯಾನ್ ನಕ್ಷತ್ರ ಪುಂಜಕ್ಕೆ ಹೋಗೋಣ. ಚಿತ್ರ (2) ರಲ್ಲಿ ಒರಿಯಾನ್ ನಕ್ಷತ್ರ ಪುಂಜದಿಂದ ಎಳೆದ ಕಾಲ್ಪನಿಕ ರೇಖೆ ಒಂದು ಕಿತ್ತಳೆ ಬಣ್ಣದ ನಕ್ಷತ್ರದ ಆಸು ಪಾಸಿನಲ್ಲಿ ಹಾದು ಹೋಗುವುದನ್ನ ಕಾಣುತ್ತೇವೆ. ಈ ಕಿತ್ತಳೆ ಬಣ್ಣದ ನಕ್ಷತ್ರವೇ ರೋಹಿಣಿ ನಕ್ಷತ್ರ. ಈ ರೋಹಿಣಿ ನಕ್ಷತ್ರ ಮತ್ತು ಕೃತಕಾ ನಕ್ಷತ್ರದ ಗೊಂಚಲುಗಳು ವೃಷಭ ರಾಶಿಯಲ್ಲಿವೆ/ ನಕ್ಷತ್ರ ಪುಂಜದಲ್ಲಿದೆ. ಅಂತೆಯೇ, ಚಿತ್ರ (2)ರಲ್ಲಿನ ಕಾಲ್ಪನಿಕೆ ಗೆರೆಗಳ ಸಹಾಯದಿಂದ ವೃಷಭ ರಾಶಿಯ ಇತರೆ ನಕ್ಷತ್ರಗಳನ್ನು ನೀವು ನೋಡಬಹುದು.

ಚಂದ್ರನ ಸಹಾಯದಿಂದ ದಿಕ್ಕು ಕಂಡುಹಿಡಿಯುವುದು ಹೇಗೆ?

ಚಂದ್ರ ರಾತ್ರಿ ಆಕಾಶದಲ್ಲಿ ಕಾಣುವ ದೊಡ್ಡದಾದ ಆಕಾಶ ಕಾಯ. ಕೆಲವೊಂದು ಸಾರಿ ಇಳಿಸಂಜೆಯಲ್ಲೂ, ಮುಂಜಾನೆಯಲ್ಲೂ ಮತ್ತು ಸೂರ್ಯನಿದ್ದಾಗಲೂ ಕಾಣುತ್ತಾನೆ. ಚಂದ್ರನ ಸಹಾಯದಿಂದ ದಿಕ್ಕುಗಳನ್ನು ಗುರುತಿಸುವುದು ಹೇಗೆ?

ಚಿತ್ರ(4)

ವೃದ್ಧಿಸುವ ಚಂದ್ರ ಮತ್ತು ಕ್ಷೀಣಿಸುವ ಚಂದ್ರನ ಬಿಂಬಾವಸ್ಥೆಗಳ ಸಹಾಯದಿಂದ ದಿಕ್ಕುಗಳನ್ನು ಗುರುತಿಸುವುದನ್ನು ನೋಡೋಣ.

ಚಿತ್ರ (4)ನ್ನು ನೋಡಿ, ಫೆಬ್ರವರಿ ಐದರಂದು ಮುಂಜಾನೆ 4.10ಕ್ಕೆ ಆಕಾಶದಲ್ಲಿ ಚಂದ್ರ ಕಾಣಿಸುತ್ತಿರುವುದನ್ನು ಈ ಚಿತ್ರವು ಸೂಚಿಸುತ್ತದೆ. ಚಂದ್ರ ಕಾಣುತ್ತಿರುವ ದಿಕ್ಕು ಯಾವುದು ಅಂತ ಚಿತ್ರ (4)ನ್ನು ನೋಡಿ ಹೇಳಬಹುದಾ? ಚಿತ್ರ (5)ರಲ್ಲಿ ಪೂರ್ವ ದಿಕ್ಕು ಅಂತ ಸೂಚಿಸಲಾಗಿದೆ. ಆದರೆ, ಚಿತ್ರ (4)ರಿಂದಲೇ ಈ ದಿಕ್ಕನ್ನು ಗುರುತಿಸಬಹುದಾ ಎನ್ನುವುದು ಪ್ರಶ್ನೆ.

ಚಿತ್ರ (5)

ಚಿತ್ರ(5)

ಚಿತ್ರ (4)ರಲ್ಲಿ ಅರ್ಧ ಚಂದ್ರ ಕಾಣುತ್ತಿದೆ. ನಮಗೆ ಕಾಣುತ್ತಿರುವ ಚಂದ್ರನ ಅರ್ಧ ಭಾಗವನ್ನು(A)ಎಂದು, ಕಾಣದಿರದ ಅರ್ಧ ಭಾಗವನ್ನು (B) ಎಂದು ಕರೆಯೋಣ. ಚಂದ್ರನಿಗೆ ತನ್ನದೇ ಆದ ಬೆಳಕು ಇಲ್ಲದಿರುವುದು ನಮಗೆ ತಿಳಿದ ವಿಚಾರ. ಹಾಗಾಗಿ, ಚಂದ್ರನನ್ನು ನಾವು ನೋಡುತ್ತಿದ್ದರೆ ಅದು ಸೂರ್ಯನ ಬೆಳಕು ಚಂದ್ರನ ಮೇಲೆ ಬಿದ್ದು, ಪ್ರತಿಫಲಿತ ಕಿರಣಗಳು ನಮ್ಮ ಕಣ್ಣಿಗೆ ಬರುತ್ತಿರುವುದರಿಂದ ಮಾತ್ರ. ಚಿತ್ರ (4)ರಲ್ಲಿ ತೋರಿಸಿರುವಂತೆ ಚಂದ್ರನ(A) ಭಾಗದ ಪ್ರದೇಶದಲ್ಲಿ ಸೂರ್ಯನ ಬೆಳಕು ಬೀಳಬೇಕೆಂದರೆ ಸೂರ್ಯ ಕ್ಷಿತಿಜದ (Horizan) ಕೆಳಗೆ ಇದ್ದರೇ ಮಾತ್ರ ಸಾಧ್ಯ. ಸೂರ್ಯ ಬೇರೆ ಕಡೆಗೆ ಇದ್ದರೆ, ಈ ರೀತಿ ಚಂದ್ರನ(B) ಭಾಗದಲ್ಲಿ ಬೆಳಕು ಬಿದ್ದು, ಪ್ರತಿಫಲಿಸುವುದು ಅಸಾಧ್ಯ. ಇದಲ್ಲದೆ ಚಂದ್ರ ಕಾಣುತ್ತಿರುವ ಸಮಯವನ್ನು ಗಮನಿಸಿದರೆ ಅದು ಮುಂಜಾನೆ 04 ಗಂಟೆಯ ಸಮಯ. ಒಂದೆರಡು ಗಂಟೆಯಲ್ಲಿ ಸೂರ್ಯ ಪೂರ್ವ ದಿಕ್ಕಿನಲ್ಲಿ ಉದಯಿಸುತ್ತಾನೆ ಎಂಬುದು ತಿಳಿದ ವಿಚಾರ. ಚಂದ್ರನ(A) ಭಾಗದ ಮೇಲೆ ಸೂರ್ಯನ ಬೆಳಕು ಬಿದ್ದು, ಪ್ರತಿಫಲಿಸುತ್ತಿರುವುದರಿಂದ, ಸೂರ್ಯ ಈ ಕ್ಷಿತಿಜದಿಂದಲೇ ಉದಯಿಸಬೇಕು. ಹಾಗಾಗಿ ಇದು ಪೂರ್ವ ದಿಕ್ಕು ಎನ್ನುವ ಅಭಿಪ್ರಾಯಕ್ಕೆ ಬರಬಹುದು.

ನಾನು ಈ ಚಿತ್ರಗಳನ್ನು Stellariumತಂತ್ರಾಂಶದ ಮುಖಾಂತರ ಸೃಷ್ಟಿಸಿರುವುದರಿಂದ, ಇದರಲ್ಲಿ ಸಮಯವನ್ನು ಮುಂದಕ್ಕೆ ಹಾಕಿ ಸೂರ್ಯ ಉದಯಿಸುವುದನ್ನು ಕೂಡ ನೋಡಬಹುದು. ಅದೇ ಚಿತ್ರ (5). ಈ ಚಿತ್ರದಲ್ಲಿ, ಸೂರ್ಯ ಮತ್ತು ಚಂದ್ರ ಮತ್ತು ಅದರ(A)& (B) ಭಾಗಗಳನ್ನು ಗಮನಿಸಿ, ಬೆಳಕಿನ ಪ್ರತಿಫಲನ ನಿಯಮ ಸರಿ ಇದೆಯೇ ಪರೀಕ್ಷಿಸಿ.

ಇದೇ ವಿಧಾನದಲ್ಲಿ ಚಂದ್ರನನ್ನು ನೀವು ನೋಡಿದಾಗಲೆಲ್ಲಾ ದಿಕ್ಕುಗಳನ್ನು ಗುರುತಿಸಲು ಪ್ರಯತ್ನಿಸಿ. ಅಲ್ಲದೆ, ಆಕಾಶ ವೀಕ್ಷಣೆಯ ಬಗ್ಗೆ ನಿಮ್ಮ ಪ್ರಶ್ನೆಗಳನ್ನು, ಅಭಿಪ್ರಾಯಗಳನ್ನು ಸಹ ಹಂಚಿಕೊಳ್ಳಲು ಈಮೇಲ್ ವಿಳಾಸಕ್ಕೆ ಬರೆಯಿರಿ: [email protected].


ಇದನ್ನೂ ಓದಿ: ಬೆಳ್ಳಿ ಚುಕ್ಕಿ: ಧ್ರುವ ನಕ್ಷತ್ರವನ್ನು ಗುರುತಿಸುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...