Homeಕರ್ನಾಟಕಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

- Advertisement -
- Advertisement -

ಮೈಸೂರಿನಲ್ಲಿ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಮೈಸೂರು ಲಯನ್ಸ್‌ ಕ್ಲಬ್‌‌ ಆಫ್‌ ಸೌತ್ ಸಂಸ್ಥೆಯಿಂದ ಸೋಮವಾರ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿರುವ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರು, “ಭಿಕ್ಷುಕ ರಾಷ್ಟ್ರವಾಗಿದ್ದ ಭಾರತವೀಗ ವಿಶ್ವದ ನೇತಾರ ರಾಷ್ಟ್ರವಾಗಿದೆ” ಎಂದು ಹೇಳಿದ್ದಾರೆ.

“ಎಡಪಂಥೀಯ ಸಿದ್ಧಾಂತಕ್ಕೆ ಒಡೆಯೋದು ಗೊತ್ತಿತ್ತೇ ಹೊರತು ಕಟ್ಟೋದು ಗೊತ್ತೇ ಇರಲಿಲ್ಲ. ಇದು ಆರಂಭವಾಗಿದ್ದು ನೆಹರೂ ಕಾಲದಿಂದ. ರಷ್ಯನ್ ಮಾದರಿಯನ್ನು ಭಾರತಕ್ಕೆ ತರಲು ಈ ದೇಶವನ್ನು ಭಿಕ್ಷುಕ ದೇಶವನ್ನಾಗಿ ಮಾಡಿಬಿಟ್ಟರು. ಇದು ಎಲ್ಲಿಗೆ ಹೋಗಿ ಮುಟ್ಟಿತ್ತೆಂದರೆ ನಮ್ಮ ದೇಶದ ಚಿನ್ನವನ್ನು ಅಡವಿಟ್ಟು, ಬ್ರಿಟನ್‌ ಬ್ಯಾಂಕಿನಿಂದ ಸಾಲ ಕೇಳಬೇಕಾಗಿ ಬಂತು. ನಿಮ್ಮ ಚಿನ್ನವನ್ನು ನಮ್ಮ ದೇಶದಲ್ಲಿ ಅಡವಿಟ್ಟರೆ ಮಾತ್ರ ಸಾಲಕೊಡುತ್ತೇವೆ ಎಂದು ಬ್ರಿಟನ್ ಬ್ಯಾಂಕ್ ಹೇಳಿತ್ತು. ಭಾರತದ ಮೇಲೆ ಇತರೆ ದೇಶಗಳಿಗೆ ನಂಬಿಕೆ ಇರಲಿಲ್ಲ” ಎಂದು ಭೈರಪ್ಪ ತಿಳಿಸಿದ್ದಾರೆ.

“ನಮ್ಮ ಬಲಹೀನತೆ ವೈಚಾರಿಕತೆ ಮತ್ತು ಸಾಹಿತ್ಯಕ್ಕೂ ತಟ್ಟಿತು. ಕೀಳರಿಮೆಯನ್ನು ಬಿಂಬಿಸುವುದೇ ನಮ್ಮ ಶ್ರೇಷ್ಠತೆ ಆಯಿತು. ಇದನ್ನು ಮೆಟ್ಟಿ ನಿಲ್ಲಬೇಕಾದ ಕಾಲ ಇದೀಗ ಬಂದಿದೆ. ಇಂದು ಪರಿಸ್ಥಿತಿ ಬದಲಾಗಿವೆ. ವಿಶ್ವದ ಮುಂದೆ ಭಾರತ ಎದೆಯುಬ್ಬಿಸಿ ನಿಂತಿದೆ. ನಮ್ಮ ಆಹಾರ ಪದಾರ್ಥಗಳನ್ನು ಹೊರ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ. ಭಾರತ ಇದೀಗ ಭಿಕ್ಷುಕ ರಾಷ್ಟ್ರವಲ್ಲ. ಇದು ಹೇಗೆ ಸಾಧ್ಯವಾಯಿತು? ಇದನ್ನು ಅರ್ಥಮಾಡಿಕೊಳ್ಳಲು ಇಷ್ಟು ವರ್ಷ ಬೇಕಾಯಿತು. ಇದಕ್ಕಾಗಿ ಸಮರ್ಥ ನಾಯಕತ್ವ ಬೇಕಾಯಿತು..” ಎಂದಿರುವ ಅವರು, ಎಂದಿನಂತೆ ನರೇಂದ್ರ ಮೋದಿಯವರ ನಾಯಕತ್ವವನ್ನು ಹೊಗಳಿದ್ದಾರೆ.

ಭೈರಪ್ಪ ಅವರು ಹೇಳಿರುವ ಮಾತುಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮೈಸೂರು ಭಾಗದ ಜನಪರ ಪತ್ರಿಕೆ ‘ಆಂದೋಲನ’ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಭೈರಪ್ಪ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ


“ತಮ್ಮ ಪಂಚೇಂದ್ರಿಯಗಳನ್ನು ಕಳೆದುಕೊಂಡು ಮಾತನಾಡುತ್ತಿರುವ ಭೈರಪ್ಪನವರು ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆದಿರುವುದು ಬೇಸರದ ಸಂಗತಿ. ಸಾಹಿತಿ ಅಂದರೆ ತನ್ನ ಅಧ್ಯಯನ, ವಿಚಾರಧಾರೆಯ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ಬಯಸುವುದು ಸಾಮಾನ್ಯ ನಿರೀಕ್ಷೆ. ಆದರೆ ಈ ಆಶಯಗಳಿಗೆ ತದ್ವಿರುದ್ಧವಾಗಿ ಮಾತನಾಡುತ್ತಿರುವ ಭೈರಪ್ಪನವರ ಮಾತುಗಳ ಬಗ್ಗೆ ನನಗಂತೂ ಯಾವುದೇ ಅಚ್ಚರಿಯಿಲ್ಲ. ಕಾರಣ ಅವರು ಬೆಳೆದು ಬಂದಿರುವ ಸಾಮಾಜಿಕ ಹಿನ್ನಲೆಯ ಮಹಿಮೆ ಅಂತದ್ದು” ಎಂದು ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮುಂದುವರಿದು, “ಆದರೂ ತಾನು ಬದುಕಿದ್ದ ದೇಶದ ಇತಿಹಾಸವನ್ನೇ ಅರಿಯದ ಸಾಹಿತಿಯೊಬ್ಬರು ನೇರವಾಗಿ ತನ್ನ ದೇಶವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆಯಬೇಕಾದರೆ ಆತ ಯಾವುದೋ ಗಂಭೀರ ಮಾನಸಿಕ ಖಾಯಿಲೆಯಿಂದ ಬಳಲುತ್ತಿರಬಹುದು ಎಂದೇ ನನಗೆ ಅನಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಹಿಂದಿನ ಸಾಲದ ಪ್ರಮಾಣಕ್ಕೆ ಹೋಲಿಸಿದರೆ ಈಗ ಅದರ ಪ್ರಮಾಣ ಹೆಚ್ಚಾಗಿದೆ. ಈ ಸಂಗತಿಯನ್ನು ಅರಿಯದ ಭೈರಪ್ಪನವರು ಅನಗತ್ಯವಾಗಿ ನೆಹರೂ ಹೆಸರನ್ನು ಎಳೆದು ತಂದಿರುವುದರ ಹಿಂದೆ ಮನುವಾದಿ ಸರ್ಕಾರವನ್ನು ಬೆಂಬಲಿಸುವ ಅವರ ಬೌದ್ಧಿಕ ಕುತಂತ್ರ ಅಡಗಿದೆಯೇ ವಿನಃ ಸಾಮಾಜಿಕ ನ್ಯಾಯ ಸಾಧನೆಗೆ ಪೂರಕವಾದ ಯಾವ ಅಂಶವೂ ಇಲ್ಲಿ ಇಲ್ಲ” ಎಂದಿದ್ದಾರೆ.

“ದೇಶದ ಅಯೋಮಯ ಸ್ಥಿತಿಯ ಬಗ್ಗೆ ಮತ್ತು ಜನ ಸಾಮಾನ್ಯರ ಸಂಕಷ್ಟದ ಬದುಕಿನ ಬಗ್ಗೆ ಸತ್ಯ ಗೊತ್ತಿದ್ದರೂ ಸುಳ್ಳನ್ನೇ ಆಯ್ಕೆ ಮಾಡಿಕೊಳ್ಳುವ ಭೈರಪ್ಪನವರ ಮಾತನ್ನು ಯಾರೂ ಸೀರಿಯಸ್ಸಾಗಿ ತೆಗೆದುಕೊಳ್ಳಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...