Homeಕರ್ನಾಟಕಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

ಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

- Advertisement -
- Advertisement -

‘‘ದೇಶದಲ್ಲಿ ಸುಮಾರು 35 ಸಾವಿರ ದೇವಾಲಯಗಳು ಒಡೆದು ಛಿದ್ರವಾಗಿವೆ. ಅವುಗಳನ್ನು ಮರುನಿರ್ಮಾಣ ಮಾಡಿ ಮೂಲ ವಾರಸುದಾರರಿಗೆ ಒಪ್ಪಿಸುವಂತಹ ಕಾನೂನನ್ನು ಸಂಸತ್ತು‌ ರೂಪಿಸಲಿ’’ ಎಂದು ಸಾಹಿತಿ ಎಸ್‌.ಎಲ್‌.ಭೈರಪ್ಪ ನೀಡಿದ್ದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, “ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನವದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದು ಪಂಜಾಬಿಗಳು ಮಾತ್ರ. ಈ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಕಮ್ಯುನಿಷ್ಟ್‌ ಪಕ್ಷಗಳು ಕೊಳಕು ರಾಜಕೀಯ ಮಾಡುತ್ತಿವೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶದ ಜೊತೆಗೆ ಟ್ರೋಲ್‌ಗೂ ಒಳಗಾಗಿದ್ದಾರೆ. ವೈಚಾರಿಕ ಲೇಖಕ ಯೋಗೇಶ್ ಮೇಷ್ಟ್ರು, ಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ ಎಂದು ವ್ಯಂಗ್ಯ ವ್ಯಕ್ತಪಡಿಸಿದ್ದು, “ದೇಶದಲ್ಲಿ 35 ಸಾವಿರ ದೇವಾಲಯಗಳು ಒಡೆದು ಛಿದ್ರವಾಗಿವೆ ಎಂಬುದು ಭೈರಪ್ಪನವರ ಲೆಕ್ಕ. ಇದೇ ದೇಶದಲ್ಲಿ ಕೋಟ್ಯಾಂತರ ಹೃದಯಗಳು ಈ ದೇವಾಲಯದ ರಾಜಕಾಣದಲ್ಲಿ ಛಿದ್ರವಾಗಿರುವುದು ನನಗೆ ಪಕ್ಕ. ದೇವಾಲಯಗಳನ್ನು ಮರು ನಿರ್ಮಾಣ ಮಾಡಿ ಅವುಗಳ ಮೂಲ ವಾರಸುದಾರರಿಗೆ ಒಪ್ಪಿಸುವ ಕಾನೂನಲ್ಲ ಪಾರ್ಲಿಮೆಂಟ್ ಮಾಡಬೇಕಾಗಿರುವುದು, ಮನಸುಗಳನ್ನು ಸ್ವಸ್ಥಗೊಳಿಸಿ, ಹೃದಯಗಳನ್ನು ಬೆಚ್ಚಗಿಡುವ ಜರೂರತ್ತು ಎಲ್ಲರಿಗಿರುವುದು” ಎಂದು ಅವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಸಾಹಿತಿ ವಿ. ಆರ್‌. ಕಾರ್ಪೇಂಟರ್‌ ಅವರು, ಲೈಂಗಿಕತೆ ಮತ್ತು ಸ್ವಾರ್ಥಳನ್ನೇ ತನ್ನ ಕಾದಂಬರಿಗಳಲ್ಲಿ ತುಂಬಿ ಬರೆದ, ಮಾನವೀಯತೆಯ ಲವಶೇಷವಿಲ್ಲದ ಭೈರಪ್ಪ ಒಬ್ಬ ತೃತೀಯ ದರ್ಜೆಯ ಲೇಖಕ ಎಂದು ಆಕ್ರೋಶ ವ್ಯಕ್ತಪಡಿಸಿ, “ಐದರಿಂದ ಆರು ಕೋಟಿ ಜನಸಂಖ್ಯೆ ಇರುವ ನಿಮ್ಮ ಜಾತಿಯ ಜನಕ್ಕೆ ಬರೀ 35000 ಟೆಂಪಲ್‌ಗಳ? ಭೈರಪ್ಪ ತುಂಬಾ ಕಂಜೂಸ್ ಅನಿಸ್ತಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಶರಣು ಚಕ್ರಸಾಲಿ ಅವರು, “ಎಸ್ ಎಲ್ ಭೈರಪ್ಪ ಅವರು ತಮ್ಮ ಶವಪೆಟ್ಟಿಗೆಗೆ ತಾವೇ ಕೊನೆ ಮೊಳೆ ಹೊಡೆದುಕೊಳ್ಳುತ್ತಿದ್ದಾರೆ ಎಂದು ಅನಿಸುತ್ತಿದೆ. ಒಬ್ಬ ಲೇಖಕರಾಗಿ ಇಷ್ಟು ಲಜ್ಜಗೇಡಿ ಬದುಕನ್ನು ಬದುಕಬಾರದು. ಇವರ ಬಗ್ಗೆ ಇರುವ ಸಣ್ಣ ಗೌರವ ಕೂಡ ಇವತ್ತು ಮನಸ್ಸಿನಿಂದ ಮಾಯವಾಯಿತು” ಎಂದು ಬರೆದಿದ್ದಾರೆ.

ಸಂವಾದ ಕಾಲೇಜಿನ ಯೂತ್ ಮೇಂಟರ್‌ ಆಗಿರುವ ರುಕ್ಮಿಣಿ ನಾಗಣ್ಣನವರ್‌ ಅವರು, “ಬದುಕೋಕೆ ಮೂಲಭೂತವಾಗಿ ಬೇಕಿರೋದು ಮಂದಿರ, ಮಸೀದಿ, ಚರ್ಚುಗಳ ನಿರ್ಮಾಣವಲ್ಲ. ತಲೆ ಮೇಲೊಂದು ಸೂರು, ಬೆಚ್ಚನೆಯ ಬಟ್ಟೆ, ಹೊದಿಕೆ, ಶುದ್ಧ ಗಾಳಿ, ನೀರು. ಶಿಕ್ಷಣ ಅನ್ನೋ ಫ್ಯಾಕ್ಟ್ರರಿಯಲ್ಲಿ ವರ್ಷ ವರ್ಷ ಲಕ್ಷಾಂತರ ಯುವಜನರು ಡಿಗ್ರಿ ಪಡ್ಕೊಂಡ್ ನಿರುದ್ಯೋಗದ ಸಮಸ್ಯೆಯಿಂದ ತಮ್ಮೊಳಗಿನ ಆತ್ಮವಿಶ್ವಾಸವನ್ನೇ ಉಡುಗಿಸಿಕೊಂಡು ಕೈಚಲ್ಲಿ ಕೂತಿದ್ದಾರೆ. ಇಷ್ಟದ ಓದಿಲ್ಲ, ಓದಿಗೆ ತಕ್ಕನಂಥ ಉದ್ಯೋಗ ಇಲ್ಲ. ಉದ್ಯೋಗಕ್ಕೆ ತಕ್ಕದಾದ ಸಂಬಳ ಇಲ್ಲ. ಘನತೆ ಇದ್ಯಾ? ಪ್ರತಿವರ್ಷ ಎಸ್.ಎಸ್.ಎಲ್.ಸಿ ಪಾಸಾದ ಯುವಜನರಿಗೆ ಕರಿಯರ್ ಮಾರ್ಗದರ್ಶನ ಇಲ್ಲ. ಹರೆಯದಲ್ಲಿ ಅವರು ಅವರದ್ದೇ ಆದ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿಂದ, ಗೊಂದಲಗಳಿಂದ ಒದ್ದಾಡ್ತಾ ಇದ್ದಾರೆ. ಇಂಥವನ್ನೆಲ್ಲ ಬಿಟ್ಟು… ಇನ್ನೇನೋ ಮಾತಾಡ್ತೀರಲ್ಲ ತಾತ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ಸಾಮಾಜಿಕ ಕಾರ್ಯಕರ್ತ ನಾಗರಾಜ್ ಮೈತ್ರಿ ಅವರು, “ಕೊನೆಯ ಬಾರಿ ಇವರಿಗೆ ಮಿಸ್ ಆಗಿದೆ. ಈ ಸಲಾ ಪಕ್ಕಾ ಇವರಿಗೆ ಕೊಡುತ್ತಾರೆ ಎಂದು ತೋರುತ್ತದೆ. ವರ್ಷದ ಮೊದಲ ವಾರದಲ್ಲೆ ಇವರು ಬ್ಯಾಟಿಂಗ್ ಪ್ರಾರಂಭಿಸಿದ್ದಾಲ್ಲ, ಅದಕ್ಕಾದರೂ ಕೊಡುತ್ತಾರೆ” ಎಂದು, ಜ್ಞಾನಪೀಠಕ್ಕಾಗಿ ಎಸ್‌.ಎಲ್. ಭೈರಪ್ಪ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಸೂಚಿಸಿದ್ದಾರೆ.

ಮೌರ್ಯಾಸ್ ಅವರು, “ಶಾಲೆ ನಿರ್ಮಾಣವಾಗಲಿ ಅನ್ನೋದು ಬಿಟ್ಟು ದೇವಸ್ಥಾನ ನಿರ್ಮಾಣವಾಗಲಿ ಎಂದು ಹೇಳುತ್ತಿರುವ ಸಾಹಿತಿ ಭೈರಪ್ಪ ಇನ್ನೂ ಆಧುನಿಕ ಜಗತ್ತಿಗೆ ಬಂದಿಲ್ಲವೆಂಬುದೇ ದುರಂತ. ಇವರೆಂತಹ ಸಾಹಿತಿ ಎಂಬುದು ಆರ್ಥವಾಗುತ್ತಿದೆ” ಎಂದು ಬರೆದಿದ್ದಾರೆ.

ವಿಠಲ್ ವಗ್ಗನ್ ಅವರು ,”ಶಾಲೆಗಳನ್ನು ಕಟ್ಟಿ ವಿದ್ಯಾವಂತರನ್ನು ಸೃಷ್ಟಿ ಮಾಡಿ ಎಂದು ಸಲಹೆ ಕೊಡದ S. L. ಭೈರಪ್ಪ. ಗುಡಿಗಳನ್ನು ಕಟ್ಟಿ ಭಿಕ್ಷುಕರನ್ನು ಮತ್ತು ಅಂಧ ಭಕ್ತರನ್ನು ಹೆಚ್ಚಿಸಿ ಎಂದು ಸಲಹೆ ಕೊಡುವ ಮನುವ್ಯಾದಿ ಯಾವ ಸೀಮೆ ಸಾಹಿತಿ ?” ಎಂದು ಬರೆದಿದ್ದಾರೆ.

ಗುರುಪ್ರಸಾದ್ ಅವರು, “ಭೈರಪ್ಪನವರಿಗೆ ಇನ್ನೂ ಯಾಕ ಯಾರು ದೇವಸ್ತಾನ ಕಟ್ಟಿಲ್ಲ. ಕಟ್ಟಿಬುಡ್ರೋ ಬೇಗ, ಟ್ರಂಪ್‌ಗೆ ಕಟ್ಟಿದ್ದೀರಂತೆ” ಎಂದು ಬಿಜೆಪಿ ಅಭಿಮಾನಿಗಳನ್ನು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮೀಸಲಾತಿ ವಿರೋಧಿ-ಮೀಸಲಾತಿ ಹೆಚ್ಚಳ ಬೇಡಿಕೆಯ ರಾಜಕೀಯದ ನಡುವೆ ಸವಲತ್ತು ಉಳಿಸಿಕೊಳ್ಳುವ ಮಸಲತ್ತು!

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಗೆಯು ಬರುತಿದೆ ನನಗೆ ಈ ಲೇಖನಗಳನ್ನೆಲ್ಲ ನೋಡಿ
    ಅಪ್ಪಟ ಎಡಪಂಥೀಯ/ದೇಶವಿರೋಧಿ ಆಲೋಚನೆಗಳ ವಿವಿಧ ರಾಗಗಳ ಮೇಳಗಳ ಪ್ರಲಾಪ ಎಂದೆನಿಸುತ್ತಿದೆ
    ಮನಸ್ಸಾಕ್ಷಿ ಯೇ ಕಾಣುತ್ತಿಲ್ಲ

LEAVE A REPLY

Please enter your comment!
Please enter your name here

- Advertisment -

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಉವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...