Homeಕರ್ನಾಟಕಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

- Advertisement -
- Advertisement -

ಮೈಸೂರಿನಲ್ಲಿ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಮೈಸೂರು ಲಯನ್ಸ್‌ ಕ್ಲಬ್‌‌ ಆಫ್‌ ಸೌತ್ ಸಂಸ್ಥೆಯಿಂದ ಸೋಮವಾರ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿರುವ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರು, “ಭಿಕ್ಷುಕ ರಾಷ್ಟ್ರವಾಗಿದ್ದ ಭಾರತವೀಗ ವಿಶ್ವದ ನೇತಾರ ರಾಷ್ಟ್ರವಾಗಿದೆ” ಎಂದು ಹೇಳಿದ್ದಾರೆ.

“ಎಡಪಂಥೀಯ ಸಿದ್ಧಾಂತಕ್ಕೆ ಒಡೆಯೋದು ಗೊತ್ತಿತ್ತೇ ಹೊರತು ಕಟ್ಟೋದು ಗೊತ್ತೇ ಇರಲಿಲ್ಲ. ಇದು ಆರಂಭವಾಗಿದ್ದು ನೆಹರೂ ಕಾಲದಿಂದ. ರಷ್ಯನ್ ಮಾದರಿಯನ್ನು ಭಾರತಕ್ಕೆ ತರಲು ಈ ದೇಶವನ್ನು ಭಿಕ್ಷುಕ ದೇಶವನ್ನಾಗಿ ಮಾಡಿಬಿಟ್ಟರು. ಇದು ಎಲ್ಲಿಗೆ ಹೋಗಿ ಮುಟ್ಟಿತ್ತೆಂದರೆ ನಮ್ಮ ದೇಶದ ಚಿನ್ನವನ್ನು ಅಡವಿಟ್ಟು, ಬ್ರಿಟನ್‌ ಬ್ಯಾಂಕಿನಿಂದ ಸಾಲ ಕೇಳಬೇಕಾಗಿ ಬಂತು. ನಿಮ್ಮ ಚಿನ್ನವನ್ನು ನಮ್ಮ ದೇಶದಲ್ಲಿ ಅಡವಿಟ್ಟರೆ ಮಾತ್ರ ಸಾಲಕೊಡುತ್ತೇವೆ ಎಂದು ಬ್ರಿಟನ್ ಬ್ಯಾಂಕ್ ಹೇಳಿತ್ತು. ಭಾರತದ ಮೇಲೆ ಇತರೆ ದೇಶಗಳಿಗೆ ನಂಬಿಕೆ ಇರಲಿಲ್ಲ” ಎಂದು ಭೈರಪ್ಪ ತಿಳಿಸಿದ್ದಾರೆ.

“ನಮ್ಮ ಬಲಹೀನತೆ ವೈಚಾರಿಕತೆ ಮತ್ತು ಸಾಹಿತ್ಯಕ್ಕೂ ತಟ್ಟಿತು. ಕೀಳರಿಮೆಯನ್ನು ಬಿಂಬಿಸುವುದೇ ನಮ್ಮ ಶ್ರೇಷ್ಠತೆ ಆಯಿತು. ಇದನ್ನು ಮೆಟ್ಟಿ ನಿಲ್ಲಬೇಕಾದ ಕಾಲ ಇದೀಗ ಬಂದಿದೆ. ಇಂದು ಪರಿಸ್ಥಿತಿ ಬದಲಾಗಿವೆ. ವಿಶ್ವದ ಮುಂದೆ ಭಾರತ ಎದೆಯುಬ್ಬಿಸಿ ನಿಂತಿದೆ. ನಮ್ಮ ಆಹಾರ ಪದಾರ್ಥಗಳನ್ನು ಹೊರ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ. ಭಾರತ ಇದೀಗ ಭಿಕ್ಷುಕ ರಾಷ್ಟ್ರವಲ್ಲ. ಇದು ಹೇಗೆ ಸಾಧ್ಯವಾಯಿತು? ಇದನ್ನು ಅರ್ಥಮಾಡಿಕೊಳ್ಳಲು ಇಷ್ಟು ವರ್ಷ ಬೇಕಾಯಿತು. ಇದಕ್ಕಾಗಿ ಸಮರ್ಥ ನಾಯಕತ್ವ ಬೇಕಾಯಿತು..” ಎಂದಿರುವ ಅವರು, ಎಂದಿನಂತೆ ನರೇಂದ್ರ ಮೋದಿಯವರ ನಾಯಕತ್ವವನ್ನು ಹೊಗಳಿದ್ದಾರೆ.

ಭೈರಪ್ಪ ಅವರು ಹೇಳಿರುವ ಮಾತುಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮೈಸೂರು ಭಾಗದ ಜನಪರ ಪತ್ರಿಕೆ ‘ಆಂದೋಲನ’ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಭೈರಪ್ಪ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ


“ತಮ್ಮ ಪಂಚೇಂದ್ರಿಯಗಳನ್ನು ಕಳೆದುಕೊಂಡು ಮಾತನಾಡುತ್ತಿರುವ ಭೈರಪ್ಪನವರು ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆದಿರುವುದು ಬೇಸರದ ಸಂಗತಿ. ಸಾಹಿತಿ ಅಂದರೆ ತನ್ನ ಅಧ್ಯಯನ, ವಿಚಾರಧಾರೆಯ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ಬಯಸುವುದು ಸಾಮಾನ್ಯ ನಿರೀಕ್ಷೆ. ಆದರೆ ಈ ಆಶಯಗಳಿಗೆ ತದ್ವಿರುದ್ಧವಾಗಿ ಮಾತನಾಡುತ್ತಿರುವ ಭೈರಪ್ಪನವರ ಮಾತುಗಳ ಬಗ್ಗೆ ನನಗಂತೂ ಯಾವುದೇ ಅಚ್ಚರಿಯಿಲ್ಲ. ಕಾರಣ ಅವರು ಬೆಳೆದು ಬಂದಿರುವ ಸಾಮಾಜಿಕ ಹಿನ್ನಲೆಯ ಮಹಿಮೆ ಅಂತದ್ದು” ಎಂದು ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮುಂದುವರಿದು, “ಆದರೂ ತಾನು ಬದುಕಿದ್ದ ದೇಶದ ಇತಿಹಾಸವನ್ನೇ ಅರಿಯದ ಸಾಹಿತಿಯೊಬ್ಬರು ನೇರವಾಗಿ ತನ್ನ ದೇಶವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆಯಬೇಕಾದರೆ ಆತ ಯಾವುದೋ ಗಂಭೀರ ಮಾನಸಿಕ ಖಾಯಿಲೆಯಿಂದ ಬಳಲುತ್ತಿರಬಹುದು ಎಂದೇ ನನಗೆ ಅನಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಹಿಂದಿನ ಸಾಲದ ಪ್ರಮಾಣಕ್ಕೆ ಹೋಲಿಸಿದರೆ ಈಗ ಅದರ ಪ್ರಮಾಣ ಹೆಚ್ಚಾಗಿದೆ. ಈ ಸಂಗತಿಯನ್ನು ಅರಿಯದ ಭೈರಪ್ಪನವರು ಅನಗತ್ಯವಾಗಿ ನೆಹರೂ ಹೆಸರನ್ನು ಎಳೆದು ತಂದಿರುವುದರ ಹಿಂದೆ ಮನುವಾದಿ ಸರ್ಕಾರವನ್ನು ಬೆಂಬಲಿಸುವ ಅವರ ಬೌದ್ಧಿಕ ಕುತಂತ್ರ ಅಡಗಿದೆಯೇ ವಿನಃ ಸಾಮಾಜಿಕ ನ್ಯಾಯ ಸಾಧನೆಗೆ ಪೂರಕವಾದ ಯಾವ ಅಂಶವೂ ಇಲ್ಲಿ ಇಲ್ಲ” ಎಂದಿದ್ದಾರೆ.

“ದೇಶದ ಅಯೋಮಯ ಸ್ಥಿತಿಯ ಬಗ್ಗೆ ಮತ್ತು ಜನ ಸಾಮಾನ್ಯರ ಸಂಕಷ್ಟದ ಬದುಕಿನ ಬಗ್ಗೆ ಸತ್ಯ ಗೊತ್ತಿದ್ದರೂ ಸುಳ್ಳನ್ನೇ ಆಯ್ಕೆ ಮಾಡಿಕೊಳ್ಳುವ ಭೈರಪ್ಪನವರ ಮಾತನ್ನು ಯಾರೂ ಸೀರಿಯಸ್ಸಾಗಿ ತೆಗೆದುಕೊಳ್ಳಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...