Homeಕರ್ನಾಟಕಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

ಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

- Advertisement -
- Advertisement -

‘‘ದೇಶದಲ್ಲಿ ಸುಮಾರು 35 ಸಾವಿರ ದೇವಾಲಯಗಳು ಒಡೆದು ಛಿದ್ರವಾಗಿವೆ. ಅವುಗಳನ್ನು ಮರುನಿರ್ಮಾಣ ಮಾಡಿ ಮೂಲ ವಾರಸುದಾರರಿಗೆ ಒಪ್ಪಿಸುವಂತಹ ಕಾನೂನನ್ನು ಸಂಸತ್ತು‌ ರೂಪಿಸಲಿ’’ ಎಂದು ಸಾಹಿತಿ ಎಸ್‌.ಎಲ್‌.ಭೈರಪ್ಪ ನೀಡಿದ್ದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, “ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನವದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದು ಪಂಜಾಬಿಗಳು ಮಾತ್ರ. ಈ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಕಮ್ಯುನಿಷ್ಟ್‌ ಪಕ್ಷಗಳು ಕೊಳಕು ರಾಜಕೀಯ ಮಾಡುತ್ತಿವೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶದ ಜೊತೆಗೆ ಟ್ರೋಲ್‌ಗೂ ಒಳಗಾಗಿದ್ದಾರೆ. ವೈಚಾರಿಕ ಲೇಖಕ ಯೋಗೇಶ್ ಮೇಷ್ಟ್ರು, ಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ ಎಂದು ವ್ಯಂಗ್ಯ ವ್ಯಕ್ತಪಡಿಸಿದ್ದು, “ದೇಶದಲ್ಲಿ 35 ಸಾವಿರ ದೇವಾಲಯಗಳು ಒಡೆದು ಛಿದ್ರವಾಗಿವೆ ಎಂಬುದು ಭೈರಪ್ಪನವರ ಲೆಕ್ಕ. ಇದೇ ದೇಶದಲ್ಲಿ ಕೋಟ್ಯಾಂತರ ಹೃದಯಗಳು ಈ ದೇವಾಲಯದ ರಾಜಕಾಣದಲ್ಲಿ ಛಿದ್ರವಾಗಿರುವುದು ನನಗೆ ಪಕ್ಕ. ದೇವಾಲಯಗಳನ್ನು ಮರು ನಿರ್ಮಾಣ ಮಾಡಿ ಅವುಗಳ ಮೂಲ ವಾರಸುದಾರರಿಗೆ ಒಪ್ಪಿಸುವ ಕಾನೂನಲ್ಲ ಪಾರ್ಲಿಮೆಂಟ್ ಮಾಡಬೇಕಾಗಿರುವುದು, ಮನಸುಗಳನ್ನು ಸ್ವಸ್ಥಗೊಳಿಸಿ, ಹೃದಯಗಳನ್ನು ಬೆಚ್ಚಗಿಡುವ ಜರೂರತ್ತು ಎಲ್ಲರಿಗಿರುವುದು” ಎಂದು ಅವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಸಾಹಿತಿ ವಿ. ಆರ್‌. ಕಾರ್ಪೇಂಟರ್‌ ಅವರು, ಲೈಂಗಿಕತೆ ಮತ್ತು ಸ್ವಾರ್ಥಳನ್ನೇ ತನ್ನ ಕಾದಂಬರಿಗಳಲ್ಲಿ ತುಂಬಿ ಬರೆದ, ಮಾನವೀಯತೆಯ ಲವಶೇಷವಿಲ್ಲದ ಭೈರಪ್ಪ ಒಬ್ಬ ತೃತೀಯ ದರ್ಜೆಯ ಲೇಖಕ ಎಂದು ಆಕ್ರೋಶ ವ್ಯಕ್ತಪಡಿಸಿ, “ಐದರಿಂದ ಆರು ಕೋಟಿ ಜನಸಂಖ್ಯೆ ಇರುವ ನಿಮ್ಮ ಜಾತಿಯ ಜನಕ್ಕೆ ಬರೀ 35000 ಟೆಂಪಲ್‌ಗಳ? ಭೈರಪ್ಪ ತುಂಬಾ ಕಂಜೂಸ್ ಅನಿಸ್ತಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಶರಣು ಚಕ್ರಸಾಲಿ ಅವರು, “ಎಸ್ ಎಲ್ ಭೈರಪ್ಪ ಅವರು ತಮ್ಮ ಶವಪೆಟ್ಟಿಗೆಗೆ ತಾವೇ ಕೊನೆ ಮೊಳೆ ಹೊಡೆದುಕೊಳ್ಳುತ್ತಿದ್ದಾರೆ ಎಂದು ಅನಿಸುತ್ತಿದೆ. ಒಬ್ಬ ಲೇಖಕರಾಗಿ ಇಷ್ಟು ಲಜ್ಜಗೇಡಿ ಬದುಕನ್ನು ಬದುಕಬಾರದು. ಇವರ ಬಗ್ಗೆ ಇರುವ ಸಣ್ಣ ಗೌರವ ಕೂಡ ಇವತ್ತು ಮನಸ್ಸಿನಿಂದ ಮಾಯವಾಯಿತು” ಎಂದು ಬರೆದಿದ್ದಾರೆ.

ಸಂವಾದ ಕಾಲೇಜಿನ ಯೂತ್ ಮೇಂಟರ್‌ ಆಗಿರುವ ರುಕ್ಮಿಣಿ ನಾಗಣ್ಣನವರ್‌ ಅವರು, “ಬದುಕೋಕೆ ಮೂಲಭೂತವಾಗಿ ಬೇಕಿರೋದು ಮಂದಿರ, ಮಸೀದಿ, ಚರ್ಚುಗಳ ನಿರ್ಮಾಣವಲ್ಲ. ತಲೆ ಮೇಲೊಂದು ಸೂರು, ಬೆಚ್ಚನೆಯ ಬಟ್ಟೆ, ಹೊದಿಕೆ, ಶುದ್ಧ ಗಾಳಿ, ನೀರು. ಶಿಕ್ಷಣ ಅನ್ನೋ ಫ್ಯಾಕ್ಟ್ರರಿಯಲ್ಲಿ ವರ್ಷ ವರ್ಷ ಲಕ್ಷಾಂತರ ಯುವಜನರು ಡಿಗ್ರಿ ಪಡ್ಕೊಂಡ್ ನಿರುದ್ಯೋಗದ ಸಮಸ್ಯೆಯಿಂದ ತಮ್ಮೊಳಗಿನ ಆತ್ಮವಿಶ್ವಾಸವನ್ನೇ ಉಡುಗಿಸಿಕೊಂಡು ಕೈಚಲ್ಲಿ ಕೂತಿದ್ದಾರೆ. ಇಷ್ಟದ ಓದಿಲ್ಲ, ಓದಿಗೆ ತಕ್ಕನಂಥ ಉದ್ಯೋಗ ಇಲ್ಲ. ಉದ್ಯೋಗಕ್ಕೆ ತಕ್ಕದಾದ ಸಂಬಳ ಇಲ್ಲ. ಘನತೆ ಇದ್ಯಾ? ಪ್ರತಿವರ್ಷ ಎಸ್.ಎಸ್.ಎಲ್.ಸಿ ಪಾಸಾದ ಯುವಜನರಿಗೆ ಕರಿಯರ್ ಮಾರ್ಗದರ್ಶನ ಇಲ್ಲ. ಹರೆಯದಲ್ಲಿ ಅವರು ಅವರದ್ದೇ ಆದ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿಂದ, ಗೊಂದಲಗಳಿಂದ ಒದ್ದಾಡ್ತಾ ಇದ್ದಾರೆ. ಇಂಥವನ್ನೆಲ್ಲ ಬಿಟ್ಟು… ಇನ್ನೇನೋ ಮಾತಾಡ್ತೀರಲ್ಲ ತಾತ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ಸಾಮಾಜಿಕ ಕಾರ್ಯಕರ್ತ ನಾಗರಾಜ್ ಮೈತ್ರಿ ಅವರು, “ಕೊನೆಯ ಬಾರಿ ಇವರಿಗೆ ಮಿಸ್ ಆಗಿದೆ. ಈ ಸಲಾ ಪಕ್ಕಾ ಇವರಿಗೆ ಕೊಡುತ್ತಾರೆ ಎಂದು ತೋರುತ್ತದೆ. ವರ್ಷದ ಮೊದಲ ವಾರದಲ್ಲೆ ಇವರು ಬ್ಯಾಟಿಂಗ್ ಪ್ರಾರಂಭಿಸಿದ್ದಾಲ್ಲ, ಅದಕ್ಕಾದರೂ ಕೊಡುತ್ತಾರೆ” ಎಂದು, ಜ್ಞಾನಪೀಠಕ್ಕಾಗಿ ಎಸ್‌.ಎಲ್. ಭೈರಪ್ಪ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಸೂಚಿಸಿದ್ದಾರೆ.

ಮೌರ್ಯಾಸ್ ಅವರು, “ಶಾಲೆ ನಿರ್ಮಾಣವಾಗಲಿ ಅನ್ನೋದು ಬಿಟ್ಟು ದೇವಸ್ಥಾನ ನಿರ್ಮಾಣವಾಗಲಿ ಎಂದು ಹೇಳುತ್ತಿರುವ ಸಾಹಿತಿ ಭೈರಪ್ಪ ಇನ್ನೂ ಆಧುನಿಕ ಜಗತ್ತಿಗೆ ಬಂದಿಲ್ಲವೆಂಬುದೇ ದುರಂತ. ಇವರೆಂತಹ ಸಾಹಿತಿ ಎಂಬುದು ಆರ್ಥವಾಗುತ್ತಿದೆ” ಎಂದು ಬರೆದಿದ್ದಾರೆ.

ವಿಠಲ್ ವಗ್ಗನ್ ಅವರು ,”ಶಾಲೆಗಳನ್ನು ಕಟ್ಟಿ ವಿದ್ಯಾವಂತರನ್ನು ಸೃಷ್ಟಿ ಮಾಡಿ ಎಂದು ಸಲಹೆ ಕೊಡದ S. L. ಭೈರಪ್ಪ. ಗುಡಿಗಳನ್ನು ಕಟ್ಟಿ ಭಿಕ್ಷುಕರನ್ನು ಮತ್ತು ಅಂಧ ಭಕ್ತರನ್ನು ಹೆಚ್ಚಿಸಿ ಎಂದು ಸಲಹೆ ಕೊಡುವ ಮನುವ್ಯಾದಿ ಯಾವ ಸೀಮೆ ಸಾಹಿತಿ ?” ಎಂದು ಬರೆದಿದ್ದಾರೆ.

ಗುರುಪ್ರಸಾದ್ ಅವರು, “ಭೈರಪ್ಪನವರಿಗೆ ಇನ್ನೂ ಯಾಕ ಯಾರು ದೇವಸ್ತಾನ ಕಟ್ಟಿಲ್ಲ. ಕಟ್ಟಿಬುಡ್ರೋ ಬೇಗ, ಟ್ರಂಪ್‌ಗೆ ಕಟ್ಟಿದ್ದೀರಂತೆ” ಎಂದು ಬಿಜೆಪಿ ಅಭಿಮಾನಿಗಳನ್ನು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮೀಸಲಾತಿ ವಿರೋಧಿ-ಮೀಸಲಾತಿ ಹೆಚ್ಚಳ ಬೇಡಿಕೆಯ ರಾಜಕೀಯದ ನಡುವೆ ಸವಲತ್ತು ಉಳಿಸಿಕೊಳ್ಳುವ ಮಸಲತ್ತು!

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಗೆಯು ಬರುತಿದೆ ನನಗೆ ಈ ಲೇಖನಗಳನ್ನೆಲ್ಲ ನೋಡಿ
    ಅಪ್ಪಟ ಎಡಪಂಥೀಯ/ದೇಶವಿರೋಧಿ ಆಲೋಚನೆಗಳ ವಿವಿಧ ರಾಗಗಳ ಮೇಳಗಳ ಪ್ರಲಾಪ ಎಂದೆನಿಸುತ್ತಿದೆ
    ಮನಸ್ಸಾಕ್ಷಿ ಯೇ ಕಾಣುತ್ತಿಲ್ಲ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...