Homeಮುಖಪುಟ'45 ದಿನ ನಿದ್ದೆಯಿಲ್ಲ' | ಬಜಾಜ್ ಫೈನಾನ್ಸ್‌ ಕಂಪೆನಿಯ ಒತ್ತಡ; ಸಿಬ್ಬಂದಿ ಸಾವಿಗೆ ಶರಣು

’45 ದಿನ ನಿದ್ದೆಯಿಲ್ಲ’ | ಬಜಾಜ್ ಫೈನಾನ್ಸ್‌ ಕಂಪೆನಿಯ ಒತ್ತಡ; ಸಿಬ್ಬಂದಿ ಸಾವಿಗೆ ಶರಣು

- Advertisement -
- Advertisement -

ಬಜಾಜ್ ಫೈನಾನ್ಸ್‌ ಕಂಪೆನಿಯ ಏರಿಯಾ ಮ್ಯಾನೇಜರ್ ಆಗಿದ್ದ 42 ವರ್ಷದ ತರುಣ್ ಸಕ್ಸೇನಾ ಎಂಬ ವ್ಯಕ್ತಿ ಕಂಪೆನಿಯ ತೀವ್ರ ಕೆಲಸದ ಒತ್ತಡದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಸಕ್ಸೇನಾ ಅವರು ತಮ್ಮ ಪತ್ನಿ ಮೇಘಾ ಅವರನ್ನು ಉದ್ದೇಶಿಸಿ ಐದು ಪುಟಗಳ ಡೆತ್‌ನೋಟ್‌ಗಳನ್ನು ಬರೆದಿದ್ದು, ಅದರಲ್ಲಿ ಅವರು ಕಂಪೆನಿಯ ಅಧಿಕಾರಿಗಳು ಅವಾಸ್ತವಿಕ ಗುರಿಗಳನ್ನು ಸಾಧಿಸಲು ತನ್ನ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನಗೆ ವೇತನ ಕಡಿತ ಮತ್ತು ಉದ್ಯೋಗ ಕಳೆದುಕೊಳ್ಳುವ ಬೆದರಿಕೆಗಳನ್ನೂ ಮಾಡಲಾಗಿದೆ ಡೆತ್‌ನೋಟ್‌ನಲ್ಲಿ ಸಾವಿಗೀಡಾದ ತರುಣ್ ಸಕ್ಸೇನಾ ಅವರು ಉಲ್ಲೇಖಿಸಿದ್ದಾರೆ. ಮೃತ ತರುಣ್ ಅವರು ತಮ್ಮ ಪ್ರದೇಶದಲ್ಲಿ ಬಜಾಜ್ ಫೈನಾನ್ಸ್‌ ಲೋನ್‌ಗಳ ಮೇಲೆ EMI ಗಳನ್ನು ಸಂಗ್ರಹಿಸುವ ಜವಾಬ್ದಾರಿಯನ್ನು ಹೊಂದಿದ್ದರು.

ಇದನ್ನೂ ಓದಿ: ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಹಿರಿಯ ಮ್ಯಾನೇಜ್‌ಮೆಂಟ್‌ಗೆ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೊರತಾಗಿಯೂ, ತರುಣ್ ಮತ್ತು ಅವರ ಸಹೋದ್ಯೋಗಿಗಳು ಸಂಗ್ರಹಿಸದ EMI ಗಳನ್ನು ಸರಿದೂಗಿಸಲು ಒತ್ತಾಯಿಸಲಾಗುತ್ತಿದೆ ಎಂದು ಪತ್ರದಲ್ಲಿ ಬಹಿರಂಗಪಡಿಸಿದ್ದಾರೆ.

ತರುಣ್ ಅವರ ಡೆತ್‌ನೋಟ್‌ ತನ್ನ ಮೇಲೆ ಆದ ಮಾನಸಿಕ ಮತ್ತು ದೈಹಿಕ ಹಿಂಸೆಯನ್ನು ವಿವರಿಸುತ್ತದೆ. “ತಾನು 45 ದಿನಗಳವರೆಗೆ ಸರಿಯಾಗಿ ನಿದ್ದೆ ಮಾಡಿಲ್ಲ. ಹಸಿವನ್ನು ಕಳೆದುಕೊಂಡಿದ್ದು, ತೀವ್ರ ಆತಂಕದಿಂದ ಮುಳುಗಿದ್ದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಸಾಯುವ ದಿನದಂದು ನಡೆದ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಕೂಡಾ ತನ್ನ ಮೇಲಿನ ಒತ್ತಡಗಳನ್ನು ವಿವರಿಸಿದ್ದರು, ಆದರೆ ಅಲ್ಲಿ ಅವರ ಮೇಲಧಿಕಾರಿಗಳು ಅವರನ್ನು ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಇದನ್ನೂಓದಿ: ‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

ಪತ್ರದಲ್ಲಿ ಅವರು ತಮ್ಮ ಕಂಪೆನಿಯ ಹಿರಿಯ ಮ್ಯಾನೇಜರ್‌ಗಳ ವಿರುದ್ಧ ಪೊಲೀಸ್ ದೂರು ದಾಖಲಿಸಲು ಕುಟುಂಬಿಕರಿಗೆ ಸೂಚಿಸಿದ್ದು, ತನ್ನ ಆತ್ಮಹತ್ಯೆಗೆ ಅವರೆ ಕಾರಣ ಎಂದು ದೂಷಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ವಿಡಿಯೊ ನೋಡಿ: ಅಟ್ರಾಸಿಟಿ’ ಕಾದಂಬರಿ; ಮನುಷ್ಯ ಲೋಕದ ರೂಪಾಂತರವನ್ನ ಕಟ್ಟುತಿದೆಯಾ? ಡಾ. ಗೀತಾ ವಸಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...