Homeಕರ್ನಾಟಕಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

- Advertisement -
- Advertisement -

ಮೈಸೂರಿನಲ್ಲಿ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಮೈಸೂರು ಲಯನ್ಸ್‌ ಕ್ಲಬ್‌‌ ಆಫ್‌ ಸೌತ್ ಸಂಸ್ಥೆಯಿಂದ ಸೋಮವಾರ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿರುವ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರು, “ಭಿಕ್ಷುಕ ರಾಷ್ಟ್ರವಾಗಿದ್ದ ಭಾರತವೀಗ ವಿಶ್ವದ ನೇತಾರ ರಾಷ್ಟ್ರವಾಗಿದೆ” ಎಂದು ಹೇಳಿದ್ದಾರೆ.

“ಎಡಪಂಥೀಯ ಸಿದ್ಧಾಂತಕ್ಕೆ ಒಡೆಯೋದು ಗೊತ್ತಿತ್ತೇ ಹೊರತು ಕಟ್ಟೋದು ಗೊತ್ತೇ ಇರಲಿಲ್ಲ. ಇದು ಆರಂಭವಾಗಿದ್ದು ನೆಹರೂ ಕಾಲದಿಂದ. ರಷ್ಯನ್ ಮಾದರಿಯನ್ನು ಭಾರತಕ್ಕೆ ತರಲು ಈ ದೇಶವನ್ನು ಭಿಕ್ಷುಕ ದೇಶವನ್ನಾಗಿ ಮಾಡಿಬಿಟ್ಟರು. ಇದು ಎಲ್ಲಿಗೆ ಹೋಗಿ ಮುಟ್ಟಿತ್ತೆಂದರೆ ನಮ್ಮ ದೇಶದ ಚಿನ್ನವನ್ನು ಅಡವಿಟ್ಟು, ಬ್ರಿಟನ್‌ ಬ್ಯಾಂಕಿನಿಂದ ಸಾಲ ಕೇಳಬೇಕಾಗಿ ಬಂತು. ನಿಮ್ಮ ಚಿನ್ನವನ್ನು ನಮ್ಮ ದೇಶದಲ್ಲಿ ಅಡವಿಟ್ಟರೆ ಮಾತ್ರ ಸಾಲಕೊಡುತ್ತೇವೆ ಎಂದು ಬ್ರಿಟನ್ ಬ್ಯಾಂಕ್ ಹೇಳಿತ್ತು. ಭಾರತದ ಮೇಲೆ ಇತರೆ ದೇಶಗಳಿಗೆ ನಂಬಿಕೆ ಇರಲಿಲ್ಲ” ಎಂದು ಭೈರಪ್ಪ ತಿಳಿಸಿದ್ದಾರೆ.

“ನಮ್ಮ ಬಲಹೀನತೆ ವೈಚಾರಿಕತೆ ಮತ್ತು ಸಾಹಿತ್ಯಕ್ಕೂ ತಟ್ಟಿತು. ಕೀಳರಿಮೆಯನ್ನು ಬಿಂಬಿಸುವುದೇ ನಮ್ಮ ಶ್ರೇಷ್ಠತೆ ಆಯಿತು. ಇದನ್ನು ಮೆಟ್ಟಿ ನಿಲ್ಲಬೇಕಾದ ಕಾಲ ಇದೀಗ ಬಂದಿದೆ. ಇಂದು ಪರಿಸ್ಥಿತಿ ಬದಲಾಗಿವೆ. ವಿಶ್ವದ ಮುಂದೆ ಭಾರತ ಎದೆಯುಬ್ಬಿಸಿ ನಿಂತಿದೆ. ನಮ್ಮ ಆಹಾರ ಪದಾರ್ಥಗಳನ್ನು ಹೊರ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ. ಭಾರತ ಇದೀಗ ಭಿಕ್ಷುಕ ರಾಷ್ಟ್ರವಲ್ಲ. ಇದು ಹೇಗೆ ಸಾಧ್ಯವಾಯಿತು? ಇದನ್ನು ಅರ್ಥಮಾಡಿಕೊಳ್ಳಲು ಇಷ್ಟು ವರ್ಷ ಬೇಕಾಯಿತು. ಇದಕ್ಕಾಗಿ ಸಮರ್ಥ ನಾಯಕತ್ವ ಬೇಕಾಯಿತು..” ಎಂದಿರುವ ಅವರು, ಎಂದಿನಂತೆ ನರೇಂದ್ರ ಮೋದಿಯವರ ನಾಯಕತ್ವವನ್ನು ಹೊಗಳಿದ್ದಾರೆ.

ಭೈರಪ್ಪ ಅವರು ಹೇಳಿರುವ ಮಾತುಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮೈಸೂರು ಭಾಗದ ಜನಪರ ಪತ್ರಿಕೆ ‘ಆಂದೋಲನ’ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಭೈರಪ್ಪ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ


“ತಮ್ಮ ಪಂಚೇಂದ್ರಿಯಗಳನ್ನು ಕಳೆದುಕೊಂಡು ಮಾತನಾಡುತ್ತಿರುವ ಭೈರಪ್ಪನವರು ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆದಿರುವುದು ಬೇಸರದ ಸಂಗತಿ. ಸಾಹಿತಿ ಅಂದರೆ ತನ್ನ ಅಧ್ಯಯನ, ವಿಚಾರಧಾರೆಯ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ಬಯಸುವುದು ಸಾಮಾನ್ಯ ನಿರೀಕ್ಷೆ. ಆದರೆ ಈ ಆಶಯಗಳಿಗೆ ತದ್ವಿರುದ್ಧವಾಗಿ ಮಾತನಾಡುತ್ತಿರುವ ಭೈರಪ್ಪನವರ ಮಾತುಗಳ ಬಗ್ಗೆ ನನಗಂತೂ ಯಾವುದೇ ಅಚ್ಚರಿಯಿಲ್ಲ. ಕಾರಣ ಅವರು ಬೆಳೆದು ಬಂದಿರುವ ಸಾಮಾಜಿಕ ಹಿನ್ನಲೆಯ ಮಹಿಮೆ ಅಂತದ್ದು” ಎಂದು ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮುಂದುವರಿದು, “ಆದರೂ ತಾನು ಬದುಕಿದ್ದ ದೇಶದ ಇತಿಹಾಸವನ್ನೇ ಅರಿಯದ ಸಾಹಿತಿಯೊಬ್ಬರು ನೇರವಾಗಿ ತನ್ನ ದೇಶವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆಯಬೇಕಾದರೆ ಆತ ಯಾವುದೋ ಗಂಭೀರ ಮಾನಸಿಕ ಖಾಯಿಲೆಯಿಂದ ಬಳಲುತ್ತಿರಬಹುದು ಎಂದೇ ನನಗೆ ಅನಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಹಿಂದಿನ ಸಾಲದ ಪ್ರಮಾಣಕ್ಕೆ ಹೋಲಿಸಿದರೆ ಈಗ ಅದರ ಪ್ರಮಾಣ ಹೆಚ್ಚಾಗಿದೆ. ಈ ಸಂಗತಿಯನ್ನು ಅರಿಯದ ಭೈರಪ್ಪನವರು ಅನಗತ್ಯವಾಗಿ ನೆಹರೂ ಹೆಸರನ್ನು ಎಳೆದು ತಂದಿರುವುದರ ಹಿಂದೆ ಮನುವಾದಿ ಸರ್ಕಾರವನ್ನು ಬೆಂಬಲಿಸುವ ಅವರ ಬೌದ್ಧಿಕ ಕುತಂತ್ರ ಅಡಗಿದೆಯೇ ವಿನಃ ಸಾಮಾಜಿಕ ನ್ಯಾಯ ಸಾಧನೆಗೆ ಪೂರಕವಾದ ಯಾವ ಅಂಶವೂ ಇಲ್ಲಿ ಇಲ್ಲ” ಎಂದಿದ್ದಾರೆ.

“ದೇಶದ ಅಯೋಮಯ ಸ್ಥಿತಿಯ ಬಗ್ಗೆ ಮತ್ತು ಜನ ಸಾಮಾನ್ಯರ ಸಂಕಷ್ಟದ ಬದುಕಿನ ಬಗ್ಗೆ ಸತ್ಯ ಗೊತ್ತಿದ್ದರೂ ಸುಳ್ಳನ್ನೇ ಆಯ್ಕೆ ಮಾಡಿಕೊಳ್ಳುವ ಭೈರಪ್ಪನವರ ಮಾತನ್ನು ಯಾರೂ ಸೀರಿಯಸ್ಸಾಗಿ ತೆಗೆದುಕೊಳ್ಳಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...