Homeಕರ್ನಾಟಕಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

ಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

- Advertisement -
- Advertisement -

‘‘ದೇಶದಲ್ಲಿ ಸುಮಾರು 35 ಸಾವಿರ ದೇವಾಲಯಗಳು ಒಡೆದು ಛಿದ್ರವಾಗಿವೆ. ಅವುಗಳನ್ನು ಮರುನಿರ್ಮಾಣ ಮಾಡಿ ಮೂಲ ವಾರಸುದಾರರಿಗೆ ಒಪ್ಪಿಸುವಂತಹ ಕಾನೂನನ್ನು ಸಂಸತ್ತು‌ ರೂಪಿಸಲಿ’’ ಎಂದು ಸಾಹಿತಿ ಎಸ್‌.ಎಲ್‌.ಭೈರಪ್ಪ ನೀಡಿದ್ದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, “ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನವದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದು ಪಂಜಾಬಿಗಳು ಮಾತ್ರ. ಈ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಕಮ್ಯುನಿಷ್ಟ್‌ ಪಕ್ಷಗಳು ಕೊಳಕು ರಾಜಕೀಯ ಮಾಡುತ್ತಿವೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶದ ಜೊತೆಗೆ ಟ್ರೋಲ್‌ಗೂ ಒಳಗಾಗಿದ್ದಾರೆ. ವೈಚಾರಿಕ ಲೇಖಕ ಯೋಗೇಶ್ ಮೇಷ್ಟ್ರು, ಭೈರಪ್ಪಾ, ಆಲಯದಿಂದ ಬಯಲಿಗೆ ಬಾರಪ್ಪ ಎಂದು ವ್ಯಂಗ್ಯ ವ್ಯಕ್ತಪಡಿಸಿದ್ದು, “ದೇಶದಲ್ಲಿ 35 ಸಾವಿರ ದೇವಾಲಯಗಳು ಒಡೆದು ಛಿದ್ರವಾಗಿವೆ ಎಂಬುದು ಭೈರಪ್ಪನವರ ಲೆಕ್ಕ. ಇದೇ ದೇಶದಲ್ಲಿ ಕೋಟ್ಯಾಂತರ ಹೃದಯಗಳು ಈ ದೇವಾಲಯದ ರಾಜಕಾಣದಲ್ಲಿ ಛಿದ್ರವಾಗಿರುವುದು ನನಗೆ ಪಕ್ಕ. ದೇವಾಲಯಗಳನ್ನು ಮರು ನಿರ್ಮಾಣ ಮಾಡಿ ಅವುಗಳ ಮೂಲ ವಾರಸುದಾರರಿಗೆ ಒಪ್ಪಿಸುವ ಕಾನೂನಲ್ಲ ಪಾರ್ಲಿಮೆಂಟ್ ಮಾಡಬೇಕಾಗಿರುವುದು, ಮನಸುಗಳನ್ನು ಸ್ವಸ್ಥಗೊಳಿಸಿ, ಹೃದಯಗಳನ್ನು ಬೆಚ್ಚಗಿಡುವ ಜರೂರತ್ತು ಎಲ್ಲರಿಗಿರುವುದು” ಎಂದು ಅವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಸಾಹಿತಿ ವಿ. ಆರ್‌. ಕಾರ್ಪೇಂಟರ್‌ ಅವರು, ಲೈಂಗಿಕತೆ ಮತ್ತು ಸ್ವಾರ್ಥಳನ್ನೇ ತನ್ನ ಕಾದಂಬರಿಗಳಲ್ಲಿ ತುಂಬಿ ಬರೆದ, ಮಾನವೀಯತೆಯ ಲವಶೇಷವಿಲ್ಲದ ಭೈರಪ್ಪ ಒಬ್ಬ ತೃತೀಯ ದರ್ಜೆಯ ಲೇಖಕ ಎಂದು ಆಕ್ರೋಶ ವ್ಯಕ್ತಪಡಿಸಿ, “ಐದರಿಂದ ಆರು ಕೋಟಿ ಜನಸಂಖ್ಯೆ ಇರುವ ನಿಮ್ಮ ಜಾತಿಯ ಜನಕ್ಕೆ ಬರೀ 35000 ಟೆಂಪಲ್‌ಗಳ? ಭೈರಪ್ಪ ತುಂಬಾ ಕಂಜೂಸ್ ಅನಿಸ್ತಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಶರಣು ಚಕ್ರಸಾಲಿ ಅವರು, “ಎಸ್ ಎಲ್ ಭೈರಪ್ಪ ಅವರು ತಮ್ಮ ಶವಪೆಟ್ಟಿಗೆಗೆ ತಾವೇ ಕೊನೆ ಮೊಳೆ ಹೊಡೆದುಕೊಳ್ಳುತ್ತಿದ್ದಾರೆ ಎಂದು ಅನಿಸುತ್ತಿದೆ. ಒಬ್ಬ ಲೇಖಕರಾಗಿ ಇಷ್ಟು ಲಜ್ಜಗೇಡಿ ಬದುಕನ್ನು ಬದುಕಬಾರದು. ಇವರ ಬಗ್ಗೆ ಇರುವ ಸಣ್ಣ ಗೌರವ ಕೂಡ ಇವತ್ತು ಮನಸ್ಸಿನಿಂದ ಮಾಯವಾಯಿತು” ಎಂದು ಬರೆದಿದ್ದಾರೆ.

ಸಂವಾದ ಕಾಲೇಜಿನ ಯೂತ್ ಮೇಂಟರ್‌ ಆಗಿರುವ ರುಕ್ಮಿಣಿ ನಾಗಣ್ಣನವರ್‌ ಅವರು, “ಬದುಕೋಕೆ ಮೂಲಭೂತವಾಗಿ ಬೇಕಿರೋದು ಮಂದಿರ, ಮಸೀದಿ, ಚರ್ಚುಗಳ ನಿರ್ಮಾಣವಲ್ಲ. ತಲೆ ಮೇಲೊಂದು ಸೂರು, ಬೆಚ್ಚನೆಯ ಬಟ್ಟೆ, ಹೊದಿಕೆ, ಶುದ್ಧ ಗಾಳಿ, ನೀರು. ಶಿಕ್ಷಣ ಅನ್ನೋ ಫ್ಯಾಕ್ಟ್ರರಿಯಲ್ಲಿ ವರ್ಷ ವರ್ಷ ಲಕ್ಷಾಂತರ ಯುವಜನರು ಡಿಗ್ರಿ ಪಡ್ಕೊಂಡ್ ನಿರುದ್ಯೋಗದ ಸಮಸ್ಯೆಯಿಂದ ತಮ್ಮೊಳಗಿನ ಆತ್ಮವಿಶ್ವಾಸವನ್ನೇ ಉಡುಗಿಸಿಕೊಂಡು ಕೈಚಲ್ಲಿ ಕೂತಿದ್ದಾರೆ. ಇಷ್ಟದ ಓದಿಲ್ಲ, ಓದಿಗೆ ತಕ್ಕನಂಥ ಉದ್ಯೋಗ ಇಲ್ಲ. ಉದ್ಯೋಗಕ್ಕೆ ತಕ್ಕದಾದ ಸಂಬಳ ಇಲ್ಲ. ಘನತೆ ಇದ್ಯಾ? ಪ್ರತಿವರ್ಷ ಎಸ್.ಎಸ್.ಎಲ್.ಸಿ ಪಾಸಾದ ಯುವಜನರಿಗೆ ಕರಿಯರ್ ಮಾರ್ಗದರ್ಶನ ಇಲ್ಲ. ಹರೆಯದಲ್ಲಿ ಅವರು ಅವರದ್ದೇ ಆದ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿಂದ, ಗೊಂದಲಗಳಿಂದ ಒದ್ದಾಡ್ತಾ ಇದ್ದಾರೆ. ಇಂಥವನ್ನೆಲ್ಲ ಬಿಟ್ಟು… ಇನ್ನೇನೋ ಮಾತಾಡ್ತೀರಲ್ಲ ತಾತ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ಸಾಮಾಜಿಕ ಕಾರ್ಯಕರ್ತ ನಾಗರಾಜ್ ಮೈತ್ರಿ ಅವರು, “ಕೊನೆಯ ಬಾರಿ ಇವರಿಗೆ ಮಿಸ್ ಆಗಿದೆ. ಈ ಸಲಾ ಪಕ್ಕಾ ಇವರಿಗೆ ಕೊಡುತ್ತಾರೆ ಎಂದು ತೋರುತ್ತದೆ. ವರ್ಷದ ಮೊದಲ ವಾರದಲ್ಲೆ ಇವರು ಬ್ಯಾಟಿಂಗ್ ಪ್ರಾರಂಭಿಸಿದ್ದಾಲ್ಲ, ಅದಕ್ಕಾದರೂ ಕೊಡುತ್ತಾರೆ” ಎಂದು, ಜ್ಞಾನಪೀಠಕ್ಕಾಗಿ ಎಸ್‌.ಎಲ್. ಭೈರಪ್ಪ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಸೂಚಿಸಿದ್ದಾರೆ.

ಮೌರ್ಯಾಸ್ ಅವರು, “ಶಾಲೆ ನಿರ್ಮಾಣವಾಗಲಿ ಅನ್ನೋದು ಬಿಟ್ಟು ದೇವಸ್ಥಾನ ನಿರ್ಮಾಣವಾಗಲಿ ಎಂದು ಹೇಳುತ್ತಿರುವ ಸಾಹಿತಿ ಭೈರಪ್ಪ ಇನ್ನೂ ಆಧುನಿಕ ಜಗತ್ತಿಗೆ ಬಂದಿಲ್ಲವೆಂಬುದೇ ದುರಂತ. ಇವರೆಂತಹ ಸಾಹಿತಿ ಎಂಬುದು ಆರ್ಥವಾಗುತ್ತಿದೆ” ಎಂದು ಬರೆದಿದ್ದಾರೆ.

ವಿಠಲ್ ವಗ್ಗನ್ ಅವರು ,”ಶಾಲೆಗಳನ್ನು ಕಟ್ಟಿ ವಿದ್ಯಾವಂತರನ್ನು ಸೃಷ್ಟಿ ಮಾಡಿ ಎಂದು ಸಲಹೆ ಕೊಡದ S. L. ಭೈರಪ್ಪ. ಗುಡಿಗಳನ್ನು ಕಟ್ಟಿ ಭಿಕ್ಷುಕರನ್ನು ಮತ್ತು ಅಂಧ ಭಕ್ತರನ್ನು ಹೆಚ್ಚಿಸಿ ಎಂದು ಸಲಹೆ ಕೊಡುವ ಮನುವ್ಯಾದಿ ಯಾವ ಸೀಮೆ ಸಾಹಿತಿ ?” ಎಂದು ಬರೆದಿದ್ದಾರೆ.

ಗುರುಪ್ರಸಾದ್ ಅವರು, “ಭೈರಪ್ಪನವರಿಗೆ ಇನ್ನೂ ಯಾಕ ಯಾರು ದೇವಸ್ತಾನ ಕಟ್ಟಿಲ್ಲ. ಕಟ್ಟಿಬುಡ್ರೋ ಬೇಗ, ಟ್ರಂಪ್‌ಗೆ ಕಟ್ಟಿದ್ದೀರಂತೆ” ಎಂದು ಬಿಜೆಪಿ ಅಭಿಮಾನಿಗಳನ್ನು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮೀಸಲಾತಿ ವಿರೋಧಿ-ಮೀಸಲಾತಿ ಹೆಚ್ಚಳ ಬೇಡಿಕೆಯ ರಾಜಕೀಯದ ನಡುವೆ ಸವಲತ್ತು ಉಳಿಸಿಕೊಳ್ಳುವ ಮಸಲತ್ತು!

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಗೆಯು ಬರುತಿದೆ ನನಗೆ ಈ ಲೇಖನಗಳನ್ನೆಲ್ಲ ನೋಡಿ
    ಅಪ್ಪಟ ಎಡಪಂಥೀಯ/ದೇಶವಿರೋಧಿ ಆಲೋಚನೆಗಳ ವಿವಿಧ ರಾಗಗಳ ಮೇಳಗಳ ಪ್ರಲಾಪ ಎಂದೆನಿಸುತ್ತಿದೆ
    ಮನಸ್ಸಾಕ್ಷಿ ಯೇ ಕಾಣುತ್ತಿಲ್ಲ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...