Homeಮುಖಪುಟಮನೆಯೊಳಗೆ ಗೋಹತ್ಯೆ ಮಾಡುವುದು ಸಾರ್ವಜನಿಕ ಆದೇಶದ ಉಲ್ಲಂಘನೆಯಲ್ಲ: ಅಲಹಾಬಾದ್ ಹೈಕೋರ್ಟ್

ಮನೆಯೊಳಗೆ ಗೋಹತ್ಯೆ ಮಾಡುವುದು ಸಾರ್ವಜನಿಕ ಆದೇಶದ ಉಲ್ಲಂಘನೆಯಲ್ಲ: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಗೋಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ಭದ್ರತಾ ಕಾಯಿದೆ (NSA) ಅಡಿಯಲ್ಲಿ ಮೂವರನ್ನು ಬಂಧಿಸಿರುವುದನ್ನು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್, ಒಬ್ಬರ ಮನೆಯೊಳಗೆ ಗೋಹತ್ಯೆ ಮಾಡುವುದು ಸಾರ್ವಜನಿಕ ಆದೇಶದ ಉಲ್ಲಂಘನೆ ಎಂದು ಪರಿಗಣಿಸಲಾಗದು ಎಂದು ಎಂದು ಹೇಳಿದೆ.

ಕಳೆದ ವರ್ಷದ ಜುಲೈನಲ್ಲಿ ಉತ್ತರಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಗೋಹತ್ಯೆ ಆರೋಪದಡಿ ಬಂಧಿತರಾದ ಇರ್ಫಾನ್, ರಹತ್‌ಉಲ್ಲಾ ಮತ್ತು ಪರ್ವೇಜ್ ಅವರ ಕುಟುಂಬಗಳು ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಮತ್ತು ಸರೋಜ್ ಯಾದವ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

” ಒಬ್ಬರ ಸ್ವಂತ ಮನೆಯಲ್ಲಿ ಮುಂಜಾನೆ ಗೋವನ್ನು ರಹಸ್ಯವಾಗಿ ಕೊಂದಿರುವ ಆರೋಪದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಇದು ಬಡತನ ಅಥವಾ ಉದ್ಯೋಗದ ಕೊರತೆ ಅಥವಾ ಹಸಿವಿನ ಕಾರಣದಿಂದಾಗಿ ನಡೆದಿರಬಹುದು ಎನಿಸುತ್ತದೆ. ಬಹುಶಃ ಇದು ಕೇವಲ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯನ್ನು ಒಳಗೊಂಡಿದೆ. ಸಾರ್ವಜನಿಕ ಸುವ್ಯವಸ್ಥೆ ಆದೇಶಗಳ ಉಲ್ಲಂಘನೆಗಳನ್ನು ಒಳಗೊಂಡಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ಮೂವರ ಬಿಡುಗಡೆಗೆ ಆದೇಶಿಸಿರುವ ನ್ಯಾಯಾಲಯ “ಅರ್ಜಿದಾರರು ಭವಿಷ್ಯದಲ್ಲಿ ಇಂತಹ ಚಟುವಟಿಕೆಯನ್ನು ಪುನರಾವರ್ತಿಸುತ್ತಾರೆ ಎಂದು ಪೊಲೀಸರು ಆರೋಪಿಸಬಹುದು. ಆದರೆ ಪುನರಾವರ್ತನೆ ಮಾಡುತ್ತಾರೆ ಎಂಬ ತೀರ್ಮಾನಕ್ಕೆ ಯಾವುದೇ ವಸ್ತು, ಸನ್ನಿವೇಶವಿಲ್ಲ” ಎಂದಿದೆ.

NSA ಅಡಿಯಲ್ಲಿ ಬಂಧಿತರಾಗಿರುವ ಮೂವರ ವಿರುದ್ಧ 1955 ರ ಯುಪಿ ಗೋಹತ್ಯೆ ತಡೆ ಕಾಯಿದೆ ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆ, 2013 ರ ಸೆಕ್ಷನ್ 7 ರ ಅಡಿಯಲ್ಲಿ ವಿವಿಧ ಪ್ರಕರಣಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಜೊತೆಗೆ 1986 ರ ಯುಪಿ ದರೋಡೆಕೋರರ ಕಾಯ್ದೆ ಮತ್ತು ಸಾಮಾಜಿಕ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ  ಅಡಿಯಲ್ಲಿ ಮತ್ತೊಂದು ಎಫ್ಐಆರ್  ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ನ್ಯಾಯಾಲಯದ ದಾಖಲೆಯ ಪ್ರಕಾರ, ಇರ್ಫಾನ್, ರಹತ್‌ಉಲ್ಲಾ ಮತ್ತು ಪರ್ವೇಜ್ ಮತ್ತು ಬಿಸ್ವಾನ್ ಗ್ರಾಮದ ಇಬ್ಬರು ಮಾರಾಟ ಮಾಡಲು ಗೋಮಾಂಸವನ್ನು ಕತ್ತರಿಸುತ್ತಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ನಂತರ ತಲಗಾಂವ್ ಪೊಲೀಸ್ ಅಧಿಕಾರಿಗಳು ಆರೋಪಿಗಳ ಮನೆಯ ಮೇಲೆ ಮುಂಜಾನೆ 5.30 ಕ್ಕೆ ದಾಳಿ ನಡೆಸಿ, ಪರ್ವೇಜ್ ಮತ್ತು ಇರ್ಫಾನ್ ಅವರನ್ನು ಗೋಮಾಂಸದೊಂದಿಗೆ ಸ್ಥಳದಲ್ಲೇ ಬಂಧಿಸಲಾಗಿತ್ತು.


ಇದನ್ನೂ ಓದಿ: ಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...