Homeಕರ್ನಾಟಕಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

- Advertisement -
- Advertisement -

ಮೈಸೂರಿನಲ್ಲಿ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಮೈಸೂರು ಲಯನ್ಸ್‌ ಕ್ಲಬ್‌‌ ಆಫ್‌ ಸೌತ್ ಸಂಸ್ಥೆಯಿಂದ ಸೋಮವಾರ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿರುವ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರು, “ಭಿಕ್ಷುಕ ರಾಷ್ಟ್ರವಾಗಿದ್ದ ಭಾರತವೀಗ ವಿಶ್ವದ ನೇತಾರ ರಾಷ್ಟ್ರವಾಗಿದೆ” ಎಂದು ಹೇಳಿದ್ದಾರೆ.

“ಎಡಪಂಥೀಯ ಸಿದ್ಧಾಂತಕ್ಕೆ ಒಡೆಯೋದು ಗೊತ್ತಿತ್ತೇ ಹೊರತು ಕಟ್ಟೋದು ಗೊತ್ತೇ ಇರಲಿಲ್ಲ. ಇದು ಆರಂಭವಾಗಿದ್ದು ನೆಹರೂ ಕಾಲದಿಂದ. ರಷ್ಯನ್ ಮಾದರಿಯನ್ನು ಭಾರತಕ್ಕೆ ತರಲು ಈ ದೇಶವನ್ನು ಭಿಕ್ಷುಕ ದೇಶವನ್ನಾಗಿ ಮಾಡಿಬಿಟ್ಟರು. ಇದು ಎಲ್ಲಿಗೆ ಹೋಗಿ ಮುಟ್ಟಿತ್ತೆಂದರೆ ನಮ್ಮ ದೇಶದ ಚಿನ್ನವನ್ನು ಅಡವಿಟ್ಟು, ಬ್ರಿಟನ್‌ ಬ್ಯಾಂಕಿನಿಂದ ಸಾಲ ಕೇಳಬೇಕಾಗಿ ಬಂತು. ನಿಮ್ಮ ಚಿನ್ನವನ್ನು ನಮ್ಮ ದೇಶದಲ್ಲಿ ಅಡವಿಟ್ಟರೆ ಮಾತ್ರ ಸಾಲಕೊಡುತ್ತೇವೆ ಎಂದು ಬ್ರಿಟನ್ ಬ್ಯಾಂಕ್ ಹೇಳಿತ್ತು. ಭಾರತದ ಮೇಲೆ ಇತರೆ ದೇಶಗಳಿಗೆ ನಂಬಿಕೆ ಇರಲಿಲ್ಲ” ಎಂದು ಭೈರಪ್ಪ ತಿಳಿಸಿದ್ದಾರೆ.

“ನಮ್ಮ ಬಲಹೀನತೆ ವೈಚಾರಿಕತೆ ಮತ್ತು ಸಾಹಿತ್ಯಕ್ಕೂ ತಟ್ಟಿತು. ಕೀಳರಿಮೆಯನ್ನು ಬಿಂಬಿಸುವುದೇ ನಮ್ಮ ಶ್ರೇಷ್ಠತೆ ಆಯಿತು. ಇದನ್ನು ಮೆಟ್ಟಿ ನಿಲ್ಲಬೇಕಾದ ಕಾಲ ಇದೀಗ ಬಂದಿದೆ. ಇಂದು ಪರಿಸ್ಥಿತಿ ಬದಲಾಗಿವೆ. ವಿಶ್ವದ ಮುಂದೆ ಭಾರತ ಎದೆಯುಬ್ಬಿಸಿ ನಿಂತಿದೆ. ನಮ್ಮ ಆಹಾರ ಪದಾರ್ಥಗಳನ್ನು ಹೊರ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ. ಭಾರತ ಇದೀಗ ಭಿಕ್ಷುಕ ರಾಷ್ಟ್ರವಲ್ಲ. ಇದು ಹೇಗೆ ಸಾಧ್ಯವಾಯಿತು? ಇದನ್ನು ಅರ್ಥಮಾಡಿಕೊಳ್ಳಲು ಇಷ್ಟು ವರ್ಷ ಬೇಕಾಯಿತು. ಇದಕ್ಕಾಗಿ ಸಮರ್ಥ ನಾಯಕತ್ವ ಬೇಕಾಯಿತು..” ಎಂದಿರುವ ಅವರು, ಎಂದಿನಂತೆ ನರೇಂದ್ರ ಮೋದಿಯವರ ನಾಯಕತ್ವವನ್ನು ಹೊಗಳಿದ್ದಾರೆ.

ಭೈರಪ್ಪ ಅವರು ಹೇಳಿರುವ ಮಾತುಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮೈಸೂರು ಭಾಗದ ಜನಪರ ಪತ್ರಿಕೆ ‘ಆಂದೋಲನ’ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಭೈರಪ್ಪ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ


“ತಮ್ಮ ಪಂಚೇಂದ್ರಿಯಗಳನ್ನು ಕಳೆದುಕೊಂಡು ಮಾತನಾಡುತ್ತಿರುವ ಭೈರಪ್ಪನವರು ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆದಿರುವುದು ಬೇಸರದ ಸಂಗತಿ. ಸಾಹಿತಿ ಅಂದರೆ ತನ್ನ ಅಧ್ಯಯನ, ವಿಚಾರಧಾರೆಯ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ಬಯಸುವುದು ಸಾಮಾನ್ಯ ನಿರೀಕ್ಷೆ. ಆದರೆ ಈ ಆಶಯಗಳಿಗೆ ತದ್ವಿರುದ್ಧವಾಗಿ ಮಾತನಾಡುತ್ತಿರುವ ಭೈರಪ್ಪನವರ ಮಾತುಗಳ ಬಗ್ಗೆ ನನಗಂತೂ ಯಾವುದೇ ಅಚ್ಚರಿಯಿಲ್ಲ. ಕಾರಣ ಅವರು ಬೆಳೆದು ಬಂದಿರುವ ಸಾಮಾಜಿಕ ಹಿನ್ನಲೆಯ ಮಹಿಮೆ ಅಂತದ್ದು” ಎಂದು ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮುಂದುವರಿದು, “ಆದರೂ ತಾನು ಬದುಕಿದ್ದ ದೇಶದ ಇತಿಹಾಸವನ್ನೇ ಅರಿಯದ ಸಾಹಿತಿಯೊಬ್ಬರು ನೇರವಾಗಿ ತನ್ನ ದೇಶವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆಯಬೇಕಾದರೆ ಆತ ಯಾವುದೋ ಗಂಭೀರ ಮಾನಸಿಕ ಖಾಯಿಲೆಯಿಂದ ಬಳಲುತ್ತಿರಬಹುದು ಎಂದೇ ನನಗೆ ಅನಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಹಿಂದಿನ ಸಾಲದ ಪ್ರಮಾಣಕ್ಕೆ ಹೋಲಿಸಿದರೆ ಈಗ ಅದರ ಪ್ರಮಾಣ ಹೆಚ್ಚಾಗಿದೆ. ಈ ಸಂಗತಿಯನ್ನು ಅರಿಯದ ಭೈರಪ್ಪನವರು ಅನಗತ್ಯವಾಗಿ ನೆಹರೂ ಹೆಸರನ್ನು ಎಳೆದು ತಂದಿರುವುದರ ಹಿಂದೆ ಮನುವಾದಿ ಸರ್ಕಾರವನ್ನು ಬೆಂಬಲಿಸುವ ಅವರ ಬೌದ್ಧಿಕ ಕುತಂತ್ರ ಅಡಗಿದೆಯೇ ವಿನಃ ಸಾಮಾಜಿಕ ನ್ಯಾಯ ಸಾಧನೆಗೆ ಪೂರಕವಾದ ಯಾವ ಅಂಶವೂ ಇಲ್ಲಿ ಇಲ್ಲ” ಎಂದಿದ್ದಾರೆ.

“ದೇಶದ ಅಯೋಮಯ ಸ್ಥಿತಿಯ ಬಗ್ಗೆ ಮತ್ತು ಜನ ಸಾಮಾನ್ಯರ ಸಂಕಷ್ಟದ ಬದುಕಿನ ಬಗ್ಗೆ ಸತ್ಯ ಗೊತ್ತಿದ್ದರೂ ಸುಳ್ಳನ್ನೇ ಆಯ್ಕೆ ಮಾಡಿಕೊಳ್ಳುವ ಭೈರಪ್ಪನವರ ಮಾತನ್ನು ಯಾರೂ ಸೀರಿಯಸ್ಸಾಗಿ ತೆಗೆದುಕೊಳ್ಳಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...