Homeಕರ್ನಾಟಕಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

ಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

- Advertisement -
- Advertisement -

‘‘ದೇಶದಲ್ಲಿ ಸುಮಾರು 35 ಸಾವಿರ ದೇವಾಲಯಗಳು ಒಡೆದು ಛಿದ್ರವಾಗಿವೆ. ಅವುಗಳನ್ನು ಮರುನಿರ್ಮಾಣ ಮಾಡಿ ಮೂಲ ವಾರಸುದಾರರಿಗೆ ಒಪ್ಪಿಸುವಂತಹ ಕಾನೂನನ್ನು ಸಂಸತ್ತು‌ ರೂಪಿಸಲಿ’’ ಎಂದು ಸಾಹಿತಿ ಎಸ್‌.ಎಲ್‌.ಭೈರಪ್ಪ ನೀಡಿದ್ದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, “ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನವದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದು ಪಂಜಾಬಿಗಳು ಮಾತ್ರ. ಈ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಕಮ್ಯುನಿಷ್ಟ್‌ ಪಕ್ಷಗಳು ಕೊಳಕು ರಾಜಕೀಯ ಮಾಡುತ್ತಿವೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶದ ಜೊತೆಗೆ ಟ್ರೋಲ್‌ಗೂ ಒಳಗಾಗಿದ್ದಾರೆ. ವೈಚಾರಿಕ ಲೇಖಕ ಯೋಗೇಶ್ ಮೇಷ್ಟ್ರು, ಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ ಎಂದು ವ್ಯಂಗ್ಯ ವ್ಯಕ್ತಪಡಿಸಿದ್ದು, “ದೇಶದಲ್ಲಿ 35 ಸಾವಿರ ದೇವಾಲಯಗಳು ಒಡೆದು ಛಿದ್ರವಾಗಿವೆ ಎಂಬುದು ಭೈರಪ್ಪನವರ ಲೆಕ್ಕ. ಇದೇ ದೇಶದಲ್ಲಿ ಕೋಟ್ಯಾಂತರ ಹೃದಯಗಳು ಈ ದೇವಾಲಯದ ರಾಜಕಾಣದಲ್ಲಿ ಛಿದ್ರವಾಗಿರುವುದು ನನಗೆ ಪಕ್ಕ. ದೇವಾಲಯಗಳನ್ನು ಮರು ನಿರ್ಮಾಣ ಮಾಡಿ ಅವುಗಳ ಮೂಲ ವಾರಸುದಾರರಿಗೆ ಒಪ್ಪಿಸುವ ಕಾನೂನಲ್ಲ ಪಾರ್ಲಿಮೆಂಟ್ ಮಾಡಬೇಕಾಗಿರುವುದು, ಮನಸುಗಳನ್ನು ಸ್ವಸ್ಥಗೊಳಿಸಿ, ಹೃದಯಗಳನ್ನು ಬೆಚ್ಚಗಿಡುವ ಜರೂರತ್ತು ಎಲ್ಲರಿಗಿರುವುದು” ಎಂದು ಅವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಸಾಹಿತಿ ವಿ. ಆರ್‌. ಕಾರ್ಪೇಂಟರ್‌ ಅವರು, ಲೈಂಗಿಕತೆ ಮತ್ತು ಸ್ವಾರ್ಥಳನ್ನೇ ತನ್ನ ಕಾದಂಬರಿಗಳಲ್ಲಿ ತುಂಬಿ ಬರೆದ, ಮಾನವೀಯತೆಯ ಲವಶೇಷವಿಲ್ಲದ ಭೈರಪ್ಪ ಒಬ್ಬ ತೃತೀಯ ದರ್ಜೆಯ ಲೇಖಕ ಎಂದು ಆಕ್ರೋಶ ವ್ಯಕ್ತಪಡಿಸಿ, “ಐದರಿಂದ ಆರು ಕೋಟಿ ಜನಸಂಖ್ಯೆ ಇರುವ ನಿಮ್ಮ ಜಾತಿಯ ಜನಕ್ಕೆ ಬರೀ 35000 ಟೆಂಪಲ್‌ಗಳ? ಭೈರಪ್ಪ ತುಂಬಾ ಕಂಜೂಸ್ ಅನಿಸ್ತಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಶರಣು ಚಕ್ರಸಾಲಿ ಅವರು, “ಎಸ್ ಎಲ್ ಭೈರಪ್ಪ ಅವರು ತಮ್ಮ ಶವಪೆಟ್ಟಿಗೆಗೆ ತಾವೇ ಕೊನೆ ಮೊಳೆ ಹೊಡೆದುಕೊಳ್ಳುತ್ತಿದ್ದಾರೆ ಎಂದು ಅನಿಸುತ್ತಿದೆ. ಒಬ್ಬ ಲೇಖಕರಾಗಿ ಇಷ್ಟು ಲಜ್ಜಗೇಡಿ ಬದುಕನ್ನು ಬದುಕಬಾರದು. ಇವರ ಬಗ್ಗೆ ಇರುವ ಸಣ್ಣ ಗೌರವ ಕೂಡ ಇವತ್ತು ಮನಸ್ಸಿನಿಂದ ಮಾಯವಾಯಿತು” ಎಂದು ಬರೆದಿದ್ದಾರೆ.

ಸಂವಾದ ಕಾಲೇಜಿನ ಯೂತ್ ಮೇಂಟರ್‌ ಆಗಿರುವ ರುಕ್ಮಿಣಿ ನಾಗಣ್ಣನವರ್‌ ಅವರು, “ಬದುಕೋಕೆ ಮೂಲಭೂತವಾಗಿ ಬೇಕಿರೋದು ಮಂದಿರ, ಮಸೀದಿ, ಚರ್ಚುಗಳ ನಿರ್ಮಾಣವಲ್ಲ. ತಲೆ ಮೇಲೊಂದು ಸೂರು, ಬೆಚ್ಚನೆಯ ಬಟ್ಟೆ, ಹೊದಿಕೆ, ಶುದ್ಧ ಗಾಳಿ, ನೀರು. ಶಿಕ್ಷಣ ಅನ್ನೋ ಫ್ಯಾಕ್ಟ್ರರಿಯಲ್ಲಿ ವರ್ಷ ವರ್ಷ ಲಕ್ಷಾಂತರ ಯುವಜನರು ಡಿಗ್ರಿ ಪಡ್ಕೊಂಡ್ ನಿರುದ್ಯೋಗದ ಸಮಸ್ಯೆಯಿಂದ ತಮ್ಮೊಳಗಿನ ಆತ್ಮವಿಶ್ವಾಸವನ್ನೇ ಉಡುಗಿಸಿಕೊಂಡು ಕೈಚಲ್ಲಿ ಕೂತಿದ್ದಾರೆ. ಇಷ್ಟದ ಓದಿಲ್ಲ, ಓದಿಗೆ ತಕ್ಕನಂಥ ಉದ್ಯೋಗ ಇಲ್ಲ. ಉದ್ಯೋಗಕ್ಕೆ ತಕ್ಕದಾದ ಸಂಬಳ ಇಲ್ಲ. ಘನತೆ ಇದ್ಯಾ? ಪ್ರತಿವರ್ಷ ಎಸ್.ಎಸ್.ಎಲ್.ಸಿ ಪಾಸಾದ ಯುವಜನರಿಗೆ ಕರಿಯರ್ ಮಾರ್ಗದರ್ಶನ ಇಲ್ಲ. ಹರೆಯದಲ್ಲಿ ಅವರು ಅವರದ್ದೇ ಆದ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿಂದ, ಗೊಂದಲಗಳಿಂದ ಒದ್ದಾಡ್ತಾ ಇದ್ದಾರೆ. ಇಂಥವನ್ನೆಲ್ಲ ಬಿಟ್ಟು… ಇನ್ನೇನೋ ಮಾತಾಡ್ತೀರಲ್ಲ ತಾತ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ಸಾಮಾಜಿಕ ಕಾರ್ಯಕರ್ತ ನಾಗರಾಜ್ ಮೈತ್ರಿ ಅವರು, “ಕೊನೆಯ ಬಾರಿ ಇವರಿಗೆ ಮಿಸ್ ಆಗಿದೆ. ಈ ಸಲಾ ಪಕ್ಕಾ ಇವರಿಗೆ ಕೊಡುತ್ತಾರೆ ಎಂದು ತೋರುತ್ತದೆ. ವರ್ಷದ ಮೊದಲ ವಾರದಲ್ಲೆ ಇವರು ಬ್ಯಾಟಿಂಗ್ ಪ್ರಾರಂಭಿಸಿದ್ದಾಲ್ಲ, ಅದಕ್ಕಾದರೂ ಕೊಡುತ್ತಾರೆ” ಎಂದು, ಜ್ಞಾನಪೀಠಕ್ಕಾಗಿ ಎಸ್‌.ಎಲ್. ಭೈರಪ್ಪ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಸೂಚಿಸಿದ್ದಾರೆ.

ಮೌರ್ಯಾಸ್ ಅವರು, “ಶಾಲೆ ನಿರ್ಮಾಣವಾಗಲಿ ಅನ್ನೋದು ಬಿಟ್ಟು ದೇವಸ್ಥಾನ ನಿರ್ಮಾಣವಾಗಲಿ ಎಂದು ಹೇಳುತ್ತಿರುವ ಸಾಹಿತಿ ಭೈರಪ್ಪ ಇನ್ನೂ ಆಧುನಿಕ ಜಗತ್ತಿಗೆ ಬಂದಿಲ್ಲವೆಂಬುದೇ ದುರಂತ. ಇವರೆಂತಹ ಸಾಹಿತಿ ಎಂಬುದು ಆರ್ಥವಾಗುತ್ತಿದೆ” ಎಂದು ಬರೆದಿದ್ದಾರೆ.

ವಿಠಲ್ ವಗ್ಗನ್ ಅವರು ,”ಶಾಲೆಗಳನ್ನು ಕಟ್ಟಿ ವಿದ್ಯಾವಂತರನ್ನು ಸೃಷ್ಟಿ ಮಾಡಿ ಎಂದು ಸಲಹೆ ಕೊಡದ S. L. ಭೈರಪ್ಪ. ಗುಡಿಗಳನ್ನು ಕಟ್ಟಿ ಭಿಕ್ಷುಕರನ್ನು ಮತ್ತು ಅಂಧ ಭಕ್ತರನ್ನು ಹೆಚ್ಚಿಸಿ ಎಂದು ಸಲಹೆ ಕೊಡುವ ಮನುವ್ಯಾದಿ ಯಾವ ಸೀಮೆ ಸಾಹಿತಿ ?” ಎಂದು ಬರೆದಿದ್ದಾರೆ.

ಗುರುಪ್ರಸಾದ್ ಅವರು, “ಭೈರಪ್ಪನವರಿಗೆ ಇನ್ನೂ ಯಾಕ ಯಾರು ದೇವಸ್ತಾನ ಕಟ್ಟಿಲ್ಲ. ಕಟ್ಟಿಬುಡ್ರೋ ಬೇಗ, ಟ್ರಂಪ್‌ಗೆ ಕಟ್ಟಿದ್ದೀರಂತೆ” ಎಂದು ಬಿಜೆಪಿ ಅಭಿಮಾನಿಗಳನ್ನು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮೀಸಲಾತಿ ವಿರೋಧಿ-ಮೀಸಲಾತಿ ಹೆಚ್ಚಳ ಬೇಡಿಕೆಯ ರಾಜಕೀಯದ ನಡುವೆ ಸವಲತ್ತು ಉಳಿಸಿಕೊಳ್ಳುವ ಮಸಲತ್ತು!

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಗೆಯು ಬರುತಿದೆ ನನಗೆ ಈ ಲೇಖನಗಳನ್ನೆಲ್ಲ ನೋಡಿ
    ಅಪ್ಪಟ ಎಡಪಂಥೀಯ/ದೇಶವಿರೋಧಿ ಆಲೋಚನೆಗಳ ವಿವಿಧ ರಾಗಗಳ ಮೇಳಗಳ ಪ್ರಲಾಪ ಎಂದೆನಿಸುತ್ತಿದೆ
    ಮನಸ್ಸಾಕ್ಷಿ ಯೇ ಕಾಣುತ್ತಿಲ್ಲ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...