Homeಕರ್ನಾಟಕಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

ಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

- Advertisement -
- Advertisement -

‘‘ದೇಶದಲ್ಲಿ ಸುಮಾರು 35 ಸಾವಿರ ದೇವಾಲಯಗಳು ಒಡೆದು ಛಿದ್ರವಾಗಿವೆ. ಅವುಗಳನ್ನು ಮರುನಿರ್ಮಾಣ ಮಾಡಿ ಮೂಲ ವಾರಸುದಾರರಿಗೆ ಒಪ್ಪಿಸುವಂತಹ ಕಾನೂನನ್ನು ಸಂಸತ್ತು‌ ರೂಪಿಸಲಿ’’ ಎಂದು ಸಾಹಿತಿ ಎಸ್‌.ಎಲ್‌.ಭೈರಪ್ಪ ನೀಡಿದ್ದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, “ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನವದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದು ಪಂಜಾಬಿಗಳು ಮಾತ್ರ. ಈ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಕಮ್ಯುನಿಷ್ಟ್‌ ಪಕ್ಷಗಳು ಕೊಳಕು ರಾಜಕೀಯ ಮಾಡುತ್ತಿವೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶದ ಜೊತೆಗೆ ಟ್ರೋಲ್‌ಗೂ ಒಳಗಾಗಿದ್ದಾರೆ. ವೈಚಾರಿಕ ಲೇಖಕ ಯೋಗೇಶ್ ಮೇಷ್ಟ್ರು, ಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ ಎಂದು ವ್ಯಂಗ್ಯ ವ್ಯಕ್ತಪಡಿಸಿದ್ದು, “ದೇಶದಲ್ಲಿ 35 ಸಾವಿರ ದೇವಾಲಯಗಳು ಒಡೆದು ಛಿದ್ರವಾಗಿವೆ ಎಂಬುದು ಭೈರಪ್ಪನವರ ಲೆಕ್ಕ. ಇದೇ ದೇಶದಲ್ಲಿ ಕೋಟ್ಯಾಂತರ ಹೃದಯಗಳು ಈ ದೇವಾಲಯದ ರಾಜಕಾಣದಲ್ಲಿ ಛಿದ್ರವಾಗಿರುವುದು ನನಗೆ ಪಕ್ಕ. ದೇವಾಲಯಗಳನ್ನು ಮರು ನಿರ್ಮಾಣ ಮಾಡಿ ಅವುಗಳ ಮೂಲ ವಾರಸುದಾರರಿಗೆ ಒಪ್ಪಿಸುವ ಕಾನೂನಲ್ಲ ಪಾರ್ಲಿಮೆಂಟ್ ಮಾಡಬೇಕಾಗಿರುವುದು, ಮನಸುಗಳನ್ನು ಸ್ವಸ್ಥಗೊಳಿಸಿ, ಹೃದಯಗಳನ್ನು ಬೆಚ್ಚಗಿಡುವ ಜರೂರತ್ತು ಎಲ್ಲರಿಗಿರುವುದು” ಎಂದು ಅವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಸಾಹಿತಿ ವಿ. ಆರ್‌. ಕಾರ್ಪೇಂಟರ್‌ ಅವರು, ಲೈಂಗಿಕತೆ ಮತ್ತು ಸ್ವಾರ್ಥಳನ್ನೇ ತನ್ನ ಕಾದಂಬರಿಗಳಲ್ಲಿ ತುಂಬಿ ಬರೆದ, ಮಾನವೀಯತೆಯ ಲವಶೇಷವಿಲ್ಲದ ಭೈರಪ್ಪ ಒಬ್ಬ ತೃತೀಯ ದರ್ಜೆಯ ಲೇಖಕ ಎಂದು ಆಕ್ರೋಶ ವ್ಯಕ್ತಪಡಿಸಿ, “ಐದರಿಂದ ಆರು ಕೋಟಿ ಜನಸಂಖ್ಯೆ ಇರುವ ನಿಮ್ಮ ಜಾತಿಯ ಜನಕ್ಕೆ ಬರೀ 35000 ಟೆಂಪಲ್‌ಗಳ? ಭೈರಪ್ಪ ತುಂಬಾ ಕಂಜೂಸ್ ಅನಿಸ್ತಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಶರಣು ಚಕ್ರಸಾಲಿ ಅವರು, “ಎಸ್ ಎಲ್ ಭೈರಪ್ಪ ಅವರು ತಮ್ಮ ಶವಪೆಟ್ಟಿಗೆಗೆ ತಾವೇ ಕೊನೆ ಮೊಳೆ ಹೊಡೆದುಕೊಳ್ಳುತ್ತಿದ್ದಾರೆ ಎಂದು ಅನಿಸುತ್ತಿದೆ. ಒಬ್ಬ ಲೇಖಕರಾಗಿ ಇಷ್ಟು ಲಜ್ಜಗೇಡಿ ಬದುಕನ್ನು ಬದುಕಬಾರದು. ಇವರ ಬಗ್ಗೆ ಇರುವ ಸಣ್ಣ ಗೌರವ ಕೂಡ ಇವತ್ತು ಮನಸ್ಸಿನಿಂದ ಮಾಯವಾಯಿತು” ಎಂದು ಬರೆದಿದ್ದಾರೆ.

ಸಂವಾದ ಕಾಲೇಜಿನ ಯೂತ್ ಮೇಂಟರ್‌ ಆಗಿರುವ ರುಕ್ಮಿಣಿ ನಾಗಣ್ಣನವರ್‌ ಅವರು, “ಬದುಕೋಕೆ ಮೂಲಭೂತವಾಗಿ ಬೇಕಿರೋದು ಮಂದಿರ, ಮಸೀದಿ, ಚರ್ಚುಗಳ ನಿರ್ಮಾಣವಲ್ಲ. ತಲೆ ಮೇಲೊಂದು ಸೂರು, ಬೆಚ್ಚನೆಯ ಬಟ್ಟೆ, ಹೊದಿಕೆ, ಶುದ್ಧ ಗಾಳಿ, ನೀರು. ಶಿಕ್ಷಣ ಅನ್ನೋ ಫ್ಯಾಕ್ಟ್ರರಿಯಲ್ಲಿ ವರ್ಷ ವರ್ಷ ಲಕ್ಷಾಂತರ ಯುವಜನರು ಡಿಗ್ರಿ ಪಡ್ಕೊಂಡ್ ನಿರುದ್ಯೋಗದ ಸಮಸ್ಯೆಯಿಂದ ತಮ್ಮೊಳಗಿನ ಆತ್ಮವಿಶ್ವಾಸವನ್ನೇ ಉಡುಗಿಸಿಕೊಂಡು ಕೈಚಲ್ಲಿ ಕೂತಿದ್ದಾರೆ. ಇಷ್ಟದ ಓದಿಲ್ಲ, ಓದಿಗೆ ತಕ್ಕನಂಥ ಉದ್ಯೋಗ ಇಲ್ಲ. ಉದ್ಯೋಗಕ್ಕೆ ತಕ್ಕದಾದ ಸಂಬಳ ಇಲ್ಲ. ಘನತೆ ಇದ್ಯಾ? ಪ್ರತಿವರ್ಷ ಎಸ್.ಎಸ್.ಎಲ್.ಸಿ ಪಾಸಾದ ಯುವಜನರಿಗೆ ಕರಿಯರ್ ಮಾರ್ಗದರ್ಶನ ಇಲ್ಲ. ಹರೆಯದಲ್ಲಿ ಅವರು ಅವರದ್ದೇ ಆದ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿಂದ, ಗೊಂದಲಗಳಿಂದ ಒದ್ದಾಡ್ತಾ ಇದ್ದಾರೆ. ಇಂಥವನ್ನೆಲ್ಲ ಬಿಟ್ಟು… ಇನ್ನೇನೋ ಮಾತಾಡ್ತೀರಲ್ಲ ತಾತ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ಸಾಮಾಜಿಕ ಕಾರ್ಯಕರ್ತ ನಾಗರಾಜ್ ಮೈತ್ರಿ ಅವರು, “ಕೊನೆಯ ಬಾರಿ ಇವರಿಗೆ ಮಿಸ್ ಆಗಿದೆ. ಈ ಸಲಾ ಪಕ್ಕಾ ಇವರಿಗೆ ಕೊಡುತ್ತಾರೆ ಎಂದು ತೋರುತ್ತದೆ. ವರ್ಷದ ಮೊದಲ ವಾರದಲ್ಲೆ ಇವರು ಬ್ಯಾಟಿಂಗ್ ಪ್ರಾರಂಭಿಸಿದ್ದಾಲ್ಲ, ಅದಕ್ಕಾದರೂ ಕೊಡುತ್ತಾರೆ” ಎಂದು, ಜ್ಞಾನಪೀಠಕ್ಕಾಗಿ ಎಸ್‌.ಎಲ್. ಭೈರಪ್ಪ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಸೂಚಿಸಿದ್ದಾರೆ.

ಮೌರ್ಯಾಸ್ ಅವರು, “ಶಾಲೆ ನಿರ್ಮಾಣವಾಗಲಿ ಅನ್ನೋದು ಬಿಟ್ಟು ದೇವಸ್ಥಾನ ನಿರ್ಮಾಣವಾಗಲಿ ಎಂದು ಹೇಳುತ್ತಿರುವ ಸಾಹಿತಿ ಭೈರಪ್ಪ ಇನ್ನೂ ಆಧುನಿಕ ಜಗತ್ತಿಗೆ ಬಂದಿಲ್ಲವೆಂಬುದೇ ದುರಂತ. ಇವರೆಂತಹ ಸಾಹಿತಿ ಎಂಬುದು ಆರ್ಥವಾಗುತ್ತಿದೆ” ಎಂದು ಬರೆದಿದ್ದಾರೆ.

ವಿಠಲ್ ವಗ್ಗನ್ ಅವರು ,”ಶಾಲೆಗಳನ್ನು ಕಟ್ಟಿ ವಿದ್ಯಾವಂತರನ್ನು ಸೃಷ್ಟಿ ಮಾಡಿ ಎಂದು ಸಲಹೆ ಕೊಡದ S. L. ಭೈರಪ್ಪ. ಗುಡಿಗಳನ್ನು ಕಟ್ಟಿ ಭಿಕ್ಷುಕರನ್ನು ಮತ್ತು ಅಂಧ ಭಕ್ತರನ್ನು ಹೆಚ್ಚಿಸಿ ಎಂದು ಸಲಹೆ ಕೊಡುವ ಮನುವ್ಯಾದಿ ಯಾವ ಸೀಮೆ ಸಾಹಿತಿ ?” ಎಂದು ಬರೆದಿದ್ದಾರೆ.

ಗುರುಪ್ರಸಾದ್ ಅವರು, “ಭೈರಪ್ಪನವರಿಗೆ ಇನ್ನೂ ಯಾಕ ಯಾರು ದೇವಸ್ತಾನ ಕಟ್ಟಿಲ್ಲ. ಕಟ್ಟಿಬುಡ್ರೋ ಬೇಗ, ಟ್ರಂಪ್‌ಗೆ ಕಟ್ಟಿದ್ದೀರಂತೆ” ಎಂದು ಬಿಜೆಪಿ ಅಭಿಮಾನಿಗಳನ್ನು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮೀಸಲಾತಿ ವಿರೋಧಿ-ಮೀಸಲಾತಿ ಹೆಚ್ಚಳ ಬೇಡಿಕೆಯ ರಾಜಕೀಯದ ನಡುವೆ ಸವಲತ್ತು ಉಳಿಸಿಕೊಳ್ಳುವ ಮಸಲತ್ತು!

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಗೆಯು ಬರುತಿದೆ ನನಗೆ ಈ ಲೇಖನಗಳನ್ನೆಲ್ಲ ನೋಡಿ
    ಅಪ್ಪಟ ಎಡಪಂಥೀಯ/ದೇಶವಿರೋಧಿ ಆಲೋಚನೆಗಳ ವಿವಿಧ ರಾಗಗಳ ಮೇಳಗಳ ಪ್ರಲಾಪ ಎಂದೆನಿಸುತ್ತಿದೆ
    ಮನಸ್ಸಾಕ್ಷಿ ಯೇ ಕಾಣುತ್ತಿಲ್ಲ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....