Homeಕರ್ನಾಟಕಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

- Advertisement -
- Advertisement -

ಮೈಸೂರಿನಲ್ಲಿ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಮೈಸೂರು ಲಯನ್ಸ್‌ ಕ್ಲಬ್‌‌ ಆಫ್‌ ಸೌತ್ ಸಂಸ್ಥೆಯಿಂದ ಸೋಮವಾರ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿರುವ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರು, “ಭಿಕ್ಷುಕ ರಾಷ್ಟ್ರವಾಗಿದ್ದ ಭಾರತವೀಗ ವಿಶ್ವದ ನೇತಾರ ರಾಷ್ಟ್ರವಾಗಿದೆ” ಎಂದು ಹೇಳಿದ್ದಾರೆ.

“ಎಡಪಂಥೀಯ ಸಿದ್ಧಾಂತಕ್ಕೆ ಒಡೆಯೋದು ಗೊತ್ತಿತ್ತೇ ಹೊರತು ಕಟ್ಟೋದು ಗೊತ್ತೇ ಇರಲಿಲ್ಲ. ಇದು ಆರಂಭವಾಗಿದ್ದು ನೆಹರೂ ಕಾಲದಿಂದ. ರಷ್ಯನ್ ಮಾದರಿಯನ್ನು ಭಾರತಕ್ಕೆ ತರಲು ಈ ದೇಶವನ್ನು ಭಿಕ್ಷುಕ ದೇಶವನ್ನಾಗಿ ಮಾಡಿಬಿಟ್ಟರು. ಇದು ಎಲ್ಲಿಗೆ ಹೋಗಿ ಮುಟ್ಟಿತ್ತೆಂದರೆ ನಮ್ಮ ದೇಶದ ಚಿನ್ನವನ್ನು ಅಡವಿಟ್ಟು, ಬ್ರಿಟನ್‌ ಬ್ಯಾಂಕಿನಿಂದ ಸಾಲ ಕೇಳಬೇಕಾಗಿ ಬಂತು. ನಿಮ್ಮ ಚಿನ್ನವನ್ನು ನಮ್ಮ ದೇಶದಲ್ಲಿ ಅಡವಿಟ್ಟರೆ ಮಾತ್ರ ಸಾಲಕೊಡುತ್ತೇವೆ ಎಂದು ಬ್ರಿಟನ್ ಬ್ಯಾಂಕ್ ಹೇಳಿತ್ತು. ಭಾರತದ ಮೇಲೆ ಇತರೆ ದೇಶಗಳಿಗೆ ನಂಬಿಕೆ ಇರಲಿಲ್ಲ” ಎಂದು ಭೈರಪ್ಪ ತಿಳಿಸಿದ್ದಾರೆ.

“ನಮ್ಮ ಬಲಹೀನತೆ ವೈಚಾರಿಕತೆ ಮತ್ತು ಸಾಹಿತ್ಯಕ್ಕೂ ತಟ್ಟಿತು. ಕೀಳರಿಮೆಯನ್ನು ಬಿಂಬಿಸುವುದೇ ನಮ್ಮ ಶ್ರೇಷ್ಠತೆ ಆಯಿತು. ಇದನ್ನು ಮೆಟ್ಟಿ ನಿಲ್ಲಬೇಕಾದ ಕಾಲ ಇದೀಗ ಬಂದಿದೆ. ಇಂದು ಪರಿಸ್ಥಿತಿ ಬದಲಾಗಿವೆ. ವಿಶ್ವದ ಮುಂದೆ ಭಾರತ ಎದೆಯುಬ್ಬಿಸಿ ನಿಂತಿದೆ. ನಮ್ಮ ಆಹಾರ ಪದಾರ್ಥಗಳನ್ನು ಹೊರ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ. ಭಾರತ ಇದೀಗ ಭಿಕ್ಷುಕ ರಾಷ್ಟ್ರವಲ್ಲ. ಇದು ಹೇಗೆ ಸಾಧ್ಯವಾಯಿತು? ಇದನ್ನು ಅರ್ಥಮಾಡಿಕೊಳ್ಳಲು ಇಷ್ಟು ವರ್ಷ ಬೇಕಾಯಿತು. ಇದಕ್ಕಾಗಿ ಸಮರ್ಥ ನಾಯಕತ್ವ ಬೇಕಾಯಿತು..” ಎಂದಿರುವ ಅವರು, ಎಂದಿನಂತೆ ನರೇಂದ್ರ ಮೋದಿಯವರ ನಾಯಕತ್ವವನ್ನು ಹೊಗಳಿದ್ದಾರೆ.

ಭೈರಪ್ಪ ಅವರು ಹೇಳಿರುವ ಮಾತುಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮೈಸೂರು ಭಾಗದ ಜನಪರ ಪತ್ರಿಕೆ ‘ಆಂದೋಲನ’ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಭೈರಪ್ಪ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ


“ತಮ್ಮ ಪಂಚೇಂದ್ರಿಯಗಳನ್ನು ಕಳೆದುಕೊಂಡು ಮಾತನಾಡುತ್ತಿರುವ ಭೈರಪ್ಪನವರು ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆದಿರುವುದು ಬೇಸರದ ಸಂಗತಿ. ಸಾಹಿತಿ ಅಂದರೆ ತನ್ನ ಅಧ್ಯಯನ, ವಿಚಾರಧಾರೆಯ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ಬಯಸುವುದು ಸಾಮಾನ್ಯ ನಿರೀಕ್ಷೆ. ಆದರೆ ಈ ಆಶಯಗಳಿಗೆ ತದ್ವಿರುದ್ಧವಾಗಿ ಮಾತನಾಡುತ್ತಿರುವ ಭೈರಪ್ಪನವರ ಮಾತುಗಳ ಬಗ್ಗೆ ನನಗಂತೂ ಯಾವುದೇ ಅಚ್ಚರಿಯಿಲ್ಲ. ಕಾರಣ ಅವರು ಬೆಳೆದು ಬಂದಿರುವ ಸಾಮಾಜಿಕ ಹಿನ್ನಲೆಯ ಮಹಿಮೆ ಅಂತದ್ದು” ಎಂದು ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮುಂದುವರಿದು, “ಆದರೂ ತಾನು ಬದುಕಿದ್ದ ದೇಶದ ಇತಿಹಾಸವನ್ನೇ ಅರಿಯದ ಸಾಹಿತಿಯೊಬ್ಬರು ನೇರವಾಗಿ ತನ್ನ ದೇಶವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆಯಬೇಕಾದರೆ ಆತ ಯಾವುದೋ ಗಂಭೀರ ಮಾನಸಿಕ ಖಾಯಿಲೆಯಿಂದ ಬಳಲುತ್ತಿರಬಹುದು ಎಂದೇ ನನಗೆ ಅನಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಹಿಂದಿನ ಸಾಲದ ಪ್ರಮಾಣಕ್ಕೆ ಹೋಲಿಸಿದರೆ ಈಗ ಅದರ ಪ್ರಮಾಣ ಹೆಚ್ಚಾಗಿದೆ. ಈ ಸಂಗತಿಯನ್ನು ಅರಿಯದ ಭೈರಪ್ಪನವರು ಅನಗತ್ಯವಾಗಿ ನೆಹರೂ ಹೆಸರನ್ನು ಎಳೆದು ತಂದಿರುವುದರ ಹಿಂದೆ ಮನುವಾದಿ ಸರ್ಕಾರವನ್ನು ಬೆಂಬಲಿಸುವ ಅವರ ಬೌದ್ಧಿಕ ಕುತಂತ್ರ ಅಡಗಿದೆಯೇ ವಿನಃ ಸಾಮಾಜಿಕ ನ್ಯಾಯ ಸಾಧನೆಗೆ ಪೂರಕವಾದ ಯಾವ ಅಂಶವೂ ಇಲ್ಲಿ ಇಲ್ಲ” ಎಂದಿದ್ದಾರೆ.

“ದೇಶದ ಅಯೋಮಯ ಸ್ಥಿತಿಯ ಬಗ್ಗೆ ಮತ್ತು ಜನ ಸಾಮಾನ್ಯರ ಸಂಕಷ್ಟದ ಬದುಕಿನ ಬಗ್ಗೆ ಸತ್ಯ ಗೊತ್ತಿದ್ದರೂ ಸುಳ್ಳನ್ನೇ ಆಯ್ಕೆ ಮಾಡಿಕೊಳ್ಳುವ ಭೈರಪ್ಪನವರ ಮಾತನ್ನು ಯಾರೂ ಸೀರಿಯಸ್ಸಾಗಿ ತೆಗೆದುಕೊಳ್ಳಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...