Homeಕರ್ನಾಟಕಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

- Advertisement -
- Advertisement -

ಮೈಸೂರಿನಲ್ಲಿ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಮೈಸೂರು ಲಯನ್ಸ್‌ ಕ್ಲಬ್‌‌ ಆಫ್‌ ಸೌತ್ ಸಂಸ್ಥೆಯಿಂದ ಸೋಮವಾರ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿರುವ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರು, “ಭಿಕ್ಷುಕ ರಾಷ್ಟ್ರವಾಗಿದ್ದ ಭಾರತವೀಗ ವಿಶ್ವದ ನೇತಾರ ರಾಷ್ಟ್ರವಾಗಿದೆ” ಎಂದು ಹೇಳಿದ್ದಾರೆ.

“ಎಡಪಂಥೀಯ ಸಿದ್ಧಾಂತಕ್ಕೆ ಒಡೆಯೋದು ಗೊತ್ತಿತ್ತೇ ಹೊರತು ಕಟ್ಟೋದು ಗೊತ್ತೇ ಇರಲಿಲ್ಲ. ಇದು ಆರಂಭವಾಗಿದ್ದು ನೆಹರೂ ಕಾಲದಿಂದ. ರಷ್ಯನ್ ಮಾದರಿಯನ್ನು ಭಾರತಕ್ಕೆ ತರಲು ಈ ದೇಶವನ್ನು ಭಿಕ್ಷುಕ ದೇಶವನ್ನಾಗಿ ಮಾಡಿಬಿಟ್ಟರು. ಇದು ಎಲ್ಲಿಗೆ ಹೋಗಿ ಮುಟ್ಟಿತ್ತೆಂದರೆ ನಮ್ಮ ದೇಶದ ಚಿನ್ನವನ್ನು ಅಡವಿಟ್ಟು, ಬ್ರಿಟನ್‌ ಬ್ಯಾಂಕಿನಿಂದ ಸಾಲ ಕೇಳಬೇಕಾಗಿ ಬಂತು. ನಿಮ್ಮ ಚಿನ್ನವನ್ನು ನಮ್ಮ ದೇಶದಲ್ಲಿ ಅಡವಿಟ್ಟರೆ ಮಾತ್ರ ಸಾಲಕೊಡುತ್ತೇವೆ ಎಂದು ಬ್ರಿಟನ್ ಬ್ಯಾಂಕ್ ಹೇಳಿತ್ತು. ಭಾರತದ ಮೇಲೆ ಇತರೆ ದೇಶಗಳಿಗೆ ನಂಬಿಕೆ ಇರಲಿಲ್ಲ” ಎಂದು ಭೈರಪ್ಪ ತಿಳಿಸಿದ್ದಾರೆ.

“ನಮ್ಮ ಬಲಹೀನತೆ ವೈಚಾರಿಕತೆ ಮತ್ತು ಸಾಹಿತ್ಯಕ್ಕೂ ತಟ್ಟಿತು. ಕೀಳರಿಮೆಯನ್ನು ಬಿಂಬಿಸುವುದೇ ನಮ್ಮ ಶ್ರೇಷ್ಠತೆ ಆಯಿತು. ಇದನ್ನು ಮೆಟ್ಟಿ ನಿಲ್ಲಬೇಕಾದ ಕಾಲ ಇದೀಗ ಬಂದಿದೆ. ಇಂದು ಪರಿಸ್ಥಿತಿ ಬದಲಾಗಿವೆ. ವಿಶ್ವದ ಮುಂದೆ ಭಾರತ ಎದೆಯುಬ್ಬಿಸಿ ನಿಂತಿದೆ. ನಮ್ಮ ಆಹಾರ ಪದಾರ್ಥಗಳನ್ನು ಹೊರ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ. ಭಾರತ ಇದೀಗ ಭಿಕ್ಷುಕ ರಾಷ್ಟ್ರವಲ್ಲ. ಇದು ಹೇಗೆ ಸಾಧ್ಯವಾಯಿತು? ಇದನ್ನು ಅರ್ಥಮಾಡಿಕೊಳ್ಳಲು ಇಷ್ಟು ವರ್ಷ ಬೇಕಾಯಿತು. ಇದಕ್ಕಾಗಿ ಸಮರ್ಥ ನಾಯಕತ್ವ ಬೇಕಾಯಿತು..” ಎಂದಿರುವ ಅವರು, ಎಂದಿನಂತೆ ನರೇಂದ್ರ ಮೋದಿಯವರ ನಾಯಕತ್ವವನ್ನು ಹೊಗಳಿದ್ದಾರೆ.

ಭೈರಪ್ಪ ಅವರು ಹೇಳಿರುವ ಮಾತುಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮೈಸೂರು ಭಾಗದ ಜನಪರ ಪತ್ರಿಕೆ ‘ಆಂದೋಲನ’ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಭೈರಪ್ಪ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ


“ತಮ್ಮ ಪಂಚೇಂದ್ರಿಯಗಳನ್ನು ಕಳೆದುಕೊಂಡು ಮಾತನಾಡುತ್ತಿರುವ ಭೈರಪ್ಪನವರು ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆದಿರುವುದು ಬೇಸರದ ಸಂಗತಿ. ಸಾಹಿತಿ ಅಂದರೆ ತನ್ನ ಅಧ್ಯಯನ, ವಿಚಾರಧಾರೆಯ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ಬಯಸುವುದು ಸಾಮಾನ್ಯ ನಿರೀಕ್ಷೆ. ಆದರೆ ಈ ಆಶಯಗಳಿಗೆ ತದ್ವಿರುದ್ಧವಾಗಿ ಮಾತನಾಡುತ್ತಿರುವ ಭೈರಪ್ಪನವರ ಮಾತುಗಳ ಬಗ್ಗೆ ನನಗಂತೂ ಯಾವುದೇ ಅಚ್ಚರಿಯಿಲ್ಲ. ಕಾರಣ ಅವರು ಬೆಳೆದು ಬಂದಿರುವ ಸಾಮಾಜಿಕ ಹಿನ್ನಲೆಯ ಮಹಿಮೆ ಅಂತದ್ದು” ಎಂದು ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮುಂದುವರಿದು, “ಆದರೂ ತಾನು ಬದುಕಿದ್ದ ದೇಶದ ಇತಿಹಾಸವನ್ನೇ ಅರಿಯದ ಸಾಹಿತಿಯೊಬ್ಬರು ನೇರವಾಗಿ ತನ್ನ ದೇಶವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆಯಬೇಕಾದರೆ ಆತ ಯಾವುದೋ ಗಂಭೀರ ಮಾನಸಿಕ ಖಾಯಿಲೆಯಿಂದ ಬಳಲುತ್ತಿರಬಹುದು ಎಂದೇ ನನಗೆ ಅನಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಹಿಂದಿನ ಸಾಲದ ಪ್ರಮಾಣಕ್ಕೆ ಹೋಲಿಸಿದರೆ ಈಗ ಅದರ ಪ್ರಮಾಣ ಹೆಚ್ಚಾಗಿದೆ. ಈ ಸಂಗತಿಯನ್ನು ಅರಿಯದ ಭೈರಪ್ಪನವರು ಅನಗತ್ಯವಾಗಿ ನೆಹರೂ ಹೆಸರನ್ನು ಎಳೆದು ತಂದಿರುವುದರ ಹಿಂದೆ ಮನುವಾದಿ ಸರ್ಕಾರವನ್ನು ಬೆಂಬಲಿಸುವ ಅವರ ಬೌದ್ಧಿಕ ಕುತಂತ್ರ ಅಡಗಿದೆಯೇ ವಿನಃ ಸಾಮಾಜಿಕ ನ್ಯಾಯ ಸಾಧನೆಗೆ ಪೂರಕವಾದ ಯಾವ ಅಂಶವೂ ಇಲ್ಲಿ ಇಲ್ಲ” ಎಂದಿದ್ದಾರೆ.

“ದೇಶದ ಅಯೋಮಯ ಸ್ಥಿತಿಯ ಬಗ್ಗೆ ಮತ್ತು ಜನ ಸಾಮಾನ್ಯರ ಸಂಕಷ್ಟದ ಬದುಕಿನ ಬಗ್ಗೆ ಸತ್ಯ ಗೊತ್ತಿದ್ದರೂ ಸುಳ್ಳನ್ನೇ ಆಯ್ಕೆ ಮಾಡಿಕೊಳ್ಳುವ ಭೈರಪ್ಪನವರ ಮಾತನ್ನು ಯಾರೂ ಸೀರಿಯಸ್ಸಾಗಿ ತೆಗೆದುಕೊಳ್ಳಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...