Homeಮುಖಪುಟತೆರಿಗೆ ಹೆಚ್ಚಳದ ಕುರಿತ ಪ್ರಶ್ನೆಗೆ ಉತ್ತರಿಸದೆ ತಮಾಷೆಯಾಗಿ ನಕ್ಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ತೆರಿಗೆ ಹೆಚ್ಚಳದ ಕುರಿತ ಪ್ರಶ್ನೆಗೆ ಉತ್ತರಿಸದೆ ತಮಾಷೆಯಾಗಿ ನಕ್ಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

- Advertisement -
- Advertisement -

ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸ್ಟಾಕ್ ಬ್ರೋಕರ್ ಒಬ್ಬರು ಕೇಳಿದ ಪ್ರಶ್ನೆಗೆ ಸೂಕ್ತವಾದ ಉತ್ತರ ನೀಡದೆ ನಗಾಡುವ ಮೂಲಕ ತಮಾಷೆಯಾಗಿ ಪರಿಗಣಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಪ್ರತಿಪಕ್ಷ ನಾಯಕರು ಮತ್ತು ಸಾರ್ವಜನಿಕರು ಕಿಡಿಕಾರಿದ್ದಾರೆ.

ಮಂಗಳವಾರ ನಡೆದ ಬಿಎಸ್‌ಇಯ ‘ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಸ್ಟಾಕ್‌ ಮಾರ್ಕೆಟ್‌ ಬ್ರೋಕರ್‌ಗಳ ಮೇಲೆ ಹಾಗೂ ರಿಯಲ್‌ ಎಸ್ಟೇಟ್‌ ವ್ಯವಹಾರಗಳ ಮೇಲೆ ಭಾರತ ಸರ್ಕಾರ ವಿಧಿಸುತ್ತಿರುವ ಹಲವು ತೆರಿಗೆಗಳ ಬಗ್ಗೆ ಮುಂಬೈ ಸ್ಟಾಕ್‌ ಎಕ್ಸ್‌ಚೇಂಜ್‌ ಬ್ರೋಕರ್‌ ಪ್ರಶ್ನಿಸಿದ್ದರು. “ನಾನು ಎಲ್ಲಾ ಹೂಡಿಕೆ ಮಾಡುತ್ತೇನೆ, ಎಲ್ಲಾ ಸಂಕಷ್ಟಗಳನ್ನು ಎದುರಿಸುತ್ತೇನೆ. ಆದರೆ, ನನ್ನ ಸಂಪೂರ್ಣ ಲಾಭವನ್ನು ಭಾರತ ಸರ್ಕಾರ ಪಡೆಯುತ್ತಿದ್ದೆ. ಇಷ್ಟೊಂದು ತೆರಿಗೆಗಳೊಂದಿಗೆ ಬ್ರೋಕರ್‌ ಒಬ್ಬರು ಹೇಗೆ ಕಾರ್ಯಾಚರಿಸಬಹುದು? ಇಲ್ಲಿ ‘ಸರ್ಕಾರ ನನ್ನ ಸ್ಲೀಪಿಂಗ್‌ ಪಾರ್ಟ್‌ನರ್‌ ಮತ್ತು ನಾನು ಯಾವುದೇ ಆದಾಯವಿಲ್ಲದ ವರ್ಕಿಂಗ್‌ ಪಾರ್ಟ್‌ನರ್‌’ ರೀತಿ ಆಗಿದ್ದೇನೆ” ಎಂದಿದ್ದರು.

ನಂತರ ಎರಡನೇ ಪ್ರಶ್ನೆಯನ್ನು ಮುಂದುವರಿಸಿದ ಅವರು, “ಇಂದು, ಯಾರಾದರೂ ಮುಂಬೈನಲ್ಲಿ ಮನೆ ಖರೀದಿಸಲು ಬಯಸಿದರೆ ಅದು ದುಃಸ್ವಪ್ನವಾಗಿದೆ. ಏಕೆಂದರೆ ನನ್ನ ಬಳಿ ಬಿಳಿ ಹಣವಿದೆ ಎಂದು ನಾನು ತೆರಿಗೆ ಪಾವತಿಸುತ್ತಿದ್ದೇನೆ. ಈಗ ನಾವು ಎಲ್ಲವನ್ನೂ ಚೆಕ್ ಮೂಲಕ ಪಾವತಿಸಬೇಕಾಗಿದೆ. ಭಾರತ ಸರ್ಕಾರಕ್ಕೆ ಎಲ್ಲಾ ತೆರಿಗೆಗಳನ್ನು ಪಾವತಿಸಿದ ನಂತರ ಉಳಿದ್ದದ್ದು ನನ್ನ ಬ್ಯಾಂಕ್ ಬ್ಯಾಲೆನ್ಸ್ ಆಗಿದೆ. ಮನೆಯನ್ನು ಖರೀದಿಸುವಾಗ ಭಾರತ ಸರ್ಕಾರಕ್ಕೆ ಎಲ್ಲಾ ತೆರಿಗೆಗಳನ್ನು ಪಾವತಿಸಿದ ನಂತರವೂ, ನಾನು ಸ್ಟ್ಯಾಂಪ್ ಡ್ಯೂಟಿ, ಜಿಎಸ್‌ಟಿ ಪಾವತಿಸಬೇಕು. ಮನೆ ಖರೀದಿಸುವಾಗ ಸುಮಾರು 11 ಶೇಖಡಾ ನನ್ನ ಜೇಬಿನಿಂದ ಹೋಗುತ್ತಿದೆ. ಇಂತಹ ಸಂದರ್ಭದಲ್ಲಿ ಸಣ್ಣ ಸಂಪನ್ಮೂಲ ಹೊಂದಿರುವ ವ್ಯಕ್ತಿಗೆ ಮನೆ ಖರೀದಿಸಲು ಹೇಗೆ ಸಹಾಯ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದರು.

ವಿತ್ತ ಸಚಿವರು ಆರಂಭದಲ್ಲಿ “ಈ ಪ್ರಶ್ನೆಗೆ ನನ್ನ ಬಳಿ ಉತ್ತರವಿಲ್ಲ” ಎಂದು ಹೇಳಿ ಜಾರಿಕೊಂಡಿದ್ದರು. ಬಳಿಕ “ನಾನು ಸ್ಲೀಪಿಂಗ್ ಪಾರ್ನರ್ ಆದರೆ ಇಲ್ಲಿ ಕುಳಿತು ಉತ್ತರಿಸಲು ಸಾಧ್ಯವಿಲ್ಲ” ಎಂದು ತಮಾಷೆಯಾಗಿ ನಕ್ಕಿದ್ದಾರೆ. ಈ ಮೂಲಕ ಗಂಭೀರ ಪ್ರಶ್ನೆಯೊಂದಕ್ಕೆ ಉತ್ತರಿಸಬೇಕಿದ್ದ ವಿತ್ತ ಸಚಿವರು ವರ್ತಿಸಿದ ರೀತಿಗೆ ಭಾರೀ ಟೀಕೆ ವ್ಯಕ್ತವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ “ಸಾರ್ವಜನಿಕರಿಗೆ ತೆರಿಗೆಯಿಂದ ತೊಂದರೆಯಾಗಿದೆ. ಮೋದಿ ಸರ್ಕಾರದ ಮಂತ್ರಿಗಳು ನಗುತ್ತಿದ್ದಾರೆ” ಎಂದು ಹೇಳಿದೆ.

ಇದನ್ನೂ ಓದಿ : ಕಾಂಗ್ರೆಸ್-ಎಸ್‌ಪಿ ಅಧಿಕಾರಕ್ಕೆ ಬಂದರೆ ರಾಮ್ ಲಲ್ಲಾನನ್ನು ಟೆಂಟ್‌ನಲ್ಲಿ ಹಾಕುತ್ತಾರೆ: ಹಳೆ ಹೇಳಿಕೆ ಪುನರುಚ್ಛರಿಸಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...