Homeಮುಖಪುಟತೆರಿಗೆ ಹೆಚ್ಚಳದ ಕುರಿತ ಪ್ರಶ್ನೆಗೆ ಉತ್ತರಿಸದೆ ತಮಾಷೆಯಾಗಿ ನಕ್ಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ತೆರಿಗೆ ಹೆಚ್ಚಳದ ಕುರಿತ ಪ್ರಶ್ನೆಗೆ ಉತ್ತರಿಸದೆ ತಮಾಷೆಯಾಗಿ ನಕ್ಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

- Advertisement -
- Advertisement -

ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸ್ಟಾಕ್ ಬ್ರೋಕರ್ ಒಬ್ಬರು ಕೇಳಿದ ಪ್ರಶ್ನೆಗೆ ಸೂಕ್ತವಾದ ಉತ್ತರ ನೀಡದೆ ನಗಾಡುವ ಮೂಲಕ ತಮಾಷೆಯಾಗಿ ಪರಿಗಣಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಪ್ರತಿಪಕ್ಷ ನಾಯಕರು ಮತ್ತು ಸಾರ್ವಜನಿಕರು ಕಿಡಿಕಾರಿದ್ದಾರೆ.

ಮಂಗಳವಾರ ನಡೆದ ಬಿಎಸ್‌ಇಯ ‘ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಸ್ಟಾಕ್‌ ಮಾರ್ಕೆಟ್‌ ಬ್ರೋಕರ್‌ಗಳ ಮೇಲೆ ಹಾಗೂ ರಿಯಲ್‌ ಎಸ್ಟೇಟ್‌ ವ್ಯವಹಾರಗಳ ಮೇಲೆ ಭಾರತ ಸರ್ಕಾರ ವಿಧಿಸುತ್ತಿರುವ ಹಲವು ತೆರಿಗೆಗಳ ಬಗ್ಗೆ ಮುಂಬೈ ಸ್ಟಾಕ್‌ ಎಕ್ಸ್‌ಚೇಂಜ್‌ ಬ್ರೋಕರ್‌ ಪ್ರಶ್ನಿಸಿದ್ದರು. “ನಾನು ಎಲ್ಲಾ ಹೂಡಿಕೆ ಮಾಡುತ್ತೇನೆ, ಎಲ್ಲಾ ಸಂಕಷ್ಟಗಳನ್ನು ಎದುರಿಸುತ್ತೇನೆ. ಆದರೆ, ನನ್ನ ಸಂಪೂರ್ಣ ಲಾಭವನ್ನು ಭಾರತ ಸರ್ಕಾರ ಪಡೆಯುತ್ತಿದ್ದೆ. ಇಷ್ಟೊಂದು ತೆರಿಗೆಗಳೊಂದಿಗೆ ಬ್ರೋಕರ್‌ ಒಬ್ಬರು ಹೇಗೆ ಕಾರ್ಯಾಚರಿಸಬಹುದು? ಇಲ್ಲಿ ‘ಸರ್ಕಾರ ನನ್ನ ಸ್ಲೀಪಿಂಗ್‌ ಪಾರ್ಟ್‌ನರ್‌ ಮತ್ತು ನಾನು ಯಾವುದೇ ಆದಾಯವಿಲ್ಲದ ವರ್ಕಿಂಗ್‌ ಪಾರ್ಟ್‌ನರ್‌’ ರೀತಿ ಆಗಿದ್ದೇನೆ” ಎಂದಿದ್ದರು.

ನಂತರ ಎರಡನೇ ಪ್ರಶ್ನೆಯನ್ನು ಮುಂದುವರಿಸಿದ ಅವರು, “ಇಂದು, ಯಾರಾದರೂ ಮುಂಬೈನಲ್ಲಿ ಮನೆ ಖರೀದಿಸಲು ಬಯಸಿದರೆ ಅದು ದುಃಸ್ವಪ್ನವಾಗಿದೆ. ಏಕೆಂದರೆ ನನ್ನ ಬಳಿ ಬಿಳಿ ಹಣವಿದೆ ಎಂದು ನಾನು ತೆರಿಗೆ ಪಾವತಿಸುತ್ತಿದ್ದೇನೆ. ಈಗ ನಾವು ಎಲ್ಲವನ್ನೂ ಚೆಕ್ ಮೂಲಕ ಪಾವತಿಸಬೇಕಾಗಿದೆ. ಭಾರತ ಸರ್ಕಾರಕ್ಕೆ ಎಲ್ಲಾ ತೆರಿಗೆಗಳನ್ನು ಪಾವತಿಸಿದ ನಂತರ ಉಳಿದ್ದದ್ದು ನನ್ನ ಬ್ಯಾಂಕ್ ಬ್ಯಾಲೆನ್ಸ್ ಆಗಿದೆ. ಮನೆಯನ್ನು ಖರೀದಿಸುವಾಗ ಭಾರತ ಸರ್ಕಾರಕ್ಕೆ ಎಲ್ಲಾ ತೆರಿಗೆಗಳನ್ನು ಪಾವತಿಸಿದ ನಂತರವೂ, ನಾನು ಸ್ಟ್ಯಾಂಪ್ ಡ್ಯೂಟಿ, ಜಿಎಸ್‌ಟಿ ಪಾವತಿಸಬೇಕು. ಮನೆ ಖರೀದಿಸುವಾಗ ಸುಮಾರು 11 ಶೇಖಡಾ ನನ್ನ ಜೇಬಿನಿಂದ ಹೋಗುತ್ತಿದೆ. ಇಂತಹ ಸಂದರ್ಭದಲ್ಲಿ ಸಣ್ಣ ಸಂಪನ್ಮೂಲ ಹೊಂದಿರುವ ವ್ಯಕ್ತಿಗೆ ಮನೆ ಖರೀದಿಸಲು ಹೇಗೆ ಸಹಾಯ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದರು.

ವಿತ್ತ ಸಚಿವರು ಆರಂಭದಲ್ಲಿ “ಈ ಪ್ರಶ್ನೆಗೆ ನನ್ನ ಬಳಿ ಉತ್ತರವಿಲ್ಲ” ಎಂದು ಹೇಳಿ ಜಾರಿಕೊಂಡಿದ್ದರು. ಬಳಿಕ “ನಾನು ಸ್ಲೀಪಿಂಗ್ ಪಾರ್ನರ್ ಆದರೆ ಇಲ್ಲಿ ಕುಳಿತು ಉತ್ತರಿಸಲು ಸಾಧ್ಯವಿಲ್ಲ” ಎಂದು ತಮಾಷೆಯಾಗಿ ನಕ್ಕಿದ್ದಾರೆ. ಈ ಮೂಲಕ ಗಂಭೀರ ಪ್ರಶ್ನೆಯೊಂದಕ್ಕೆ ಉತ್ತರಿಸಬೇಕಿದ್ದ ವಿತ್ತ ಸಚಿವರು ವರ್ತಿಸಿದ ರೀತಿಗೆ ಭಾರೀ ಟೀಕೆ ವ್ಯಕ್ತವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ “ಸಾರ್ವಜನಿಕರಿಗೆ ತೆರಿಗೆಯಿಂದ ತೊಂದರೆಯಾಗಿದೆ. ಮೋದಿ ಸರ್ಕಾರದ ಮಂತ್ರಿಗಳು ನಗುತ್ತಿದ್ದಾರೆ” ಎಂದು ಹೇಳಿದೆ.

ಇದನ್ನೂ ಓದಿ : ಕಾಂಗ್ರೆಸ್-ಎಸ್‌ಪಿ ಅಧಿಕಾರಕ್ಕೆ ಬಂದರೆ ರಾಮ್ ಲಲ್ಲಾನನ್ನು ಟೆಂಟ್‌ನಲ್ಲಿ ಹಾಕುತ್ತಾರೆ: ಹಳೆ ಹೇಳಿಕೆ ಪುನರುಚ್ಛರಿಸಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...